Homeಕರ್ನಾಟಕ‘ಅತ್ಯಾಚಾರ ರಾಜಕೀಯ’ ಕುರಿತು ಸಂವಾದ ಕಾರ್ಯಕ್ರಮ ನಾಳೆ

‘ಅತ್ಯಾಚಾರ ರಾಜಕೀಯ’ ಕುರಿತು ಸಂವಾದ ಕಾರ್ಯಕ್ರಮ ನಾಳೆ

- Advertisement -
- Advertisement -

‘ಅತ್ಯಾಚಾರದ ರಾಜಕೀಯ: ನ್ಯಾಯ, ಹೊಣೆಗಾರಿಕೆ ಮತ್ತು ಪುನಶ್ಚೇತನ’ ಸಾರ್ವಜನಿಕ ಸಂವಾದ ಕಾರ್ಯಕ್ರಮವನ್ನು ‘ಲೈಂಗಿಕ ದೌರ್ಜನ್ಯದ ವಿರುದ್ಧ ಕರ್ನಾಟಕ’ (‘ನಾವೆದ್ದು ನಿಲ್ಲದಿದ್ದರೆ’ ಒಕ್ಕೂಟದ ಭಾಗ) ವತಿಯಿಂದ ಫೆಬ್ರುವರಿ 11ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಸೇಂಟ್ ಜೋಸೆಫ್ ವಿಶ್ವ ವಿದ್ಯಾಲಯದ ಆಡಿಟೋರಿಯಂ (ಲಾಂಗ್ ಫೋರ್ಡ್ ರೋಡ್, ಶಾಂತಿನಗರ ಬೆಂಗಳೂರು)ನಲ್ಲಿ ಬೆಳಿಗ್ಗೆ 9.30 ರಿಂದ ಸಂಜೆ 5.30 ರವರೆಗೆ ಕಾರ್ಯಕ್ರಮ ನಡೆಯಲಿದೆ.

ಮಹಿಳೆ ಮತ್ತು ಮಕ್ಕಳ ಮೇಲೆ ಯಾವುದೇ ಭಯವಿಲ್ಲದೆ ನಡೆಯುತ್ತಿರುವ ಅತ್ಯಾಚಾರ ಲೈಂಗಿಕ ದೌರ್ಜನ್ಯಗಳು, ಅದರ ಹೊಣೆಗಾರಿಕೆ ಮತ್ತು ಸಂತ್ರಸ್ತರ ಪುನಶ್ಚೇತನದ ಕುರಿತು ಚರ್ಚಿಸಲಾಗುತ್ತದೆ.

ಇತ್ತೀಚೆಗೆ ಕರ್ನಾಟಕದಲ್ಲಿ ಜರುಗಿದ ಕೆಲವು ಅತ್ಯಾಚಾರ ಘಟನೆಗಳ ವೈಯಕ್ತಿಕ ಹಂಚಿಕೆ, ಇಂದಿನ ಸಮಾಜೋ ರಾಜಕೀಯ ಮತ್ತು ಕಾನೂನು ವ್ಯವಸ್ಥೆಯ ಹಿನ್ನೆಲೆಯಲ್ಲಿ ಅವುಗಳನ್ನು ಪರಿಶೀಲಿಸುತ್ತ ಯಾವ ಪರಿಸ್ಥಿತಿಯಲ್ಲಿ ಅತ್ಯಾಚಾರ, ದೌರ್ಜನ್ಯಗಳು ನಡೆಯುತ್ತಿವೆ ಮತ್ತು ಅವುಗಳ ಪರಿಣಾಮಗಳೇನಾಗುತ್ತಿವೆ ಎಂಬುದನ್ನು ಪರಿಣಿತರ ಜೊತೆಗೆ ಸಂವಾದದಲ್ಲಿ ವಿಶ್ಲೇಷಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

ಮಹಿಳಾ ದೃಷ್ಟಿಕೋನದಲ್ಲಿ ಅವುಗಳ ಚರ್ಚೆ ಮಾಡುತ್ತ ಲಿಂಗ, ಲಿಂಗತ್ವ, ವಯಸ್ಸು, ಜಾತಿ, ಧರ್ಮ ಮತ್ತು ವರ್ಗಗಳೆಂಬ ವಿಚಾರಗಳು ನ್ಯಾಯದ ಹಾದಿಯಲ್ಲಿ ಹೇಗೆ ತಡೆಯಾಗಿ ನಿಲ್ಲುತ್ತಿವೆ ಎಂಬುದನ್ನು ಈ ಸಂವಾದ ಕಾರ್ಯಕ್ರಮದಲ್ಲಿ ವಿಮರ್ಶಿಸಲಾಗುವುದು ಎಂದು ತಿಳಿಸಿದ್ದಾರೆ.

ಕರ್ನಾಟಕದ ವಿವಿಧ ಭಾಗಗಳಿಂದ ಬರುತ್ತಿರುವ ಮಹಿಳಾ ಮತ್ತು ಮಾನವ ಹಕ್ಕುಗಳ ಸಂಘಟನೆಗಳು ಒಂದು ವೇದಿಕೆಯಡಿಯಲ್ಲಿ ಒಟ್ಟಿಗೆ ಸೇರುತ್ತಿವೆ. ಒಂದೊಂದು ಪ್ರಕರಣದಲ್ಲೂ ನ್ಯಾಯವನ್ನು ಕೇಳುವುದರೊಂದಿಗೆ ‘ಮಹಿಳೆಯರ ಮೇಲಿನ ದೌರ್ಜನ್ಯಗಳ ವಿರುದ್ಧ ಕರ್ನಾಟಕ’ ಪ್ರಶ್ನಿಸುತ್ತಿದೆ.  ಈ ಸಮಾವೇಶದ ಮೂಲಕ ಮಹಿಳೆಯರ ಆತಂಕವನ್ನು ಒಂದು ವ್ಯವಸ್ಥಿತ ಹಾಗೂ ಸೃಜನಶೀಲ ರೀತಿಯಲ್ಲಿ ಸಮಾಜದ ಮುಂದಿಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಕಾರ್ಯಕ್ರಮದಲ್ಲಿ ಸಾಮಾಜಿಕ ಕಾರ್ಯಕರ್ತರು, ನ್ಯಾಯವಾದಿಗಳು, ಮಾಧ್ಯಮ ತಜ್ಞರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಂವಾದದಲ್ಲಿ ಭಾಗಿಯಾಗಲಿದ್ದಾರೆ. ಸಮಾಜವು ಜಾತಿ, ಕೋಮು ಮತ್ತು ವರ್ಗಗಳಾಗಿ ವಿಭಜನೆಗೊಂಡಿರುವ ಈ ಸಂದರ್ಭದಲ್ಲಿ ಹೆಚ್ಚುತ್ತಿರುವ ಶಿಕ್ಷಾ ಭಯವಿಲ್ಲದಿರುವುದನ್ನು ಚರ್ಚಿಸಿ ನ್ಯಾಯ, ಹೊಣೆಗಾರಿಕೆ ಮತ್ತು ಸಂತ್ರಸ್ತರಿಗೆ ಸಂತೈಸುವ, ಪುನಶ್ಚೇತನ ಮೂಡಿಸುವ ಹಾದಿಗಳನ್ನೂ ಹುಡುಕುವುದು ಈ ಸಂವಾದದ ಉದ್ದೇಶವಾಗಿದೆ. ಕಾರ್ಯಕ್ರಮದ ಕೊನೆಯಲ್ಲಿ ನ್ಯಾಯಾಂಗ ಮತ್ತು ಶಾಸಕಾಂಗಗಳ ಅಧಿಕಾರ ರೂಢರಿಗೆ ಹಕ್ಕೊತ್ತಾಯಗಳನ್ನು ಸಲ್ಲಿಸಿ ಅವರಿಂದ ಹೊಣೆಗಾರಿಕೆಯ ಪ್ರತಿಕ್ರಿಯೆಗಳನ್ನು ನಿರೀಕ್ಷಿಸಲಾಗುವುದು ಎಂದು ಹೇಳಿದ್ದಾರೆ.

ಜನವಾದಿಮಹಿಳಾ ಸಂಘಟನೆಯ ಡಾ. ಮೀನಾಕ್ಷಿ ಬಾಳಿ, ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ, ಗೃಹಕಾರ್ಮಿಕರ ಯೂನಿಯನ್‌ನ ಗೀತಾ ಮೆನನ್, ಸಾಧನಾ ಮಹಿಳಾ ಸಂಘದ ಗೀತಾ, ದಲಿತ ಮಹಿಳಾ ಹಕ್ಕುಗಳ ಹೋರಾಟಗಾರ್ತಿ ಜ್ಯೋತಿ ಹಿಟ್ನಾಳ್, ಸಂವಾದ ಬದುಕು ಕಾಲೇಜಿನ ವಿಶ್ರಾಂತ ಪ್ರಾಂಶುಪಾಲರಾದ ಇಶ್ರತ್ ನಿಸ್ಸಾರ್, ಬೆಬಾಕ್ ಕಲೆಕ್ಟಿವ್ ಮುಂಬೈನ ಹಸೀನಾ ಖಾನ್, ನ್ಯಾಶನಲ್ ಫೆಡರೇಶನ್ ಫಾರ್ ದಲಿತ್ ವಿಮೆನ್‌ನ ರೂತ್ ಮನೋರಮಾ, ಒಂದೆಡೆ ಸಂಸ್ಥೆಯ ಅಕ್ಕಯ್‌ ಪದ್ಮಶಾಲಿ, ಓಪನ್ ಸ್ಪೇಸ್‌ನ ಅನಿತಾ ಚೆರಿಯೋ ಮತ್ತು ಸರ್ವೋಚ್ಚ ನ್ಯಾಯಾಲಯದ ನ್ಯಾಯವಾದಿಗಳಾದ ವೃಂದಾ ಗ್ರೋವರ್ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...