Homeಕರ್ನಾಟಕಬಾಂಬೆ ಟೀಮ್‌ನಿಂದಾಗಿ ಬಿಜೆಪಿಯಲ್ಲಿ ಶಿಸ್ತು ಮಾಯವಾಗಿದೆ: ಕೆಎಸ್‌ ಈಶ್ವರಪ್ಪ ಗರಂ

ಬಾಂಬೆ ಟೀಮ್‌ನಿಂದಾಗಿ ಬಿಜೆಪಿಯಲ್ಲಿ ಶಿಸ್ತು ಮಾಯವಾಗಿದೆ: ಕೆಎಸ್‌ ಈಶ್ವರಪ್ಪ ಗರಂ

- Advertisement -
- Advertisement -

ಬಾಂಬೆ ಟೀಮ್‌ಅನ್ನು ಬಿಜೆಪಿಗೆ ಕರೆ ತಂದಿರುವುದೇ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಲು ಕಾರಣವಾಯಿತು ಎಂದು ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಹೀನಾಯವಾಗಿ ಸೋತಿರುವುದಕ್ಕೆ ಪಕ್ಷದ ನಾಯಕರು ಆತ್ಮಾವಲೋಕನ ಸಭೆ ನಡೆಸುತ್ತಿದ್ದು, ಇಂದು ಹುಬ್ಬಳ್ಳಿಯಲ್ಲಿ ಕೆ.ಎಸ್.ಈಶ್ವರಪ್ಪ ಮಾತನಾಡುತ್ತಾ, ”ಬಿಜೆಪಿಯಲ್ಲಿ ಸದ್ಯ ಅಶಿಸ್ತು ಮೂಡಿದೆ, ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ವಲಸಿಗರು ಬಂದ ನಂತರ ಪಕ್ಷದಲ್ಲಿ ಅಲ್ಪಸ್ವಲ್ಪ ಅಶಿಸ್ತು ಮೂಡಿದ್ದು, ಅಶಿಸ್ತು ತೋರುವವರ ಬಾಲವನ್ನು ಕಟ್‌ ಮಾಡುತ್ತೇವೆ” ಎಂದು ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಹೇಳಿದ್ದಾರೆ.

”ಬಿಜೆಪಿಯಲ್ಲಿ ಬಹಿರಂಗವಾಗಿ ಅಡ್ಜೆಸ್ಟ್​ಮೆಂಟ್ ರಾಜಕಾರಣದ ಬಗ್ಗೆ ಚರ್ಚೆ ಆಗುತ್ತಿರುವುದು ದುರ್ದೈವದ ಸಂಗತಿ. ಇಂತಹದ್ದೆನ್ನಲ್ಲ ನಾಲ್ಕು ಗೋಡೆ ಮಧ್ಯೆ ಕೂತು ಮಾತನಾಡಬೇಕು. ಬಹಿರಂಗ ಹೇಳಿಕೆ ಕೊಡುವ ಬಗ್ಗೆ ಪಕ್ಷದ ನಾಯಕರೊಂದಿಗೆ ನಾನು ಮಾತನಾಡುತ್ತೇನೆ” ಎಂದರು.

”ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಆಪರೇಷನ್ ಕಮಲ ಮುಳುವಾಯ್ತು. ಕಾಂಗ್ರೆಸ್ ನಾಯಕರನ್ನು ಪಕ್ಷಕ್ಕೆ ಕರೆದುಕೊಂಡು ಬಂದಿರುವುದಕ್ಕೆ ಸಮಸ್ಯೆ ಅನುಭವಿಸುತ್ತಿದ್ದೇವೆ” ಎನ್ನುತ್ತಾ ಪರೋಕ್ಷವಾಗಿ ಆಪರೇಷನ್ ಕಮಲದ ವಿರುದ್ದ ಈಶ್ವರಪ್ಪ ಗರಂ ಆದರು.

2019ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಕೆಡವಲು ಬಿಜೆಪಿ ಪಕ್ಷವು ಕಾಂಗ್ರೆಸ್-ಜೆಡಿಎಸ್ ಪಕ್ಷದ 16 ಶಾಸಕರ ರಾಜೀನಾಮೆ ಕೊಡಿಸಿ, ಆಪರೇಷನ್ ಕಮಲ ನಡೆಸಿತ್ತು. ಆನಂತರ ನಡೆದಿದ್ದ ಉಪ ಚುನಾವಣೆಯಲ್ಲಿ 14 ಕಡೆ ಬಿಜೆಪಿ ಗೆಲುವು ಕಂಡಿತ್ತು.

”ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ನಂತರ ಕಾರ್ಯಕರ್ತರು ನಿರಾಶೆಯಲ್ಲಿದ್ದಾರೆ. ಹೀಗಾಗಿ ರಾಜ್ಯಾದ್ಯಂತ ಏಳು ತಂಡಗಳಲ್ಲಿ ಪ್ರವಾಸ ಕೈಗೊಂಡು ಕಾರ್ಯಕರ್ತರಲ್ಲಿ ಉತ್ಸಾಹ ತುಂಬುವ ಕೆಲಸ ಮಾಡಲಾಗುತ್ತಿದೆ. ಈ ಮೂಲಕ ಲೋಕಸಭೆ ಚುನಾವಣೆಗೆ ಬಿಜೆಪಿ ಸಕಲ ರೀತಿಯಲ್ಲಿ ಸಿದ್ದತೆ ನಡೆಸುತ್ತಿದೆ” ಎಂದು ಹೇಳಿದರು.

ಇದನ್ನೂ ಓದಿ: ನನ್ನ ಮಗ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ: ಕೆ.ಎಸ್ ಈಶ್ವರಪ್ಪ ಹೇಳಿಕೆ

ಕಾಂಗ್ರೆಸ್‌ ಸುಳ್ಳು ಹೇಳಿ ಮೋಸ ಮಾಡಿದೆ!

ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿರುವ ಗ್ಯಾರಂಟಿ ಅನುಷ್ಟಾನಕ್ಕೆ ಎಲ್ಲಿಂದ ಹಣ ಹೊಂದಿಸುತ್ತದೆ ಎಂಬುದನ್ನು ಶೀಘ್ರ ಮುಖ್ಯಮಂತ್ರಿಗಳು ಶ್ವೇತಪತ್ರ ಹೊರಡಿಸಬೇಕು. ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆ ಪೂರ್ವ ತನ್ನ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿ ಘೋಷಣೆ ಮಾಡಿ, ಅಧಿಕಾರಕ್ಕೆ ಬಂದ ಮೊದಲ‌ ಕ್ಯಾಬಿನೆಟ್‌ನಲ್ಲಿ ಎಲ್ಲವನ್ನೂ ಜಾರಿಗೆ ತರುತ್ತೇವೆ ಎಂದು ಹೇಳಿ, ಒಂದುವರೆ ತಿಂಗಳು ಕಳೆಯುತ್ತಾ ಬಂದರೂ ಈವರೆಗೆ ಜಾರಿಗೆ ತರದೇ ರಾಜ್ಯದ ಜನರಿಗೆ ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಇದೀಗ ಕೇವಲ ಮಾಧ್ಯಮಗಳ ಮುಂದೆ ಉಡಾಫೆ ಹೇಳಿಕೆ ಕೊಡುತ್ತಾ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

”ಈ ಐದು ಗ್ಯಾರಂಟಿಗಳನ್ನು ಮೊದಲ ಕ್ಯಾಬಿನೆಟ್‌ನಲ್ಲಿ ಜಾರಿಗೆ ತರುವುದಾಗಿ ಕಾಂಗ್ರೆಸ್ ನಾಯಕರು ಹೇಳಿದ್ದರು. ಕಾಂಗ್ರೆಸ್‌ನವರು ಸುಳ್ಳು ಹೇಳಿ ರಾಜ್ಯದ ಜನರಿಗೆ ಮೋಸ ಮಾಡಿದ್ದಾರೆ. ಈಗ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಅಲ್ಲದೆ ನಿರುದ್ಯೋಗಿ ಯುವಕರಿಗೆ ಮೋಸ ಮಾಡಿದ್ದಾರೆ. ಒಬ್ಬರಿಗೂ ಒಂದು ರೂಪಾಯಿಯೂ ಕೊಟ್ಟಿಲ್ಲ” ಎಂದು ಆರೋಪ ಮಾಡಿದ್ದಾರೆ.

”ಮತ್ತೊಂದೆಡೆ ಕೇಂದ್ರ ಸರ್ಕಾರ ಕೊಡುವ 5 ಕೆಜಿ ಉಚಿತ ಅಕ್ಕಿಯ ಬಗ್ಗೆ ರಾಜ್ಯದ ಜನರಿಗೆ ಗೊತ್ತಿದೆ. ಕಾಂಗ್ರೆಸ್ ನಾಯಕರು ಬಡ ಜನರಿಗೆ ಟೋಪಿ ಹಾಕಿ ಸರ್ಕಾರ ನಡೆಸುತ್ತಿದ್ದಾರೆ” ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...