Homeಕರ್ನಾಟಕಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಸಿಎಂ ಜೊತೆ ಚರ್ಚೆ: HD ಕುಮಾರಸ್ವಾಮಿ ಭರವಸೆ

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಸಿಎಂ ಜೊತೆ ಚರ್ಚೆ: HD ಕುಮಾರಸ್ವಾಮಿ ಭರವಸೆ

- Advertisement -
- Advertisement -

ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳಿಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಂಬಂಧಿತ ಸಚಿವರ ಜತೆ ಮಾತುಕತೆ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿನ ಬಿಡದಿಯಲ್ಲಿ ಭರವಸೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯ ಸಮಿತಿಯ ಅಧ್ಯಕ್ಷೆ ಎಸ್. ವರಲಕ್ಷ್ಮೀ ಮತ್ತು ಇತರ ನಾಯಕರು ಸಲ್ಲಿಸಿದ ಮನವಿ ಸ್ವೀಕರಿಸಿದ ನಂತರ ಮಾತನಾಡಿದ ಅವರು, ಈ ಬಗ್ಗೆ ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿಯೂ ಪ್ರಸ್ತಾಪ ಮಾಡುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಅಧಿಕಾರಕ್ಕೆ ಬಂದರೆ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ 10 ಸಾವಿರ ಗೌರವಧನ: ಪ್ರಿಯಾಂಕಾ ಗಾಂಧಿ ಭರವಸೆ

ಅನೇಕ ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳು ನೆನೆಗುದುಗೆ ಬಿದ್ದಿವೆ. ಅವುಗಳನ್ನು ಈಡೇರಿಸಲೇಬೇಕು. ರಾಜ್ಯದಲ್ಲಿ ಅಸಂಖ್ಯಾತ ಅಂಗನವಾಡಿ ಕಾರ್ಯಕರ್ತೆಯರಿದ್ದು, ಕೋವಿಡ್‌ ಸೋಂಕಿನ ಕಾಲದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದ್ದಾರೆ. ಆ ವಿಷಮ ಪರಿಸ್ಥಿತಿಯಲ್ಲಿ 59 ಕಾರ್ಯಕರ್ತೆಯರು ಸೋಂಕಿಗೆ ಬಲಿಯಾಗಿದ್ದಾರೆ. ಇನ್ನೂ ಅನೇಕರು ಸೋಂಕಿನ ಸಾವಿನ ದವಡೆಯಿಂದ ಪಾರಾಗಿದ್ದಾರೆಂದು ಕುಮಾರಸ್ವಾಮಿ ಹೇಳಿದ್ದಾರೆ.

ಸರಕಾರ ಮಾನವೀಯ ನೆಲೆಗಟ್ಟಿನಲ್ಲಿ ಇವರ ಸಮಸ್ಯೆಗಳನ್ನು ಬಗೆಹರಿಸಬೇಕು. ಗ್ರಾಮೀಣ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇವರನ್ನು ನಿರ್ಲಕ್ಷ್ಯ ಮಾಡುವುದು ಬೇಡ. ಅವರ ಗೌರವ ಧನ ಹೆಚ್ಚಳ ಮಾಡುವುದರ ಜತೆಗೆ, ಎನ್‌‌ಪಿಎಸ್‌ ವಂಚಿತರಾಗಿ ನಿವೃತ್ತಿಯಾದ ಎಲ್ಲರಿಗೂ ಪರಿಹಾರ ನೀಡಬೇಕು. ಅದಕ್ಕೆ ಅಗತ್ಯವಾದ 339.49 ಲಕ್ಷ ರೂ.ಗಳನ್ನು ಬಜೆಟ್‌‌ನಲ್ಲಿ ತೆಗೆದಿರಿಸಬೇಕು ಎಂದು ಅವರು ಸರಕಾರವನ್ನು ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ: ಮಕ್ಕಳು, ಗರ್ಭಿಣಿಯರಿಗಾಗಿ ನಿತ್ಯ 18 ಕಿಮೀ ಸಂಚರಿಸುವ ಅಂಗನವಾಡಿ ಕಾರ್ಯಕರ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...