Homeಕರ್ನಾಟಕಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ ಇಂಡಿಯಾ ಮೈತ್ರಿಕೂಟದ 10 ಪಕ್ಷಗಳ ಬೆಂಬಲ ಪಡೆಯಲು ಚರ್ಚೆ; ಡಿಕೆ ಶಿವಕುಮಾರ್‌

ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ ಇಂಡಿಯಾ ಮೈತ್ರಿಕೂಟದ 10 ಪಕ್ಷಗಳ ಬೆಂಬಲ ಪಡೆಯಲು ಚರ್ಚೆ; ಡಿಕೆ ಶಿವಕುಮಾರ್‌

- Advertisement -
- Advertisement -

ಲೋಕಸಭೆ ಚುನಾವಣೆ ಹಿನ್ನೆಲೆ ಇಂಡಿಯಾ ಬಣದ ಕರ್ನಾಟಕದಲ್ಲಿ ಅಸ್ತಿತ್ವದಲ್ಲಿರುವ 10 ರಾಜಕೀಯ ಪಕ್ಷಗಳ ಬೆಂಬಲ ಪಡೆಯಲು ಚರ್ಚೆ ನಡೆಯುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷರು ಮತ್ತು ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇಂಡಿಯಾ ಮೈತ್ರಿ ಪಕ್ಷಗಳ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ನಾವು ಕರ್ನಾಟಕದಲ್ಲಿ ಇಂಡಿಯಾ ಬಣದ 10 ಪಕ್ಷಗಳ ಬೆಂಬಲದ ಬಗ್ಗೆ ಚರ್ಚಿಸುತ್ತಿದ್ದೇವೆ, ಅವರು ಎಷ್ಟು ಮತಗಳನ್ನು ತರುತ್ತಾರೆ ಎಂಬುವುದು ಮುಖ್ಯವಲ್ಲ. ಮಿತ್ರ ಪಕ್ಷಗಳ ತತ್ವ, ಸಿದ್ಧಾಂತ, ಬದ್ದತೆ ಮುಖ್ಯ. ನಾವೆಲ್ಲ ಈ ಹಿಂದೆ ಅನೇಕ ಚುನಾವಣೆಗಳನ್ನು ಬೇರೆ, ಬೇರೆಯಾಗಿ ಎದುರಿಸಿದ್ದೇವೆ. ಆದರೆ, ಇಂದು ಪ್ರಜಾಪ್ರಭುತ್ವದ ಉಳಿವಿಗೆ ಒಂದಾಗಿದ್ದೇವೆ ಎಂದು ಹೇಳಿದ್ದಾರೆ.

ತುಮಕೂರಿನಲ್ಲಿ 2019ರ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ಸ್ಪರ್ಧಿಸಿದ್ದವು, ಸಿಪಿಐ ಪಕ್ಷವು 17,000 ಮತಗಳನ್ನು ಗಳಿಸಿತು ಮತ್ತು ದೇವೇಗೌಡರು ಕೇವಲ 12,000 ಮತದಾನದ ಅಂತರದಿಂದ ಚುನಾವಣೆಯಲ್ಲಿ ಸೋತರು. 2024ರ ಚುನಾವಣೆಯಲ್ಲಿ ಅಂತಹ ಪರಿಸ್ಥಿತಿ ನಮಗೆ ಬೇಕಾಗಿಲ್ಲ. ಆದ್ದರಿಂದ, ನಮಗೆ ಎಲ್ಲಾ ಮೈತ್ರಿ ಪಕ್ಷಗಳ ಜೊತೆ ಮಾತುಕತೆ ನಡೆಸುತ್ತಿದ್ದೇವೆ. ಒಗ್ಗಟ್ಟಿನಿಂದ ಕೆಲಸ ಮಾಡಲು, ನಾವು ಈ ಬಗ್ಗೆ ಚರ್ಚಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕರ ಮೇಲೆ ಬಿಜೆಪಿ ಅನಗತ್ಯ ಆರೋಪಗಳನ್ನು ಮಾಡುತ್ತಿದೆ. ಈ ಕ್ರಮವನ್ನು ನಾವು ಒಂದೇ ಧ್ವನಿಯಲ್ಲಿ ಖಂಡಿಸುತ್ತೇವೆ, ಚುನಾವಣಾ ಬಾಂಡ್‌ಗಳ ಪ್ರಕರಣದಲ್ಲಿ ಬಿಜೆಪಿ ಸ್ಪಷ್ಟ ಪ್ರತಿಕ್ರಿಯೆ ನೀಡುತ್ತಿಲ್ಲ, ಅವರು ಎಡಪಕ್ಷಗಳಿಗೆ 11 ಕೋಟಿ ರೂ.ಗೆ ನೋಟಿಸ್ ನೀಡಿದ್ದಾರೆ, ಈ ವಿಷಯಗಳ ಬಗ್ಗೆ ಪ್ರಧಾನಿ ಮೋದಿ ದೇಶದ ಜನರಿಗೆ ಉತ್ತರಿಸಬೇಕು ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ನಾವು ಇಂಡಿಯಾ ಬ್ಲಾಕ್ ಪಕ್ಷಗಳ ಸಮನ್ವಯ ಸಮಿತಿಯನ್ನು ರಚಿಸುತ್ತೇವೆ. ಎಲ್ಲಾ ಮೈತ್ರಿ ಪಾಲುದಾರರು ನಮಗೆ ಬೆಂಬಲ ಪತ್ರವನ್ನು ನೀಡಿದ್ದಾರೆ ಎಂದು ಡಿಕೆ ಶಿವಕುಮಾರ್‌ ಅವರು ಹೇಳಿದ್ದಾರೆ.

‘ಇಂಡಿಯಾ’ ಒಕ್ಕೂಟದಿಂದ ಕಾಂಗ್ರೆಸ್‌ಗೆ ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲೂ ಅನುಕೂಲವಾಗಲಿದೆ. ರಾಜಕಾರಣದಲ್ಲಿ 49 ಎಂದರೆ ಸೊನ್ನೆ, 51 ಎಂದರೆ ನೂರು ಎಂದರ್ಥ. ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ಧ್ರುವನಾರಾಯಣ್ 1 ಮತದಿಂದ ಗೆದ್ದಿದ್ದರು. ದಿನೇಶ್ ಗುಂಡೂರಾವ್ ಅಲ್ಪ ಮತಗಳ ಅಂತರದಲ್ಲೇ ಗೆದ್ದರು. ಸೌಮ್ಯಾ ರೆಡ್ಡಿ 16 ಮತಗಳಿಂದ ಸೋತರು, ಹೀಗಾಗಿ ಒಂದೊಂದು ಮತವೂ ಮುಖ್ಯ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಮೈತ್ರಿಯಾಗಿ ಸ್ಪರ್ಧಿಸುತ್ತಿದ್ದರೆ, ಕಾಂಗ್ರೆಸ್‌ ಏಕಾಂಗಿಯಾಗಿ ಸ್ಪರ್ಧೆಯನ್ನು ಎದುರಿಸುತ್ತಿದೆ. ಈ ಮಧ್ಯೆ ಕಾಂಗ್ರೆಸ್‌ ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಸಣ್ಣ ಸಣ್ಣ ಪಕ್ಷಗಳ ಬೆಂಬಲವನ್ನು ಕೂಡ ಪಡೆಯಲು ಮುಂದಾಗಿದೆ. ಮತ ವಿಭಜನೆಯನ್ನು ತಡೆಗಟ್ಟಲು ಮಹತ್ವದ ತಂತ್ರವನ್ನು ರೂಪಿಸುತ್ತಿದೆ.

ಇದನ್ನು ಓದಿ: ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬಿಗ್‌ ಶಾಕ್: ಸಂಸದ ಉನ್ಮೇಶ್ ಪಾಟೀಲ್ ಶಿವಸೇನೆಗೆ(ಉದ್ಧವ್‌ ಬಣ) ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...