Homeಅಂತರಾಷ್ಟ್ರೀಯ’ಮಾನವ ಹಕ್ಕುಗಳ ಕುರಿತು ಭಾರತದ ಸಚಿವರೊಂದಿಗೆ ಚರ್ಚಿಸಿದ್ದೇನೆ’: ಅಮೆರಿಕ ರಕ್ಷಣಾ ಕಾರ್ಯದರ್ಶಿ ಆಸ್ಟಿನ್

’ಮಾನವ ಹಕ್ಕುಗಳ ಕುರಿತು ಭಾರತದ ಸಚಿವರೊಂದಿಗೆ ಚರ್ಚಿಸಿದ್ದೇನೆ’: ಅಮೆರಿಕ ರಕ್ಷಣಾ ಕಾರ್ಯದರ್ಶಿ ಆಸ್ಟಿನ್

- Advertisement -
- Advertisement -

ಭಾರತದ ಅಲ್ಪಸಂಖ್ಯಾತರ ಮಾನವ ಹಕ್ಕುಗಳ ಬಗ್ಗೆ ಭಾರತೀಯ ಸಚಿವರೊಂದಿಗೆ ಸಂವಾದ ನಡೆಸಿದ್ದೇನೆ. ಪಾಲುದಾರರು “ಆ ರೀತಿಯ ಚರ್ಚೆಗಳನ್ನು” ನಡೆಸುವುದು ಅಗತ್ಯ ಎಂದು ಅಮೆರಿಕ ರಕ್ಷಣಾ ಕಾರ್ಯದರ್ಶಿ ಜನರಲ್ ಲಾಯ್ಡ್ ಆಸ್ಟಿನ್ ಶನಿವಾರ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ವಿಶೇಷವಾಗಿ ಉತ್ತರ ಈಶಾನ್ಯದಲ್ಲಿ ಮುಸ್ಲಿಂ ಅಲ್ಪಸಂಖ್ಯಾತರ ವಿರುದ್ಧ ಮಾನವ ಹಕ್ಕುಗಳ ಉಲ್ಲಂಘನೆ” ಕುರಿತು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತನಾಡಿದ್ದೀರಾ ಎಂದು ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೇಳಿದಾಗ,  ಜನರಲ್ ಆಸ್ಟಿನ್, “ಅವರೊಂದಿಗೆ ಮಾತನಾಡಲು ನನಗೆ ಅವಕಾಶವಾಗಲಿಲ್ಲ. ಈ ವಿಷಯದ ಬಗ್ಗೆ ಕ್ಯಾಬಿನೆಟ್‌ನ ಇತರ ಸದಸ್ಯರೊಂದಿಗೆ ಸಂವಾದ ನಡೆಸಿದ್ದೇನೆ’ ಎಂದಿದ್ದಾರೆ.

“ಭಾರತವು ನಮ್ಮ ಪಾಲುದಾರ ಎಂದು ನಾವು ನೆನಪಿಟ್ಟುಕೊಳ್ಳಬೇಕು, ಭಾರತದ ಪಾಲುದಾರಿಕೆಯನ್ನು ನಾವು ಗೌರವಿಸುತ್ತೇವೆ. ಪಾಲುದಾರರು ಈ ರೀತಿಯ ಚರ್ಚೆಗಳನ್ನು ನಡೆಸಲು ಸಾಧ್ಯವಾಗುತ್ತದೆ ಎಂದು ನಾನು ಭಾವಿಸುತ್ತೇನೆ. ಖಂಡಿತವಾಗಿಯೂ, ನಾವು ಅದನ್ನು ಮಾಡಲು ಇಷ್ಟಪಡುತ್ತೇನೆ. ಆ ಚರ್ಚೆಗಳನ್ನು ಒಂದು ಬಹಳ ಅರ್ಥಪೂರ್ಣ ಮಾರ್ಗ ಮತ್ತು ಪ್ರಗತಿಗೆ ಪೂರಕ “ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಾ. 26ಕ್ಕೆ ಭಾರತ್ ಬಂದ್: ಹೋಳಿ ದಿನದಂದು ಕೃಷಿ ಕಾನೂನುಗಳ ಪ್ರತಿ ದಹನ

“ಭಾರತದಲ್ಲಿ ಪ್ರಜಾಪ್ರಭುತ್ವದ ಹದಗೆಡುತ್ತಿರುವ ಪರಿಸ್ಥಿತಿ” ಕುರಿತು ಸೆನೆಟ್ ವಿದೇಶಾಂಗ ಸಮಿತಿಯ ಅಧ್ಯಕ್ಷ ಸೆನೆಟರ್ ರಾಬರ್ಟ್ ಮೆನೆಂಡೆಜ್ ಅವರು ಎತ್ತಿದ ಕಳವಳವನ್ನು  ಭಾರತದ ಪ್ರಮುಖರೊಂದಿಗೆ  ಹಂಚಿಕೊಂಡಿದ್ದೀರಾ ಎಂಬ ಎನ್‌ಡಿಟಿವಿಯ ಪ್ರಶ್ನೆಗೆ ಉತ್ತರಿಸಿದ ಜನರಲ್ ಆಸ್ಟಿನ್,  ಅಮೆರಿಕಕ್ಕೆ ಮಾನವ ಹಕ್ಕುಗಳು ಮತ್ತು ಕಾನೂನಿನ ನಿಯಮ ಮುಖ್ಯವಾಗಿದೆ ಎಂದರು.

“ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾಕ್ಕೆ ಮಾನವ ಹಕ್ಕುಗಳು ಮತ್ತು ಕಾನೂನಿನ ನಿಯಮಗಳು ಮುಖ್ಯವೆಂದು ಅಧ್ಯಕ್ಷ ಜೋ ಬಿಡೆನ್ ಹೇಳಿದ್ದನ್ನು ನೀವು ಕೇಳಿದ್ದೀರಿ. ನಾವು ಯಾವಾಗಲೂ ನಮ್ಮ ಪ್ರಜಾಪ್ರಭುತ್ವ ಮೌಲ್ಯಗಳೊಂದಿಗೆ  ದೇಶವನ್ನು ಮುನ್ನಡೆಸುತ್ತೇವೆ. ನಮಗೆ ಪ್ರಜಾಪ್ರಭುತ್ವ ಬಹಳ ಮುಖ್ಯವಾಗಿದೆ. ಭಾರತವು ಪ್ರಜಾಪ್ರಭುತ್ವ ರಾಷ್ಟ್ರ ಮತ್ತು ನೀವು ನಿಮ್ಮ ಮೌಲ್ಯಗಳನ್ನೂ ಸಹ ಅಮೂಲ್ಯವಾಗಿರಿಸಿಕೊಳ್ಳಿ. ನಾವು ಮಾಡಬಹುದಾದ ಮತ್ತು ಒಟ್ಟಾಗಿ ಕೆಲಸ ಮಾಡುವ ಹಲವಾರು ವಿಷಯಗಳಿವೆ “ಎಂದು ಹೇಳಿದ್ದರು.

ಜನರಲ್ ಆಸ್ಟಿನ್ ಅವರು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಆಡಳಿತದ ಚುಕಾಣಿ ಹಿಡಿದ ನಂತರ ಭಾರತಕ್ಕೆ ಭೇಟಿ ನೀಡುತ್ತಿರುವ ಮೊದಲ ಉನ್ನತ ಸದಸ್ಯರಾಗಿದ್ದಾರೆ. ಈ ಪ್ರದೇಶದಲ್ಲಿ ಚೀನಾದ ಪ್ರತಿಪಾದನೆಗೆ ಆಕ್ಷೇಪಿಸುತ್ತಿರುವ ದೇಶಗಳ ಮೈತ್ರಿಯನ್ನು ರೂಪಿಸುವ ಪ್ರಯತ್ನಗಳ ಭಾಗವಾಗಿ ಭೇಟಿ ನೀಡಿದ್ದಾರೆ. ಅವರು ಇಲ್ಲಿಗೆ ಬರುವ ಮೊದಲು ಜಪಾನ್ ಮತ್ತು ದಕ್ಷಿಣ ಕೊರಿಯಾಕ್ಕೆ ಭೇಟಿ ನೀಡಿದ್ದರು.

ಶುಕ್ರವಾರ ನವದೆಹಲಿಗೆ ಆಗಮಿಸಿರುವ ಅವರು, ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಮಾತುಕತೆ ನಡೆಸಿದರು. ಶನಿವಾರ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರನ್ನು ಭೇಟಿಯಾದರು.

ಇದನ್ನೂ ಓದಿ: ಶಿವಮೊಗ್ಗ- ದಕ್ಷಿಣ ಭಾರತದ ಮೊದಲ ಐತಿಹಾಸಿಕ ರೈತ ಮಹಾಪಂಚಾಯತ್ ಲೈವ್ ನೋಡಿ‌‌

ಸೆನೆಟರ್ ರಾಬರ್ಟ್ ಮೆನೆಂಡೆಜ್ ಆಸ್ಟಿನ್‌ಗೆ ಬರೆದ ಪತ್ರದಲ್ಲಿ, ಯುಎಸ್ ಮತ್ತು ಭಾರತದ ಸಹಭಾಗಿತ್ವವು “21 ನೇ ಶತಮಾನದ ಸವಾಲುಗಳನ್ನು ಎದುರಿಸಲು ನಿರ್ಣಾಯಕವಾಗಿದೆ”, ಆದರೆ ಪಾಲುದಾರಿಕೆ “ಪ್ರಜಾಪ್ರಭುತ್ವ ಮೌಲ್ಯಗಳಿಗೆ ಅಂಟಿಕೊಳ್ಳುವುದರ ಮೇಲೆ ನಿಂತಿರಬೇಕು” ಎಂದು ಗಮನಸೆಳೆದಿದ್ದರು. ಭಾರತ ಸರ್ಕಾರವು “ಆ ಮೌಲ್ಯಗಳಿಂದ ದೂರವಾಗುತ್ತಿದೆ” ಎಂದು ಅವರು ಹೇಳಿದ್ದರು.

“ಹೊಸ ಕೃಷಿ ಕಾನೂನುಗಳನ್ನು ಶಾಂತಿಯುತವಾಗಿ ಪ್ರತಿಭಟಿಸುವ  ರೈತರು,  ಪತ್ರಕರ್ತರು ಮತ್ತು ಸರ್ಕಾರದ ವಿಮರ್ಶಕರ  ಮೇಲೆ ಭಾರತ ಸರ್ಕಾರ ನಿರಂತರವಾಗಿ ನಡೆಸುತ್ತಿರುವ ದೌರ್ಜನ್ಯವು ಭಾರತದ ಪ್ರಜಾಪ್ರಭುತ್ವದ ಹದಗೆಡುತ್ತಿರುವ ಪರಿಸ್ಥಿತಿಯನ್ನು ಒತ್ತಿಹೇಳುತ್ತದೆ” ಎಂದು ಸೆನೆಟರ್ ರಾಬರ್ಟ್ ಮೆನೆಂಡೆಜ್ ಬರೆದಿದ್ದರು.

“ಇದಲ್ಲದೆ, ಇತ್ತೀಚಿನ ವರ್ಷಗಳಲ್ಲಿ, ಹೆಚ್ಚುತ್ತಿರುವ ಮುಸ್ಲಿಂ ವಿರೋಧಿ ಭಾವನೆ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ, ರಾಜಕೀಯ ಸಂವಾದವನ್ನು ನಿಗ್ರಹಿಸುವುದು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ರಾಜಕೀಯ ವಿರೋಧಿಗಳನ್ನು ಬಂಧಿಸುವುದು ಮತ್ತು ರಾಜಕೀಯ ಕಿರುಕುಳ ನೀಡಲು ದೇಶದ್ರೋಹಿ ಕಾನೂನುಗಳನ್ನು ಬಳಸುವುದು. ಈ ಕಾರಣಗಳಿಗಾಗಿ  ಯುಎಸ್ ಮಾನವ ಹಕ್ಕುಗಳ ಗುಂಪು ಫ್ರೀಡಂ ಹೌಸ್ ತನ್ನ ವಾರ್ಷಿಕ ಜಾಗತಿಕ ಸಮೀಕ್ಷೆಯಲ್ಲಿ ಭಾರತವನ್ನು ತನ್ನ ’ಉಚಿತ’ ಸ್ಥಾನಮಾನದಿಂದ ಕೆಳಮಟ್ಟದಲ್ಲಿ ಬಿಂಬಿಸಿತ್ತು “ಎಂದು ಯುಎಸ್ ಸೆನೆಟರ್ ರಾಬರ್ಟ್ ಹೇಳಿದ್ದರು.

ಆಸ್ಟಿನ್ ಮಾನವ ಹಕ್ಕುಗಳ ಕುರಿತು ಭಾರತದ ಸಚಿವರೊಂದಿಗೆ ಚರ್ಚೆ ಮಾಡಿರುವುದಾಗಿ ಹೇಳಿದರೂ ವಿವರ ನೀಡಿಲ್ಲ ಎಂದು ಎನ್‌ಡಿಟಿವಿ ವರದಿ ಮಾಡಿದೆ.


ಇದನ್ನೂ ಓದಿ: ಕಾಯ್ದೆ ವಾಪಸಾತಿ ಮಾತನಾಡುತ್ತಿರುವ ಯುವಜನರು ಸರ್ಕಾರ ವಾಪಸಾತಿ ಮಾಡುತ್ತಾರೆ ಎಚ್ಚರ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...