Homeಕರ್ನಾಟಕ‘ಅತ್ಯಾಚಾರ ರಾಜಕೀಯ’ ಕುರಿತು ಸಂವಾದ ಕಾರ್ಯಕ್ರಮ ನಾಳೆ

‘ಅತ್ಯಾಚಾರ ರಾಜಕೀಯ’ ಕುರಿತು ಸಂವಾದ ಕಾರ್ಯಕ್ರಮ ನಾಳೆ

- Advertisement -
- Advertisement -

‘ಅತ್ಯಾಚಾರದ ರಾಜಕೀಯ: ನ್ಯಾಯ, ಹೊಣೆಗಾರಿಕೆ ಮತ್ತು ಪುನಶ್ಚೇತನ’ ಸಾರ್ವಜನಿಕ ಸಂವಾದ ಕಾರ್ಯಕ್ರಮವನ್ನು ‘ಲೈಂಗಿಕ ದೌರ್ಜನ್ಯದ ವಿರುದ್ಧ ಕರ್ನಾಟಕ’ (‘ನಾವೆದ್ದು ನಿಲ್ಲದಿದ್ದರೆ’ ಒಕ್ಕೂಟದ ಭಾಗ) ವತಿಯಿಂದ ಫೆಬ್ರುವರಿ 11ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಸೇಂಟ್ ಜೋಸೆಫ್ ವಿಶ್ವ ವಿದ್ಯಾಲಯದ ಆಡಿಟೋರಿಯಂ (ಲಾಂಗ್ ಫೋರ್ಡ್ ರೋಡ್, ಶಾಂತಿನಗರ ಬೆಂಗಳೂರು)ನಲ್ಲಿ ಬೆಳಿಗ್ಗೆ 9.30 ರಿಂದ ಸಂಜೆ 5.30 ರವರೆಗೆ ಕಾರ್ಯಕ್ರಮ ನಡೆಯಲಿದೆ.

ಮಹಿಳೆ ಮತ್ತು ಮಕ್ಕಳ ಮೇಲೆ ಯಾವುದೇ ಭಯವಿಲ್ಲದೆ ನಡೆಯುತ್ತಿರುವ ಅತ್ಯಾಚಾರ ಲೈಂಗಿಕ ದೌರ್ಜನ್ಯಗಳು, ಅದರ ಹೊಣೆಗಾರಿಕೆ ಮತ್ತು ಸಂತ್ರಸ್ತರ ಪುನಶ್ಚೇತನದ ಕುರಿತು ಚರ್ಚಿಸಲಾಗುತ್ತದೆ.

ಇತ್ತೀಚೆಗೆ ಕರ್ನಾಟಕದಲ್ಲಿ ಜರುಗಿದ ಕೆಲವು ಅತ್ಯಾಚಾರ ಘಟನೆಗಳ ವೈಯಕ್ತಿಕ ಹಂಚಿಕೆ, ಇಂದಿನ ಸಮಾಜೋ ರಾಜಕೀಯ ಮತ್ತು ಕಾನೂನು ವ್ಯವಸ್ಥೆಯ ಹಿನ್ನೆಲೆಯಲ್ಲಿ ಅವುಗಳನ್ನು ಪರಿಶೀಲಿಸುತ್ತ ಯಾವ ಪರಿಸ್ಥಿತಿಯಲ್ಲಿ ಅತ್ಯಾಚಾರ, ದೌರ್ಜನ್ಯಗಳು ನಡೆಯುತ್ತಿವೆ ಮತ್ತು ಅವುಗಳ ಪರಿಣಾಮಗಳೇನಾಗುತ್ತಿವೆ ಎಂಬುದನ್ನು ಪರಿಣಿತರ ಜೊತೆಗೆ ಸಂವಾದದಲ್ಲಿ ವಿಶ್ಲೇಷಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

ಮಹಿಳಾ ದೃಷ್ಟಿಕೋನದಲ್ಲಿ ಅವುಗಳ ಚರ್ಚೆ ಮಾಡುತ್ತ ಲಿಂಗ, ಲಿಂಗತ್ವ, ವಯಸ್ಸು, ಜಾತಿ, ಧರ್ಮ ಮತ್ತು ವರ್ಗಗಳೆಂಬ ವಿಚಾರಗಳು ನ್ಯಾಯದ ಹಾದಿಯಲ್ಲಿ ಹೇಗೆ ತಡೆಯಾಗಿ ನಿಲ್ಲುತ್ತಿವೆ ಎಂಬುದನ್ನು ಈ ಸಂವಾದ ಕಾರ್ಯಕ್ರಮದಲ್ಲಿ ವಿಮರ್ಶಿಸಲಾಗುವುದು ಎಂದು ತಿಳಿಸಿದ್ದಾರೆ.

ಕರ್ನಾಟಕದ ವಿವಿಧ ಭಾಗಗಳಿಂದ ಬರುತ್ತಿರುವ ಮಹಿಳಾ ಮತ್ತು ಮಾನವ ಹಕ್ಕುಗಳ ಸಂಘಟನೆಗಳು ಒಂದು ವೇದಿಕೆಯಡಿಯಲ್ಲಿ ಒಟ್ಟಿಗೆ ಸೇರುತ್ತಿವೆ. ಒಂದೊಂದು ಪ್ರಕರಣದಲ್ಲೂ ನ್ಯಾಯವನ್ನು ಕೇಳುವುದರೊಂದಿಗೆ ‘ಮಹಿಳೆಯರ ಮೇಲಿನ ದೌರ್ಜನ್ಯಗಳ ವಿರುದ್ಧ ಕರ್ನಾಟಕ’ ಪ್ರಶ್ನಿಸುತ್ತಿದೆ.  ಈ ಸಮಾವೇಶದ ಮೂಲಕ ಮಹಿಳೆಯರ ಆತಂಕವನ್ನು ಒಂದು ವ್ಯವಸ್ಥಿತ ಹಾಗೂ ಸೃಜನಶೀಲ ರೀತಿಯಲ್ಲಿ ಸಮಾಜದ ಮುಂದಿಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಕಾರ್ಯಕ್ರಮದಲ್ಲಿ ಸಾಮಾಜಿಕ ಕಾರ್ಯಕರ್ತರು, ನ್ಯಾಯವಾದಿಗಳು, ಮಾಧ್ಯಮ ತಜ್ಞರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಂವಾದದಲ್ಲಿ ಭಾಗಿಯಾಗಲಿದ್ದಾರೆ. ಸಮಾಜವು ಜಾತಿ, ಕೋಮು ಮತ್ತು ವರ್ಗಗಳಾಗಿ ವಿಭಜನೆಗೊಂಡಿರುವ ಈ ಸಂದರ್ಭದಲ್ಲಿ ಹೆಚ್ಚುತ್ತಿರುವ ಶಿಕ್ಷಾ ಭಯವಿಲ್ಲದಿರುವುದನ್ನು ಚರ್ಚಿಸಿ ನ್ಯಾಯ, ಹೊಣೆಗಾರಿಕೆ ಮತ್ತು ಸಂತ್ರಸ್ತರಿಗೆ ಸಂತೈಸುವ, ಪುನಶ್ಚೇತನ ಮೂಡಿಸುವ ಹಾದಿಗಳನ್ನೂ ಹುಡುಕುವುದು ಈ ಸಂವಾದದ ಉದ್ದೇಶವಾಗಿದೆ. ಕಾರ್ಯಕ್ರಮದ ಕೊನೆಯಲ್ಲಿ ನ್ಯಾಯಾಂಗ ಮತ್ತು ಶಾಸಕಾಂಗಗಳ ಅಧಿಕಾರ ರೂಢರಿಗೆ ಹಕ್ಕೊತ್ತಾಯಗಳನ್ನು ಸಲ್ಲಿಸಿ ಅವರಿಂದ ಹೊಣೆಗಾರಿಕೆಯ ಪ್ರತಿಕ್ರಿಯೆಗಳನ್ನು ನಿರೀಕ್ಷಿಸಲಾಗುವುದು ಎಂದು ಹೇಳಿದ್ದಾರೆ.

ಜನವಾದಿಮಹಿಳಾ ಸಂಘಟನೆಯ ಡಾ. ಮೀನಾಕ್ಷಿ ಬಾಳಿ, ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ, ಗೃಹಕಾರ್ಮಿಕರ ಯೂನಿಯನ್‌ನ ಗೀತಾ ಮೆನನ್, ಸಾಧನಾ ಮಹಿಳಾ ಸಂಘದ ಗೀತಾ, ದಲಿತ ಮಹಿಳಾ ಹಕ್ಕುಗಳ ಹೋರಾಟಗಾರ್ತಿ ಜ್ಯೋತಿ ಹಿಟ್ನಾಳ್, ಸಂವಾದ ಬದುಕು ಕಾಲೇಜಿನ ವಿಶ್ರಾಂತ ಪ್ರಾಂಶುಪಾಲರಾದ ಇಶ್ರತ್ ನಿಸ್ಸಾರ್, ಬೆಬಾಕ್ ಕಲೆಕ್ಟಿವ್ ಮುಂಬೈನ ಹಸೀನಾ ಖಾನ್, ನ್ಯಾಶನಲ್ ಫೆಡರೇಶನ್ ಫಾರ್ ದಲಿತ್ ವಿಮೆನ್‌ನ ರೂತ್ ಮನೋರಮಾ, ಒಂದೆಡೆ ಸಂಸ್ಥೆಯ ಅಕ್ಕಯ್‌ ಪದ್ಮಶಾಲಿ, ಓಪನ್ ಸ್ಪೇಸ್‌ನ ಅನಿತಾ ಚೆರಿಯೋ ಮತ್ತು ಸರ್ವೋಚ್ಚ ನ್ಯಾಯಾಲಯದ ನ್ಯಾಯವಾದಿಗಳಾದ ವೃಂದಾ ಗ್ರೋವರ್ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...