Homeಮುಖಪುಟತಾರತಮ್ಯ ಪ್ರಶ್ನಿಸಿದ ವಿದ್ಯಾರ್ಥಿನಿಯ ಮೇಲೆ ಅಂಬೇಡ್ಕರ್‌ ವಿವಿಯಿಂದ ಶಿಸ್ತುಕ್ರಮ

ತಾರತಮ್ಯ ಪ್ರಶ್ನಿಸಿದ ವಿದ್ಯಾರ್ಥಿನಿಯ ಮೇಲೆ ಅಂಬೇಡ್ಕರ್‌ ವಿವಿಯಿಂದ ಶಿಸ್ತುಕ್ರಮ

- Advertisement -
- Advertisement -

ವಿಶ್ವವಿದ್ಯಾಲಯದ ಆಡಳಿತ ವ್ಯವಸ್ಥೆ ವಿರುದ್ಧ ಧ್ವನಿ ಎತ್ತುವ ವಿದ್ಯಾರ್ಥಿಗಳನ್ನು ಶಿಕ್ಷೆಗೊಳಪಡಿಸುವ ಪರಂಪರೆ ನಮ್ಮ ದೇಶದಲ್ಲಿ  ದಿನನಿತ್ಯದ ಘಟನೆಯಾಗಿ ಮಾರ್ಪಟ್ಟಿದೆ. ಜಾಮಿಯಾ, ಜೆಎನ್‌ಯು, ದೆಹಲಿ ವಿಶ್ವವಿದ್ಯಾನಿಲಯ, ಹೈದರಾಬಾದ್ ಯುನಿವರ್ಸಿಟಿ, ಐಐಟಿ ಮದ್ರಾಸ್ ಹೀಗೆ ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿಯೇ ವಿದ್ಯಾರ್ಥಿಗಳ ಸಂವಿಧಾನಬದ್ಧ ಹಕ್ಕುಗಳನ್ನು ಮೊಟಕುಗೊಳಿಸುವ ಪ್ರಕ್ರಿಯೆ ದೀರ್ಘ ಕಾಲದಿಂದ ಚಾಲ್ತಿಯಲ್ಲಿದೆ. ಕಳೆದ ಕೆಲವು ವರ್ಷಗಳಿಂದ  ಮಾಧ್ಯಮಗಳಲ್ಲಿ ಒಂದಾದರೂ ವಿದ್ಯಾರ್ಥಿ ಪ್ರತಿಭಟನೆಗಳು ವರದಿಯಾಗುತ್ತವೆ ಮತ್ತು ಪೊಲೀಸರಿಂದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯಗಳು ನಡೆದ ಘಟನೆ ದೇಶದಲ್ಲಿ ಸಾಕಷ್ಟು ನಡೆದಿದೆ. ವಿದ್ಯಾರ್ಥಿ ಚಳುವಳಿಗಳ ತೊಟ್ಟಿಲು ಎಂದು ಪರಿಗಣಿಸಲ್ಪಡುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿದ್ಯಾರ್ಥಿ ಹೋರಾಟ ದಿನ ನಿತ್ಯದ ಸರ್ವೇ ಸಾಮಾನ್ಯ ಸಂಗತಿ. ಅನ್ಯಾಯ ಮತ್ತು ತಾರತಮ್ಯದ ವಿರುದ್ಧ ವಿದ್ಯಾರ್ಥಿ ವೃಂದದ ಹೋರಾಟಕ್ಕೆ ದೆಹಲಿಯಲ್ಲಿ ದೀರ್ಘ ಪರಂಪರೆ ಮತ್ತು ಇತಿಹಾಸವಿದೆ. ಕೋವಿಡ್ ಕಾರಣಗಳಿಂದ ಇಂದು ವಿದ್ಯಾರ್ಥಿ ಪ್ರತಿಭಟನೆಗಳು ಹೆಚ್ಚು ಬಹಿರಂಗವಾಗಿ ನಡೆಯುತ್ತಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಶುಲ್ಕ ಏರಿಕೆ, ದುರಾಡಳಿತ, ತಾರತಮ್ಯ ಖಂಡಿಸಿ ಅಭಿಯಾನಗಳು ಸತತವಾಗಿ ನಡೆಯುತ್ತಲೇ ಇವೆ. ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಅಂಬೇಡ್ಕರ್ ವಿಶ್ವವಿದ್ಯಾಲಯ ಮತ್ತೊಮ್ಮೆ ಅಂತದ್ದೊಂದು ಪ್ರತಿಭಟನೆಗೆ ಸುದ್ದಿಯಾಗಿದ್ದು, ವಿಶ್ವವಿದ್ಯಾಲಯದ ಆಡಳಿತವನ್ನು ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿನಿಯೊಬ್ಬರಿಗೆ ದಂಡ ವಿಧಿಸಿ ಶಿಸ್ತುಕ್ರಮ ಕೈಗೊಳ್ಳಲಾಗಿದೆ.

ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ತಾರತಮ್ಯದ ವಿರುದ್ಧ ಆನ್‌ಲೈನ್ ಅಭಿಯಾನದಲ್ಲಿ ಭಾಗವಹಿಸಿದ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬರಿಗೆ ದಂಡ ವಿಧಿಸಿ ಯುನಿವರ್ಸಿಟಿ ಅಡ್ಮಿನಿಸ್ಟ್ರೇಶನ್ ಜೂನ್‌ 30 ರಂದು  ಆದೇಶ ಹೊರಡಿಸಿದೆ. ಡಿಸೆಂಬರ್ 20 ರಂದು ನಡೆದ  ಆನ್‌ಲೈನ್ ಘಟಿಕೋತ್ಸವದಲ್ಲಿ ವಿಶ್ವವಿದ್ಯಾಲಯದ ವಿರುದ್ಧ ಘೋಷಣೆ ಕೂಡ ಕೂಗಿದ ಕಾರಣ ನೀಡಿ ಅಂತಿಮ ವರ್ಷದ ಎಂಎ ಪ್ರದರ್ಶನ ಕಲೆ ವಿಭಾಗದ ವಿದ್ಯಾರ್ಥಿನಿ ನೇಹಾ ಅವರಿಗೆ ಅಂಬೇಡ್ಕರ್ ವಿಶ್ವ ವಿದ್ಯಾಲಯ 5000 ರೂ ದಂಡ ವಿಧಿಸಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಅನರ್ಹಗೊಳಿಸುವುದಾಗಿಯೂ ಎಚ್ಚರಿಕೆ ನೀಡಿದೆ. ನೇಹಾ ಆಲ್‌ ಇಂಡಿಯಾ ಸ್ಟುಡೆಂಟ್ ಅಸೋಸಿಯೇಷನ್‌ (AISA) ಉಪಾಧ್ಯಕ್ಷೆ ಕೂಡ ಆಗಿದ್ದಾರೆ.

ಇದನ್ನೂ ಓದಿ: ಸರ್ಕಾರವು ಶಿಕ್ಷಣ ಕ್ಷೇತ್ರದಿಂದ ಹಿಂದೆ ಸರಿಯುವಂತಿಲ್ಲ: JNU ಶುಲ್ಕ ಹೆಚ್ಚಳಕ್ಕೆ ಹೈಕೋರ್ಟ್‌ ವಿರೋಧ.

ಡಿಸೆಂಬರ್ 23 ರಂದು ಯೂಟ್ಯೂಬ್ ಮೂಲಕ ನಡೆದ ಘಟಿಕೋತ್ಸವದಲ್ಲಿ ನೇಹಾ ಅವರು ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಗಳ ಮೇಲೆ ತಾರತಮ್ಯ ನಡೆಯುತ್ತಿದೆ. ಶುಲ್ಕ ಹೆಚ್ಚಳದ ಮೂಲಕ ಯುನಿವರ್ಸಿಟಿ ಆಡಳಿತ ಬಡವರನ್ನು ಶಿಕ್ಷಣದಿಂದ ವಂಚಿತಗೊಳಿಸುತ್ತಿದೆ ಎಂದು ಆರೋಪಿಸಿದ್ದರು ಮತ್ತು ಪ್ರತಿಭಟನೆಗೆ ಕರೆ ನೀಡಿದ್ದರು ಎಂದು ಹೇಳಲಾಗಿದೆ. ಸಂವಿಧಾನ ನೀಡಿದ ಮೀಸಲಾತಿಯ ಹಕ್ಕಿನಲ್ಲಿ ಬದಲಾವಣೆಗಳನ್ನು ತಂದು ದಲಿತ ಮತ್ತು ಹಿಂದುಳಿದ ವಿದ್ಯಾರ್ಥಿಗಳಿಗೆ ಅನ್ಯಾಯವೆಸಗಲಾಗುತ್ತಿದೆ. ಇದರ ವಿರುದ್ಧ ಧ್ವನಿ ಎತ್ತುವಂತೆ ನೆಹಾ ಕರೆ ನೀಡಿದ್ದರು. ಹಾಗೇ ಘಟಿಕೋತ್ಸವದಲ್ಲಿ ಅತಿಥಿಯಾಗಿದ್ದ ಅರವಿಂದ್ ಕೇಜ್ರಿವಾಲ್‌ ಅವರಿಗೆ ವಿದ್ಯಾರ್ಥಿಗಳ ಮೇಲೆ ಕನಿಷ್ಠ ಕಾಳಜಿಯಿಲ್ಲ ಎಂಬ ಆರೋಪ ಸಹ ಅವರು ಮಾಡಿದ್ದರು ಎನ್ನಲಾಗಿದೆ. ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ ಎಸ್‌ಸಿ ಎಸ್‌ಟಿ ವಿದ್ಯಾರ್ಥಿಗಳ ಮೇಲೆ ತಾರತಮ್ಯ ನಡೆಯುತ್ತಿದೆ ಎಂಬ ಆರೋಪ ಈ ಹಿಂದೆ ಕೂಡ ಕೇಳಿಬಂದಿತ್ತು.

ಡಿಸೆಂಬರ್‌ 23 ರಂದು ನಡೆದ ಆನ್‌ಲೈನ್ ಘಟಿಕೋತ್ಸವದಲ್ಲಿ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಅಗೌರವಯುತ ಹೇಳಿಕೆಯನ್ನು ನೇಹಾ ನೀಡಿದ್ದಾರೆ ಎಂದು ಅಂಬೇಡ್ಕರ್ ವಿಶ್ವವಿದ್ಯಾಲಯ ತನ್ನ ಪ್ರಕಟಣೆಯಲ್ಲಿ ಹೇಳಿದೆ. ಈ ಸಂಬಂಧ ನೇಹಾ ಅವರಿಗೆ ನೋಟಿಸ್‌ ಕೂಡ ನೀಡಲಾಗಿದೆ. ವಿಶ್ವವಿದ್ಯಾಲಯದ ಶಿಸ್ತು ಸಂಹಿತೆಯನ್ನು ವಿದ್ಯಾರ್ಥಿನಿ ಉಲ್ಲಂಘನೆ ಮಾಡಿರುವುದು ತನಿಖಾ ಸಮಿತಿಯ ವರದಿಯಿಂದ ಸ್ಪಷ್ಟವಾಗಿದೆ. ತನಿಖಾ ಸಮಿತಿ ಮತ್ತು ನೇಹಾ ಅವರ ನಡುವೆ ಏಪ್ರಿಲ್ 6 ರಂದು ನಡೆದ ಸಮಾಲೋಚನೆಯಲ್ಲಿ ಈ ಹೇಳಿಕೆ ತಮ್ಮದೆಂದು ಒಪ್ಪಿಕೊಂಡಿದ್ದಾರೆ ಮತ್ತು  ಸಮರ್ಥಿಸಿಕೊಂಡಿದ್ದಾರೆ. ವಿದ್ಯಾರ್ಥಿನಿಯು ವಿಶ್ವವಿದ್ಯಾಲಯ, ಮುಖ್ಯ ಅತಿಥಿ ಮತ್ತು ಗೌರವ ಅತಿಥಿಗಳ ವಿರುದ್ಧ ಮಾಡಿರುವ ಆರೋಪ ನಿರಾಧಾರವಾಗಿದೆ ಮತ್ತು ಯುನಿವರ್ಸಿಟಿ ಸಮುದಾಯಕ್ಕೆ ಕಳಂಕವನ್ನು ತರುವ ಪ್ರಯತ್ನವಾಗಿ ಕಂಡು ಬಂದಿದೆ ಎಂದು ಅಂಬೇಡ್ಕರ್ ವಿಶ್ವವಿದ್ಯಾಲಯ ಹೇಳುತ್ತಿದೆ.

ಇದನ್ನೂ ಓದಿ: ದಿಢೀರ್‌ ಶುಲ್ಕ ಡಬಲ್: ಪುಣೆ FTTI ನಲ್ಲಿ ವಿದ್ಯಾರ್ಥಿಗಳಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ಆರಂಭ

ತಮ್ಮ ಮೇಲಿನ ದಂಡ ಮತ್ತು ಆರೋಪಗಳಿಗೆ ಪ್ರತಿಕ್ರಿಯಿಸಿರುವ ನೇಹಾ ಆ ದಿನ 12 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆನ್‌ಲೈನ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಅವರ ಯಾರ ವಿರುದ್ಧವೂ ಕ್ರಮ ಕೈಗೊಂಡಿಲ್ಲ. ನನ್ನ ಮೇಲೆ ವಿಶ್ವವಿದ್ಯಾಲಯದ ಯಾವ ನಿರ್ದಿಷ್ಟ ನಿಯಮಗಳಡಿ ಕ್ರಮ ಕೈಗೊಳ್ಳಲಾಗಿದೆ ಎಂದು ಪದೇ ಪದೇ ಕೇಳುತ್ತಿದ್ದೇನೆ. ಈ ಸಂಬಂಧ ವಿಶ್ವವಿದ್ಯಾಲಯ ಪ್ರತಿಕ್ರಿಯೆಯನ್ನು ನೀಡಿಲ್ಲ. ಇದಕ್ಕೆ ಹೆದರುವುದಿಲ್ಲ ಮತ್ತು ತಾರತಮ್ಯದ ವಿರುದ್ಧದ ಹೋರಾಟ ಮುಂದುವರೆಸುವುದಾಗಿ ತಿಳಿಸಿದ್ದಾರೆ.

ಅಂಬೇಡ್ಕರ್‌ ವೀಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಗಳ ಮೇಲೆ ವ್ಯವಸ್ಥಿತವಾಗಿ ತಾರತಮ್ಯ ನಡೆಯುತ್ತಿದ್ದು ವಿಶ್ವ ವಿದ್ಯಾಲಯವು ಪ್ರಜಾಪ್ರಭುತ್ವ ದತ್ತ ಹಕ್ಕುಗಳಡಿ ನ್ಯಾಯವನ್ನು ಕೇಳಿದಾಗ ಕ್ರಮ ಕೈಗೊಳ್ಳಲು ಮುಂದಾಗಿದೆ. ನೇಹಾ ಅವರ ಮೇಲಿನ ಎಲ್ಲಾ ಕ್ರಮಗಳನ್ನು ಹಿಂತೆಗೆದುಕೊಳ್ಳಬೇಕು ಇಲ್ಲವಾದಲ್ಲಿ ಪ್ರಜಾಪ್ರಭುತ್ವ ವಿಧಾನದಲ್ಲಿನ ತಮ್ಮ ಹೋರಾಟವನ್ನು ಮುಂದುವರೆಸುವುದಾಗಿ AISA ಎಚ್ಚರಿಸಿದೆ.

ಡಿಸೆಂಬರ್‌ 23 ರ ಘಟಿಕೋತ್ಸವದಲ್ಲಿ ನೀಡಿದ ತಮ್ಮ ಹೇಳಿಕೆಯಿಂದ ನೇಹಾ ಅವರು ವಿದ್ಯಾರ್ಥಿಯ ಅರ್ಹತೆ ಕಳೆದುಕೊಂಡಿದ್ದಾರೆ ಎಂದು ವಿಶ್ವವಿದ್ಯಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.


ಇದನ್ನೂ ಓದಿ: ವಿಶ್ವವಿದ್ಯಾಲಯಗಳಲ್ಲಿ ಮೋದಿಗೆ ಧನ್ಯವಾದ ಸಲ್ಲಿಸುವ ಬ್ಯಾನರ್‌ ಹಾಕಲು ಯುಜಿಸಿ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...