Homeಕರ್ನಾಟಕದಿಶಾ ಬಂಧನ ಕನ್ನಡಿಗರಿಗೆ ಮಾಡಿರುವ ಅಪಮಾನ! ಜಗತ್ತಿನ ಮಕ್ಕಳೆದುರು ತಲೆತಗ್ಗಿಸಿದ ಭಾರತ!

ದಿಶಾ ಬಂಧನ ಕನ್ನಡಿಗರಿಗೆ ಮಾಡಿರುವ ಅಪಮಾನ! ಜಗತ್ತಿನ ಮಕ್ಕಳೆದುರು ತಲೆತಗ್ಗಿಸಿದ ಭಾರತ!

- Advertisement -
- Advertisement -

ಟೂಲ್ ಕಿಟ್ ಕೇಸ್‌ನಲ್ಲಿ ದಿಶಾ ರವಿ ಎಂಬ 21 ವರ್ಷ ವಯಸ್ಸಿನ ಹೋರಾಟಗಾರ್ತಿಯನ್ನು ದೆಹಲಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿರೋದು ಪ್ರಜಾಪ್ರಭುತ್ವದ ಕಗ್ಗೊಲೆ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಗೆ ಮಾಡಿರುವ ಅವಮಾನವಾಗಿದೆ.

 

ದೆಹಲಿ ಪೊಲೀಸರು ನೇರವಾಗಿ ಬೆಂಗಳೂರಿಗೆ “ದಾಳಿ” ಮಾಡಿ ಕನ್ನಡಿಗ ಹೋರಾಟಗಾರ್ತಿಯನ್ನು ಬಂಧಿಸಿದ್ದು ಕನ್ನಡಿಗರಿಗೆ ಮಾಡಿದ ಅಪಮಾನ. ಬೆಂಗಳೂರು ನಗರ ಪೊಲೀಸರಿಗೆ ಮಾಹಿತಿಯನ್ನೇ ನೀಡದೆ ದಿಶಾ ಮನೆಗೆ ದಾಳಿ ಮಾಡಿ, ಗಂಟೆಗಟ್ಟಲೆ ವಿಚಾರಣೆ ನಡೆಸಿ ಬಂಧಿಸಿರೋದು ಒಕ್ಕೂಟ ವ್ಯವಸ್ಥೆಗೆ ಅವಮಾನವಲ್ಲದೆ ಮತ್ತೇನು?
ಪ್ರತೀ ರಾಜ್ಯಗಳು ತನ್ನದೇ ಆದ ಸ್ವತಂತ್ರ ಪೊಲೀಸ್ ಬಲವನ್ನು ಹೊಂದಿದೆ. ರಾಜ್ಯದ ಆಗುಹೋಗುಗಳ ಮೇಲೆ ಕೇಂದ್ರ ಸರ್ಕಾರದ ಅಧೀನದಲ್ಲಿರುವ ಪೊಲೀಸರು ಹಸ್ತಕ್ಷೇಪ ಮಾಡುವಂತಿಲ್ಲ. ದೆಹಲಿ ಪೊಲೀಸರು ಮಾತ್ರ ಕೇಂದ್ರ ಗೃಹ ಇಲಾಖೆಯ ಅಧೀನದಲ್ಲಿ ಬರುತ್ತದೆ. ಕೇಂದ್ರ ಗೃಹ ಇಲಾಖೆಯ ಅಧೀನದಲ್ಲಿರುವ ಪೊಲೀಸರು ಎಂಬ ಕಾರಣಕ್ಕೆ ಬೇಕುಬೇಕಾದ ರಾಜ್ಯಗಳಲ್ಲಿ ಅವರು ದಾಳಿ ನಡೆಸುವಂತಿಲ್ಲ. ಇಂತಹ ಉದ್ಧಟತನಗಳು ದಕ್ಷಿಣ ಭಾರತದ ರಾಜ್ಯಗಳ ಮೇಲೆ ಕೇಂದ್ರ ನಡೆಸುವ ದಬ್ಬಾಳಿಕೆಯನ್ನು ಸೂಚಿಸುತ್ತದೆ.

ಜಾಗತಿಕ ತಾಪಮಾನದ ವಿಚಾರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೋರಾಟ ನಡೆಸುತ್ತಿರುವ ದಿಶಾ ರವಿ ಕನ್ನಡಿಗರ ಹೆಮ್ಮೆ. ಸ್ವೀಡನ್‌ನ ಗ್ರೆಟಾ ಥನ್‌ಬರ್ಗ್ ಮತ್ತು ಬೆಂಗಳೂರಿನ ದಿಶಾ ರವಿ ಹೋರಾಟದ ಸಹಪಯಣಿಗರು. ಆದರೆ ಗ್ರೆಟಾ ಥನ್‌ಬರ್ಗ್ ಅವರನ್ನು ಅಲ್ಲಿನ ಸರ್ಕಾರ ನಡೆಸಿಕೊಂಡ ರೀತಿಗೂ, ದಿಶಾ ರವಿಯವರನ್ನು ಇಲ್ಲಿನ ನಮ್ಮ ಸರ್ಕಾರ ನಡೆಸಿಕೊಂಡ ರೀತಿಯನ್ನೂ ನಾವು ಆತ್ಮವಿಮಶೆ ಮಾಡಿಕೊಳ್ಳಬೇಕಿದೆ. ದಿಶಾ ಮತ್ತು ಗ್ರೆಟಾ ಹೆಚ್ಚು ಕಡಿಮೆ ಒಂದೇ ವಯಸ್ಸಿನವರು. ಒಂದೇ ಗುರಿ, ಉದ್ದೇಶ ಹೊಂದಿರುವವರು. ಗ್ರೆಟಾ ಅಲ್ಲಿನ ಸರ್ಕಾರದ ಆತಿಥ್ಯದಲ್ಲಿದ್ದರೆ, ನಮ್ಮ ದಿಶಾ ಪೊಲೀಸ್ ಆತಿಥ್ಯದಲ್ಲಿದ್ದಾರೆ.

ಗ್ರೆಟಾ ಥನ್‌ಬರ್ಗ್ ತನ್ನ ನೇರ ಮಾತಿನ ವಿಧಾನಕ್ಕೆ ಹೆಸರುವಾಸಿಯಾಗಿದ್ದಾಳೆ. ಸಾಮಾಜಿಕ ಜಾಲತಾಣಗಳಲ್ಲಿ, ಸಾರ್ವಜನಿಕವಾಗಿ ಸಭೆಗಳಲ್ಲಿ ಹವಾಮಾನ ಬಿಕ್ಕಟ್ಟು ಕುರಿತು ಅವಳು ವಿವರಿಸಿ, ಪರಿಹಾರ ಕ್ರಮಗಳನ್ನು ಸರ್ಕಾರದ ಮುಂದಿಟ್ಟು ಒತ್ತಾಯಿಸುತ್ತಾಳೆ. ಸರ್ಕಾರ ಕ್ರಮ ಕೈಗೊಳ್ಳದೇ ಹೋದಾಗ ಪ್ರತಿಭಟಿಸಿದ್ದಾಳೆ. ಶಾಲೆಯಲ್ಲೆ ಗ್ರೆಟಾ ಮುಷ್ಕರ ಹೂಡಿದ್ದೂ ಇದೆ, ಸಂಸತ್ತಿಗೆ ಮುತ್ತಿಗೆ ಹಾಕಿದ್ದೂ ಇದೆ. ನಮ್ಮ ದಿಶಾ ಕೂಡ ತಮ್ಮ ಚೌಕಟ್ಟಿನಲ್ಲಿ ಕೆಲಸ ಮಾಡಿದ್ದಾರೆ. ಆದರೆ ಗ್ರೆಟಾ ಥನ್‌ಬರ್ಗ್‌ಗೆ ಸ್ವೀಡನ್‌ನಲ್ಲಿ ಗೋಲ್ಡೆನ್ ಕಮೆರಾ ಪ್ರಶಸ್ತಿ (2019); ಫ್ರಿಟ್ ಆರ್ಡ್ ಪ್ರಶಸ್ತಿ (2019); ರಾಚೆಲ್ ಕಾರ್ಸನ್ ಪ್ರಶಸ್ತಿ (2019); ಆತ್ಮಸಾಕ್ಷಿಯ ರಾಯಭಾರಿ ಪ್ರಶಸ್ತಿ (2019); ರಾಯಲ್ ಸ್ಕಾಟಿಷ್ ಜಿಯಾಗ್ರಫಿಕಲ್ ಸೊಸೈಟಿಯ ಫೆಲೋ (FRSGS -Fellow of the Royal Scottish Geographical Society); ಗೆಡ್ಡೆಸ್ ಎನ್ವಿರಾನ್ಮೆಂಟ್ ಮೆಡಲ್ (2019); ಜೀವನೋಪಾಯ ಹಕ್ಕು ಪ್ರಶಸ್ತಿ (2019); ಅಂತರರಾಷ್ಟ್ರೀಯ ಮಕ್ಕಳ ಶಾಂತಿ ಪ್ರಶಸ್ತಿ (2019); ವರ್ಷದ ವ್ಯಕ್ತಿ (2019) ಹೀಗೆ ಹಲವು ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ. ಆದರೆ ನಾವು ಅದೇ ಆಂದೋಲನದ ಕನ್ನಡಿಗ ಹೋರಾಟಗಾರ್ತಿಯನ್ನು ನಡೆಸಿಕೊಂಡ ರೀತಿ ಯಾವ ಬಗೆಯದು? ಇಡೀ ವಿಶ್ವ ನಮ್ಮತ್ತ ನೋಡುತ್ತಿದೆ.

2019 ರ ’ಟೈಮ್ ನಿಯತಕಾಲಿಕೆ’ಯು ಗ್ರೆಟಾ ಥನ್‌ಬರ್ಗ್‌ಅನ್ನು 100 ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರು ಎಂದು ಹೆಸರಿಸಿದೆ. ಆದರೆ ಗ್ರೆಟಾ ಥನ್‌ಬರ್ಗ್‌ಗೆ ಯಾವ ರೀತಿಯಲ್ಲೂ ಕಮ್ಮಿ ಇಲ್ಲದ ಜಾಗತಿಕ ತಾಪಮಾನ ವಿಚಾರದ ಹೋರಾಟಗಾರ್ತಿ ದಿಶಾಳನ್ನು ಇಲ್ಲಿನ ಮಾಧ್ಯಮಗಳು ಭಯೋತ್ಪಾದಕಿಯೆಂದೂ, ದೇಶದ್ರೋಹಿಯೆಂದೂ ಚಿತ್ರಿಸುತ್ತಿದೆ. ರಾಷ್ಟ್ರೀಯ ಮಾಧ್ಯಮಗಳು ಮಣ್ಣು ತಿನ್ನಲಿ. ಕನಿಷ್ಟ ಕನ್ನಡ ಮಾಧ್ಯಮಗಳಾದರೂ ದಿಶಾ ನಮ್ಮ ಸಾಕ್ಷಿ ಪ್ರಜ್ಞೆ ಎಂಬುದನ್ನು ಮನಗಾಣಬೇಕಿತ್ತು. ಪ್ರಶಸ್ತಿ ಘೋಷಣೆ ಬಿಡಿ, ಕನಿಷ್ಟ ಮೌನವಾಗಿದ್ದರೂ ಸಾಕಿತ್ತು. ದಿಶಾಳನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಕನ್ನಡಿಗರ ಧ್ವನಿ ಎಂದು ಹೆಮ್ಮೆಪಟ್ಟುಕೊಳ್ಳುವ ಕನ್ನಡ ಮಾಧ್ಯಮವನ್ನು ನಿರೀಕ್ಷಿಸುವುದು ಮೂರ್ಖತನವಾಗುತ್ತದೆ.
ದಿಶಾಳ ಸಹವರ್ತಿ ಗ್ರೆಟಾ ಥನ್‌ಬರ್ಗ್ ಅವರನ್ನು 2019ರ ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಯಿತು. ನಾವು ದಿಶಾಳಿಗೆ ದೇಶದ್ರೋಹಿ ಪಟ್ಟ ಕಟ್ಟಿ ದೇಶದಲ್ಲಿ ಅಶಾಂತಿ ಸೃಷ್ಟಿಸುವ ಪಿತೂರಿ ಎಂದು ಸೆಕ್ಷನ್ ಜಡಿದು ಜೈಲಿಗಟ್ಟಿದ್ದೇವೆ.

ಭಾರತ ವಿಶ್ವಗುರು ಆಗುತ್ತದೆ ಎಂದು ಬಲಪಂಥೀಯರು ಭಾಷಣ ಮಾಡಿದ್ದನ್ನು ಕೇಳಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಭಾರತವೇ ವಿಶ್ವಗುರುವಾಗಿತ್ತು. ಹಲವು ಭಾಷೆ, ಹಲವು ಚಿಂತನೆ, ಹಲವು ಬಣ್ಣಗಳಿಗೆ ಈ ಹಿಂದೆ ಭಾರತದಲ್ಲಿ ಮುಕ್ತ ಸ್ವಾತಂತ್ರ್ಯ ಇತ್ತು. ಹಾಗಾಗಿಯೇ ವಿಶ್ವದ ಅತ್ಯುನ್ನತ ಪ್ರಜಾಸತ್ತಾತ್ಮಕ ದೇಶಗಳ ಸಾಲಿನಲ್ಲಿ ನಾವೂ ನಿಲ್ಲುತ್ತಿದ್ದೆವು. ಈಗ ಇಡೀ ವಿಶ್ವದಲ್ಲಿ ದಿಶಾಳ ವಿಚಾರ ಚರ್ಚೆಯಾಗುತ್ತಿದೆ. ಸರ್ಕಾರದ ವಿರುದ್ಧದ ಸಾಮಾಜಿಕ ಜಾಲತಾಣದ ಹೋರಾಟವನ್ನು ರೂಪಿಸಿದಳು ಎಂಬ ಆರೋಪ ಹೊರಿಸಿ ಯುವ ಹೋರಾಟಗಾರ್ತಿಯೊಬ್ಬಳನ್ನು ಬಂಧಿಸಿ ವಿಶ್ವದ ಮುಂದೆ ನಮ್ಮ ಸಣ್ಣತನವನ್ನು ತೋರಿಸಿದ್ದೇವೆ.

ದಿಶಾ ಮತ್ತು ಗ್ರೆಟಾ ಒಟ್ಟಾಗಿ “ಭವಿಷ್ಯಕ್ಕಾಗಿ ಶುಕ್ರವಾರ” ಎಂಬ ಹೆಸರಿನಲ್ಲಿ “ಶಾಲಾ ಹವಾಮಾನ ಮುಷ್ಕರ ಆಂದೋಲನವನ್ನು” ಸಂಘಟಿಸುತ್ತಿದ್ದರು. 2019ರಲ್ಲಿ ಒಂದು ದಶಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಒಳಗೊಂಡ ಹಲವು ಪ್ರತಿಭಟನೆಗಳು ವಿಶ್ವದೆಲ್ಲೆಡೆ ನಡೆದವು. ಜಗತ್ತಿನಾದ್ಯಂತ ವಿದ್ಯಾರ್ಥಿಗಳನ್ನು ಸಂಘಟಿಸಿದ್ದ ಯುವ ಹೋರಾಟಗಾರ್ತಿ ದಿಶಾ ನಮ್ಮವಳು, ನಮ್ಮ ಕನ್ನಡಿಗಳು ಎಂಬುದು ನಮ್ಮ ಹೆಮ್ಮೆ. ಈಗ ನಾವು ದಿಶಾ ಬಿಡುಗಡೆಗೆ ಕನ್ನಡಿಗರಾಗಿ ಹೋರಾಟ ನಡೆಸಬೇಕಿದೆ. ಇಲ್ಲದೇ ಇದ್ದಲ್ಲಿ ಕನ್ನಡಿಗರು ವಿಶ್ವದ ಮಕ್ಕಳ ಎದುರು ತಲೆತಗ್ಗಿಸಿ ನಿಲ್ಲಬೇಕಾಗುತ್ತದೆ.

ಹರೀಶ್ ಕುಮಾರ್ ಬಿ
(ಹೋರಾಟಗಾರರು ಮತ್ತು ಕರ್ನಾಟಕ ರಣಧೀರ ಪಡೆ ಸಂಘಟನೆಯ ಮುಖಂಡರು. ನೆಲ, ಭಾಷೆ ಮತ್ತು ಒಕ್ಕೂಟ ವ್ಯವಸ್ಥೆಯ ಉಳಿವಿಗಾಗಿ ಹಲವು ಹೋರಾಟಗಳನ್ನು ರೂಪಿಸಿ ಮುನ್ನಡೆಸುತ್ತಿದ್ದಾರೆ)


ಇದನ್ನೂ ಓದಿ: ದಿಶಾ ಅವರಂತೆ ಎಲ್ಲರೂ ಸುಳಿಯಲ್ಲಿದ್ದಾರೆ! – ಲಿಯೋ ಸಾಲ್ಡಾನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...