Homeಮುಖಪುಟತಾರತಮ್ಯ ಪ್ರಶ್ನಿಸಿದ ವಿದ್ಯಾರ್ಥಿನಿಯ ಮೇಲೆ ಅಂಬೇಡ್ಕರ್‌ ವಿವಿಯಿಂದ ಶಿಸ್ತುಕ್ರಮ

ತಾರತಮ್ಯ ಪ್ರಶ್ನಿಸಿದ ವಿದ್ಯಾರ್ಥಿನಿಯ ಮೇಲೆ ಅಂಬೇಡ್ಕರ್‌ ವಿವಿಯಿಂದ ಶಿಸ್ತುಕ್ರಮ

- Advertisement -
- Advertisement -

ವಿಶ್ವವಿದ್ಯಾಲಯದ ಆಡಳಿತ ವ್ಯವಸ್ಥೆ ವಿರುದ್ಧ ಧ್ವನಿ ಎತ್ತುವ ವಿದ್ಯಾರ್ಥಿಗಳನ್ನು ಶಿಕ್ಷೆಗೊಳಪಡಿಸುವ ಪರಂಪರೆ ನಮ್ಮ ದೇಶದಲ್ಲಿ  ದಿನನಿತ್ಯದ ಘಟನೆಯಾಗಿ ಮಾರ್ಪಟ್ಟಿದೆ. ಜಾಮಿಯಾ, ಜೆಎನ್‌ಯು, ದೆಹಲಿ ವಿಶ್ವವಿದ್ಯಾನಿಲಯ, ಹೈದರಾಬಾದ್ ಯುನಿವರ್ಸಿಟಿ, ಐಐಟಿ ಮದ್ರಾಸ್ ಹೀಗೆ ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿಯೇ ವಿದ್ಯಾರ್ಥಿಗಳ ಸಂವಿಧಾನಬದ್ಧ ಹಕ್ಕುಗಳನ್ನು ಮೊಟಕುಗೊಳಿಸುವ ಪ್ರಕ್ರಿಯೆ ದೀರ್ಘ ಕಾಲದಿಂದ ಚಾಲ್ತಿಯಲ್ಲಿದೆ. ಕಳೆದ ಕೆಲವು ವರ್ಷಗಳಿಂದ  ಮಾಧ್ಯಮಗಳಲ್ಲಿ ಒಂದಾದರೂ ವಿದ್ಯಾರ್ಥಿ ಪ್ರತಿಭಟನೆಗಳು ವರದಿಯಾಗುತ್ತವೆ ಮತ್ತು ಪೊಲೀಸರಿಂದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯಗಳು ನಡೆದ ಘಟನೆ ದೇಶದಲ್ಲಿ ಸಾಕಷ್ಟು ನಡೆದಿದೆ. ವಿದ್ಯಾರ್ಥಿ ಚಳುವಳಿಗಳ ತೊಟ್ಟಿಲು ಎಂದು ಪರಿಗಣಿಸಲ್ಪಡುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿದ್ಯಾರ್ಥಿ ಹೋರಾಟ ದಿನ ನಿತ್ಯದ ಸರ್ವೇ ಸಾಮಾನ್ಯ ಸಂಗತಿ. ಅನ್ಯಾಯ ಮತ್ತು ತಾರತಮ್ಯದ ವಿರುದ್ಧ ವಿದ್ಯಾರ್ಥಿ ವೃಂದದ ಹೋರಾಟಕ್ಕೆ ದೆಹಲಿಯಲ್ಲಿ ದೀರ್ಘ ಪರಂಪರೆ ಮತ್ತು ಇತಿಹಾಸವಿದೆ. ಕೋವಿಡ್ ಕಾರಣಗಳಿಂದ ಇಂದು ವಿದ್ಯಾರ್ಥಿ ಪ್ರತಿಭಟನೆಗಳು ಹೆಚ್ಚು ಬಹಿರಂಗವಾಗಿ ನಡೆಯುತ್ತಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಶುಲ್ಕ ಏರಿಕೆ, ದುರಾಡಳಿತ, ತಾರತಮ್ಯ ಖಂಡಿಸಿ ಅಭಿಯಾನಗಳು ಸತತವಾಗಿ ನಡೆಯುತ್ತಲೇ ಇವೆ. ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಅಂಬೇಡ್ಕರ್ ವಿಶ್ವವಿದ್ಯಾಲಯ ಮತ್ತೊಮ್ಮೆ ಅಂತದ್ದೊಂದು ಪ್ರತಿಭಟನೆಗೆ ಸುದ್ದಿಯಾಗಿದ್ದು, ವಿಶ್ವವಿದ್ಯಾಲಯದ ಆಡಳಿತವನ್ನು ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿನಿಯೊಬ್ಬರಿಗೆ ದಂಡ ವಿಧಿಸಿ ಶಿಸ್ತುಕ್ರಮ ಕೈಗೊಳ್ಳಲಾಗಿದೆ.

ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ತಾರತಮ್ಯದ ವಿರುದ್ಧ ಆನ್‌ಲೈನ್ ಅಭಿಯಾನದಲ್ಲಿ ಭಾಗವಹಿಸಿದ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬರಿಗೆ ದಂಡ ವಿಧಿಸಿ ಯುನಿವರ್ಸಿಟಿ ಅಡ್ಮಿನಿಸ್ಟ್ರೇಶನ್ ಜೂನ್‌ 30 ರಂದು  ಆದೇಶ ಹೊರಡಿಸಿದೆ. ಡಿಸೆಂಬರ್ 20 ರಂದು ನಡೆದ  ಆನ್‌ಲೈನ್ ಘಟಿಕೋತ್ಸವದಲ್ಲಿ ವಿಶ್ವವಿದ್ಯಾಲಯದ ವಿರುದ್ಧ ಘೋಷಣೆ ಕೂಡ ಕೂಗಿದ ಕಾರಣ ನೀಡಿ ಅಂತಿಮ ವರ್ಷದ ಎಂಎ ಪ್ರದರ್ಶನ ಕಲೆ ವಿಭಾಗದ ವಿದ್ಯಾರ್ಥಿನಿ ನೇಹಾ ಅವರಿಗೆ ಅಂಬೇಡ್ಕರ್ ವಿಶ್ವ ವಿದ್ಯಾಲಯ 5000 ರೂ ದಂಡ ವಿಧಿಸಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಅನರ್ಹಗೊಳಿಸುವುದಾಗಿಯೂ ಎಚ್ಚರಿಕೆ ನೀಡಿದೆ. ನೇಹಾ ಆಲ್‌ ಇಂಡಿಯಾ ಸ್ಟುಡೆಂಟ್ ಅಸೋಸಿಯೇಷನ್‌ (AISA) ಉಪಾಧ್ಯಕ್ಷೆ ಕೂಡ ಆಗಿದ್ದಾರೆ.

ಇದನ್ನೂ ಓದಿ: ಸರ್ಕಾರವು ಶಿಕ್ಷಣ ಕ್ಷೇತ್ರದಿಂದ ಹಿಂದೆ ಸರಿಯುವಂತಿಲ್ಲ: JNU ಶುಲ್ಕ ಹೆಚ್ಚಳಕ್ಕೆ ಹೈಕೋರ್ಟ್‌ ವಿರೋಧ.

ಡಿಸೆಂಬರ್ 23 ರಂದು ಯೂಟ್ಯೂಬ್ ಮೂಲಕ ನಡೆದ ಘಟಿಕೋತ್ಸವದಲ್ಲಿ ನೇಹಾ ಅವರು ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಗಳ ಮೇಲೆ ತಾರತಮ್ಯ ನಡೆಯುತ್ತಿದೆ. ಶುಲ್ಕ ಹೆಚ್ಚಳದ ಮೂಲಕ ಯುನಿವರ್ಸಿಟಿ ಆಡಳಿತ ಬಡವರನ್ನು ಶಿಕ್ಷಣದಿಂದ ವಂಚಿತಗೊಳಿಸುತ್ತಿದೆ ಎಂದು ಆರೋಪಿಸಿದ್ದರು ಮತ್ತು ಪ್ರತಿಭಟನೆಗೆ ಕರೆ ನೀಡಿದ್ದರು ಎಂದು ಹೇಳಲಾಗಿದೆ. ಸಂವಿಧಾನ ನೀಡಿದ ಮೀಸಲಾತಿಯ ಹಕ್ಕಿನಲ್ಲಿ ಬದಲಾವಣೆಗಳನ್ನು ತಂದು ದಲಿತ ಮತ್ತು ಹಿಂದುಳಿದ ವಿದ್ಯಾರ್ಥಿಗಳಿಗೆ ಅನ್ಯಾಯವೆಸಗಲಾಗುತ್ತಿದೆ. ಇದರ ವಿರುದ್ಧ ಧ್ವನಿ ಎತ್ತುವಂತೆ ನೆಹಾ ಕರೆ ನೀಡಿದ್ದರು. ಹಾಗೇ ಘಟಿಕೋತ್ಸವದಲ್ಲಿ ಅತಿಥಿಯಾಗಿದ್ದ ಅರವಿಂದ್ ಕೇಜ್ರಿವಾಲ್‌ ಅವರಿಗೆ ವಿದ್ಯಾರ್ಥಿಗಳ ಮೇಲೆ ಕನಿಷ್ಠ ಕಾಳಜಿಯಿಲ್ಲ ಎಂಬ ಆರೋಪ ಸಹ ಅವರು ಮಾಡಿದ್ದರು ಎನ್ನಲಾಗಿದೆ. ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ ಎಸ್‌ಸಿ ಎಸ್‌ಟಿ ವಿದ್ಯಾರ್ಥಿಗಳ ಮೇಲೆ ತಾರತಮ್ಯ ನಡೆಯುತ್ತಿದೆ ಎಂಬ ಆರೋಪ ಈ ಹಿಂದೆ ಕೂಡ ಕೇಳಿಬಂದಿತ್ತು.

ಡಿಸೆಂಬರ್‌ 23 ರಂದು ನಡೆದ ಆನ್‌ಲೈನ್ ಘಟಿಕೋತ್ಸವದಲ್ಲಿ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಅಗೌರವಯುತ ಹೇಳಿಕೆಯನ್ನು ನೇಹಾ ನೀಡಿದ್ದಾರೆ ಎಂದು ಅಂಬೇಡ್ಕರ್ ವಿಶ್ವವಿದ್ಯಾಲಯ ತನ್ನ ಪ್ರಕಟಣೆಯಲ್ಲಿ ಹೇಳಿದೆ. ಈ ಸಂಬಂಧ ನೇಹಾ ಅವರಿಗೆ ನೋಟಿಸ್‌ ಕೂಡ ನೀಡಲಾಗಿದೆ. ವಿಶ್ವವಿದ್ಯಾಲಯದ ಶಿಸ್ತು ಸಂಹಿತೆಯನ್ನು ವಿದ್ಯಾರ್ಥಿನಿ ಉಲ್ಲಂಘನೆ ಮಾಡಿರುವುದು ತನಿಖಾ ಸಮಿತಿಯ ವರದಿಯಿಂದ ಸ್ಪಷ್ಟವಾಗಿದೆ. ತನಿಖಾ ಸಮಿತಿ ಮತ್ತು ನೇಹಾ ಅವರ ನಡುವೆ ಏಪ್ರಿಲ್ 6 ರಂದು ನಡೆದ ಸಮಾಲೋಚನೆಯಲ್ಲಿ ಈ ಹೇಳಿಕೆ ತಮ್ಮದೆಂದು ಒಪ್ಪಿಕೊಂಡಿದ್ದಾರೆ ಮತ್ತು  ಸಮರ್ಥಿಸಿಕೊಂಡಿದ್ದಾರೆ. ವಿದ್ಯಾರ್ಥಿನಿಯು ವಿಶ್ವವಿದ್ಯಾಲಯ, ಮುಖ್ಯ ಅತಿಥಿ ಮತ್ತು ಗೌರವ ಅತಿಥಿಗಳ ವಿರುದ್ಧ ಮಾಡಿರುವ ಆರೋಪ ನಿರಾಧಾರವಾಗಿದೆ ಮತ್ತು ಯುನಿವರ್ಸಿಟಿ ಸಮುದಾಯಕ್ಕೆ ಕಳಂಕವನ್ನು ತರುವ ಪ್ರಯತ್ನವಾಗಿ ಕಂಡು ಬಂದಿದೆ ಎಂದು ಅಂಬೇಡ್ಕರ್ ವಿಶ್ವವಿದ್ಯಾಲಯ ಹೇಳುತ್ತಿದೆ.

ಇದನ್ನೂ ಓದಿ: ದಿಢೀರ್‌ ಶುಲ್ಕ ಡಬಲ್: ಪುಣೆ FTTI ನಲ್ಲಿ ವಿದ್ಯಾರ್ಥಿಗಳಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ಆರಂಭ

ತಮ್ಮ ಮೇಲಿನ ದಂಡ ಮತ್ತು ಆರೋಪಗಳಿಗೆ ಪ್ರತಿಕ್ರಿಯಿಸಿರುವ ನೇಹಾ ಆ ದಿನ 12 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆನ್‌ಲೈನ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಅವರ ಯಾರ ವಿರುದ್ಧವೂ ಕ್ರಮ ಕೈಗೊಂಡಿಲ್ಲ. ನನ್ನ ಮೇಲೆ ವಿಶ್ವವಿದ್ಯಾಲಯದ ಯಾವ ನಿರ್ದಿಷ್ಟ ನಿಯಮಗಳಡಿ ಕ್ರಮ ಕೈಗೊಳ್ಳಲಾಗಿದೆ ಎಂದು ಪದೇ ಪದೇ ಕೇಳುತ್ತಿದ್ದೇನೆ. ಈ ಸಂಬಂಧ ವಿಶ್ವವಿದ್ಯಾಲಯ ಪ್ರತಿಕ್ರಿಯೆಯನ್ನು ನೀಡಿಲ್ಲ. ಇದಕ್ಕೆ ಹೆದರುವುದಿಲ್ಲ ಮತ್ತು ತಾರತಮ್ಯದ ವಿರುದ್ಧದ ಹೋರಾಟ ಮುಂದುವರೆಸುವುದಾಗಿ ತಿಳಿಸಿದ್ದಾರೆ.

ಅಂಬೇಡ್ಕರ್‌ ವೀಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಗಳ ಮೇಲೆ ವ್ಯವಸ್ಥಿತವಾಗಿ ತಾರತಮ್ಯ ನಡೆಯುತ್ತಿದ್ದು ವಿಶ್ವ ವಿದ್ಯಾಲಯವು ಪ್ರಜಾಪ್ರಭುತ್ವ ದತ್ತ ಹಕ್ಕುಗಳಡಿ ನ್ಯಾಯವನ್ನು ಕೇಳಿದಾಗ ಕ್ರಮ ಕೈಗೊಳ್ಳಲು ಮುಂದಾಗಿದೆ. ನೇಹಾ ಅವರ ಮೇಲಿನ ಎಲ್ಲಾ ಕ್ರಮಗಳನ್ನು ಹಿಂತೆಗೆದುಕೊಳ್ಳಬೇಕು ಇಲ್ಲವಾದಲ್ಲಿ ಪ್ರಜಾಪ್ರಭುತ್ವ ವಿಧಾನದಲ್ಲಿನ ತಮ್ಮ ಹೋರಾಟವನ್ನು ಮುಂದುವರೆಸುವುದಾಗಿ AISA ಎಚ್ಚರಿಸಿದೆ.

ಡಿಸೆಂಬರ್‌ 23 ರ ಘಟಿಕೋತ್ಸವದಲ್ಲಿ ನೀಡಿದ ತಮ್ಮ ಹೇಳಿಕೆಯಿಂದ ನೇಹಾ ಅವರು ವಿದ್ಯಾರ್ಥಿಯ ಅರ್ಹತೆ ಕಳೆದುಕೊಂಡಿದ್ದಾರೆ ಎಂದು ವಿಶ್ವವಿದ್ಯಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.


ಇದನ್ನೂ ಓದಿ: ವಿಶ್ವವಿದ್ಯಾಲಯಗಳಲ್ಲಿ ಮೋದಿಗೆ ಧನ್ಯವಾದ ಸಲ್ಲಿಸುವ ಬ್ಯಾನರ್‌ ಹಾಕಲು ಯುಜಿಸಿ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...