Homeಮುಖಪುಟತಾರತಮ್ಯ ಪ್ರಶ್ನಿಸಿದ ವಿದ್ಯಾರ್ಥಿನಿಯ ಮೇಲೆ ಅಂಬೇಡ್ಕರ್‌ ವಿವಿಯಿಂದ ಶಿಸ್ತುಕ್ರಮ

ತಾರತಮ್ಯ ಪ್ರಶ್ನಿಸಿದ ವಿದ್ಯಾರ್ಥಿನಿಯ ಮೇಲೆ ಅಂಬೇಡ್ಕರ್‌ ವಿವಿಯಿಂದ ಶಿಸ್ತುಕ್ರಮ

- Advertisement -
- Advertisement -

ವಿಶ್ವವಿದ್ಯಾಲಯದ ಆಡಳಿತ ವ್ಯವಸ್ಥೆ ವಿರುದ್ಧ ಧ್ವನಿ ಎತ್ತುವ ವಿದ್ಯಾರ್ಥಿಗಳನ್ನು ಶಿಕ್ಷೆಗೊಳಪಡಿಸುವ ಪರಂಪರೆ ನಮ್ಮ ದೇಶದಲ್ಲಿ  ದಿನನಿತ್ಯದ ಘಟನೆಯಾಗಿ ಮಾರ್ಪಟ್ಟಿದೆ. ಜಾಮಿಯಾ, ಜೆಎನ್‌ಯು, ದೆಹಲಿ ವಿಶ್ವವಿದ್ಯಾನಿಲಯ, ಹೈದರಾಬಾದ್ ಯುನಿವರ್ಸಿಟಿ, ಐಐಟಿ ಮದ್ರಾಸ್ ಹೀಗೆ ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿಯೇ ವಿದ್ಯಾರ್ಥಿಗಳ ಸಂವಿಧಾನಬದ್ಧ ಹಕ್ಕುಗಳನ್ನು ಮೊಟಕುಗೊಳಿಸುವ ಪ್ರಕ್ರಿಯೆ ದೀರ್ಘ ಕಾಲದಿಂದ ಚಾಲ್ತಿಯಲ್ಲಿದೆ. ಕಳೆದ ಕೆಲವು ವರ್ಷಗಳಿಂದ  ಮಾಧ್ಯಮಗಳಲ್ಲಿ ಒಂದಾದರೂ ವಿದ್ಯಾರ್ಥಿ ಪ್ರತಿಭಟನೆಗಳು ವರದಿಯಾಗುತ್ತವೆ ಮತ್ತು ಪೊಲೀಸರಿಂದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯಗಳು ನಡೆದ ಘಟನೆ ದೇಶದಲ್ಲಿ ಸಾಕಷ್ಟು ನಡೆದಿದೆ. ವಿದ್ಯಾರ್ಥಿ ಚಳುವಳಿಗಳ ತೊಟ್ಟಿಲು ಎಂದು ಪರಿಗಣಿಸಲ್ಪಡುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿದ್ಯಾರ್ಥಿ ಹೋರಾಟ ದಿನ ನಿತ್ಯದ ಸರ್ವೇ ಸಾಮಾನ್ಯ ಸಂಗತಿ. ಅನ್ಯಾಯ ಮತ್ತು ತಾರತಮ್ಯದ ವಿರುದ್ಧ ವಿದ್ಯಾರ್ಥಿ ವೃಂದದ ಹೋರಾಟಕ್ಕೆ ದೆಹಲಿಯಲ್ಲಿ ದೀರ್ಘ ಪರಂಪರೆ ಮತ್ತು ಇತಿಹಾಸವಿದೆ. ಕೋವಿಡ್ ಕಾರಣಗಳಿಂದ ಇಂದು ವಿದ್ಯಾರ್ಥಿ ಪ್ರತಿಭಟನೆಗಳು ಹೆಚ್ಚು ಬಹಿರಂಗವಾಗಿ ನಡೆಯುತ್ತಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಶುಲ್ಕ ಏರಿಕೆ, ದುರಾಡಳಿತ, ತಾರತಮ್ಯ ಖಂಡಿಸಿ ಅಭಿಯಾನಗಳು ಸತತವಾಗಿ ನಡೆಯುತ್ತಲೇ ಇವೆ. ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಅಂಬೇಡ್ಕರ್ ವಿಶ್ವವಿದ್ಯಾಲಯ ಮತ್ತೊಮ್ಮೆ ಅಂತದ್ದೊಂದು ಪ್ರತಿಭಟನೆಗೆ ಸುದ್ದಿಯಾಗಿದ್ದು, ವಿಶ್ವವಿದ್ಯಾಲಯದ ಆಡಳಿತವನ್ನು ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿನಿಯೊಬ್ಬರಿಗೆ ದಂಡ ವಿಧಿಸಿ ಶಿಸ್ತುಕ್ರಮ ಕೈಗೊಳ್ಳಲಾಗಿದೆ.

ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ತಾರತಮ್ಯದ ವಿರುದ್ಧ ಆನ್‌ಲೈನ್ ಅಭಿಯಾನದಲ್ಲಿ ಭಾಗವಹಿಸಿದ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬರಿಗೆ ದಂಡ ವಿಧಿಸಿ ಯುನಿವರ್ಸಿಟಿ ಅಡ್ಮಿನಿಸ್ಟ್ರೇಶನ್ ಜೂನ್‌ 30 ರಂದು  ಆದೇಶ ಹೊರಡಿಸಿದೆ. ಡಿಸೆಂಬರ್ 20 ರಂದು ನಡೆದ  ಆನ್‌ಲೈನ್ ಘಟಿಕೋತ್ಸವದಲ್ಲಿ ವಿಶ್ವವಿದ್ಯಾಲಯದ ವಿರುದ್ಧ ಘೋಷಣೆ ಕೂಡ ಕೂಗಿದ ಕಾರಣ ನೀಡಿ ಅಂತಿಮ ವರ್ಷದ ಎಂಎ ಪ್ರದರ್ಶನ ಕಲೆ ವಿಭಾಗದ ವಿದ್ಯಾರ್ಥಿನಿ ನೇಹಾ ಅವರಿಗೆ ಅಂಬೇಡ್ಕರ್ ವಿಶ್ವ ವಿದ್ಯಾಲಯ 5000 ರೂ ದಂಡ ವಿಧಿಸಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಅನರ್ಹಗೊಳಿಸುವುದಾಗಿಯೂ ಎಚ್ಚರಿಕೆ ನೀಡಿದೆ. ನೇಹಾ ಆಲ್‌ ಇಂಡಿಯಾ ಸ್ಟುಡೆಂಟ್ ಅಸೋಸಿಯೇಷನ್‌ (AISA) ಉಪಾಧ್ಯಕ್ಷೆ ಕೂಡ ಆಗಿದ್ದಾರೆ.

ಇದನ್ನೂ ಓದಿ: ಸರ್ಕಾರವು ಶಿಕ್ಷಣ ಕ್ಷೇತ್ರದಿಂದ ಹಿಂದೆ ಸರಿಯುವಂತಿಲ್ಲ: JNU ಶುಲ್ಕ ಹೆಚ್ಚಳಕ್ಕೆ ಹೈಕೋರ್ಟ್‌ ವಿರೋಧ.

ಡಿಸೆಂಬರ್ 23 ರಂದು ಯೂಟ್ಯೂಬ್ ಮೂಲಕ ನಡೆದ ಘಟಿಕೋತ್ಸವದಲ್ಲಿ ನೇಹಾ ಅವರು ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಗಳ ಮೇಲೆ ತಾರತಮ್ಯ ನಡೆಯುತ್ತಿದೆ. ಶುಲ್ಕ ಹೆಚ್ಚಳದ ಮೂಲಕ ಯುನಿವರ್ಸಿಟಿ ಆಡಳಿತ ಬಡವರನ್ನು ಶಿಕ್ಷಣದಿಂದ ವಂಚಿತಗೊಳಿಸುತ್ತಿದೆ ಎಂದು ಆರೋಪಿಸಿದ್ದರು ಮತ್ತು ಪ್ರತಿಭಟನೆಗೆ ಕರೆ ನೀಡಿದ್ದರು ಎಂದು ಹೇಳಲಾಗಿದೆ. ಸಂವಿಧಾನ ನೀಡಿದ ಮೀಸಲಾತಿಯ ಹಕ್ಕಿನಲ್ಲಿ ಬದಲಾವಣೆಗಳನ್ನು ತಂದು ದಲಿತ ಮತ್ತು ಹಿಂದುಳಿದ ವಿದ್ಯಾರ್ಥಿಗಳಿಗೆ ಅನ್ಯಾಯವೆಸಗಲಾಗುತ್ತಿದೆ. ಇದರ ವಿರುದ್ಧ ಧ್ವನಿ ಎತ್ತುವಂತೆ ನೆಹಾ ಕರೆ ನೀಡಿದ್ದರು. ಹಾಗೇ ಘಟಿಕೋತ್ಸವದಲ್ಲಿ ಅತಿಥಿಯಾಗಿದ್ದ ಅರವಿಂದ್ ಕೇಜ್ರಿವಾಲ್‌ ಅವರಿಗೆ ವಿದ್ಯಾರ್ಥಿಗಳ ಮೇಲೆ ಕನಿಷ್ಠ ಕಾಳಜಿಯಿಲ್ಲ ಎಂಬ ಆರೋಪ ಸಹ ಅವರು ಮಾಡಿದ್ದರು ಎನ್ನಲಾಗಿದೆ. ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ ಎಸ್‌ಸಿ ಎಸ್‌ಟಿ ವಿದ್ಯಾರ್ಥಿಗಳ ಮೇಲೆ ತಾರತಮ್ಯ ನಡೆಯುತ್ತಿದೆ ಎಂಬ ಆರೋಪ ಈ ಹಿಂದೆ ಕೂಡ ಕೇಳಿಬಂದಿತ್ತು.

ಡಿಸೆಂಬರ್‌ 23 ರಂದು ನಡೆದ ಆನ್‌ಲೈನ್ ಘಟಿಕೋತ್ಸವದಲ್ಲಿ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಅಗೌರವಯುತ ಹೇಳಿಕೆಯನ್ನು ನೇಹಾ ನೀಡಿದ್ದಾರೆ ಎಂದು ಅಂಬೇಡ್ಕರ್ ವಿಶ್ವವಿದ್ಯಾಲಯ ತನ್ನ ಪ್ರಕಟಣೆಯಲ್ಲಿ ಹೇಳಿದೆ. ಈ ಸಂಬಂಧ ನೇಹಾ ಅವರಿಗೆ ನೋಟಿಸ್‌ ಕೂಡ ನೀಡಲಾಗಿದೆ. ವಿಶ್ವವಿದ್ಯಾಲಯದ ಶಿಸ್ತು ಸಂಹಿತೆಯನ್ನು ವಿದ್ಯಾರ್ಥಿನಿ ಉಲ್ಲಂಘನೆ ಮಾಡಿರುವುದು ತನಿಖಾ ಸಮಿತಿಯ ವರದಿಯಿಂದ ಸ್ಪಷ್ಟವಾಗಿದೆ. ತನಿಖಾ ಸಮಿತಿ ಮತ್ತು ನೇಹಾ ಅವರ ನಡುವೆ ಏಪ್ರಿಲ್ 6 ರಂದು ನಡೆದ ಸಮಾಲೋಚನೆಯಲ್ಲಿ ಈ ಹೇಳಿಕೆ ತಮ್ಮದೆಂದು ಒಪ್ಪಿಕೊಂಡಿದ್ದಾರೆ ಮತ್ತು  ಸಮರ್ಥಿಸಿಕೊಂಡಿದ್ದಾರೆ. ವಿದ್ಯಾರ್ಥಿನಿಯು ವಿಶ್ವವಿದ್ಯಾಲಯ, ಮುಖ್ಯ ಅತಿಥಿ ಮತ್ತು ಗೌರವ ಅತಿಥಿಗಳ ವಿರುದ್ಧ ಮಾಡಿರುವ ಆರೋಪ ನಿರಾಧಾರವಾಗಿದೆ ಮತ್ತು ಯುನಿವರ್ಸಿಟಿ ಸಮುದಾಯಕ್ಕೆ ಕಳಂಕವನ್ನು ತರುವ ಪ್ರಯತ್ನವಾಗಿ ಕಂಡು ಬಂದಿದೆ ಎಂದು ಅಂಬೇಡ್ಕರ್ ವಿಶ್ವವಿದ್ಯಾಲಯ ಹೇಳುತ್ತಿದೆ.

ಇದನ್ನೂ ಓದಿ: ದಿಢೀರ್‌ ಶುಲ್ಕ ಡಬಲ್: ಪುಣೆ FTTI ನಲ್ಲಿ ವಿದ್ಯಾರ್ಥಿಗಳಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ಆರಂಭ

ತಮ್ಮ ಮೇಲಿನ ದಂಡ ಮತ್ತು ಆರೋಪಗಳಿಗೆ ಪ್ರತಿಕ್ರಿಯಿಸಿರುವ ನೇಹಾ ಆ ದಿನ 12 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆನ್‌ಲೈನ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಅವರ ಯಾರ ವಿರುದ್ಧವೂ ಕ್ರಮ ಕೈಗೊಂಡಿಲ್ಲ. ನನ್ನ ಮೇಲೆ ವಿಶ್ವವಿದ್ಯಾಲಯದ ಯಾವ ನಿರ್ದಿಷ್ಟ ನಿಯಮಗಳಡಿ ಕ್ರಮ ಕೈಗೊಳ್ಳಲಾಗಿದೆ ಎಂದು ಪದೇ ಪದೇ ಕೇಳುತ್ತಿದ್ದೇನೆ. ಈ ಸಂಬಂಧ ವಿಶ್ವವಿದ್ಯಾಲಯ ಪ್ರತಿಕ್ರಿಯೆಯನ್ನು ನೀಡಿಲ್ಲ. ಇದಕ್ಕೆ ಹೆದರುವುದಿಲ್ಲ ಮತ್ತು ತಾರತಮ್ಯದ ವಿರುದ್ಧದ ಹೋರಾಟ ಮುಂದುವರೆಸುವುದಾಗಿ ತಿಳಿಸಿದ್ದಾರೆ.

ಅಂಬೇಡ್ಕರ್‌ ವೀಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಗಳ ಮೇಲೆ ವ್ಯವಸ್ಥಿತವಾಗಿ ತಾರತಮ್ಯ ನಡೆಯುತ್ತಿದ್ದು ವಿಶ್ವ ವಿದ್ಯಾಲಯವು ಪ್ರಜಾಪ್ರಭುತ್ವ ದತ್ತ ಹಕ್ಕುಗಳಡಿ ನ್ಯಾಯವನ್ನು ಕೇಳಿದಾಗ ಕ್ರಮ ಕೈಗೊಳ್ಳಲು ಮುಂದಾಗಿದೆ. ನೇಹಾ ಅವರ ಮೇಲಿನ ಎಲ್ಲಾ ಕ್ರಮಗಳನ್ನು ಹಿಂತೆಗೆದುಕೊಳ್ಳಬೇಕು ಇಲ್ಲವಾದಲ್ಲಿ ಪ್ರಜಾಪ್ರಭುತ್ವ ವಿಧಾನದಲ್ಲಿನ ತಮ್ಮ ಹೋರಾಟವನ್ನು ಮುಂದುವರೆಸುವುದಾಗಿ AISA ಎಚ್ಚರಿಸಿದೆ.

ಡಿಸೆಂಬರ್‌ 23 ರ ಘಟಿಕೋತ್ಸವದಲ್ಲಿ ನೀಡಿದ ತಮ್ಮ ಹೇಳಿಕೆಯಿಂದ ನೇಹಾ ಅವರು ವಿದ್ಯಾರ್ಥಿಯ ಅರ್ಹತೆ ಕಳೆದುಕೊಂಡಿದ್ದಾರೆ ಎಂದು ವಿಶ್ವವಿದ್ಯಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.


ಇದನ್ನೂ ಓದಿ: ವಿಶ್ವವಿದ್ಯಾಲಯಗಳಲ್ಲಿ ಮೋದಿಗೆ ಧನ್ಯವಾದ ಸಲ್ಲಿಸುವ ಬ್ಯಾನರ್‌ ಹಾಕಲು ಯುಜಿಸಿ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...