Homeಮುಖಪುಟಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಮಾರ್ಚ್ 9ರಂದು ಚರ್ಚೆ : ಸಚಿವ...

ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಮಾರ್ಚ್ 9ರಂದು ಚರ್ಚೆ : ಸಚಿವ ಕಿರಣ್ ರಿಜಿಜು

- Advertisement -
- Advertisement -

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ಮತ್ತು ಮತ ಚಲಾವಣೆ ಮಾರ್ಚ್ 9ರಂದು ನಡೆಯಲಿದೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಭಾನುವಾರ (ಫೆ.15) ತಿಳಿಸಿದ್ದಾರೆ.

ಅಧಿವೇಶನದ ಮೊದಲ ಭಾಗದಲ್ಲಿ ಕಂಡುಬಂದಂತೆ ವಿರೋಧ ಪಕ್ಷಗಳು ಪ್ರತಿಭಟನೆಗಳನ್ನು ಮುಂದುವರಿಸಿದರೆ, ಅದು ಅಂತಿಮವಾಗಿ ಅವರಿಗೇ ಸಮಸ್ಯೆಯಾಗಲಿದೆ ಎಂದು ರಿಜಿಜು ಹೇಳಿದ್ದಾರೆ.

ಮಾರ್ಚ್ 9ರಿಂದ ಏಪ್ರಿಲ್ 2ರವರೆಗೆ ನಡೆಯಲಿರುವ ಬಜೆಟ್ ಅಧಿವೇಶನದ ಎರಡನೇ ಭಾಗವು ಆಸಕ್ತಿದಾಯಕವಾಗಿರುತ್ತದೆ. ಹಲವಾರು ಪ್ರಮುಖ ಮಸೂದೆಗಳು ಚರ್ಚೆ ಮತ್ತು ಅಂಗೀಕಾರಕ್ಕಾಗಿ ಸಂಸತ್ತಿನಲ್ಲಿ ಮಂಡನೆಯಾಗಲಿದೆ ಎಂದು ರಿಜಿಜು ತಿಳಿಸಿದ್ದಾರೆ.

ಬಜೆಟ್ ಅಧಿವೇಶನವು ಜನವರಿ 28ರಂದು ಸಂಸತ್ತಿನ ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ ಮಾಡುವುದರೊಂದಿಗೆ ಪ್ರಾರಂಭಗೊಂಡಿದ್ದು, ಫೆಬ್ರವರಿ 12 ರಂದು ಮೊದಲ ಹಂತದ ಕಲಾಪಗಳು ಮುಕ್ತಾಯಗೊಂಡಿದೆ. ಎರಡನೇ ಹಂತಹ ಕಲಾಪಗಳು ಮಾರ್ಚ್ 9ರಂದು ಪ್ರಾರಂಭಗೊಂಡು ಏಪ್ರಿಲ್ 2ರಂದು ಕೊನೆಗೊಳ್ಳಲಿದೆ. ಈ ನಡುವೆ ಫೆಬ್ರವರಿ 1ರಂದು 2026-27ನೇ ಆರ್ಥಿಕ ವರ್ಷದ ಬಜೆಟ್ ಮಂಡನೆಯಾಗಿದೆ.

ತಮ್ಮ ಲೋಕಸಭಾ ಕ್ಷೇತ್ರವಾದ ಅರುಣಾಚಲ ಪಶ್ಚಿಮಕ್ಕೆ ಭೇಟಿ ನೀಡಿರುವ ರಿಜಿಜು, ಅಧಿವೇಶನದ ಎರಡನೇ ಭಾಗದಲ್ಲಿ ಚರ್ಚೆಗಾಗಿ ನಿರ್ದಿಷ್ಟ ಸಚಿವಾಲಯಗಳನ್ನು ಗುರುತಿಸಲು ಸರ್ಕಾರ ಯೋಜಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಲೋಕಸಭೆಯಲ್ಲಿ, ನಾವು ಐದು ಸಚಿವಾಲಯಗಳಲ್ಲಿನ ಅನುದಾನದ ಬೇಡಿಕೆಗಳನ್ನು ಚರ್ಚಿಸುತ್ತೇವೆ. ರಾಜ್ಯಸಭೆಯಲ್ಲಿ ಇತರ ಐದು ಸಚಿವಾಲಯಗಳ ಕೆಲಸದ ಬಗ್ಗೆ ಚರ್ಚಿಸುತ್ತೇವೆ. ರಾಜ್ಯಸಭೆಯಲ್ಲಿ ಅನುದಾನದ ಬೇಡಿಕೆಗಳ ಮೇಲೆ ಅಲ್ಲ, ಸಚಿವಾಲಯಗಳ ಮೇಲಿನ ಚರ್ಚೆಗಳು ನಡೆಯಲಿವೆ ಎಂದು ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ಚರ್ಚೆಗೆ ಐದು ಸಚಿವಾಲಯಗಳನ್ನು ಮತ್ತು ನಂತರ ಲೋಕಸಭೆಗೆ ಐದು ಸಚಿವಾಲಯಗಳನ್ನು ಆಯ್ಕೆ ಮಾಡಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಬಜೆಟ್ ಅಧಿವೇಶನದ ಎರಡನೇ ಭಾಗವು ಕುತೂಹಲಕಾರಿಯಾಗಿರಲಿದೆ. ಒಂದು ವೇಳೆ ಪ್ರತಿಪಕ್ಷಗಳು ಸದನ ನಡೆಯಲು ಬಿಡದಿದ್ದರೆ, ನಾವು ಗಿಲೋಟಿನ್ (ಚರ್ಚೆಯಿಲ್ಲದೆ ಅನುದಾನದ ಬೇಡಿಕೆಗಳಿಗೆ ಅನುಮೋದನೆ ಪಡೆಯುವ ಪ್ರಕ್ರಿಯೆ) ಮೊರೆ ಹೋಗುತ್ತೇವೆ. ಇದು ಅವರಿಗೆ ಆಗುವ ನಷ್ಟ ಎಂದಿದ್ದಾರೆ.

ಬಜೆಟ್ ಅಧಿವೇಶನದ ಈ ಭಾಗವು ಏಕೆ ವಿಶೇಷವಾಗಿ ಕುತೂಹಲಕಾರಿಯಾಗಿರಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ರಿಜಿಜು, “ಇದು ನಾಲ್ಕು ಪ್ರಮುಖ ರಾಜ್ಯಗಳಾದ ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಕೇರಳ, ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ಮುಂಬರುವ ವಿಧಾನಸಭಾ ಚುನಾವಣೆಗಳ ಸಮಯದಲ್ಲೇ ನಡೆಯುತ್ತಿದೆ” ಎಂದು ಉತ್ತರಿಸಿದ್ದಾರೆ.

“ನಾವು ಒಂದು ಅತ್ಯಂತ ನಿರ್ಣಾಯಕ ವಿಧೇಯಕ ಸೇರಿದಂತೆ ಕೆಲವು ಪ್ರಮುಖ ವಿಧೇಯಕಗಳನ್ನು ಮಂಡಿಸಲಿದ್ದೇವೆ. ಆ ವಿಧೇಯಕ ಯಾವುದು ಎಂಬುದನ್ನು ನಾವು ಈಗ ಬಹಿರಂಗಪಡಿಸುವುದಿಲ್ಲ, ಆದರೆ ಅಧಿವೇಶನದ ಎರಡನೇ ಭಾಗದಲ್ಲಿ ಒಂದು ಅತಿ ಮುಖ್ಯವಾದ ವ್ಯವಹಾರವನ್ನು ಕೈಗೆತ್ತಿಕೊಳ್ಳಲಿದ್ದೇವೆ. ನಾವು ಈ ಎಲ್ಲಾ ವಿಧೇಯಕಗಳಿಗೆ ಅಂಗೀಕಾರ ಪಡೆಯುತ್ತೇವೆ” ಎಂದು ತಿಳಿಸಿದ್ದಾರೆ.

ಅಧಿವೇಶನದ ಎರಡನೇ ಭಾಗದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಕುರಿತಾದ ವಿಧೇಯಕವನ್ನು ಮಂಡಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಸರ್ಕಾರ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ. ಈ ಮಸೂದೆಯನ್ನು ಪರಿಶೀಲಿಸಲು ರಚಿಸಲಾದ ಸಂಸದೀಯ ಸಮಿತಿಯು ತನ್ನ ವರದಿಯನ್ನು ಇನ್ನೂ ಅಂತಿಮಗೊಳಿಸದಿರುವುದೇ ಇದಕ್ಕೆ ಕಾರಣ ಎಂದು ಹೇಳಿದ್ದಾರೆ. ಅಲ್ಲದೆ, ಪ್ರತಿಪಕ್ಷಗಳು ಚರ್ಚೆಯಲ್ಲಿ ಪಾಲ್ಗೊಳ್ಳದಿದ್ದರೆ ಅದು ಅವರಿಗೇ ನಷ್ಟ ಎಂದಿದ್ದಾರೆ.

ಪ್ರತಿಪಕ್ಷಗಳ ಒಗ್ಗಟ್ಟಿನಲ್ಲಿ ಬಿರುಕು ಮೂಡಿರಬಹುದು ಎಂದ ರಿಜಿಜು, ಸ್ಪೀಕರ್ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಹಿ ಮಾಡಿಲ್ಲ ಎಂದು ತಿಳಿಸಿದರು. ಹೆಚ್ಚಿನ ಸಣ್ಣ ಪಕ್ಷಗಳಿಗೆ ಸದನದ ಕಲಾಪವನ್ನು ಸ್ಥಗಿತಗೊಳಿಸುವುದು ಇಷ್ಟವಿಲ್ಲ. ವಿಶೇಷವಾಗಿ ವಿಧಾನಸಭಾ ಚುನಾವಣೆಗಳು ಹತ್ತಿರವಿರುವುದರಿಂದ, ತಮ್ಮ ಭಾಗದ ಸಮಸ್ಯೆಗಳನ್ನು ಸದನದಲ್ಲಿ ಎತ್ತಲು ಅವು ಉತ್ಸುಕವಾಗಿವೆ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...