Homeಕರ್ನಾಟಕದಿಶಾ ಬಂಧನ ಕನ್ನಡಿಗರಿಗೆ ಮಾಡಿರುವ ಅಪಮಾನ! ಜಗತ್ತಿನ ಮಕ್ಕಳೆದುರು ತಲೆತಗ್ಗಿಸಿದ ಭಾರತ!

ದಿಶಾ ಬಂಧನ ಕನ್ನಡಿಗರಿಗೆ ಮಾಡಿರುವ ಅಪಮಾನ! ಜಗತ್ತಿನ ಮಕ್ಕಳೆದುರು ತಲೆತಗ್ಗಿಸಿದ ಭಾರತ!

- Advertisement -
- Advertisement -

ಟೂಲ್ ಕಿಟ್ ಕೇಸ್‌ನಲ್ಲಿ ದಿಶಾ ರವಿ ಎಂಬ 21 ವರ್ಷ ವಯಸ್ಸಿನ ಹೋರಾಟಗಾರ್ತಿಯನ್ನು ದೆಹಲಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿರೋದು ಪ್ರಜಾಪ್ರಭುತ್ವದ ಕಗ್ಗೊಲೆ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಗೆ ಮಾಡಿರುವ ಅವಮಾನವಾಗಿದೆ.

 

ದೆಹಲಿ ಪೊಲೀಸರು ನೇರವಾಗಿ ಬೆಂಗಳೂರಿಗೆ “ದಾಳಿ” ಮಾಡಿ ಕನ್ನಡಿಗ ಹೋರಾಟಗಾರ್ತಿಯನ್ನು ಬಂಧಿಸಿದ್ದು ಕನ್ನಡಿಗರಿಗೆ ಮಾಡಿದ ಅಪಮಾನ. ಬೆಂಗಳೂರು ನಗರ ಪೊಲೀಸರಿಗೆ ಮಾಹಿತಿಯನ್ನೇ ನೀಡದೆ ದಿಶಾ ಮನೆಗೆ ದಾಳಿ ಮಾಡಿ, ಗಂಟೆಗಟ್ಟಲೆ ವಿಚಾರಣೆ ನಡೆಸಿ ಬಂಧಿಸಿರೋದು ಒಕ್ಕೂಟ ವ್ಯವಸ್ಥೆಗೆ ಅವಮಾನವಲ್ಲದೆ ಮತ್ತೇನು?
ಪ್ರತೀ ರಾಜ್ಯಗಳು ತನ್ನದೇ ಆದ ಸ್ವತಂತ್ರ ಪೊಲೀಸ್ ಬಲವನ್ನು ಹೊಂದಿದೆ. ರಾಜ್ಯದ ಆಗುಹೋಗುಗಳ ಮೇಲೆ ಕೇಂದ್ರ ಸರ್ಕಾರದ ಅಧೀನದಲ್ಲಿರುವ ಪೊಲೀಸರು ಹಸ್ತಕ್ಷೇಪ ಮಾಡುವಂತಿಲ್ಲ. ದೆಹಲಿ ಪೊಲೀಸರು ಮಾತ್ರ ಕೇಂದ್ರ ಗೃಹ ಇಲಾಖೆಯ ಅಧೀನದಲ್ಲಿ ಬರುತ್ತದೆ. ಕೇಂದ್ರ ಗೃಹ ಇಲಾಖೆಯ ಅಧೀನದಲ್ಲಿರುವ ಪೊಲೀಸರು ಎಂಬ ಕಾರಣಕ್ಕೆ ಬೇಕುಬೇಕಾದ ರಾಜ್ಯಗಳಲ್ಲಿ ಅವರು ದಾಳಿ ನಡೆಸುವಂತಿಲ್ಲ. ಇಂತಹ ಉದ್ಧಟತನಗಳು ದಕ್ಷಿಣ ಭಾರತದ ರಾಜ್ಯಗಳ ಮೇಲೆ ಕೇಂದ್ರ ನಡೆಸುವ ದಬ್ಬಾಳಿಕೆಯನ್ನು ಸೂಚಿಸುತ್ತದೆ.

ಜಾಗತಿಕ ತಾಪಮಾನದ ವಿಚಾರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೋರಾಟ ನಡೆಸುತ್ತಿರುವ ದಿಶಾ ರವಿ ಕನ್ನಡಿಗರ ಹೆಮ್ಮೆ. ಸ್ವೀಡನ್‌ನ ಗ್ರೆಟಾ ಥನ್‌ಬರ್ಗ್ ಮತ್ತು ಬೆಂಗಳೂರಿನ ದಿಶಾ ರವಿ ಹೋರಾಟದ ಸಹಪಯಣಿಗರು. ಆದರೆ ಗ್ರೆಟಾ ಥನ್‌ಬರ್ಗ್ ಅವರನ್ನು ಅಲ್ಲಿನ ಸರ್ಕಾರ ನಡೆಸಿಕೊಂಡ ರೀತಿಗೂ, ದಿಶಾ ರವಿಯವರನ್ನು ಇಲ್ಲಿನ ನಮ್ಮ ಸರ್ಕಾರ ನಡೆಸಿಕೊಂಡ ರೀತಿಯನ್ನೂ ನಾವು ಆತ್ಮವಿಮಶೆ ಮಾಡಿಕೊಳ್ಳಬೇಕಿದೆ. ದಿಶಾ ಮತ್ತು ಗ್ರೆಟಾ ಹೆಚ್ಚು ಕಡಿಮೆ ಒಂದೇ ವಯಸ್ಸಿನವರು. ಒಂದೇ ಗುರಿ, ಉದ್ದೇಶ ಹೊಂದಿರುವವರು. ಗ್ರೆಟಾ ಅಲ್ಲಿನ ಸರ್ಕಾರದ ಆತಿಥ್ಯದಲ್ಲಿದ್ದರೆ, ನಮ್ಮ ದಿಶಾ ಪೊಲೀಸ್ ಆತಿಥ್ಯದಲ್ಲಿದ್ದಾರೆ.

ಗ್ರೆಟಾ ಥನ್‌ಬರ್ಗ್ ತನ್ನ ನೇರ ಮಾತಿನ ವಿಧಾನಕ್ಕೆ ಹೆಸರುವಾಸಿಯಾಗಿದ್ದಾಳೆ. ಸಾಮಾಜಿಕ ಜಾಲತಾಣಗಳಲ್ಲಿ, ಸಾರ್ವಜನಿಕವಾಗಿ ಸಭೆಗಳಲ್ಲಿ ಹವಾಮಾನ ಬಿಕ್ಕಟ್ಟು ಕುರಿತು ಅವಳು ವಿವರಿಸಿ, ಪರಿಹಾರ ಕ್ರಮಗಳನ್ನು ಸರ್ಕಾರದ ಮುಂದಿಟ್ಟು ಒತ್ತಾಯಿಸುತ್ತಾಳೆ. ಸರ್ಕಾರ ಕ್ರಮ ಕೈಗೊಳ್ಳದೇ ಹೋದಾಗ ಪ್ರತಿಭಟಿಸಿದ್ದಾಳೆ. ಶಾಲೆಯಲ್ಲೆ ಗ್ರೆಟಾ ಮುಷ್ಕರ ಹೂಡಿದ್ದೂ ಇದೆ, ಸಂಸತ್ತಿಗೆ ಮುತ್ತಿಗೆ ಹಾಕಿದ್ದೂ ಇದೆ. ನಮ್ಮ ದಿಶಾ ಕೂಡ ತಮ್ಮ ಚೌಕಟ್ಟಿನಲ್ಲಿ ಕೆಲಸ ಮಾಡಿದ್ದಾರೆ. ಆದರೆ ಗ್ರೆಟಾ ಥನ್‌ಬರ್ಗ್‌ಗೆ ಸ್ವೀಡನ್‌ನಲ್ಲಿ ಗೋಲ್ಡೆನ್ ಕಮೆರಾ ಪ್ರಶಸ್ತಿ (2019); ಫ್ರಿಟ್ ಆರ್ಡ್ ಪ್ರಶಸ್ತಿ (2019); ರಾಚೆಲ್ ಕಾರ್ಸನ್ ಪ್ರಶಸ್ತಿ (2019); ಆತ್ಮಸಾಕ್ಷಿಯ ರಾಯಭಾರಿ ಪ್ರಶಸ್ತಿ (2019); ರಾಯಲ್ ಸ್ಕಾಟಿಷ್ ಜಿಯಾಗ್ರಫಿಕಲ್ ಸೊಸೈಟಿಯ ಫೆಲೋ (FRSGS -Fellow of the Royal Scottish Geographical Society); ಗೆಡ್ಡೆಸ್ ಎನ್ವಿರಾನ್ಮೆಂಟ್ ಮೆಡಲ್ (2019); ಜೀವನೋಪಾಯ ಹಕ್ಕು ಪ್ರಶಸ್ತಿ (2019); ಅಂತರರಾಷ್ಟ್ರೀಯ ಮಕ್ಕಳ ಶಾಂತಿ ಪ್ರಶಸ್ತಿ (2019); ವರ್ಷದ ವ್ಯಕ್ತಿ (2019) ಹೀಗೆ ಹಲವು ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ. ಆದರೆ ನಾವು ಅದೇ ಆಂದೋಲನದ ಕನ್ನಡಿಗ ಹೋರಾಟಗಾರ್ತಿಯನ್ನು ನಡೆಸಿಕೊಂಡ ರೀತಿ ಯಾವ ಬಗೆಯದು? ಇಡೀ ವಿಶ್ವ ನಮ್ಮತ್ತ ನೋಡುತ್ತಿದೆ.

2019 ರ ’ಟೈಮ್ ನಿಯತಕಾಲಿಕೆ’ಯು ಗ್ರೆಟಾ ಥನ್‌ಬರ್ಗ್‌ಅನ್ನು 100 ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರು ಎಂದು ಹೆಸರಿಸಿದೆ. ಆದರೆ ಗ್ರೆಟಾ ಥನ್‌ಬರ್ಗ್‌ಗೆ ಯಾವ ರೀತಿಯಲ್ಲೂ ಕಮ್ಮಿ ಇಲ್ಲದ ಜಾಗತಿಕ ತಾಪಮಾನ ವಿಚಾರದ ಹೋರಾಟಗಾರ್ತಿ ದಿಶಾಳನ್ನು ಇಲ್ಲಿನ ಮಾಧ್ಯಮಗಳು ಭಯೋತ್ಪಾದಕಿಯೆಂದೂ, ದೇಶದ್ರೋಹಿಯೆಂದೂ ಚಿತ್ರಿಸುತ್ತಿದೆ. ರಾಷ್ಟ್ರೀಯ ಮಾಧ್ಯಮಗಳು ಮಣ್ಣು ತಿನ್ನಲಿ. ಕನಿಷ್ಟ ಕನ್ನಡ ಮಾಧ್ಯಮಗಳಾದರೂ ದಿಶಾ ನಮ್ಮ ಸಾಕ್ಷಿ ಪ್ರಜ್ಞೆ ಎಂಬುದನ್ನು ಮನಗಾಣಬೇಕಿತ್ತು. ಪ್ರಶಸ್ತಿ ಘೋಷಣೆ ಬಿಡಿ, ಕನಿಷ್ಟ ಮೌನವಾಗಿದ್ದರೂ ಸಾಕಿತ್ತು. ದಿಶಾಳನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಕನ್ನಡಿಗರ ಧ್ವನಿ ಎಂದು ಹೆಮ್ಮೆಪಟ್ಟುಕೊಳ್ಳುವ ಕನ್ನಡ ಮಾಧ್ಯಮವನ್ನು ನಿರೀಕ್ಷಿಸುವುದು ಮೂರ್ಖತನವಾಗುತ್ತದೆ.
ದಿಶಾಳ ಸಹವರ್ತಿ ಗ್ರೆಟಾ ಥನ್‌ಬರ್ಗ್ ಅವರನ್ನು 2019ರ ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಯಿತು. ನಾವು ದಿಶಾಳಿಗೆ ದೇಶದ್ರೋಹಿ ಪಟ್ಟ ಕಟ್ಟಿ ದೇಶದಲ್ಲಿ ಅಶಾಂತಿ ಸೃಷ್ಟಿಸುವ ಪಿತೂರಿ ಎಂದು ಸೆಕ್ಷನ್ ಜಡಿದು ಜೈಲಿಗಟ್ಟಿದ್ದೇವೆ.

ಭಾರತ ವಿಶ್ವಗುರು ಆಗುತ್ತದೆ ಎಂದು ಬಲಪಂಥೀಯರು ಭಾಷಣ ಮಾಡಿದ್ದನ್ನು ಕೇಳಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಭಾರತವೇ ವಿಶ್ವಗುರುವಾಗಿತ್ತು. ಹಲವು ಭಾಷೆ, ಹಲವು ಚಿಂತನೆ, ಹಲವು ಬಣ್ಣಗಳಿಗೆ ಈ ಹಿಂದೆ ಭಾರತದಲ್ಲಿ ಮುಕ್ತ ಸ್ವಾತಂತ್ರ್ಯ ಇತ್ತು. ಹಾಗಾಗಿಯೇ ವಿಶ್ವದ ಅತ್ಯುನ್ನತ ಪ್ರಜಾಸತ್ತಾತ್ಮಕ ದೇಶಗಳ ಸಾಲಿನಲ್ಲಿ ನಾವೂ ನಿಲ್ಲುತ್ತಿದ್ದೆವು. ಈಗ ಇಡೀ ವಿಶ್ವದಲ್ಲಿ ದಿಶಾಳ ವಿಚಾರ ಚರ್ಚೆಯಾಗುತ್ತಿದೆ. ಸರ್ಕಾರದ ವಿರುದ್ಧದ ಸಾಮಾಜಿಕ ಜಾಲತಾಣದ ಹೋರಾಟವನ್ನು ರೂಪಿಸಿದಳು ಎಂಬ ಆರೋಪ ಹೊರಿಸಿ ಯುವ ಹೋರಾಟಗಾರ್ತಿಯೊಬ್ಬಳನ್ನು ಬಂಧಿಸಿ ವಿಶ್ವದ ಮುಂದೆ ನಮ್ಮ ಸಣ್ಣತನವನ್ನು ತೋರಿಸಿದ್ದೇವೆ.

ದಿಶಾ ಮತ್ತು ಗ್ರೆಟಾ ಒಟ್ಟಾಗಿ “ಭವಿಷ್ಯಕ್ಕಾಗಿ ಶುಕ್ರವಾರ” ಎಂಬ ಹೆಸರಿನಲ್ಲಿ “ಶಾಲಾ ಹವಾಮಾನ ಮುಷ್ಕರ ಆಂದೋಲನವನ್ನು” ಸಂಘಟಿಸುತ್ತಿದ್ದರು. 2019ರಲ್ಲಿ ಒಂದು ದಶಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಒಳಗೊಂಡ ಹಲವು ಪ್ರತಿಭಟನೆಗಳು ವಿಶ್ವದೆಲ್ಲೆಡೆ ನಡೆದವು. ಜಗತ್ತಿನಾದ್ಯಂತ ವಿದ್ಯಾರ್ಥಿಗಳನ್ನು ಸಂಘಟಿಸಿದ್ದ ಯುವ ಹೋರಾಟಗಾರ್ತಿ ದಿಶಾ ನಮ್ಮವಳು, ನಮ್ಮ ಕನ್ನಡಿಗಳು ಎಂಬುದು ನಮ್ಮ ಹೆಮ್ಮೆ. ಈಗ ನಾವು ದಿಶಾ ಬಿಡುಗಡೆಗೆ ಕನ್ನಡಿಗರಾಗಿ ಹೋರಾಟ ನಡೆಸಬೇಕಿದೆ. ಇಲ್ಲದೇ ಇದ್ದಲ್ಲಿ ಕನ್ನಡಿಗರು ವಿಶ್ವದ ಮಕ್ಕಳ ಎದುರು ತಲೆತಗ್ಗಿಸಿ ನಿಲ್ಲಬೇಕಾಗುತ್ತದೆ.

ಹರೀಶ್ ಕುಮಾರ್ ಬಿ
(ಹೋರಾಟಗಾರರು ಮತ್ತು ಕರ್ನಾಟಕ ರಣಧೀರ ಪಡೆ ಸಂಘಟನೆಯ ಮುಖಂಡರು. ನೆಲ, ಭಾಷೆ ಮತ್ತು ಒಕ್ಕೂಟ ವ್ಯವಸ್ಥೆಯ ಉಳಿವಿಗಾಗಿ ಹಲವು ಹೋರಾಟಗಳನ್ನು ರೂಪಿಸಿ ಮುನ್ನಡೆಸುತ್ತಿದ್ದಾರೆ)


ಇದನ್ನೂ ಓದಿ: ದಿಶಾ ಅವರಂತೆ ಎಲ್ಲರೂ ಸುಳಿಯಲ್ಲಿದ್ದಾರೆ! – ಲಿಯೋ ಸಾಲ್ಡಾನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...