Homeಮುಖಪುಟತಾರತಮ್ಯ ಪ್ರಶ್ನಿಸಿದ ವಿದ್ಯಾರ್ಥಿನಿಯ ಮೇಲೆ ಅಂಬೇಡ್ಕರ್‌ ವಿವಿಯಿಂದ ಶಿಸ್ತುಕ್ರಮ

ತಾರತಮ್ಯ ಪ್ರಶ್ನಿಸಿದ ವಿದ್ಯಾರ್ಥಿನಿಯ ಮೇಲೆ ಅಂಬೇಡ್ಕರ್‌ ವಿವಿಯಿಂದ ಶಿಸ್ತುಕ್ರಮ

- Advertisement -
- Advertisement -

ವಿಶ್ವವಿದ್ಯಾಲಯದ ಆಡಳಿತ ವ್ಯವಸ್ಥೆ ವಿರುದ್ಧ ಧ್ವನಿ ಎತ್ತುವ ವಿದ್ಯಾರ್ಥಿಗಳನ್ನು ಶಿಕ್ಷೆಗೊಳಪಡಿಸುವ ಪರಂಪರೆ ನಮ್ಮ ದೇಶದಲ್ಲಿ  ದಿನನಿತ್ಯದ ಘಟನೆಯಾಗಿ ಮಾರ್ಪಟ್ಟಿದೆ. ಜಾಮಿಯಾ, ಜೆಎನ್‌ಯು, ದೆಹಲಿ ವಿಶ್ವವಿದ್ಯಾನಿಲಯ, ಹೈದರಾಬಾದ್ ಯುನಿವರ್ಸಿಟಿ, ಐಐಟಿ ಮದ್ರಾಸ್ ಹೀಗೆ ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿಯೇ ವಿದ್ಯಾರ್ಥಿಗಳ ಸಂವಿಧಾನಬದ್ಧ ಹಕ್ಕುಗಳನ್ನು ಮೊಟಕುಗೊಳಿಸುವ ಪ್ರಕ್ರಿಯೆ ದೀರ್ಘ ಕಾಲದಿಂದ ಚಾಲ್ತಿಯಲ್ಲಿದೆ. ಕಳೆದ ಕೆಲವು ವರ್ಷಗಳಿಂದ  ಮಾಧ್ಯಮಗಳಲ್ಲಿ ಒಂದಾದರೂ ವಿದ್ಯಾರ್ಥಿ ಪ್ರತಿಭಟನೆಗಳು ವರದಿಯಾಗುತ್ತವೆ ಮತ್ತು ಪೊಲೀಸರಿಂದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯಗಳು ನಡೆದ ಘಟನೆ ದೇಶದಲ್ಲಿ ಸಾಕಷ್ಟು ನಡೆದಿದೆ. ವಿದ್ಯಾರ್ಥಿ ಚಳುವಳಿಗಳ ತೊಟ್ಟಿಲು ಎಂದು ಪರಿಗಣಿಸಲ್ಪಡುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿದ್ಯಾರ್ಥಿ ಹೋರಾಟ ದಿನ ನಿತ್ಯದ ಸರ್ವೇ ಸಾಮಾನ್ಯ ಸಂಗತಿ. ಅನ್ಯಾಯ ಮತ್ತು ತಾರತಮ್ಯದ ವಿರುದ್ಧ ವಿದ್ಯಾರ್ಥಿ ವೃಂದದ ಹೋರಾಟಕ್ಕೆ ದೆಹಲಿಯಲ್ಲಿ ದೀರ್ಘ ಪರಂಪರೆ ಮತ್ತು ಇತಿಹಾಸವಿದೆ. ಕೋವಿಡ್ ಕಾರಣಗಳಿಂದ ಇಂದು ವಿದ್ಯಾರ್ಥಿ ಪ್ರತಿಭಟನೆಗಳು ಹೆಚ್ಚು ಬಹಿರಂಗವಾಗಿ ನಡೆಯುತ್ತಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಶುಲ್ಕ ಏರಿಕೆ, ದುರಾಡಳಿತ, ತಾರತಮ್ಯ ಖಂಡಿಸಿ ಅಭಿಯಾನಗಳು ಸತತವಾಗಿ ನಡೆಯುತ್ತಲೇ ಇವೆ. ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಅಂಬೇಡ್ಕರ್ ವಿಶ್ವವಿದ್ಯಾಲಯ ಮತ್ತೊಮ್ಮೆ ಅಂತದ್ದೊಂದು ಪ್ರತಿಭಟನೆಗೆ ಸುದ್ದಿಯಾಗಿದ್ದು, ವಿಶ್ವವಿದ್ಯಾಲಯದ ಆಡಳಿತವನ್ನು ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿನಿಯೊಬ್ಬರಿಗೆ ದಂಡ ವಿಧಿಸಿ ಶಿಸ್ತುಕ್ರಮ ಕೈಗೊಳ್ಳಲಾಗಿದೆ.

ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ತಾರತಮ್ಯದ ವಿರುದ್ಧ ಆನ್‌ಲೈನ್ ಅಭಿಯಾನದಲ್ಲಿ ಭಾಗವಹಿಸಿದ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬರಿಗೆ ದಂಡ ವಿಧಿಸಿ ಯುನಿವರ್ಸಿಟಿ ಅಡ್ಮಿನಿಸ್ಟ್ರೇಶನ್ ಜೂನ್‌ 30 ರಂದು  ಆದೇಶ ಹೊರಡಿಸಿದೆ. ಡಿಸೆಂಬರ್ 20 ರಂದು ನಡೆದ  ಆನ್‌ಲೈನ್ ಘಟಿಕೋತ್ಸವದಲ್ಲಿ ವಿಶ್ವವಿದ್ಯಾಲಯದ ವಿರುದ್ಧ ಘೋಷಣೆ ಕೂಡ ಕೂಗಿದ ಕಾರಣ ನೀಡಿ ಅಂತಿಮ ವರ್ಷದ ಎಂಎ ಪ್ರದರ್ಶನ ಕಲೆ ವಿಭಾಗದ ವಿದ್ಯಾರ್ಥಿನಿ ನೇಹಾ ಅವರಿಗೆ ಅಂಬೇಡ್ಕರ್ ವಿಶ್ವ ವಿದ್ಯಾಲಯ 5000 ರೂ ದಂಡ ವಿಧಿಸಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಅನರ್ಹಗೊಳಿಸುವುದಾಗಿಯೂ ಎಚ್ಚರಿಕೆ ನೀಡಿದೆ. ನೇಹಾ ಆಲ್‌ ಇಂಡಿಯಾ ಸ್ಟುಡೆಂಟ್ ಅಸೋಸಿಯೇಷನ್‌ (AISA) ಉಪಾಧ್ಯಕ್ಷೆ ಕೂಡ ಆಗಿದ್ದಾರೆ.

ಇದನ್ನೂ ಓದಿ: ಸರ್ಕಾರವು ಶಿಕ್ಷಣ ಕ್ಷೇತ್ರದಿಂದ ಹಿಂದೆ ಸರಿಯುವಂತಿಲ್ಲ: JNU ಶುಲ್ಕ ಹೆಚ್ಚಳಕ್ಕೆ ಹೈಕೋರ್ಟ್‌ ವಿರೋಧ.

ಡಿಸೆಂಬರ್ 23 ರಂದು ಯೂಟ್ಯೂಬ್ ಮೂಲಕ ನಡೆದ ಘಟಿಕೋತ್ಸವದಲ್ಲಿ ನೇಹಾ ಅವರು ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಗಳ ಮೇಲೆ ತಾರತಮ್ಯ ನಡೆಯುತ್ತಿದೆ. ಶುಲ್ಕ ಹೆಚ್ಚಳದ ಮೂಲಕ ಯುನಿವರ್ಸಿಟಿ ಆಡಳಿತ ಬಡವರನ್ನು ಶಿಕ್ಷಣದಿಂದ ವಂಚಿತಗೊಳಿಸುತ್ತಿದೆ ಎಂದು ಆರೋಪಿಸಿದ್ದರು ಮತ್ತು ಪ್ರತಿಭಟನೆಗೆ ಕರೆ ನೀಡಿದ್ದರು ಎಂದು ಹೇಳಲಾಗಿದೆ. ಸಂವಿಧಾನ ನೀಡಿದ ಮೀಸಲಾತಿಯ ಹಕ್ಕಿನಲ್ಲಿ ಬದಲಾವಣೆಗಳನ್ನು ತಂದು ದಲಿತ ಮತ್ತು ಹಿಂದುಳಿದ ವಿದ್ಯಾರ್ಥಿಗಳಿಗೆ ಅನ್ಯಾಯವೆಸಗಲಾಗುತ್ತಿದೆ. ಇದರ ವಿರುದ್ಧ ಧ್ವನಿ ಎತ್ತುವಂತೆ ನೆಹಾ ಕರೆ ನೀಡಿದ್ದರು. ಹಾಗೇ ಘಟಿಕೋತ್ಸವದಲ್ಲಿ ಅತಿಥಿಯಾಗಿದ್ದ ಅರವಿಂದ್ ಕೇಜ್ರಿವಾಲ್‌ ಅವರಿಗೆ ವಿದ್ಯಾರ್ಥಿಗಳ ಮೇಲೆ ಕನಿಷ್ಠ ಕಾಳಜಿಯಿಲ್ಲ ಎಂಬ ಆರೋಪ ಸಹ ಅವರು ಮಾಡಿದ್ದರು ಎನ್ನಲಾಗಿದೆ. ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ ಎಸ್‌ಸಿ ಎಸ್‌ಟಿ ವಿದ್ಯಾರ್ಥಿಗಳ ಮೇಲೆ ತಾರತಮ್ಯ ನಡೆಯುತ್ತಿದೆ ಎಂಬ ಆರೋಪ ಈ ಹಿಂದೆ ಕೂಡ ಕೇಳಿಬಂದಿತ್ತು.

ಡಿಸೆಂಬರ್‌ 23 ರಂದು ನಡೆದ ಆನ್‌ಲೈನ್ ಘಟಿಕೋತ್ಸವದಲ್ಲಿ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಅಗೌರವಯುತ ಹೇಳಿಕೆಯನ್ನು ನೇಹಾ ನೀಡಿದ್ದಾರೆ ಎಂದು ಅಂಬೇಡ್ಕರ್ ವಿಶ್ವವಿದ್ಯಾಲಯ ತನ್ನ ಪ್ರಕಟಣೆಯಲ್ಲಿ ಹೇಳಿದೆ. ಈ ಸಂಬಂಧ ನೇಹಾ ಅವರಿಗೆ ನೋಟಿಸ್‌ ಕೂಡ ನೀಡಲಾಗಿದೆ. ವಿಶ್ವವಿದ್ಯಾಲಯದ ಶಿಸ್ತು ಸಂಹಿತೆಯನ್ನು ವಿದ್ಯಾರ್ಥಿನಿ ಉಲ್ಲಂಘನೆ ಮಾಡಿರುವುದು ತನಿಖಾ ಸಮಿತಿಯ ವರದಿಯಿಂದ ಸ್ಪಷ್ಟವಾಗಿದೆ. ತನಿಖಾ ಸಮಿತಿ ಮತ್ತು ನೇಹಾ ಅವರ ನಡುವೆ ಏಪ್ರಿಲ್ 6 ರಂದು ನಡೆದ ಸಮಾಲೋಚನೆಯಲ್ಲಿ ಈ ಹೇಳಿಕೆ ತಮ್ಮದೆಂದು ಒಪ್ಪಿಕೊಂಡಿದ್ದಾರೆ ಮತ್ತು  ಸಮರ್ಥಿಸಿಕೊಂಡಿದ್ದಾರೆ. ವಿದ್ಯಾರ್ಥಿನಿಯು ವಿಶ್ವವಿದ್ಯಾಲಯ, ಮುಖ್ಯ ಅತಿಥಿ ಮತ್ತು ಗೌರವ ಅತಿಥಿಗಳ ವಿರುದ್ಧ ಮಾಡಿರುವ ಆರೋಪ ನಿರಾಧಾರವಾಗಿದೆ ಮತ್ತು ಯುನಿವರ್ಸಿಟಿ ಸಮುದಾಯಕ್ಕೆ ಕಳಂಕವನ್ನು ತರುವ ಪ್ರಯತ್ನವಾಗಿ ಕಂಡು ಬಂದಿದೆ ಎಂದು ಅಂಬೇಡ್ಕರ್ ವಿಶ್ವವಿದ್ಯಾಲಯ ಹೇಳುತ್ತಿದೆ.

ಇದನ್ನೂ ಓದಿ: ದಿಢೀರ್‌ ಶುಲ್ಕ ಡಬಲ್: ಪುಣೆ FTTI ನಲ್ಲಿ ವಿದ್ಯಾರ್ಥಿಗಳಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ಆರಂಭ

ತಮ್ಮ ಮೇಲಿನ ದಂಡ ಮತ್ತು ಆರೋಪಗಳಿಗೆ ಪ್ರತಿಕ್ರಿಯಿಸಿರುವ ನೇಹಾ ಆ ದಿನ 12 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆನ್‌ಲೈನ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಅವರ ಯಾರ ವಿರುದ್ಧವೂ ಕ್ರಮ ಕೈಗೊಂಡಿಲ್ಲ. ನನ್ನ ಮೇಲೆ ವಿಶ್ವವಿದ್ಯಾಲಯದ ಯಾವ ನಿರ್ದಿಷ್ಟ ನಿಯಮಗಳಡಿ ಕ್ರಮ ಕೈಗೊಳ್ಳಲಾಗಿದೆ ಎಂದು ಪದೇ ಪದೇ ಕೇಳುತ್ತಿದ್ದೇನೆ. ಈ ಸಂಬಂಧ ವಿಶ್ವವಿದ್ಯಾಲಯ ಪ್ರತಿಕ್ರಿಯೆಯನ್ನು ನೀಡಿಲ್ಲ. ಇದಕ್ಕೆ ಹೆದರುವುದಿಲ್ಲ ಮತ್ತು ತಾರತಮ್ಯದ ವಿರುದ್ಧದ ಹೋರಾಟ ಮುಂದುವರೆಸುವುದಾಗಿ ತಿಳಿಸಿದ್ದಾರೆ.

ಅಂಬೇಡ್ಕರ್‌ ವೀಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಗಳ ಮೇಲೆ ವ್ಯವಸ್ಥಿತವಾಗಿ ತಾರತಮ್ಯ ನಡೆಯುತ್ತಿದ್ದು ವಿಶ್ವ ವಿದ್ಯಾಲಯವು ಪ್ರಜಾಪ್ರಭುತ್ವ ದತ್ತ ಹಕ್ಕುಗಳಡಿ ನ್ಯಾಯವನ್ನು ಕೇಳಿದಾಗ ಕ್ರಮ ಕೈಗೊಳ್ಳಲು ಮುಂದಾಗಿದೆ. ನೇಹಾ ಅವರ ಮೇಲಿನ ಎಲ್ಲಾ ಕ್ರಮಗಳನ್ನು ಹಿಂತೆಗೆದುಕೊಳ್ಳಬೇಕು ಇಲ್ಲವಾದಲ್ಲಿ ಪ್ರಜಾಪ್ರಭುತ್ವ ವಿಧಾನದಲ್ಲಿನ ತಮ್ಮ ಹೋರಾಟವನ್ನು ಮುಂದುವರೆಸುವುದಾಗಿ AISA ಎಚ್ಚರಿಸಿದೆ.

ಡಿಸೆಂಬರ್‌ 23 ರ ಘಟಿಕೋತ್ಸವದಲ್ಲಿ ನೀಡಿದ ತಮ್ಮ ಹೇಳಿಕೆಯಿಂದ ನೇಹಾ ಅವರು ವಿದ್ಯಾರ್ಥಿಯ ಅರ್ಹತೆ ಕಳೆದುಕೊಂಡಿದ್ದಾರೆ ಎಂದು ವಿಶ್ವವಿದ್ಯಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.


ಇದನ್ನೂ ಓದಿ: ವಿಶ್ವವಿದ್ಯಾಲಯಗಳಲ್ಲಿ ಮೋದಿಗೆ ಧನ್ಯವಾದ ಸಲ್ಲಿಸುವ ಬ್ಯಾನರ್‌ ಹಾಕಲು ಯುಜಿಸಿ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...