Homeಮುಖಪುಟತಾರತಮ್ಯ ಪ್ರಶ್ನಿಸಿದ ವಿದ್ಯಾರ್ಥಿನಿಯ ಮೇಲೆ ಅಂಬೇಡ್ಕರ್‌ ವಿವಿಯಿಂದ ಶಿಸ್ತುಕ್ರಮ

ತಾರತಮ್ಯ ಪ್ರಶ್ನಿಸಿದ ವಿದ್ಯಾರ್ಥಿನಿಯ ಮೇಲೆ ಅಂಬೇಡ್ಕರ್‌ ವಿವಿಯಿಂದ ಶಿಸ್ತುಕ್ರಮ

- Advertisement -
- Advertisement -

ವಿಶ್ವವಿದ್ಯಾಲಯದ ಆಡಳಿತ ವ್ಯವಸ್ಥೆ ವಿರುದ್ಧ ಧ್ವನಿ ಎತ್ತುವ ವಿದ್ಯಾರ್ಥಿಗಳನ್ನು ಶಿಕ್ಷೆಗೊಳಪಡಿಸುವ ಪರಂಪರೆ ನಮ್ಮ ದೇಶದಲ್ಲಿ  ದಿನನಿತ್ಯದ ಘಟನೆಯಾಗಿ ಮಾರ್ಪಟ್ಟಿದೆ. ಜಾಮಿಯಾ, ಜೆಎನ್‌ಯು, ದೆಹಲಿ ವಿಶ್ವವಿದ್ಯಾನಿಲಯ, ಹೈದರಾಬಾದ್ ಯುನಿವರ್ಸಿಟಿ, ಐಐಟಿ ಮದ್ರಾಸ್ ಹೀಗೆ ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿಯೇ ವಿದ್ಯಾರ್ಥಿಗಳ ಸಂವಿಧಾನಬದ್ಧ ಹಕ್ಕುಗಳನ್ನು ಮೊಟಕುಗೊಳಿಸುವ ಪ್ರಕ್ರಿಯೆ ದೀರ್ಘ ಕಾಲದಿಂದ ಚಾಲ್ತಿಯಲ್ಲಿದೆ. ಕಳೆದ ಕೆಲವು ವರ್ಷಗಳಿಂದ  ಮಾಧ್ಯಮಗಳಲ್ಲಿ ಒಂದಾದರೂ ವಿದ್ಯಾರ್ಥಿ ಪ್ರತಿಭಟನೆಗಳು ವರದಿಯಾಗುತ್ತವೆ ಮತ್ತು ಪೊಲೀಸರಿಂದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯಗಳು ನಡೆದ ಘಟನೆ ದೇಶದಲ್ಲಿ ಸಾಕಷ್ಟು ನಡೆದಿದೆ. ವಿದ್ಯಾರ್ಥಿ ಚಳುವಳಿಗಳ ತೊಟ್ಟಿಲು ಎಂದು ಪರಿಗಣಿಸಲ್ಪಡುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿದ್ಯಾರ್ಥಿ ಹೋರಾಟ ದಿನ ನಿತ್ಯದ ಸರ್ವೇ ಸಾಮಾನ್ಯ ಸಂಗತಿ. ಅನ್ಯಾಯ ಮತ್ತು ತಾರತಮ್ಯದ ವಿರುದ್ಧ ವಿದ್ಯಾರ್ಥಿ ವೃಂದದ ಹೋರಾಟಕ್ಕೆ ದೆಹಲಿಯಲ್ಲಿ ದೀರ್ಘ ಪರಂಪರೆ ಮತ್ತು ಇತಿಹಾಸವಿದೆ. ಕೋವಿಡ್ ಕಾರಣಗಳಿಂದ ಇಂದು ವಿದ್ಯಾರ್ಥಿ ಪ್ರತಿಭಟನೆಗಳು ಹೆಚ್ಚು ಬಹಿರಂಗವಾಗಿ ನಡೆಯುತ್ತಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಶುಲ್ಕ ಏರಿಕೆ, ದುರಾಡಳಿತ, ತಾರತಮ್ಯ ಖಂಡಿಸಿ ಅಭಿಯಾನಗಳು ಸತತವಾಗಿ ನಡೆಯುತ್ತಲೇ ಇವೆ. ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಅಂಬೇಡ್ಕರ್ ವಿಶ್ವವಿದ್ಯಾಲಯ ಮತ್ತೊಮ್ಮೆ ಅಂತದ್ದೊಂದು ಪ್ರತಿಭಟನೆಗೆ ಸುದ್ದಿಯಾಗಿದ್ದು, ವಿಶ್ವವಿದ್ಯಾಲಯದ ಆಡಳಿತವನ್ನು ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿನಿಯೊಬ್ಬರಿಗೆ ದಂಡ ವಿಧಿಸಿ ಶಿಸ್ತುಕ್ರಮ ಕೈಗೊಳ್ಳಲಾಗಿದೆ.

ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ತಾರತಮ್ಯದ ವಿರುದ್ಧ ಆನ್‌ಲೈನ್ ಅಭಿಯಾನದಲ್ಲಿ ಭಾಗವಹಿಸಿದ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬರಿಗೆ ದಂಡ ವಿಧಿಸಿ ಯುನಿವರ್ಸಿಟಿ ಅಡ್ಮಿನಿಸ್ಟ್ರೇಶನ್ ಜೂನ್‌ 30 ರಂದು  ಆದೇಶ ಹೊರಡಿಸಿದೆ. ಡಿಸೆಂಬರ್ 20 ರಂದು ನಡೆದ  ಆನ್‌ಲೈನ್ ಘಟಿಕೋತ್ಸವದಲ್ಲಿ ವಿಶ್ವವಿದ್ಯಾಲಯದ ವಿರುದ್ಧ ಘೋಷಣೆ ಕೂಡ ಕೂಗಿದ ಕಾರಣ ನೀಡಿ ಅಂತಿಮ ವರ್ಷದ ಎಂಎ ಪ್ರದರ್ಶನ ಕಲೆ ವಿಭಾಗದ ವಿದ್ಯಾರ್ಥಿನಿ ನೇಹಾ ಅವರಿಗೆ ಅಂಬೇಡ್ಕರ್ ವಿಶ್ವ ವಿದ್ಯಾಲಯ 5000 ರೂ ದಂಡ ವಿಧಿಸಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಅನರ್ಹಗೊಳಿಸುವುದಾಗಿಯೂ ಎಚ್ಚರಿಕೆ ನೀಡಿದೆ. ನೇಹಾ ಆಲ್‌ ಇಂಡಿಯಾ ಸ್ಟುಡೆಂಟ್ ಅಸೋಸಿಯೇಷನ್‌ (AISA) ಉಪಾಧ್ಯಕ್ಷೆ ಕೂಡ ಆಗಿದ್ದಾರೆ.

ಇದನ್ನೂ ಓದಿ: ಸರ್ಕಾರವು ಶಿಕ್ಷಣ ಕ್ಷೇತ್ರದಿಂದ ಹಿಂದೆ ಸರಿಯುವಂತಿಲ್ಲ: JNU ಶುಲ್ಕ ಹೆಚ್ಚಳಕ್ಕೆ ಹೈಕೋರ್ಟ್‌ ವಿರೋಧ.

ಡಿಸೆಂಬರ್ 23 ರಂದು ಯೂಟ್ಯೂಬ್ ಮೂಲಕ ನಡೆದ ಘಟಿಕೋತ್ಸವದಲ್ಲಿ ನೇಹಾ ಅವರು ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಗಳ ಮೇಲೆ ತಾರತಮ್ಯ ನಡೆಯುತ್ತಿದೆ. ಶುಲ್ಕ ಹೆಚ್ಚಳದ ಮೂಲಕ ಯುನಿವರ್ಸಿಟಿ ಆಡಳಿತ ಬಡವರನ್ನು ಶಿಕ್ಷಣದಿಂದ ವಂಚಿತಗೊಳಿಸುತ್ತಿದೆ ಎಂದು ಆರೋಪಿಸಿದ್ದರು ಮತ್ತು ಪ್ರತಿಭಟನೆಗೆ ಕರೆ ನೀಡಿದ್ದರು ಎಂದು ಹೇಳಲಾಗಿದೆ. ಸಂವಿಧಾನ ನೀಡಿದ ಮೀಸಲಾತಿಯ ಹಕ್ಕಿನಲ್ಲಿ ಬದಲಾವಣೆಗಳನ್ನು ತಂದು ದಲಿತ ಮತ್ತು ಹಿಂದುಳಿದ ವಿದ್ಯಾರ್ಥಿಗಳಿಗೆ ಅನ್ಯಾಯವೆಸಗಲಾಗುತ್ತಿದೆ. ಇದರ ವಿರುದ್ಧ ಧ್ವನಿ ಎತ್ತುವಂತೆ ನೆಹಾ ಕರೆ ನೀಡಿದ್ದರು. ಹಾಗೇ ಘಟಿಕೋತ್ಸವದಲ್ಲಿ ಅತಿಥಿಯಾಗಿದ್ದ ಅರವಿಂದ್ ಕೇಜ್ರಿವಾಲ್‌ ಅವರಿಗೆ ವಿದ್ಯಾರ್ಥಿಗಳ ಮೇಲೆ ಕನಿಷ್ಠ ಕಾಳಜಿಯಿಲ್ಲ ಎಂಬ ಆರೋಪ ಸಹ ಅವರು ಮಾಡಿದ್ದರು ಎನ್ನಲಾಗಿದೆ. ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ ಎಸ್‌ಸಿ ಎಸ್‌ಟಿ ವಿದ್ಯಾರ್ಥಿಗಳ ಮೇಲೆ ತಾರತಮ್ಯ ನಡೆಯುತ್ತಿದೆ ಎಂಬ ಆರೋಪ ಈ ಹಿಂದೆ ಕೂಡ ಕೇಳಿಬಂದಿತ್ತು.

ಡಿಸೆಂಬರ್‌ 23 ರಂದು ನಡೆದ ಆನ್‌ಲೈನ್ ಘಟಿಕೋತ್ಸವದಲ್ಲಿ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಅಗೌರವಯುತ ಹೇಳಿಕೆಯನ್ನು ನೇಹಾ ನೀಡಿದ್ದಾರೆ ಎಂದು ಅಂಬೇಡ್ಕರ್ ವಿಶ್ವವಿದ್ಯಾಲಯ ತನ್ನ ಪ್ರಕಟಣೆಯಲ್ಲಿ ಹೇಳಿದೆ. ಈ ಸಂಬಂಧ ನೇಹಾ ಅವರಿಗೆ ನೋಟಿಸ್‌ ಕೂಡ ನೀಡಲಾಗಿದೆ. ವಿಶ್ವವಿದ್ಯಾಲಯದ ಶಿಸ್ತು ಸಂಹಿತೆಯನ್ನು ವಿದ್ಯಾರ್ಥಿನಿ ಉಲ್ಲಂಘನೆ ಮಾಡಿರುವುದು ತನಿಖಾ ಸಮಿತಿಯ ವರದಿಯಿಂದ ಸ್ಪಷ್ಟವಾಗಿದೆ. ತನಿಖಾ ಸಮಿತಿ ಮತ್ತು ನೇಹಾ ಅವರ ನಡುವೆ ಏಪ್ರಿಲ್ 6 ರಂದು ನಡೆದ ಸಮಾಲೋಚನೆಯಲ್ಲಿ ಈ ಹೇಳಿಕೆ ತಮ್ಮದೆಂದು ಒಪ್ಪಿಕೊಂಡಿದ್ದಾರೆ ಮತ್ತು  ಸಮರ್ಥಿಸಿಕೊಂಡಿದ್ದಾರೆ. ವಿದ್ಯಾರ್ಥಿನಿಯು ವಿಶ್ವವಿದ್ಯಾಲಯ, ಮುಖ್ಯ ಅತಿಥಿ ಮತ್ತು ಗೌರವ ಅತಿಥಿಗಳ ವಿರುದ್ಧ ಮಾಡಿರುವ ಆರೋಪ ನಿರಾಧಾರವಾಗಿದೆ ಮತ್ತು ಯುನಿವರ್ಸಿಟಿ ಸಮುದಾಯಕ್ಕೆ ಕಳಂಕವನ್ನು ತರುವ ಪ್ರಯತ್ನವಾಗಿ ಕಂಡು ಬಂದಿದೆ ಎಂದು ಅಂಬೇಡ್ಕರ್ ವಿಶ್ವವಿದ್ಯಾಲಯ ಹೇಳುತ್ತಿದೆ.

ಇದನ್ನೂ ಓದಿ: ದಿಢೀರ್‌ ಶುಲ್ಕ ಡಬಲ್: ಪುಣೆ FTTI ನಲ್ಲಿ ವಿದ್ಯಾರ್ಥಿಗಳಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ಆರಂಭ

ತಮ್ಮ ಮೇಲಿನ ದಂಡ ಮತ್ತು ಆರೋಪಗಳಿಗೆ ಪ್ರತಿಕ್ರಿಯಿಸಿರುವ ನೇಹಾ ಆ ದಿನ 12 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆನ್‌ಲೈನ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಅವರ ಯಾರ ವಿರುದ್ಧವೂ ಕ್ರಮ ಕೈಗೊಂಡಿಲ್ಲ. ನನ್ನ ಮೇಲೆ ವಿಶ್ವವಿದ್ಯಾಲಯದ ಯಾವ ನಿರ್ದಿಷ್ಟ ನಿಯಮಗಳಡಿ ಕ್ರಮ ಕೈಗೊಳ್ಳಲಾಗಿದೆ ಎಂದು ಪದೇ ಪದೇ ಕೇಳುತ್ತಿದ್ದೇನೆ. ಈ ಸಂಬಂಧ ವಿಶ್ವವಿದ್ಯಾಲಯ ಪ್ರತಿಕ್ರಿಯೆಯನ್ನು ನೀಡಿಲ್ಲ. ಇದಕ್ಕೆ ಹೆದರುವುದಿಲ್ಲ ಮತ್ತು ತಾರತಮ್ಯದ ವಿರುದ್ಧದ ಹೋರಾಟ ಮುಂದುವರೆಸುವುದಾಗಿ ತಿಳಿಸಿದ್ದಾರೆ.

ಅಂಬೇಡ್ಕರ್‌ ವೀಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಗಳ ಮೇಲೆ ವ್ಯವಸ್ಥಿತವಾಗಿ ತಾರತಮ್ಯ ನಡೆಯುತ್ತಿದ್ದು ವಿಶ್ವ ವಿದ್ಯಾಲಯವು ಪ್ರಜಾಪ್ರಭುತ್ವ ದತ್ತ ಹಕ್ಕುಗಳಡಿ ನ್ಯಾಯವನ್ನು ಕೇಳಿದಾಗ ಕ್ರಮ ಕೈಗೊಳ್ಳಲು ಮುಂದಾಗಿದೆ. ನೇಹಾ ಅವರ ಮೇಲಿನ ಎಲ್ಲಾ ಕ್ರಮಗಳನ್ನು ಹಿಂತೆಗೆದುಕೊಳ್ಳಬೇಕು ಇಲ್ಲವಾದಲ್ಲಿ ಪ್ರಜಾಪ್ರಭುತ್ವ ವಿಧಾನದಲ್ಲಿನ ತಮ್ಮ ಹೋರಾಟವನ್ನು ಮುಂದುವರೆಸುವುದಾಗಿ AISA ಎಚ್ಚರಿಸಿದೆ.

ಡಿಸೆಂಬರ್‌ 23 ರ ಘಟಿಕೋತ್ಸವದಲ್ಲಿ ನೀಡಿದ ತಮ್ಮ ಹೇಳಿಕೆಯಿಂದ ನೇಹಾ ಅವರು ವಿದ್ಯಾರ್ಥಿಯ ಅರ್ಹತೆ ಕಳೆದುಕೊಂಡಿದ್ದಾರೆ ಎಂದು ವಿಶ್ವವಿದ್ಯಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.


ಇದನ್ನೂ ಓದಿ: ವಿಶ್ವವಿದ್ಯಾಲಯಗಳಲ್ಲಿ ಮೋದಿಗೆ ಧನ್ಯವಾದ ಸಲ್ಲಿಸುವ ಬ್ಯಾನರ್‌ ಹಾಕಲು ಯುಜಿಸಿ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...