Homeಮುಖಪುಟಜೆಇಇ, ನೀಟ್ ಪರೀಕ್ಷೆಗಳ ಬಗ್ಗೆ ಚರ್ಚಿಸಿ ಎಂದರೆ, ಪ್ರಧಾನಿ, ಗೊಂಬೆಗಳ ಬಗ್ಗೆ ಮಾತನಾಡಿದ್ದಾರೆ: ರಾಹುಲ್ ಗಾಂಧಿ

ಜೆಇಇ, ನೀಟ್ ಪರೀಕ್ಷೆಗಳ ಬಗ್ಗೆ ಚರ್ಚಿಸಿ ಎಂದರೆ, ಪ್ರಧಾನಿ, ಗೊಂಬೆಗಳ ಬಗ್ಗೆ ಮಾತನಾಡಿದ್ದಾರೆ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಇಂದು ದೇಶವನ್ನುದ್ದೇಶಿಸಿ ಇಂದಿನ ಮನ್-ಕಿ-ಬಾತ್ ಕಾರ್ಯಕ್ರಮದಲ್ಲಿ ಗೊಂಬೆಗಳ ಉದ್ಯಮದ ಬಗ್ಗೆ ಮಾತನಾಡಿದ್ದರು. 

- Advertisement -
- Advertisement -

ದೇಶದಾದ್ಯಂತ ಜೆಇಇ, ನೀಟ್ ಪರೀಕ್ಷೆಗಳನ್ನು ಮುಂದೂಡಬೇಕೆಂಬ ಕೂಗು ಕೇಳಿ ಬರುತ್ತಿದ್ದರೂ ಸಹ, ಅದರ ಕುರಿತು ಚರ್ಚಿಸುವುದನ್ನು ಬಿಟ್ಟು, ಪ್ರಧಾನಿ ಮೋದಿ ಗೊಂಬೆಗಳ ಬಗ್ಗೆ ಮಾತನಾಡಿದ್ದಾರೆ ಎಂದು ರಾಹುಲ್ ಗಾಂಧಿ ಅಣಕಿಸಿದ್ದಾರೆ.

ಕೊರೊನಾ ಮಧ್ಯೆ ಪ್ರವೇಶ ಪರೀಕ್ಷೆಗಳನ್ನು ನಡೆಸುವ ಸರ್ಕಾರದ ನಿರ್ಧಾರದ ನಂತರ ಜೆಇಇ-ನೀಟ್ ಆಕಾಂಕ್ಷಿಗಳ ಕುಂದುಕೊರತೆಗಳನ್ನು ಪರಿಹರಿಸದ ಕಾರಣಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಇಂದು ದೇಶವನ್ನುದ್ದೇಶಿಸಿ ಇಂದಿನ ಮನ್-ಕಿ-ಬಾತ್ ಕಾರ್ಯಕ್ರಮದಲ್ಲಿ ಗೊಂಬೆಗಳ ಉದ್ಯಮದ ಬಗ್ಗೆ ಮಾತನಾಡಿದ್ದರು.

ಇದರ ಬಗ್ಗೆ ರಾಹುಲ್ ಗಾಂಧಿ, “ಜೆಇಇ-ನೀಟ್ ಆಕಾಂಕ್ಷಿಗಳು ಪ್ರಧಾನಮಂತ್ರಿ “ಪರಿಕ್ಷ ಪೆ ಚಾರ್ಚಾ” ಮಾಡಬೇಕೆಂದು ಬಯಸಿದ್ದರು ಆದರೆ ಪ್ರಧಾನಿ “ಖಿಲೋನ್ ಪೆ ಚಾರ್ಚಾ” ಮಾಡಿದರು” ಎಂದು ಟ್ವೀಟ್ ಮಾಡಿದ್ದಾರೆ.

ಸೆಪ್ಟೆಂಬರ್‌ನಲ್ಲಿ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮತ್ತು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ನಡೆಸಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

ಸೆಪ್ಟೆಂಬರ್ 30 ರೊಳಗೆ ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳಲ್ಲಿ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಲು ಸುಪ್ರೀಂ ಕೋರ್ಟ್ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗಕ್ಕೆ ಅನುಮತಿ ನೀಡಿತು.

ಸೆಪ್ಟೆಂಬರ್ 13 ರಂದು ನೀಟ್ ನಡೆಸಲಾಗುವುದು. ಜೆಇಇ ಅನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ನಿಗದಿಪಡಿಸಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಜೆಇಇ ಮತ್ತು ನೀಟ್‌ಗೆ ಕ್ರಮವಾಗಿ ಸುಮಾರು 9.53 ಲಕ್ಷ ಮತ್ತು 15.97 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಕೊರೊನಾ ವೈರಸ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಈ ಪರೀಕ್ಷೆಗಳನ್ನು ಈಗಾಗಲೇ ಎರಡು ಬಾರಿ ಮುಂದೂಡಲಾಗಿದೆ.

ಕೊರೊನಾ ವೈರಸ್ ಪ್ರಕರಣಗಳು ದೇಶದಲ್ಲಿ ಕಡಿಮೆಯಾಗುವ ಯಾವುದೇ ಲಕ್ಷಣಗಳು ಕಾಣಿಸದ ಕಾರಣ ಈ ಪರೀಕ್ಷೆಗಳನ್ನು ನಡೆಸುವ ಸರ್ಕಾರದ ನಿರ್ಧಾರದ ವಿರುದ್ಧ ವಿರೋಧದ ದನಿಗಳು ಹೆಚ್ಚುತ್ತಿವೆ.

ಕಾಂಗ್ರೆಸ್ ಶುಕ್ರವಾರ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಿ, ನಿರ್ಧಾರದ ವಿರುದ್ಧ ಆನ್‌ಲೈನ್ ಅಭಿಯಾನ ನಡೆಸಿದ್ದು, ವಿದ್ಯಾರ್ಥಿಗಳ ಧ್ವನಿಯನ್ನು ಆಲಿಸುವಂತೆ ಸೋನಿಯಾ ಗಾಂಧಿ ಕೇಂದ್ರವನ್ನು ಒತ್ತಾಯಿಸಿದ್ದಾರೆ.

ಮತ್ತೊಂದೆಡೆ, ವಿವಿಧ ವಿಶ್ವವಿದ್ಯಾಲಯಗಳ ಸುಮಾರು 150 ಶಿಕ್ಷಣ ತಜ್ಞರು ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು, “ಯೋಜಿಸಿದಂತೆ ಪರೀಕ್ಷೆಗಳೊಂದಿಗೆ ಮುಂದುವರಿಯಿರಿ ಮತ್ತು ವಿರೋಧದ ದನಿಗಳಿಗೆ ಅವಕಾಶ ನೀಡಬಾರದು” ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಜೆಇಇ-ನೀಟ್: ಪರೀಕ್ಷೆ ಮುಂದೂಡುವಂತೆ 6 ರಾಜ್ಯಗಳಿಂದ ಸುಪ್ರೀಂ ಕೋರ್ಟ್‌‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....