Homeಮುಖಪುಟಕುವೈತ್‌ ಅಗ್ನಿ ದುರಂತಕ್ಕೆ ಕಾರಣವೇನು?: ಪ್ರಾಥಮಿಕ ತನಿಖೆಗಳು ಏನು ಹೇಳುತ್ತದೆ

ಕುವೈತ್‌ ಅಗ್ನಿ ದುರಂತಕ್ಕೆ ಕಾರಣವೇನು?: ಪ್ರಾಥಮಿಕ ತನಿಖೆಗಳು ಏನು ಹೇಳುತ್ತದೆ

- Advertisement -
- Advertisement -

ಕುವೈತ್ ಕಟ್ಟಡದಲ್ಲಿ ಅಗ್ನಿದುರಂತ ಮತ್ತು 45 ಭಾರತೀಯರು ಸಾವನ್ನಪ್ಪಿದ ದುರಂತದ ಘಟನೆಯ ಪ್ರಾಥಮಿಕ ತನಿಖೆಗಳು ಕಟ್ಟಡದಲ್ಲಿ ಅಗ್ನಿ ದುರಂತಕ್ಕೆ ಕಾರಣವಾದ ಪ್ರಾಥಮಿಕ ಅಂಶಗಳನ್ನು ಪತ್ತೆ ಹಚ್ಚಿದೆ. ಏಳು ಅಂತಸ್ತಿನ ಕಟ್ಟಡದ ನೆಲ ಮಹಡಿಯಲ್ಲಿ ಸುಮಾರು ಎರಡು ಡಜನ್ ಗ್ಯಾಸ್ ಸಿಲಿಂಡರ್‌ಗಳು, ಕಾಗದದಂತಹ ದಹಿಸುವ ವಸ್ತುಗಳನ್ನು ಇಡಲಾಗಿತ್ತು. ಮೇಲ್ಛಾವಣಿಯ ಮೇಲೆ ಬಾಗಿಲುಗಳಿಗೆ ಬೀಗ ಹಾಕಿದ ಕಾರಣ ಕಾರ್ಮಿಕರಿಗೆ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ತನಿಖೆಯ ವೇಳೆ ಬಯಲಾಗಿದೆ.

ನೆಲ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ಮೊದಲು ಸಂಭವಿಸಿದೆ. ಅದು ನೆಲ ಮಹಡಿಯಲ್ಲಿಟ್ಟಿದ್ದ ಗ್ಯಾಸ್‌ ಸಿಲಿಂಡರ್‌ಗಳಿಗೆ ತಗುಲಿದೆ. ಕೊಠಡಿಗಳು ಸಾಕಷ್ಟು ಕಾಗದದಂತಹ ದಹಿಸಬಹುದಾದ ವಸ್ತುಗಳನ್ನು ಹೊಂದಿದ್ದರಿಂದ ಬೆಂಕಿ ತ್ವರಿತವಾಗಿ  ಕಟ್ಟಡದ ಮೇಲ್ಬಾಗಕ್ಕೆ ವ್ಯಾಪಿಸಿದೆ.

ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಗಳು ಬದುಕುಳಿದವರನ್ನು ಭೇಟಿ ಮಾಡಿ ವಿಚಾರಣೆ ನಡೆಸಿದಾಗ ಈ ಮಹತ್ವದ ಅಂಶಗಳು ಬಯಲಾಗಿದೆ. ಕುವೈತ್‌ನ ತನಿಖಾಧಿಕಾರಿಗಳು ಕುವೈತ್ ನಗರದ ಸಮೀಪವಿರುವ ಅಪಾರ್ಟ್‌ಮೆಂಟ್ ಕಟ್ಟಡದಲ್ಲಿ ಬುಧವಾರ ಮುಂಜಾನೆ 49 ಜೀವಗಳನ್ನು ಬಲಿತೆಗೆದುಕೊಂಡ ಅಗ್ನಿ ದುರಂತ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಕುವೈತ್ ಅಧಿಕಾರಿಗಳ ಪ್ರಕಾರ, ಅಗ್ನಿ ದುರಂತದಲ್ಲಿ ಮೃತ 49 ಜನರಲ್ಲಿ 45 ಮಂದಿ ಭಾರತೀಯರು ಮತ್ತು ಮೂವರು ಫಿಲಿಪೈನ್ಸ್‌ನವರು ಎಂದು ಹೇಳಲಾಗಿದೆ. ಒಂದು ಮೃತದೇಹ ಇನ್ನೂ ಪತ್ತೆಯಾಗಬೇಕಿದೆ.

ಕುವೈತ್ ನಗರದ ದಕ್ಷಿಣದಲ್ಲಿರುವ ಮಂಗಾಫ್‌ನಲ್ಲಿ 196 ವಲಸೆ ಕಾರ್ಮಿಕರಿದ್ದ ಕಟ್ಟಡದಲ್ಲಿ ಅಗ್ನಿ ದುರಂತ ಸಂಭವಿಸಿತ್ತು. ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಸುಮಾರು 50 ಮಂದಿ ಗಾಯಗೊಂಡಿದ್ದಾರೆ.

ಕೇಂದ್ರ ಸಚಿವ ಕೀರ್ತಿ ವರ್ಧನ್ ಸಿಂಗ್, ಕುವೈತ್‌ನ ಭಾರತೀಯ ರಾಯಭಾರಿ ಆದರ್ಶ್ ಸ್ವೈಕಾ ಅವರೊಂದಿಗೆ ಘಟನೆಯಲ್ಲಿ ಕೆಲವು ಬದುಕುಳಿದ ಸಂತ್ರಸ್ತರನ್ನು ಮತ್ತು ಕುವೈತ್ ಸರ್ಕಾರದ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿದ್ದಾರೆ.

ಸಾವನ್ನಪ್ಪಿದ 45 ಭಾರತೀಯರ ಮೃತದೇಹಗಳನ್ನು ಹೊತ್ತ ವಿಶೇಷ ವಾಯುಪಡೆಯ ವಿಮಾನವು ಕುವೈತ್‌ನಿಂದ ಟೇಕಾಫ್ ಆಗಿದೆ. ವಿಮಾನವು ಕೇರಳದ ಕೊಚ್ಚಿಯಲ್ಲಿ ಬೆಳಿಗ್ಗೆ 11 ಗಂಟೆ ಸುಮಾರಿಗೆ ಇಳಿದು ನಂತರ ದೆಹಲಿಗೆ ಹೊರಡುವ ನಿರೀಕ್ಷೆಯಿದೆ. ವಿದೇಶಾಂಗ ಸಚಿವಾಲಯದಲ್ಲಿ ಕಿರಿಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೂಡಲೇ ಕುವೈತ್‌ಗೆ ಧಾವಿಸಿದ್ದ ಸಂಸದ ಕೀರ್ತಿ ವರ್ಧನ್ ಸಿಂಗ್ ಕೂಡ ಅದೇ ವಿಮಾನದಲ್ಲಿ ವಾಪಸಾಗುತ್ತಿದ್ದಾರೆ.

ಇದನ್ನು ಓದಿ: ರಾಜ್ಯಸಭಾ ಚುನಾವಣೆ; ಅಜಿತ್ ಪವಾರ್ ಪತ್ನಿ ಸುನೇತ್ರಾ ನಾಮಪತ್ರ ಸಲ್ಲಿಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...