Homeಮುಖಪುಟಪೆಟ್ರೋಲ್-ಡಿಸೇಲ್ GST ವ್ಯಾಪ್ತಿಗೆ ಚರ್ಚೆ: ಬಿಜೆಪಿ-ಕಾಂಗ್ರೆಸ್ ವಿರುದ್ಧ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ

ಪೆಟ್ರೋಲ್-ಡಿಸೇಲ್ GST ವ್ಯಾಪ್ತಿಗೆ ಚರ್ಚೆ: ಬಿಜೆಪಿ-ಕಾಂಗ್ರೆಸ್ ವಿರುದ್ಧ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ

- Advertisement -
- Advertisement -

ದೇಶದ ಹಲವು ರಾಜ್ಯಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ 100 ರೂ ದಾಟಿ ಮುನ್ನುಗ್ಗುತ್ತಿದೆ. ಇದರಿಂದ ಉಳಿದ ದಿನಬಳಕೆಯ ವಸ್ತುಗಳ ಬೆಲೆಯಲ್ಲಿ ದಿಢೀರ್ ಏರಿಕೆಯಾಗುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರ ಇಂಧನ ಬೆಲೆ ಮೇಲಿನ ತೆರಿಗೆ ಇಳಿಸುವ ಮೂಲಕ ಬೆಲೆ ನಿಯಂತ್ರಣ ಮಾಡಲು ಜನಸಾಮಾನ್ಯರು ಒತ್ತಾಯಿಸುತ್ತಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್ ದೇಶಾದ್ಯಂತ ಹೋರಾಟಕ್ಕಿಳಿದಿದೆ. ಈ ಸಂದರ್ಭದಲ್ಲಿ ಪೆಟ್ರೋಲ್ – ಡೀಸೆಲ್ ಬೆಲೆಗಳನ್ನು GST ವ್ಯಾಪ್ತಿಗೆ ತರಬೇಕೆಂಬ ಬೇಡಿಕೆಯೂ ಕೇಳಿಬಂದಿದ್ದು, ಇದಕ್ಕೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಪೆಟ್ರೋಲ್ 100 ನಾಟ್‌ಔಟ್’ ಘೋಷಣೆ ಹೆಸರಿನಲ್ಲಿ ಕಾಂಗ್ರೆಸ್ ಪಕ್ಷವು ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ, ಮಾಜಿ ಸಿಎಂ ವೀರಪ್ಪ ಮೊಯ್ಲಿ “ಅತಾರ್ಕಿಕವಾಗಿ ಬೆಲೆ ಏರಿಕೆಗೆ ಕೇಂದ್ರ ಸರ್ಕಾರವೇ ಜವಾಬ್ದಾರಿಯಾಗಿದೆ. ಹಾಗಾಗಿ ಪೆಟ್ರೋಲ್ – ಡೀಸೆಲ್ ಬೆಲೆಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರಬೇಕೆಂದು ಒತ್ತಾಯಿಸುತ್ತೇನೆ” ಎಂದಿದ್ದಾರೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಎಚ್.ಡಿ ಕುಮಾರಸ್ವಾಮಿಯವರು, “ಕೇಂದ್ರ ಸರ್ಕಾರ ಪೆಟ್ರೋಲ್‌ ಬೆಲೆ ಏರಿಸುತ್ತಿದೆ. ಇತ್ತ ಕಾಂಗ್ರೆಸ್‌ ದೇಶದಾದ್ಯಂತ ಹೋರಾಡುತ್ತಿದೆ. ಪೆಟ್ರೋಲ್‌ ಬೆಲೆ ಇಳಿಯಬೇಕಿದ್ದರೆ ಅದನ್ನು GSTಗೆ ಸೇರಿಸಬೇಕೆಂದು ಕೇಂದ್ರ ಹೇಳಿದರೆ, ಕಾಂಗ್ರೆಸ್‌ ಕೂಡ ಅದನ್ನೇ ಪ್ರತಿಪಾದಿಸಿದೆ. ಹಾಗಾದರೆ, ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು GSTಗೆ ಸೇರಿಸಲೋ? ಎಂದು ಪ್ರಶ್ನಿಸಿದ್ದಾರೆ.

ಪೆಟ್ರೋಲ್‌ ಬೆಲೆ ಏರಿಕೆ ವಿರುದ್ಧದ ಹೋರಾಟಗಳು ತೆರಿಗೆ, ಸುಂಕ ಇಳಿಕೆಯ ಉದ್ದೇಶದ್ದಾಗಿರಬೇಕೇ ವಿನಾ GSTಗೆ ಸೇರಿಸುವುದಾಗಿರಬಾರದು. ಈಗ ಕಾಂಗ್ರೆಸ್‌ ಪ್ರತಿಭಟಿಸುತ್ತಿರುವುದು ತೆರಿಗೆ ಇಳಿಸಲೋ ಅಥವಾ ಪೆಟ್ರೋಲನ್ನು GSTಗೆ ಸೇರಿಸಲೋ ಎಂಬುದು ಸ್ಪಷ್ಟವಾಗಬೇಕು. GSTಗೆ ಸೇರಿಸುವುದೇ ಕಾಂಗ್ರೆಸ್‌ ಉದ್ದೇಶವಾಗಿದ್ದರೆ ಅದು ಶೋಷಣೆ ಪರವಾದ ಹೋರಾಟ. ಕೇಂದ್ರದ ಅಧಿಕಾರದ ಮೇಲೆ ಕಣ್ಣಿಟ್ಟು ಅದರ ಸುತ್ತಲೇ ರಾಜಕಾರಣ ಮಾಡುವುದಷ್ಟೇ ರಾಷ್ಟ್ರೀಯ ಪಕ್ಷಗಳ ಅಜೆಂಡಾ. ಅವುಗಳಿಗೆ ರಾಜ್ಯಗಳ ಹಿತಾಸಕ್ತಿ, ಸ್ಥಳೀಯ ಅಗತ್ಯಗಳು ಲೆಕ್ಕಕ್ಕೇ ಇಲ್ಲ. ಪೆಟ್ರೋಲ್‌ ಅನ್ನು GSTಗೆ ಸೇರಿಸುವುದು ರಾಜ್ಯಗಳನ್ನು ಶೋಷಿಸಿದಂತೆ. ಈಗ ಕಾಂಗ್ರೆಸ್‌–ಬಿಜೆಪಿಗಳೆರಡೂ ಆ ಶೋಷಣೆ ಪರವಾಗಿ ನಿಂತಿವೆ ಎಂಬುದು ಬಹಿರಂಗವಾಗಿದೆ ಎಂದು ಅವರು ಕಿಡಿಕಾರಿದ್ದಾರೆ.

ಪೆಟ್ರೋಲ್‌ ಅನ್ನು GSTಗೆ ತಂದರೆ ಜನರಿಗೆ ತಕ್ಷಣಕ್ಕೆ ಬೆಲೆ ಇಳಿದಂತೆ ಅನ್ನಿಸಬಹುದು. ಆದರೆ, ಪೆಟ್ರೋಲನ್ನು GSTಗೆ ಸೇರಿಸುತ್ತಲೇ ಅದರ ಮೇಲಿನ ತೆರಿಗೆಯಿಂದ ಬರುತ್ತಿದ್ದ ಸಂಪನ್ಮೂಲ ರಾಜ್ಯಗಳ ಕೈತಪ್ಪಿ ಹೋಗುತ್ತದೆ. ಎಲ್ಲ ತೆರಿಗೆಯೂ ಕೇಂದ್ರದ ಪಾಲಾಗಿ ರಾಜ್ಯಗಳು ಸಂಪನ್ಮೂಲ ಬರ ಎದುರಿಸುತ್ತವೆ. ರಾಜ್ಯಗಳ ಅಭಿವೃದ್ಧಿಗೆ ಪೆಟ್ಟು ಬೀಳುತ್ತದೆ.

ತೈಲ ಬೆಲೆ ಇಳಿಸುವ ಉದ್ದೇಶದೊಂದಿಗೆ ಪೆಟ್ರೋಲನ್ನು GSTಗೆ ಸೇರಿಸುವುದು ಪರಿಹಾರವಲ್ಲ. ಅದು ಶೋಷಣೆ. ಬದಲಿಗೆ ಕೇಂದ್ರ ಈಗ ವಿಧಿಸುತ್ತಿರುವ ಮಿತಿಮೀರಿದ ಸುಂಕ ಕಡಿತ ಮಾಡಲಿ. ರಾಜ್ಯ ಸರ್ಕಾರವೂ ತೆರಿಗೆ ಇಳಿಸಲಿ. ಈಗ ತೈಲದ ಮೇಲೆ ಕೇಂದ್ರ, ರಾಜ್ಯಗಳೆರಡೂ ಶೇ. 68ರಷ್ಟು ತೆರಿಗೆ ವಿಧಿಸುತ್ತಿವೆ. ಈ ತೆರಿಗೆ ಪ್ರಮಾಣ ಕಡಿಮೆಯಾಗಬೇಕಾದ್ದು ಅಗತ್ಯ. ಅಂದರೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಈಗ ಒಂದು ಲೀಟರ್‌ ಪೆಟ್ರೋಲ್‌ ಮೇಲೆ ₹60–65 ತೆರಿಗೆ ಹಣ ಸಿಗುತ್ತಿದೆ. ಆದರೆ, ಎರಡೂ ಸರ್ಕಾರಗಳೂ ಲೀಟರ್‌ ಪೆಟ್ರೋಲ್‌ ಮೇಲೆ ಸಂಗ್ರಹಿಸುವ ಹಣ ₹30 ಮೀರಬಾರದು. ಆಗ ಪೆಟ್ರೋಲ್‌ ₹65–70ಗೆ ಬಂದು ನಿಲ್ಲಲಿದೆ. ನಿಜವಾಗಿಯೂ ಆಗಬೇಕಾದ್ದು ಇದು. ಈ ನಿಟ್ಟಿನಲ್ಲಿ ನಾವೆಲ್ಲರೂ ಹೋರಾಡಬೇಕಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಪೆಟ್ರೋಲ್‌ ಮೇಲೆ ಕೇಂದ್ರ, ರಾಜ್ಯ ಸರ್ಕಾರಗಳೆರಡು ವಿಧಿಸುತ್ತಿರುವ ಅತ್ಯಧಿಕ ತೆರಿಗೆ ಇಳಿಸುವ ಮೂಲಕ ಬೆಲೆ ಏರಿಕೆ ತಗ್ಗಿಸಬೇಕು ಎಂಬುದು JDS ಒತ್ತಾಯ. ಜತೆಗೆ ಪೆಟ್ರೋಲನ್ನು GSTಗೆ ಸೇರಿಸುವ ರಾಷ್ಟ್ರೀಯ ಪಕ್ಷಗಳ ಹುನ್ನಾರದ ವಿರುದ್ಧ ಹೋರಾಡುವುದೂ ನಮ್ಮ ನಿಲುವು. ಇದರ ಸುತ್ತಲೇ ನಾವು ಹೋರಾಟ, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ದಾಖಲೆ ಬರೆದ ಪೆಟ್ರೋಲ್, ಡೀಸೆಲ್ ಬೆಲೆಗಳು: ಮುಂಬೈನಲ್ಲಿ ಸೆಂಚುರಿ ಬಾರಿಸಿದ ಪೆಟ್ರೋಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....