Homeಮುಖಪುಟಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಮಾರ್ಚ್ 9ರಂದು ಚರ್ಚೆ : ಸಚಿವ...

ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಮಾರ್ಚ್ 9ರಂದು ಚರ್ಚೆ : ಸಚಿವ ಕಿರಣ್ ರಿಜಿಜು

- Advertisement -
- Advertisement -

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ಮತ್ತು ಮತ ಚಲಾವಣೆ ಮಾರ್ಚ್ 9ರಂದು ನಡೆಯಲಿದೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಭಾನುವಾರ (ಫೆ.15) ತಿಳಿಸಿದ್ದಾರೆ.

ಅಧಿವೇಶನದ ಮೊದಲ ಭಾಗದಲ್ಲಿ ಕಂಡುಬಂದಂತೆ ವಿರೋಧ ಪಕ್ಷಗಳು ಪ್ರತಿಭಟನೆಗಳನ್ನು ಮುಂದುವರಿಸಿದರೆ, ಅದು ಅಂತಿಮವಾಗಿ ಅವರಿಗೇ ಸಮಸ್ಯೆಯಾಗಲಿದೆ ಎಂದು ರಿಜಿಜು ಹೇಳಿದ್ದಾರೆ.

ಮಾರ್ಚ್ 9ರಿಂದ ಏಪ್ರಿಲ್ 2ರವರೆಗೆ ನಡೆಯಲಿರುವ ಬಜೆಟ್ ಅಧಿವೇಶನದ ಎರಡನೇ ಭಾಗವು ಆಸಕ್ತಿದಾಯಕವಾಗಿರುತ್ತದೆ. ಹಲವಾರು ಪ್ರಮುಖ ಮಸೂದೆಗಳು ಚರ್ಚೆ ಮತ್ತು ಅಂಗೀಕಾರಕ್ಕಾಗಿ ಸಂಸತ್ತಿನಲ್ಲಿ ಮಂಡನೆಯಾಗಲಿದೆ ಎಂದು ರಿಜಿಜು ತಿಳಿಸಿದ್ದಾರೆ.

ಬಜೆಟ್ ಅಧಿವೇಶನವು ಜನವರಿ 28ರಂದು ಸಂಸತ್ತಿನ ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ ಮಾಡುವುದರೊಂದಿಗೆ ಪ್ರಾರಂಭಗೊಂಡಿದ್ದು, ಫೆಬ್ರವರಿ 12 ರಂದು ಮೊದಲ ಹಂತದ ಕಲಾಪಗಳು ಮುಕ್ತಾಯಗೊಂಡಿದೆ. ಎರಡನೇ ಹಂತಹ ಕಲಾಪಗಳು ಮಾರ್ಚ್ 9ರಂದು ಪ್ರಾರಂಭಗೊಂಡು ಏಪ್ರಿಲ್ 2ರಂದು ಕೊನೆಗೊಳ್ಳಲಿದೆ. ಈ ನಡುವೆ ಫೆಬ್ರವರಿ 1ರಂದು 2026-27ನೇ ಆರ್ಥಿಕ ವರ್ಷದ ಬಜೆಟ್ ಮಂಡನೆಯಾಗಿದೆ.

ತಮ್ಮ ಲೋಕಸಭಾ ಕ್ಷೇತ್ರವಾದ ಅರುಣಾಚಲ ಪಶ್ಚಿಮಕ್ಕೆ ಭೇಟಿ ನೀಡಿರುವ ರಿಜಿಜು, ಅಧಿವೇಶನದ ಎರಡನೇ ಭಾಗದಲ್ಲಿ ಚರ್ಚೆಗಾಗಿ ನಿರ್ದಿಷ್ಟ ಸಚಿವಾಲಯಗಳನ್ನು ಗುರುತಿಸಲು ಸರ್ಕಾರ ಯೋಜಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಲೋಕಸಭೆಯಲ್ಲಿ, ನಾವು ಐದು ಸಚಿವಾಲಯಗಳಲ್ಲಿನ ಅನುದಾನದ ಬೇಡಿಕೆಗಳನ್ನು ಚರ್ಚಿಸುತ್ತೇವೆ. ರಾಜ್ಯಸಭೆಯಲ್ಲಿ ಇತರ ಐದು ಸಚಿವಾಲಯಗಳ ಕೆಲಸದ ಬಗ್ಗೆ ಚರ್ಚಿಸುತ್ತೇವೆ. ರಾಜ್ಯಸಭೆಯಲ್ಲಿ ಅನುದಾನದ ಬೇಡಿಕೆಗಳ ಮೇಲೆ ಅಲ್ಲ, ಸಚಿವಾಲಯಗಳ ಮೇಲಿನ ಚರ್ಚೆಗಳು ನಡೆಯಲಿವೆ ಎಂದು ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ಚರ್ಚೆಗೆ ಐದು ಸಚಿವಾಲಯಗಳನ್ನು ಮತ್ತು ನಂತರ ಲೋಕಸಭೆಗೆ ಐದು ಸಚಿವಾಲಯಗಳನ್ನು ಆಯ್ಕೆ ಮಾಡಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಬಜೆಟ್ ಅಧಿವೇಶನದ ಎರಡನೇ ಭಾಗವು ಕುತೂಹಲಕಾರಿಯಾಗಿರಲಿದೆ. ಒಂದು ವೇಳೆ ಪ್ರತಿಪಕ್ಷಗಳು ಸದನ ನಡೆಯಲು ಬಿಡದಿದ್ದರೆ, ನಾವು ಗಿಲೋಟಿನ್ (ಚರ್ಚೆಯಿಲ್ಲದೆ ಅನುದಾನದ ಬೇಡಿಕೆಗಳಿಗೆ ಅನುಮೋದನೆ ಪಡೆಯುವ ಪ್ರಕ್ರಿಯೆ) ಮೊರೆ ಹೋಗುತ್ತೇವೆ. ಇದು ಅವರಿಗೆ ಆಗುವ ನಷ್ಟ ಎಂದಿದ್ದಾರೆ.

ಬಜೆಟ್ ಅಧಿವೇಶನದ ಈ ಭಾಗವು ಏಕೆ ವಿಶೇಷವಾಗಿ ಕುತೂಹಲಕಾರಿಯಾಗಿರಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ರಿಜಿಜು, “ಇದು ನಾಲ್ಕು ಪ್ರಮುಖ ರಾಜ್ಯಗಳಾದ ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಕೇರಳ, ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ಮುಂಬರುವ ವಿಧಾನಸಭಾ ಚುನಾವಣೆಗಳ ಸಮಯದಲ್ಲೇ ನಡೆಯುತ್ತಿದೆ” ಎಂದು ಉತ್ತರಿಸಿದ್ದಾರೆ.

“ನಾವು ಒಂದು ಅತ್ಯಂತ ನಿರ್ಣಾಯಕ ವಿಧೇಯಕ ಸೇರಿದಂತೆ ಕೆಲವು ಪ್ರಮುಖ ವಿಧೇಯಕಗಳನ್ನು ಮಂಡಿಸಲಿದ್ದೇವೆ. ಆ ವಿಧೇಯಕ ಯಾವುದು ಎಂಬುದನ್ನು ನಾವು ಈಗ ಬಹಿರಂಗಪಡಿಸುವುದಿಲ್ಲ, ಆದರೆ ಅಧಿವೇಶನದ ಎರಡನೇ ಭಾಗದಲ್ಲಿ ಒಂದು ಅತಿ ಮುಖ್ಯವಾದ ವ್ಯವಹಾರವನ್ನು ಕೈಗೆತ್ತಿಕೊಳ್ಳಲಿದ್ದೇವೆ. ನಾವು ಈ ಎಲ್ಲಾ ವಿಧೇಯಕಗಳಿಗೆ ಅಂಗೀಕಾರ ಪಡೆಯುತ್ತೇವೆ” ಎಂದು ತಿಳಿಸಿದ್ದಾರೆ.

ಅಧಿವೇಶನದ ಎರಡನೇ ಭಾಗದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಕುರಿತಾದ ವಿಧೇಯಕವನ್ನು ಮಂಡಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಸರ್ಕಾರ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ. ಈ ಮಸೂದೆಯನ್ನು ಪರಿಶೀಲಿಸಲು ರಚಿಸಲಾದ ಸಂಸದೀಯ ಸಮಿತಿಯು ತನ್ನ ವರದಿಯನ್ನು ಇನ್ನೂ ಅಂತಿಮಗೊಳಿಸದಿರುವುದೇ ಇದಕ್ಕೆ ಕಾರಣ ಎಂದು ಹೇಳಿದ್ದಾರೆ. ಅಲ್ಲದೆ, ಪ್ರತಿಪಕ್ಷಗಳು ಚರ್ಚೆಯಲ್ಲಿ ಪಾಲ್ಗೊಳ್ಳದಿದ್ದರೆ ಅದು ಅವರಿಗೇ ನಷ್ಟ ಎಂದಿದ್ದಾರೆ.

ಪ್ರತಿಪಕ್ಷಗಳ ಒಗ್ಗಟ್ಟಿನಲ್ಲಿ ಬಿರುಕು ಮೂಡಿರಬಹುದು ಎಂದ ರಿಜಿಜು, ಸ್ಪೀಕರ್ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಹಿ ಮಾಡಿಲ್ಲ ಎಂದು ತಿಳಿಸಿದರು. ಹೆಚ್ಚಿನ ಸಣ್ಣ ಪಕ್ಷಗಳಿಗೆ ಸದನದ ಕಲಾಪವನ್ನು ಸ್ಥಗಿತಗೊಳಿಸುವುದು ಇಷ್ಟವಿಲ್ಲ. ವಿಶೇಷವಾಗಿ ವಿಧಾನಸಭಾ ಚುನಾವಣೆಗಳು ಹತ್ತಿರವಿರುವುದರಿಂದ, ತಮ್ಮ ಭಾಗದ ಸಮಸ್ಯೆಗಳನ್ನು ಸದನದಲ್ಲಿ ಎತ್ತಲು ಅವು ಉತ್ಸುಕವಾಗಿವೆ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...