Homeಮುಖಪುಟತಾರತಮ್ಯ ಪ್ರಶ್ನಿಸಿದ ವಿದ್ಯಾರ್ಥಿನಿಯ ಮೇಲೆ ಅಂಬೇಡ್ಕರ್‌ ವಿವಿಯಿಂದ ಶಿಸ್ತುಕ್ರಮ

ತಾರತಮ್ಯ ಪ್ರಶ್ನಿಸಿದ ವಿದ್ಯಾರ್ಥಿನಿಯ ಮೇಲೆ ಅಂಬೇಡ್ಕರ್‌ ವಿವಿಯಿಂದ ಶಿಸ್ತುಕ್ರಮ

- Advertisement -
- Advertisement -

ವಿಶ್ವವಿದ್ಯಾಲಯದ ಆಡಳಿತ ವ್ಯವಸ್ಥೆ ವಿರುದ್ಧ ಧ್ವನಿ ಎತ್ತುವ ವಿದ್ಯಾರ್ಥಿಗಳನ್ನು ಶಿಕ್ಷೆಗೊಳಪಡಿಸುವ ಪರಂಪರೆ ನಮ್ಮ ದೇಶದಲ್ಲಿ  ದಿನನಿತ್ಯದ ಘಟನೆಯಾಗಿ ಮಾರ್ಪಟ್ಟಿದೆ. ಜಾಮಿಯಾ, ಜೆಎನ್‌ಯು, ದೆಹಲಿ ವಿಶ್ವವಿದ್ಯಾನಿಲಯ, ಹೈದರಾಬಾದ್ ಯುನಿವರ್ಸಿಟಿ, ಐಐಟಿ ಮದ್ರಾಸ್ ಹೀಗೆ ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿಯೇ ವಿದ್ಯಾರ್ಥಿಗಳ ಸಂವಿಧಾನಬದ್ಧ ಹಕ್ಕುಗಳನ್ನು ಮೊಟಕುಗೊಳಿಸುವ ಪ್ರಕ್ರಿಯೆ ದೀರ್ಘ ಕಾಲದಿಂದ ಚಾಲ್ತಿಯಲ್ಲಿದೆ. ಕಳೆದ ಕೆಲವು ವರ್ಷಗಳಿಂದ  ಮಾಧ್ಯಮಗಳಲ್ಲಿ ಒಂದಾದರೂ ವಿದ್ಯಾರ್ಥಿ ಪ್ರತಿಭಟನೆಗಳು ವರದಿಯಾಗುತ್ತವೆ ಮತ್ತು ಪೊಲೀಸರಿಂದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯಗಳು ನಡೆದ ಘಟನೆ ದೇಶದಲ್ಲಿ ಸಾಕಷ್ಟು ನಡೆದಿದೆ. ವಿದ್ಯಾರ್ಥಿ ಚಳುವಳಿಗಳ ತೊಟ್ಟಿಲು ಎಂದು ಪರಿಗಣಿಸಲ್ಪಡುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿದ್ಯಾರ್ಥಿ ಹೋರಾಟ ದಿನ ನಿತ್ಯದ ಸರ್ವೇ ಸಾಮಾನ್ಯ ಸಂಗತಿ. ಅನ್ಯಾಯ ಮತ್ತು ತಾರತಮ್ಯದ ವಿರುದ್ಧ ವಿದ್ಯಾರ್ಥಿ ವೃಂದದ ಹೋರಾಟಕ್ಕೆ ದೆಹಲಿಯಲ್ಲಿ ದೀರ್ಘ ಪರಂಪರೆ ಮತ್ತು ಇತಿಹಾಸವಿದೆ. ಕೋವಿಡ್ ಕಾರಣಗಳಿಂದ ಇಂದು ವಿದ್ಯಾರ್ಥಿ ಪ್ರತಿಭಟನೆಗಳು ಹೆಚ್ಚು ಬಹಿರಂಗವಾಗಿ ನಡೆಯುತ್ತಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಶುಲ್ಕ ಏರಿಕೆ, ದುರಾಡಳಿತ, ತಾರತಮ್ಯ ಖಂಡಿಸಿ ಅಭಿಯಾನಗಳು ಸತತವಾಗಿ ನಡೆಯುತ್ತಲೇ ಇವೆ. ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಅಂಬೇಡ್ಕರ್ ವಿಶ್ವವಿದ್ಯಾಲಯ ಮತ್ತೊಮ್ಮೆ ಅಂತದ್ದೊಂದು ಪ್ರತಿಭಟನೆಗೆ ಸುದ್ದಿಯಾಗಿದ್ದು, ವಿಶ್ವವಿದ್ಯಾಲಯದ ಆಡಳಿತವನ್ನು ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿನಿಯೊಬ್ಬರಿಗೆ ದಂಡ ವಿಧಿಸಿ ಶಿಸ್ತುಕ್ರಮ ಕೈಗೊಳ್ಳಲಾಗಿದೆ.

ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ತಾರತಮ್ಯದ ವಿರುದ್ಧ ಆನ್‌ಲೈನ್ ಅಭಿಯಾನದಲ್ಲಿ ಭಾಗವಹಿಸಿದ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬರಿಗೆ ದಂಡ ವಿಧಿಸಿ ಯುನಿವರ್ಸಿಟಿ ಅಡ್ಮಿನಿಸ್ಟ್ರೇಶನ್ ಜೂನ್‌ 30 ರಂದು  ಆದೇಶ ಹೊರಡಿಸಿದೆ. ಡಿಸೆಂಬರ್ 20 ರಂದು ನಡೆದ  ಆನ್‌ಲೈನ್ ಘಟಿಕೋತ್ಸವದಲ್ಲಿ ವಿಶ್ವವಿದ್ಯಾಲಯದ ವಿರುದ್ಧ ಘೋಷಣೆ ಕೂಡ ಕೂಗಿದ ಕಾರಣ ನೀಡಿ ಅಂತಿಮ ವರ್ಷದ ಎಂಎ ಪ್ರದರ್ಶನ ಕಲೆ ವಿಭಾಗದ ವಿದ್ಯಾರ್ಥಿನಿ ನೇಹಾ ಅವರಿಗೆ ಅಂಬೇಡ್ಕರ್ ವಿಶ್ವ ವಿದ್ಯಾಲಯ 5000 ರೂ ದಂಡ ವಿಧಿಸಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಅನರ್ಹಗೊಳಿಸುವುದಾಗಿಯೂ ಎಚ್ಚರಿಕೆ ನೀಡಿದೆ. ನೇಹಾ ಆಲ್‌ ಇಂಡಿಯಾ ಸ್ಟುಡೆಂಟ್ ಅಸೋಸಿಯೇಷನ್‌ (AISA) ಉಪಾಧ್ಯಕ್ಷೆ ಕೂಡ ಆಗಿದ್ದಾರೆ.

ಇದನ್ನೂ ಓದಿ: ಸರ್ಕಾರವು ಶಿಕ್ಷಣ ಕ್ಷೇತ್ರದಿಂದ ಹಿಂದೆ ಸರಿಯುವಂತಿಲ್ಲ: JNU ಶುಲ್ಕ ಹೆಚ್ಚಳಕ್ಕೆ ಹೈಕೋರ್ಟ್‌ ವಿರೋಧ.

ಡಿಸೆಂಬರ್ 23 ರಂದು ಯೂಟ್ಯೂಬ್ ಮೂಲಕ ನಡೆದ ಘಟಿಕೋತ್ಸವದಲ್ಲಿ ನೇಹಾ ಅವರು ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಗಳ ಮೇಲೆ ತಾರತಮ್ಯ ನಡೆಯುತ್ತಿದೆ. ಶುಲ್ಕ ಹೆಚ್ಚಳದ ಮೂಲಕ ಯುನಿವರ್ಸಿಟಿ ಆಡಳಿತ ಬಡವರನ್ನು ಶಿಕ್ಷಣದಿಂದ ವಂಚಿತಗೊಳಿಸುತ್ತಿದೆ ಎಂದು ಆರೋಪಿಸಿದ್ದರು ಮತ್ತು ಪ್ರತಿಭಟನೆಗೆ ಕರೆ ನೀಡಿದ್ದರು ಎಂದು ಹೇಳಲಾಗಿದೆ. ಸಂವಿಧಾನ ನೀಡಿದ ಮೀಸಲಾತಿಯ ಹಕ್ಕಿನಲ್ಲಿ ಬದಲಾವಣೆಗಳನ್ನು ತಂದು ದಲಿತ ಮತ್ತು ಹಿಂದುಳಿದ ವಿದ್ಯಾರ್ಥಿಗಳಿಗೆ ಅನ್ಯಾಯವೆಸಗಲಾಗುತ್ತಿದೆ. ಇದರ ವಿರುದ್ಧ ಧ್ವನಿ ಎತ್ತುವಂತೆ ನೆಹಾ ಕರೆ ನೀಡಿದ್ದರು. ಹಾಗೇ ಘಟಿಕೋತ್ಸವದಲ್ಲಿ ಅತಿಥಿಯಾಗಿದ್ದ ಅರವಿಂದ್ ಕೇಜ್ರಿವಾಲ್‌ ಅವರಿಗೆ ವಿದ್ಯಾರ್ಥಿಗಳ ಮೇಲೆ ಕನಿಷ್ಠ ಕಾಳಜಿಯಿಲ್ಲ ಎಂಬ ಆರೋಪ ಸಹ ಅವರು ಮಾಡಿದ್ದರು ಎನ್ನಲಾಗಿದೆ. ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ ಎಸ್‌ಸಿ ಎಸ್‌ಟಿ ವಿದ್ಯಾರ್ಥಿಗಳ ಮೇಲೆ ತಾರತಮ್ಯ ನಡೆಯುತ್ತಿದೆ ಎಂಬ ಆರೋಪ ಈ ಹಿಂದೆ ಕೂಡ ಕೇಳಿಬಂದಿತ್ತು.

ಡಿಸೆಂಬರ್‌ 23 ರಂದು ನಡೆದ ಆನ್‌ಲೈನ್ ಘಟಿಕೋತ್ಸವದಲ್ಲಿ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಅಗೌರವಯುತ ಹೇಳಿಕೆಯನ್ನು ನೇಹಾ ನೀಡಿದ್ದಾರೆ ಎಂದು ಅಂಬೇಡ್ಕರ್ ವಿಶ್ವವಿದ್ಯಾಲಯ ತನ್ನ ಪ್ರಕಟಣೆಯಲ್ಲಿ ಹೇಳಿದೆ. ಈ ಸಂಬಂಧ ನೇಹಾ ಅವರಿಗೆ ನೋಟಿಸ್‌ ಕೂಡ ನೀಡಲಾಗಿದೆ. ವಿಶ್ವವಿದ್ಯಾಲಯದ ಶಿಸ್ತು ಸಂಹಿತೆಯನ್ನು ವಿದ್ಯಾರ್ಥಿನಿ ಉಲ್ಲಂಘನೆ ಮಾಡಿರುವುದು ತನಿಖಾ ಸಮಿತಿಯ ವರದಿಯಿಂದ ಸ್ಪಷ್ಟವಾಗಿದೆ. ತನಿಖಾ ಸಮಿತಿ ಮತ್ತು ನೇಹಾ ಅವರ ನಡುವೆ ಏಪ್ರಿಲ್ 6 ರಂದು ನಡೆದ ಸಮಾಲೋಚನೆಯಲ್ಲಿ ಈ ಹೇಳಿಕೆ ತಮ್ಮದೆಂದು ಒಪ್ಪಿಕೊಂಡಿದ್ದಾರೆ ಮತ್ತು  ಸಮರ್ಥಿಸಿಕೊಂಡಿದ್ದಾರೆ. ವಿದ್ಯಾರ್ಥಿನಿಯು ವಿಶ್ವವಿದ್ಯಾಲಯ, ಮುಖ್ಯ ಅತಿಥಿ ಮತ್ತು ಗೌರವ ಅತಿಥಿಗಳ ವಿರುದ್ಧ ಮಾಡಿರುವ ಆರೋಪ ನಿರಾಧಾರವಾಗಿದೆ ಮತ್ತು ಯುನಿವರ್ಸಿಟಿ ಸಮುದಾಯಕ್ಕೆ ಕಳಂಕವನ್ನು ತರುವ ಪ್ರಯತ್ನವಾಗಿ ಕಂಡು ಬಂದಿದೆ ಎಂದು ಅಂಬೇಡ್ಕರ್ ವಿಶ್ವವಿದ್ಯಾಲಯ ಹೇಳುತ್ತಿದೆ.

ಇದನ್ನೂ ಓದಿ: ದಿಢೀರ್‌ ಶುಲ್ಕ ಡಬಲ್: ಪುಣೆ FTTI ನಲ್ಲಿ ವಿದ್ಯಾರ್ಥಿಗಳಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ಆರಂಭ

ತಮ್ಮ ಮೇಲಿನ ದಂಡ ಮತ್ತು ಆರೋಪಗಳಿಗೆ ಪ್ರತಿಕ್ರಿಯಿಸಿರುವ ನೇಹಾ ಆ ದಿನ 12 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆನ್‌ಲೈನ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಅವರ ಯಾರ ವಿರುದ್ಧವೂ ಕ್ರಮ ಕೈಗೊಂಡಿಲ್ಲ. ನನ್ನ ಮೇಲೆ ವಿಶ್ವವಿದ್ಯಾಲಯದ ಯಾವ ನಿರ್ದಿಷ್ಟ ನಿಯಮಗಳಡಿ ಕ್ರಮ ಕೈಗೊಳ್ಳಲಾಗಿದೆ ಎಂದು ಪದೇ ಪದೇ ಕೇಳುತ್ತಿದ್ದೇನೆ. ಈ ಸಂಬಂಧ ವಿಶ್ವವಿದ್ಯಾಲಯ ಪ್ರತಿಕ್ರಿಯೆಯನ್ನು ನೀಡಿಲ್ಲ. ಇದಕ್ಕೆ ಹೆದರುವುದಿಲ್ಲ ಮತ್ತು ತಾರತಮ್ಯದ ವಿರುದ್ಧದ ಹೋರಾಟ ಮುಂದುವರೆಸುವುದಾಗಿ ತಿಳಿಸಿದ್ದಾರೆ.

ಅಂಬೇಡ್ಕರ್‌ ವೀಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಗಳ ಮೇಲೆ ವ್ಯವಸ್ಥಿತವಾಗಿ ತಾರತಮ್ಯ ನಡೆಯುತ್ತಿದ್ದು ವಿಶ್ವ ವಿದ್ಯಾಲಯವು ಪ್ರಜಾಪ್ರಭುತ್ವ ದತ್ತ ಹಕ್ಕುಗಳಡಿ ನ್ಯಾಯವನ್ನು ಕೇಳಿದಾಗ ಕ್ರಮ ಕೈಗೊಳ್ಳಲು ಮುಂದಾಗಿದೆ. ನೇಹಾ ಅವರ ಮೇಲಿನ ಎಲ್ಲಾ ಕ್ರಮಗಳನ್ನು ಹಿಂತೆಗೆದುಕೊಳ್ಳಬೇಕು ಇಲ್ಲವಾದಲ್ಲಿ ಪ್ರಜಾಪ್ರಭುತ್ವ ವಿಧಾನದಲ್ಲಿನ ತಮ್ಮ ಹೋರಾಟವನ್ನು ಮುಂದುವರೆಸುವುದಾಗಿ AISA ಎಚ್ಚರಿಸಿದೆ.

ಡಿಸೆಂಬರ್‌ 23 ರ ಘಟಿಕೋತ್ಸವದಲ್ಲಿ ನೀಡಿದ ತಮ್ಮ ಹೇಳಿಕೆಯಿಂದ ನೇಹಾ ಅವರು ವಿದ್ಯಾರ್ಥಿಯ ಅರ್ಹತೆ ಕಳೆದುಕೊಂಡಿದ್ದಾರೆ ಎಂದು ವಿಶ್ವವಿದ್ಯಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.


ಇದನ್ನೂ ಓದಿ: ವಿಶ್ವವಿದ್ಯಾಲಯಗಳಲ್ಲಿ ಮೋದಿಗೆ ಧನ್ಯವಾದ ಸಲ್ಲಿಸುವ ಬ್ಯಾನರ್‌ ಹಾಕಲು ಯುಜಿಸಿ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...