Homeಮುಖಪುಟಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಮಾರ್ಚ್ 9ರಂದು ಚರ್ಚೆ : ಸಚಿವ...

ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಮಾರ್ಚ್ 9ರಂದು ಚರ್ಚೆ : ಸಚಿವ ಕಿರಣ್ ರಿಜಿಜು

- Advertisement -
- Advertisement -

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ಮತ್ತು ಮತ ಚಲಾವಣೆ ಮಾರ್ಚ್ 9ರಂದು ನಡೆಯಲಿದೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಭಾನುವಾರ (ಫೆ.15) ತಿಳಿಸಿದ್ದಾರೆ.

ಅಧಿವೇಶನದ ಮೊದಲ ಭಾಗದಲ್ಲಿ ಕಂಡುಬಂದಂತೆ ವಿರೋಧ ಪಕ್ಷಗಳು ಪ್ರತಿಭಟನೆಗಳನ್ನು ಮುಂದುವರಿಸಿದರೆ, ಅದು ಅಂತಿಮವಾಗಿ ಅವರಿಗೇ ಸಮಸ್ಯೆಯಾಗಲಿದೆ ಎಂದು ರಿಜಿಜು ಹೇಳಿದ್ದಾರೆ.

ಮಾರ್ಚ್ 9ರಿಂದ ಏಪ್ರಿಲ್ 2ರವರೆಗೆ ನಡೆಯಲಿರುವ ಬಜೆಟ್ ಅಧಿವೇಶನದ ಎರಡನೇ ಭಾಗವು ಆಸಕ್ತಿದಾಯಕವಾಗಿರುತ್ತದೆ. ಹಲವಾರು ಪ್ರಮುಖ ಮಸೂದೆಗಳು ಚರ್ಚೆ ಮತ್ತು ಅಂಗೀಕಾರಕ್ಕಾಗಿ ಸಂಸತ್ತಿನಲ್ಲಿ ಮಂಡನೆಯಾಗಲಿದೆ ಎಂದು ರಿಜಿಜು ತಿಳಿಸಿದ್ದಾರೆ.

ಬಜೆಟ್ ಅಧಿವೇಶನವು ಜನವರಿ 28ರಂದು ಸಂಸತ್ತಿನ ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ ಮಾಡುವುದರೊಂದಿಗೆ ಪ್ರಾರಂಭಗೊಂಡಿದ್ದು, ಫೆಬ್ರವರಿ 12 ರಂದು ಮೊದಲ ಹಂತದ ಕಲಾಪಗಳು ಮುಕ್ತಾಯಗೊಂಡಿದೆ. ಎರಡನೇ ಹಂತಹ ಕಲಾಪಗಳು ಮಾರ್ಚ್ 9ರಂದು ಪ್ರಾರಂಭಗೊಂಡು ಏಪ್ರಿಲ್ 2ರಂದು ಕೊನೆಗೊಳ್ಳಲಿದೆ. ಈ ನಡುವೆ ಫೆಬ್ರವರಿ 1ರಂದು 2026-27ನೇ ಆರ್ಥಿಕ ವರ್ಷದ ಬಜೆಟ್ ಮಂಡನೆಯಾಗಿದೆ.

ತಮ್ಮ ಲೋಕಸಭಾ ಕ್ಷೇತ್ರವಾದ ಅರುಣಾಚಲ ಪಶ್ಚಿಮಕ್ಕೆ ಭೇಟಿ ನೀಡಿರುವ ರಿಜಿಜು, ಅಧಿವೇಶನದ ಎರಡನೇ ಭಾಗದಲ್ಲಿ ಚರ್ಚೆಗಾಗಿ ನಿರ್ದಿಷ್ಟ ಸಚಿವಾಲಯಗಳನ್ನು ಗುರುತಿಸಲು ಸರ್ಕಾರ ಯೋಜಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಲೋಕಸಭೆಯಲ್ಲಿ, ನಾವು ಐದು ಸಚಿವಾಲಯಗಳಲ್ಲಿನ ಅನುದಾನದ ಬೇಡಿಕೆಗಳನ್ನು ಚರ್ಚಿಸುತ್ತೇವೆ. ರಾಜ್ಯಸಭೆಯಲ್ಲಿ ಇತರ ಐದು ಸಚಿವಾಲಯಗಳ ಕೆಲಸದ ಬಗ್ಗೆ ಚರ್ಚಿಸುತ್ತೇವೆ. ರಾಜ್ಯಸಭೆಯಲ್ಲಿ ಅನುದಾನದ ಬೇಡಿಕೆಗಳ ಮೇಲೆ ಅಲ್ಲ, ಸಚಿವಾಲಯಗಳ ಮೇಲಿನ ಚರ್ಚೆಗಳು ನಡೆಯಲಿವೆ ಎಂದು ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ಚರ್ಚೆಗೆ ಐದು ಸಚಿವಾಲಯಗಳನ್ನು ಮತ್ತು ನಂತರ ಲೋಕಸಭೆಗೆ ಐದು ಸಚಿವಾಲಯಗಳನ್ನು ಆಯ್ಕೆ ಮಾಡಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಬಜೆಟ್ ಅಧಿವೇಶನದ ಎರಡನೇ ಭಾಗವು ಕುತೂಹಲಕಾರಿಯಾಗಿರಲಿದೆ. ಒಂದು ವೇಳೆ ಪ್ರತಿಪಕ್ಷಗಳು ಸದನ ನಡೆಯಲು ಬಿಡದಿದ್ದರೆ, ನಾವು ಗಿಲೋಟಿನ್ (ಚರ್ಚೆಯಿಲ್ಲದೆ ಅನುದಾನದ ಬೇಡಿಕೆಗಳಿಗೆ ಅನುಮೋದನೆ ಪಡೆಯುವ ಪ್ರಕ್ರಿಯೆ) ಮೊರೆ ಹೋಗುತ್ತೇವೆ. ಇದು ಅವರಿಗೆ ಆಗುವ ನಷ್ಟ ಎಂದಿದ್ದಾರೆ.

ಬಜೆಟ್ ಅಧಿವೇಶನದ ಈ ಭಾಗವು ಏಕೆ ವಿಶೇಷವಾಗಿ ಕುತೂಹಲಕಾರಿಯಾಗಿರಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ರಿಜಿಜು, “ಇದು ನಾಲ್ಕು ಪ್ರಮುಖ ರಾಜ್ಯಗಳಾದ ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಕೇರಳ, ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ಮುಂಬರುವ ವಿಧಾನಸಭಾ ಚುನಾವಣೆಗಳ ಸಮಯದಲ್ಲೇ ನಡೆಯುತ್ತಿದೆ” ಎಂದು ಉತ್ತರಿಸಿದ್ದಾರೆ.

“ನಾವು ಒಂದು ಅತ್ಯಂತ ನಿರ್ಣಾಯಕ ವಿಧೇಯಕ ಸೇರಿದಂತೆ ಕೆಲವು ಪ್ರಮುಖ ವಿಧೇಯಕಗಳನ್ನು ಮಂಡಿಸಲಿದ್ದೇವೆ. ಆ ವಿಧೇಯಕ ಯಾವುದು ಎಂಬುದನ್ನು ನಾವು ಈಗ ಬಹಿರಂಗಪಡಿಸುವುದಿಲ್ಲ, ಆದರೆ ಅಧಿವೇಶನದ ಎರಡನೇ ಭಾಗದಲ್ಲಿ ಒಂದು ಅತಿ ಮುಖ್ಯವಾದ ವ್ಯವಹಾರವನ್ನು ಕೈಗೆತ್ತಿಕೊಳ್ಳಲಿದ್ದೇವೆ. ನಾವು ಈ ಎಲ್ಲಾ ವಿಧೇಯಕಗಳಿಗೆ ಅಂಗೀಕಾರ ಪಡೆಯುತ್ತೇವೆ” ಎಂದು ತಿಳಿಸಿದ್ದಾರೆ.

ಅಧಿವೇಶನದ ಎರಡನೇ ಭಾಗದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಕುರಿತಾದ ವಿಧೇಯಕವನ್ನು ಮಂಡಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಸರ್ಕಾರ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ. ಈ ಮಸೂದೆಯನ್ನು ಪರಿಶೀಲಿಸಲು ರಚಿಸಲಾದ ಸಂಸದೀಯ ಸಮಿತಿಯು ತನ್ನ ವರದಿಯನ್ನು ಇನ್ನೂ ಅಂತಿಮಗೊಳಿಸದಿರುವುದೇ ಇದಕ್ಕೆ ಕಾರಣ ಎಂದು ಹೇಳಿದ್ದಾರೆ. ಅಲ್ಲದೆ, ಪ್ರತಿಪಕ್ಷಗಳು ಚರ್ಚೆಯಲ್ಲಿ ಪಾಲ್ಗೊಳ್ಳದಿದ್ದರೆ ಅದು ಅವರಿಗೇ ನಷ್ಟ ಎಂದಿದ್ದಾರೆ.

ಪ್ರತಿಪಕ್ಷಗಳ ಒಗ್ಗಟ್ಟಿನಲ್ಲಿ ಬಿರುಕು ಮೂಡಿರಬಹುದು ಎಂದ ರಿಜಿಜು, ಸ್ಪೀಕರ್ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಹಿ ಮಾಡಿಲ್ಲ ಎಂದು ತಿಳಿಸಿದರು. ಹೆಚ್ಚಿನ ಸಣ್ಣ ಪಕ್ಷಗಳಿಗೆ ಸದನದ ಕಲಾಪವನ್ನು ಸ್ಥಗಿತಗೊಳಿಸುವುದು ಇಷ್ಟವಿಲ್ಲ. ವಿಶೇಷವಾಗಿ ವಿಧಾನಸಭಾ ಚುನಾವಣೆಗಳು ಹತ್ತಿರವಿರುವುದರಿಂದ, ತಮ್ಮ ಭಾಗದ ಸಮಸ್ಯೆಗಳನ್ನು ಸದನದಲ್ಲಿ ಎತ್ತಲು ಅವು ಉತ್ಸುಕವಾಗಿವೆ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...