Homeಮುಖಪುಟಪೆಟ್ರೋಲ್-ಡಿಸೇಲ್ GST ವ್ಯಾಪ್ತಿಗೆ ಚರ್ಚೆ: ಬಿಜೆಪಿ-ಕಾಂಗ್ರೆಸ್ ವಿರುದ್ಧ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ

ಪೆಟ್ರೋಲ್-ಡಿಸೇಲ್ GST ವ್ಯಾಪ್ತಿಗೆ ಚರ್ಚೆ: ಬಿಜೆಪಿ-ಕಾಂಗ್ರೆಸ್ ವಿರುದ್ಧ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ

- Advertisement -
- Advertisement -

ದೇಶದ ಹಲವು ರಾಜ್ಯಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ 100 ರೂ ದಾಟಿ ಮುನ್ನುಗ್ಗುತ್ತಿದೆ. ಇದರಿಂದ ಉಳಿದ ದಿನಬಳಕೆಯ ವಸ್ತುಗಳ ಬೆಲೆಯಲ್ಲಿ ದಿಢೀರ್ ಏರಿಕೆಯಾಗುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರ ಇಂಧನ ಬೆಲೆ ಮೇಲಿನ ತೆರಿಗೆ ಇಳಿಸುವ ಮೂಲಕ ಬೆಲೆ ನಿಯಂತ್ರಣ ಮಾಡಲು ಜನಸಾಮಾನ್ಯರು ಒತ್ತಾಯಿಸುತ್ತಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್ ದೇಶಾದ್ಯಂತ ಹೋರಾಟಕ್ಕಿಳಿದಿದೆ. ಈ ಸಂದರ್ಭದಲ್ಲಿ ಪೆಟ್ರೋಲ್ – ಡೀಸೆಲ್ ಬೆಲೆಗಳನ್ನು GST ವ್ಯಾಪ್ತಿಗೆ ತರಬೇಕೆಂಬ ಬೇಡಿಕೆಯೂ ಕೇಳಿಬಂದಿದ್ದು, ಇದಕ್ಕೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಪೆಟ್ರೋಲ್ 100 ನಾಟ್‌ಔಟ್’ ಘೋಷಣೆ ಹೆಸರಿನಲ್ಲಿ ಕಾಂಗ್ರೆಸ್ ಪಕ್ಷವು ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ, ಮಾಜಿ ಸಿಎಂ ವೀರಪ್ಪ ಮೊಯ್ಲಿ “ಅತಾರ್ಕಿಕವಾಗಿ ಬೆಲೆ ಏರಿಕೆಗೆ ಕೇಂದ್ರ ಸರ್ಕಾರವೇ ಜವಾಬ್ದಾರಿಯಾಗಿದೆ. ಹಾಗಾಗಿ ಪೆಟ್ರೋಲ್ – ಡೀಸೆಲ್ ಬೆಲೆಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರಬೇಕೆಂದು ಒತ್ತಾಯಿಸುತ್ತೇನೆ” ಎಂದಿದ್ದಾರೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಎಚ್.ಡಿ ಕುಮಾರಸ್ವಾಮಿಯವರು, “ಕೇಂದ್ರ ಸರ್ಕಾರ ಪೆಟ್ರೋಲ್‌ ಬೆಲೆ ಏರಿಸುತ್ತಿದೆ. ಇತ್ತ ಕಾಂಗ್ರೆಸ್‌ ದೇಶದಾದ್ಯಂತ ಹೋರಾಡುತ್ತಿದೆ. ಪೆಟ್ರೋಲ್‌ ಬೆಲೆ ಇಳಿಯಬೇಕಿದ್ದರೆ ಅದನ್ನು GSTಗೆ ಸೇರಿಸಬೇಕೆಂದು ಕೇಂದ್ರ ಹೇಳಿದರೆ, ಕಾಂಗ್ರೆಸ್‌ ಕೂಡ ಅದನ್ನೇ ಪ್ರತಿಪಾದಿಸಿದೆ. ಹಾಗಾದರೆ, ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು GSTಗೆ ಸೇರಿಸಲೋ? ಎಂದು ಪ್ರಶ್ನಿಸಿದ್ದಾರೆ.

ಪೆಟ್ರೋಲ್‌ ಬೆಲೆ ಏರಿಕೆ ವಿರುದ್ಧದ ಹೋರಾಟಗಳು ತೆರಿಗೆ, ಸುಂಕ ಇಳಿಕೆಯ ಉದ್ದೇಶದ್ದಾಗಿರಬೇಕೇ ವಿನಾ GSTಗೆ ಸೇರಿಸುವುದಾಗಿರಬಾರದು. ಈಗ ಕಾಂಗ್ರೆಸ್‌ ಪ್ರತಿಭಟಿಸುತ್ತಿರುವುದು ತೆರಿಗೆ ಇಳಿಸಲೋ ಅಥವಾ ಪೆಟ್ರೋಲನ್ನು GSTಗೆ ಸೇರಿಸಲೋ ಎಂಬುದು ಸ್ಪಷ್ಟವಾಗಬೇಕು. GSTಗೆ ಸೇರಿಸುವುದೇ ಕಾಂಗ್ರೆಸ್‌ ಉದ್ದೇಶವಾಗಿದ್ದರೆ ಅದು ಶೋಷಣೆ ಪರವಾದ ಹೋರಾಟ. ಕೇಂದ್ರದ ಅಧಿಕಾರದ ಮೇಲೆ ಕಣ್ಣಿಟ್ಟು ಅದರ ಸುತ್ತಲೇ ರಾಜಕಾರಣ ಮಾಡುವುದಷ್ಟೇ ರಾಷ್ಟ್ರೀಯ ಪಕ್ಷಗಳ ಅಜೆಂಡಾ. ಅವುಗಳಿಗೆ ರಾಜ್ಯಗಳ ಹಿತಾಸಕ್ತಿ, ಸ್ಥಳೀಯ ಅಗತ್ಯಗಳು ಲೆಕ್ಕಕ್ಕೇ ಇಲ್ಲ. ಪೆಟ್ರೋಲ್‌ ಅನ್ನು GSTಗೆ ಸೇರಿಸುವುದು ರಾಜ್ಯಗಳನ್ನು ಶೋಷಿಸಿದಂತೆ. ಈಗ ಕಾಂಗ್ರೆಸ್‌–ಬಿಜೆಪಿಗಳೆರಡೂ ಆ ಶೋಷಣೆ ಪರವಾಗಿ ನಿಂತಿವೆ ಎಂಬುದು ಬಹಿರಂಗವಾಗಿದೆ ಎಂದು ಅವರು ಕಿಡಿಕಾರಿದ್ದಾರೆ.

ಪೆಟ್ರೋಲ್‌ ಅನ್ನು GSTಗೆ ತಂದರೆ ಜನರಿಗೆ ತಕ್ಷಣಕ್ಕೆ ಬೆಲೆ ಇಳಿದಂತೆ ಅನ್ನಿಸಬಹುದು. ಆದರೆ, ಪೆಟ್ರೋಲನ್ನು GSTಗೆ ಸೇರಿಸುತ್ತಲೇ ಅದರ ಮೇಲಿನ ತೆರಿಗೆಯಿಂದ ಬರುತ್ತಿದ್ದ ಸಂಪನ್ಮೂಲ ರಾಜ್ಯಗಳ ಕೈತಪ್ಪಿ ಹೋಗುತ್ತದೆ. ಎಲ್ಲ ತೆರಿಗೆಯೂ ಕೇಂದ್ರದ ಪಾಲಾಗಿ ರಾಜ್ಯಗಳು ಸಂಪನ್ಮೂಲ ಬರ ಎದುರಿಸುತ್ತವೆ. ರಾಜ್ಯಗಳ ಅಭಿವೃದ್ಧಿಗೆ ಪೆಟ್ಟು ಬೀಳುತ್ತದೆ.

ತೈಲ ಬೆಲೆ ಇಳಿಸುವ ಉದ್ದೇಶದೊಂದಿಗೆ ಪೆಟ್ರೋಲನ್ನು GSTಗೆ ಸೇರಿಸುವುದು ಪರಿಹಾರವಲ್ಲ. ಅದು ಶೋಷಣೆ. ಬದಲಿಗೆ ಕೇಂದ್ರ ಈಗ ವಿಧಿಸುತ್ತಿರುವ ಮಿತಿಮೀರಿದ ಸುಂಕ ಕಡಿತ ಮಾಡಲಿ. ರಾಜ್ಯ ಸರ್ಕಾರವೂ ತೆರಿಗೆ ಇಳಿಸಲಿ. ಈಗ ತೈಲದ ಮೇಲೆ ಕೇಂದ್ರ, ರಾಜ್ಯಗಳೆರಡೂ ಶೇ. 68ರಷ್ಟು ತೆರಿಗೆ ವಿಧಿಸುತ್ತಿವೆ. ಈ ತೆರಿಗೆ ಪ್ರಮಾಣ ಕಡಿಮೆಯಾಗಬೇಕಾದ್ದು ಅಗತ್ಯ. ಅಂದರೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಈಗ ಒಂದು ಲೀಟರ್‌ ಪೆಟ್ರೋಲ್‌ ಮೇಲೆ ₹60–65 ತೆರಿಗೆ ಹಣ ಸಿಗುತ್ತಿದೆ. ಆದರೆ, ಎರಡೂ ಸರ್ಕಾರಗಳೂ ಲೀಟರ್‌ ಪೆಟ್ರೋಲ್‌ ಮೇಲೆ ಸಂಗ್ರಹಿಸುವ ಹಣ ₹30 ಮೀರಬಾರದು. ಆಗ ಪೆಟ್ರೋಲ್‌ ₹65–70ಗೆ ಬಂದು ನಿಲ್ಲಲಿದೆ. ನಿಜವಾಗಿಯೂ ಆಗಬೇಕಾದ್ದು ಇದು. ಈ ನಿಟ್ಟಿನಲ್ಲಿ ನಾವೆಲ್ಲರೂ ಹೋರಾಡಬೇಕಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಪೆಟ್ರೋಲ್‌ ಮೇಲೆ ಕೇಂದ್ರ, ರಾಜ್ಯ ಸರ್ಕಾರಗಳೆರಡು ವಿಧಿಸುತ್ತಿರುವ ಅತ್ಯಧಿಕ ತೆರಿಗೆ ಇಳಿಸುವ ಮೂಲಕ ಬೆಲೆ ಏರಿಕೆ ತಗ್ಗಿಸಬೇಕು ಎಂಬುದು JDS ಒತ್ತಾಯ. ಜತೆಗೆ ಪೆಟ್ರೋಲನ್ನು GSTಗೆ ಸೇರಿಸುವ ರಾಷ್ಟ್ರೀಯ ಪಕ್ಷಗಳ ಹುನ್ನಾರದ ವಿರುದ್ಧ ಹೋರಾಡುವುದೂ ನಮ್ಮ ನಿಲುವು. ಇದರ ಸುತ್ತಲೇ ನಾವು ಹೋರಾಟ, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ದಾಖಲೆ ಬರೆದ ಪೆಟ್ರೋಲ್, ಡೀಸೆಲ್ ಬೆಲೆಗಳು: ಮುಂಬೈನಲ್ಲಿ ಸೆಂಚುರಿ ಬಾರಿಸಿದ ಪೆಟ್ರೋಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...