Homeಕರ್ನಾಟಕದಿಶಾ ಬಂಧನ ಕನ್ನಡಿಗರಿಗೆ ಮಾಡಿರುವ ಅಪಮಾನ! ಜಗತ್ತಿನ ಮಕ್ಕಳೆದುರು ತಲೆತಗ್ಗಿಸಿದ ಭಾರತ!

ದಿಶಾ ಬಂಧನ ಕನ್ನಡಿಗರಿಗೆ ಮಾಡಿರುವ ಅಪಮಾನ! ಜಗತ್ತಿನ ಮಕ್ಕಳೆದುರು ತಲೆತಗ್ಗಿಸಿದ ಭಾರತ!

- Advertisement -
- Advertisement -

ಟೂಲ್ ಕಿಟ್ ಕೇಸ್‌ನಲ್ಲಿ ದಿಶಾ ರವಿ ಎಂಬ 21 ವರ್ಷ ವಯಸ್ಸಿನ ಹೋರಾಟಗಾರ್ತಿಯನ್ನು ದೆಹಲಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿರೋದು ಪ್ರಜಾಪ್ರಭುತ್ವದ ಕಗ್ಗೊಲೆ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಗೆ ಮಾಡಿರುವ ಅವಮಾನವಾಗಿದೆ.

 

ದೆಹಲಿ ಪೊಲೀಸರು ನೇರವಾಗಿ ಬೆಂಗಳೂರಿಗೆ “ದಾಳಿ” ಮಾಡಿ ಕನ್ನಡಿಗ ಹೋರಾಟಗಾರ್ತಿಯನ್ನು ಬಂಧಿಸಿದ್ದು ಕನ್ನಡಿಗರಿಗೆ ಮಾಡಿದ ಅಪಮಾನ. ಬೆಂಗಳೂರು ನಗರ ಪೊಲೀಸರಿಗೆ ಮಾಹಿತಿಯನ್ನೇ ನೀಡದೆ ದಿಶಾ ಮನೆಗೆ ದಾಳಿ ಮಾಡಿ, ಗಂಟೆಗಟ್ಟಲೆ ವಿಚಾರಣೆ ನಡೆಸಿ ಬಂಧಿಸಿರೋದು ಒಕ್ಕೂಟ ವ್ಯವಸ್ಥೆಗೆ ಅವಮಾನವಲ್ಲದೆ ಮತ್ತೇನು?
ಪ್ರತೀ ರಾಜ್ಯಗಳು ತನ್ನದೇ ಆದ ಸ್ವತಂತ್ರ ಪೊಲೀಸ್ ಬಲವನ್ನು ಹೊಂದಿದೆ. ರಾಜ್ಯದ ಆಗುಹೋಗುಗಳ ಮೇಲೆ ಕೇಂದ್ರ ಸರ್ಕಾರದ ಅಧೀನದಲ್ಲಿರುವ ಪೊಲೀಸರು ಹಸ್ತಕ್ಷೇಪ ಮಾಡುವಂತಿಲ್ಲ. ದೆಹಲಿ ಪೊಲೀಸರು ಮಾತ್ರ ಕೇಂದ್ರ ಗೃಹ ಇಲಾಖೆಯ ಅಧೀನದಲ್ಲಿ ಬರುತ್ತದೆ. ಕೇಂದ್ರ ಗೃಹ ಇಲಾಖೆಯ ಅಧೀನದಲ್ಲಿರುವ ಪೊಲೀಸರು ಎಂಬ ಕಾರಣಕ್ಕೆ ಬೇಕುಬೇಕಾದ ರಾಜ್ಯಗಳಲ್ಲಿ ಅವರು ದಾಳಿ ನಡೆಸುವಂತಿಲ್ಲ. ಇಂತಹ ಉದ್ಧಟತನಗಳು ದಕ್ಷಿಣ ಭಾರತದ ರಾಜ್ಯಗಳ ಮೇಲೆ ಕೇಂದ್ರ ನಡೆಸುವ ದಬ್ಬಾಳಿಕೆಯನ್ನು ಸೂಚಿಸುತ್ತದೆ.

ಜಾಗತಿಕ ತಾಪಮಾನದ ವಿಚಾರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೋರಾಟ ನಡೆಸುತ್ತಿರುವ ದಿಶಾ ರವಿ ಕನ್ನಡಿಗರ ಹೆಮ್ಮೆ. ಸ್ವೀಡನ್‌ನ ಗ್ರೆಟಾ ಥನ್‌ಬರ್ಗ್ ಮತ್ತು ಬೆಂಗಳೂರಿನ ದಿಶಾ ರವಿ ಹೋರಾಟದ ಸಹಪಯಣಿಗರು. ಆದರೆ ಗ್ರೆಟಾ ಥನ್‌ಬರ್ಗ್ ಅವರನ್ನು ಅಲ್ಲಿನ ಸರ್ಕಾರ ನಡೆಸಿಕೊಂಡ ರೀತಿಗೂ, ದಿಶಾ ರವಿಯವರನ್ನು ಇಲ್ಲಿನ ನಮ್ಮ ಸರ್ಕಾರ ನಡೆಸಿಕೊಂಡ ರೀತಿಯನ್ನೂ ನಾವು ಆತ್ಮವಿಮಶೆ ಮಾಡಿಕೊಳ್ಳಬೇಕಿದೆ. ದಿಶಾ ಮತ್ತು ಗ್ರೆಟಾ ಹೆಚ್ಚು ಕಡಿಮೆ ಒಂದೇ ವಯಸ್ಸಿನವರು. ಒಂದೇ ಗುರಿ, ಉದ್ದೇಶ ಹೊಂದಿರುವವರು. ಗ್ರೆಟಾ ಅಲ್ಲಿನ ಸರ್ಕಾರದ ಆತಿಥ್ಯದಲ್ಲಿದ್ದರೆ, ನಮ್ಮ ದಿಶಾ ಪೊಲೀಸ್ ಆತಿಥ್ಯದಲ್ಲಿದ್ದಾರೆ.

ಗ್ರೆಟಾ ಥನ್‌ಬರ್ಗ್ ತನ್ನ ನೇರ ಮಾತಿನ ವಿಧಾನಕ್ಕೆ ಹೆಸರುವಾಸಿಯಾಗಿದ್ದಾಳೆ. ಸಾಮಾಜಿಕ ಜಾಲತಾಣಗಳಲ್ಲಿ, ಸಾರ್ವಜನಿಕವಾಗಿ ಸಭೆಗಳಲ್ಲಿ ಹವಾಮಾನ ಬಿಕ್ಕಟ್ಟು ಕುರಿತು ಅವಳು ವಿವರಿಸಿ, ಪರಿಹಾರ ಕ್ರಮಗಳನ್ನು ಸರ್ಕಾರದ ಮುಂದಿಟ್ಟು ಒತ್ತಾಯಿಸುತ್ತಾಳೆ. ಸರ್ಕಾರ ಕ್ರಮ ಕೈಗೊಳ್ಳದೇ ಹೋದಾಗ ಪ್ರತಿಭಟಿಸಿದ್ದಾಳೆ. ಶಾಲೆಯಲ್ಲೆ ಗ್ರೆಟಾ ಮುಷ್ಕರ ಹೂಡಿದ್ದೂ ಇದೆ, ಸಂಸತ್ತಿಗೆ ಮುತ್ತಿಗೆ ಹಾಕಿದ್ದೂ ಇದೆ. ನಮ್ಮ ದಿಶಾ ಕೂಡ ತಮ್ಮ ಚೌಕಟ್ಟಿನಲ್ಲಿ ಕೆಲಸ ಮಾಡಿದ್ದಾರೆ. ಆದರೆ ಗ್ರೆಟಾ ಥನ್‌ಬರ್ಗ್‌ಗೆ ಸ್ವೀಡನ್‌ನಲ್ಲಿ ಗೋಲ್ಡೆನ್ ಕಮೆರಾ ಪ್ರಶಸ್ತಿ (2019); ಫ್ರಿಟ್ ಆರ್ಡ್ ಪ್ರಶಸ್ತಿ (2019); ರಾಚೆಲ್ ಕಾರ್ಸನ್ ಪ್ರಶಸ್ತಿ (2019); ಆತ್ಮಸಾಕ್ಷಿಯ ರಾಯಭಾರಿ ಪ್ರಶಸ್ತಿ (2019); ರಾಯಲ್ ಸ್ಕಾಟಿಷ್ ಜಿಯಾಗ್ರಫಿಕಲ್ ಸೊಸೈಟಿಯ ಫೆಲೋ (FRSGS -Fellow of the Royal Scottish Geographical Society); ಗೆಡ್ಡೆಸ್ ಎನ್ವಿರಾನ್ಮೆಂಟ್ ಮೆಡಲ್ (2019); ಜೀವನೋಪಾಯ ಹಕ್ಕು ಪ್ರಶಸ್ತಿ (2019); ಅಂತರರಾಷ್ಟ್ರೀಯ ಮಕ್ಕಳ ಶಾಂತಿ ಪ್ರಶಸ್ತಿ (2019); ವರ್ಷದ ವ್ಯಕ್ತಿ (2019) ಹೀಗೆ ಹಲವು ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ. ಆದರೆ ನಾವು ಅದೇ ಆಂದೋಲನದ ಕನ್ನಡಿಗ ಹೋರಾಟಗಾರ್ತಿಯನ್ನು ನಡೆಸಿಕೊಂಡ ರೀತಿ ಯಾವ ಬಗೆಯದು? ಇಡೀ ವಿಶ್ವ ನಮ್ಮತ್ತ ನೋಡುತ್ತಿದೆ.

2019 ರ ’ಟೈಮ್ ನಿಯತಕಾಲಿಕೆ’ಯು ಗ್ರೆಟಾ ಥನ್‌ಬರ್ಗ್‌ಅನ್ನು 100 ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರು ಎಂದು ಹೆಸರಿಸಿದೆ. ಆದರೆ ಗ್ರೆಟಾ ಥನ್‌ಬರ್ಗ್‌ಗೆ ಯಾವ ರೀತಿಯಲ್ಲೂ ಕಮ್ಮಿ ಇಲ್ಲದ ಜಾಗತಿಕ ತಾಪಮಾನ ವಿಚಾರದ ಹೋರಾಟಗಾರ್ತಿ ದಿಶಾಳನ್ನು ಇಲ್ಲಿನ ಮಾಧ್ಯಮಗಳು ಭಯೋತ್ಪಾದಕಿಯೆಂದೂ, ದೇಶದ್ರೋಹಿಯೆಂದೂ ಚಿತ್ರಿಸುತ್ತಿದೆ. ರಾಷ್ಟ್ರೀಯ ಮಾಧ್ಯಮಗಳು ಮಣ್ಣು ತಿನ್ನಲಿ. ಕನಿಷ್ಟ ಕನ್ನಡ ಮಾಧ್ಯಮಗಳಾದರೂ ದಿಶಾ ನಮ್ಮ ಸಾಕ್ಷಿ ಪ್ರಜ್ಞೆ ಎಂಬುದನ್ನು ಮನಗಾಣಬೇಕಿತ್ತು. ಪ್ರಶಸ್ತಿ ಘೋಷಣೆ ಬಿಡಿ, ಕನಿಷ್ಟ ಮೌನವಾಗಿದ್ದರೂ ಸಾಕಿತ್ತು. ದಿಶಾಳನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಕನ್ನಡಿಗರ ಧ್ವನಿ ಎಂದು ಹೆಮ್ಮೆಪಟ್ಟುಕೊಳ್ಳುವ ಕನ್ನಡ ಮಾಧ್ಯಮವನ್ನು ನಿರೀಕ್ಷಿಸುವುದು ಮೂರ್ಖತನವಾಗುತ್ತದೆ.
ದಿಶಾಳ ಸಹವರ್ತಿ ಗ್ರೆಟಾ ಥನ್‌ಬರ್ಗ್ ಅವರನ್ನು 2019ರ ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಯಿತು. ನಾವು ದಿಶಾಳಿಗೆ ದೇಶದ್ರೋಹಿ ಪಟ್ಟ ಕಟ್ಟಿ ದೇಶದಲ್ಲಿ ಅಶಾಂತಿ ಸೃಷ್ಟಿಸುವ ಪಿತೂರಿ ಎಂದು ಸೆಕ್ಷನ್ ಜಡಿದು ಜೈಲಿಗಟ್ಟಿದ್ದೇವೆ.

ಭಾರತ ವಿಶ್ವಗುರು ಆಗುತ್ತದೆ ಎಂದು ಬಲಪಂಥೀಯರು ಭಾಷಣ ಮಾಡಿದ್ದನ್ನು ಕೇಳಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಭಾರತವೇ ವಿಶ್ವಗುರುವಾಗಿತ್ತು. ಹಲವು ಭಾಷೆ, ಹಲವು ಚಿಂತನೆ, ಹಲವು ಬಣ್ಣಗಳಿಗೆ ಈ ಹಿಂದೆ ಭಾರತದಲ್ಲಿ ಮುಕ್ತ ಸ್ವಾತಂತ್ರ್ಯ ಇತ್ತು. ಹಾಗಾಗಿಯೇ ವಿಶ್ವದ ಅತ್ಯುನ್ನತ ಪ್ರಜಾಸತ್ತಾತ್ಮಕ ದೇಶಗಳ ಸಾಲಿನಲ್ಲಿ ನಾವೂ ನಿಲ್ಲುತ್ತಿದ್ದೆವು. ಈಗ ಇಡೀ ವಿಶ್ವದಲ್ಲಿ ದಿಶಾಳ ವಿಚಾರ ಚರ್ಚೆಯಾಗುತ್ತಿದೆ. ಸರ್ಕಾರದ ವಿರುದ್ಧದ ಸಾಮಾಜಿಕ ಜಾಲತಾಣದ ಹೋರಾಟವನ್ನು ರೂಪಿಸಿದಳು ಎಂಬ ಆರೋಪ ಹೊರಿಸಿ ಯುವ ಹೋರಾಟಗಾರ್ತಿಯೊಬ್ಬಳನ್ನು ಬಂಧಿಸಿ ವಿಶ್ವದ ಮುಂದೆ ನಮ್ಮ ಸಣ್ಣತನವನ್ನು ತೋರಿಸಿದ್ದೇವೆ.

ದಿಶಾ ಮತ್ತು ಗ್ರೆಟಾ ಒಟ್ಟಾಗಿ “ಭವಿಷ್ಯಕ್ಕಾಗಿ ಶುಕ್ರವಾರ” ಎಂಬ ಹೆಸರಿನಲ್ಲಿ “ಶಾಲಾ ಹವಾಮಾನ ಮುಷ್ಕರ ಆಂದೋಲನವನ್ನು” ಸಂಘಟಿಸುತ್ತಿದ್ದರು. 2019ರಲ್ಲಿ ಒಂದು ದಶಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಒಳಗೊಂಡ ಹಲವು ಪ್ರತಿಭಟನೆಗಳು ವಿಶ್ವದೆಲ್ಲೆಡೆ ನಡೆದವು. ಜಗತ್ತಿನಾದ್ಯಂತ ವಿದ್ಯಾರ್ಥಿಗಳನ್ನು ಸಂಘಟಿಸಿದ್ದ ಯುವ ಹೋರಾಟಗಾರ್ತಿ ದಿಶಾ ನಮ್ಮವಳು, ನಮ್ಮ ಕನ್ನಡಿಗಳು ಎಂಬುದು ನಮ್ಮ ಹೆಮ್ಮೆ. ಈಗ ನಾವು ದಿಶಾ ಬಿಡುಗಡೆಗೆ ಕನ್ನಡಿಗರಾಗಿ ಹೋರಾಟ ನಡೆಸಬೇಕಿದೆ. ಇಲ್ಲದೇ ಇದ್ದಲ್ಲಿ ಕನ್ನಡಿಗರು ವಿಶ್ವದ ಮಕ್ಕಳ ಎದುರು ತಲೆತಗ್ಗಿಸಿ ನಿಲ್ಲಬೇಕಾಗುತ್ತದೆ.

ಹರೀಶ್ ಕುಮಾರ್ ಬಿ
(ಹೋರಾಟಗಾರರು ಮತ್ತು ಕರ್ನಾಟಕ ರಣಧೀರ ಪಡೆ ಸಂಘಟನೆಯ ಮುಖಂಡರು. ನೆಲ, ಭಾಷೆ ಮತ್ತು ಒಕ್ಕೂಟ ವ್ಯವಸ್ಥೆಯ ಉಳಿವಿಗಾಗಿ ಹಲವು ಹೋರಾಟಗಳನ್ನು ರೂಪಿಸಿ ಮುನ್ನಡೆಸುತ್ತಿದ್ದಾರೆ)


ಇದನ್ನೂ ಓದಿ: ದಿಶಾ ಅವರಂತೆ ಎಲ್ಲರೂ ಸುಳಿಯಲ್ಲಿದ್ದಾರೆ! – ಲಿಯೋ ಸಾಲ್ಡಾನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...