Homeಕರ್ನಾಟಕದಿಶಾ ಬಂಧನ ಕನ್ನಡಿಗರಿಗೆ ಮಾಡಿರುವ ಅಪಮಾನ! ಜಗತ್ತಿನ ಮಕ್ಕಳೆದುರು ತಲೆತಗ್ಗಿಸಿದ ಭಾರತ!

ದಿಶಾ ಬಂಧನ ಕನ್ನಡಿಗರಿಗೆ ಮಾಡಿರುವ ಅಪಮಾನ! ಜಗತ್ತಿನ ಮಕ್ಕಳೆದುರು ತಲೆತಗ್ಗಿಸಿದ ಭಾರತ!

- Advertisement -
- Advertisement -

ಟೂಲ್ ಕಿಟ್ ಕೇಸ್‌ನಲ್ಲಿ ದಿಶಾ ರವಿ ಎಂಬ 21 ವರ್ಷ ವಯಸ್ಸಿನ ಹೋರಾಟಗಾರ್ತಿಯನ್ನು ದೆಹಲಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿರೋದು ಪ್ರಜಾಪ್ರಭುತ್ವದ ಕಗ್ಗೊಲೆ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಗೆ ಮಾಡಿರುವ ಅವಮಾನವಾಗಿದೆ.

 

ದೆಹಲಿ ಪೊಲೀಸರು ನೇರವಾಗಿ ಬೆಂಗಳೂರಿಗೆ “ದಾಳಿ” ಮಾಡಿ ಕನ್ನಡಿಗ ಹೋರಾಟಗಾರ್ತಿಯನ್ನು ಬಂಧಿಸಿದ್ದು ಕನ್ನಡಿಗರಿಗೆ ಮಾಡಿದ ಅಪಮಾನ. ಬೆಂಗಳೂರು ನಗರ ಪೊಲೀಸರಿಗೆ ಮಾಹಿತಿಯನ್ನೇ ನೀಡದೆ ದಿಶಾ ಮನೆಗೆ ದಾಳಿ ಮಾಡಿ, ಗಂಟೆಗಟ್ಟಲೆ ವಿಚಾರಣೆ ನಡೆಸಿ ಬಂಧಿಸಿರೋದು ಒಕ್ಕೂಟ ವ್ಯವಸ್ಥೆಗೆ ಅವಮಾನವಲ್ಲದೆ ಮತ್ತೇನು?
ಪ್ರತೀ ರಾಜ್ಯಗಳು ತನ್ನದೇ ಆದ ಸ್ವತಂತ್ರ ಪೊಲೀಸ್ ಬಲವನ್ನು ಹೊಂದಿದೆ. ರಾಜ್ಯದ ಆಗುಹೋಗುಗಳ ಮೇಲೆ ಕೇಂದ್ರ ಸರ್ಕಾರದ ಅಧೀನದಲ್ಲಿರುವ ಪೊಲೀಸರು ಹಸ್ತಕ್ಷೇಪ ಮಾಡುವಂತಿಲ್ಲ. ದೆಹಲಿ ಪೊಲೀಸರು ಮಾತ್ರ ಕೇಂದ್ರ ಗೃಹ ಇಲಾಖೆಯ ಅಧೀನದಲ್ಲಿ ಬರುತ್ತದೆ. ಕೇಂದ್ರ ಗೃಹ ಇಲಾಖೆಯ ಅಧೀನದಲ್ಲಿರುವ ಪೊಲೀಸರು ಎಂಬ ಕಾರಣಕ್ಕೆ ಬೇಕುಬೇಕಾದ ರಾಜ್ಯಗಳಲ್ಲಿ ಅವರು ದಾಳಿ ನಡೆಸುವಂತಿಲ್ಲ. ಇಂತಹ ಉದ್ಧಟತನಗಳು ದಕ್ಷಿಣ ಭಾರತದ ರಾಜ್ಯಗಳ ಮೇಲೆ ಕೇಂದ್ರ ನಡೆಸುವ ದಬ್ಬಾಳಿಕೆಯನ್ನು ಸೂಚಿಸುತ್ತದೆ.

ಜಾಗತಿಕ ತಾಪಮಾನದ ವಿಚಾರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೋರಾಟ ನಡೆಸುತ್ತಿರುವ ದಿಶಾ ರವಿ ಕನ್ನಡಿಗರ ಹೆಮ್ಮೆ. ಸ್ವೀಡನ್‌ನ ಗ್ರೆಟಾ ಥನ್‌ಬರ್ಗ್ ಮತ್ತು ಬೆಂಗಳೂರಿನ ದಿಶಾ ರವಿ ಹೋರಾಟದ ಸಹಪಯಣಿಗರು. ಆದರೆ ಗ್ರೆಟಾ ಥನ್‌ಬರ್ಗ್ ಅವರನ್ನು ಅಲ್ಲಿನ ಸರ್ಕಾರ ನಡೆಸಿಕೊಂಡ ರೀತಿಗೂ, ದಿಶಾ ರವಿಯವರನ್ನು ಇಲ್ಲಿನ ನಮ್ಮ ಸರ್ಕಾರ ನಡೆಸಿಕೊಂಡ ರೀತಿಯನ್ನೂ ನಾವು ಆತ್ಮವಿಮಶೆ ಮಾಡಿಕೊಳ್ಳಬೇಕಿದೆ. ದಿಶಾ ಮತ್ತು ಗ್ರೆಟಾ ಹೆಚ್ಚು ಕಡಿಮೆ ಒಂದೇ ವಯಸ್ಸಿನವರು. ಒಂದೇ ಗುರಿ, ಉದ್ದೇಶ ಹೊಂದಿರುವವರು. ಗ್ರೆಟಾ ಅಲ್ಲಿನ ಸರ್ಕಾರದ ಆತಿಥ್ಯದಲ್ಲಿದ್ದರೆ, ನಮ್ಮ ದಿಶಾ ಪೊಲೀಸ್ ಆತಿಥ್ಯದಲ್ಲಿದ್ದಾರೆ.

ಗ್ರೆಟಾ ಥನ್‌ಬರ್ಗ್ ತನ್ನ ನೇರ ಮಾತಿನ ವಿಧಾನಕ್ಕೆ ಹೆಸರುವಾಸಿಯಾಗಿದ್ದಾಳೆ. ಸಾಮಾಜಿಕ ಜಾಲತಾಣಗಳಲ್ಲಿ, ಸಾರ್ವಜನಿಕವಾಗಿ ಸಭೆಗಳಲ್ಲಿ ಹವಾಮಾನ ಬಿಕ್ಕಟ್ಟು ಕುರಿತು ಅವಳು ವಿವರಿಸಿ, ಪರಿಹಾರ ಕ್ರಮಗಳನ್ನು ಸರ್ಕಾರದ ಮುಂದಿಟ್ಟು ಒತ್ತಾಯಿಸುತ್ತಾಳೆ. ಸರ್ಕಾರ ಕ್ರಮ ಕೈಗೊಳ್ಳದೇ ಹೋದಾಗ ಪ್ರತಿಭಟಿಸಿದ್ದಾಳೆ. ಶಾಲೆಯಲ್ಲೆ ಗ್ರೆಟಾ ಮುಷ್ಕರ ಹೂಡಿದ್ದೂ ಇದೆ, ಸಂಸತ್ತಿಗೆ ಮುತ್ತಿಗೆ ಹಾಕಿದ್ದೂ ಇದೆ. ನಮ್ಮ ದಿಶಾ ಕೂಡ ತಮ್ಮ ಚೌಕಟ್ಟಿನಲ್ಲಿ ಕೆಲಸ ಮಾಡಿದ್ದಾರೆ. ಆದರೆ ಗ್ರೆಟಾ ಥನ್‌ಬರ್ಗ್‌ಗೆ ಸ್ವೀಡನ್‌ನಲ್ಲಿ ಗೋಲ್ಡೆನ್ ಕಮೆರಾ ಪ್ರಶಸ್ತಿ (2019); ಫ್ರಿಟ್ ಆರ್ಡ್ ಪ್ರಶಸ್ತಿ (2019); ರಾಚೆಲ್ ಕಾರ್ಸನ್ ಪ್ರಶಸ್ತಿ (2019); ಆತ್ಮಸಾಕ್ಷಿಯ ರಾಯಭಾರಿ ಪ್ರಶಸ್ತಿ (2019); ರಾಯಲ್ ಸ್ಕಾಟಿಷ್ ಜಿಯಾಗ್ರಫಿಕಲ್ ಸೊಸೈಟಿಯ ಫೆಲೋ (FRSGS -Fellow of the Royal Scottish Geographical Society); ಗೆಡ್ಡೆಸ್ ಎನ್ವಿರಾನ್ಮೆಂಟ್ ಮೆಡಲ್ (2019); ಜೀವನೋಪಾಯ ಹಕ್ಕು ಪ್ರಶಸ್ತಿ (2019); ಅಂತರರಾಷ್ಟ್ರೀಯ ಮಕ್ಕಳ ಶಾಂತಿ ಪ್ರಶಸ್ತಿ (2019); ವರ್ಷದ ವ್ಯಕ್ತಿ (2019) ಹೀಗೆ ಹಲವು ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ. ಆದರೆ ನಾವು ಅದೇ ಆಂದೋಲನದ ಕನ್ನಡಿಗ ಹೋರಾಟಗಾರ್ತಿಯನ್ನು ನಡೆಸಿಕೊಂಡ ರೀತಿ ಯಾವ ಬಗೆಯದು? ಇಡೀ ವಿಶ್ವ ನಮ್ಮತ್ತ ನೋಡುತ್ತಿದೆ.

2019 ರ ’ಟೈಮ್ ನಿಯತಕಾಲಿಕೆ’ಯು ಗ್ರೆಟಾ ಥನ್‌ಬರ್ಗ್‌ಅನ್ನು 100 ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರು ಎಂದು ಹೆಸರಿಸಿದೆ. ಆದರೆ ಗ್ರೆಟಾ ಥನ್‌ಬರ್ಗ್‌ಗೆ ಯಾವ ರೀತಿಯಲ್ಲೂ ಕಮ್ಮಿ ಇಲ್ಲದ ಜಾಗತಿಕ ತಾಪಮಾನ ವಿಚಾರದ ಹೋರಾಟಗಾರ್ತಿ ದಿಶಾಳನ್ನು ಇಲ್ಲಿನ ಮಾಧ್ಯಮಗಳು ಭಯೋತ್ಪಾದಕಿಯೆಂದೂ, ದೇಶದ್ರೋಹಿಯೆಂದೂ ಚಿತ್ರಿಸುತ್ತಿದೆ. ರಾಷ್ಟ್ರೀಯ ಮಾಧ್ಯಮಗಳು ಮಣ್ಣು ತಿನ್ನಲಿ. ಕನಿಷ್ಟ ಕನ್ನಡ ಮಾಧ್ಯಮಗಳಾದರೂ ದಿಶಾ ನಮ್ಮ ಸಾಕ್ಷಿ ಪ್ರಜ್ಞೆ ಎಂಬುದನ್ನು ಮನಗಾಣಬೇಕಿತ್ತು. ಪ್ರಶಸ್ತಿ ಘೋಷಣೆ ಬಿಡಿ, ಕನಿಷ್ಟ ಮೌನವಾಗಿದ್ದರೂ ಸಾಕಿತ್ತು. ದಿಶಾಳನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಕನ್ನಡಿಗರ ಧ್ವನಿ ಎಂದು ಹೆಮ್ಮೆಪಟ್ಟುಕೊಳ್ಳುವ ಕನ್ನಡ ಮಾಧ್ಯಮವನ್ನು ನಿರೀಕ್ಷಿಸುವುದು ಮೂರ್ಖತನವಾಗುತ್ತದೆ.
ದಿಶಾಳ ಸಹವರ್ತಿ ಗ್ರೆಟಾ ಥನ್‌ಬರ್ಗ್ ಅವರನ್ನು 2019ರ ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಯಿತು. ನಾವು ದಿಶಾಳಿಗೆ ದೇಶದ್ರೋಹಿ ಪಟ್ಟ ಕಟ್ಟಿ ದೇಶದಲ್ಲಿ ಅಶಾಂತಿ ಸೃಷ್ಟಿಸುವ ಪಿತೂರಿ ಎಂದು ಸೆಕ್ಷನ್ ಜಡಿದು ಜೈಲಿಗಟ್ಟಿದ್ದೇವೆ.

ಭಾರತ ವಿಶ್ವಗುರು ಆಗುತ್ತದೆ ಎಂದು ಬಲಪಂಥೀಯರು ಭಾಷಣ ಮಾಡಿದ್ದನ್ನು ಕೇಳಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಭಾರತವೇ ವಿಶ್ವಗುರುವಾಗಿತ್ತು. ಹಲವು ಭಾಷೆ, ಹಲವು ಚಿಂತನೆ, ಹಲವು ಬಣ್ಣಗಳಿಗೆ ಈ ಹಿಂದೆ ಭಾರತದಲ್ಲಿ ಮುಕ್ತ ಸ್ವಾತಂತ್ರ್ಯ ಇತ್ತು. ಹಾಗಾಗಿಯೇ ವಿಶ್ವದ ಅತ್ಯುನ್ನತ ಪ್ರಜಾಸತ್ತಾತ್ಮಕ ದೇಶಗಳ ಸಾಲಿನಲ್ಲಿ ನಾವೂ ನಿಲ್ಲುತ್ತಿದ್ದೆವು. ಈಗ ಇಡೀ ವಿಶ್ವದಲ್ಲಿ ದಿಶಾಳ ವಿಚಾರ ಚರ್ಚೆಯಾಗುತ್ತಿದೆ. ಸರ್ಕಾರದ ವಿರುದ್ಧದ ಸಾಮಾಜಿಕ ಜಾಲತಾಣದ ಹೋರಾಟವನ್ನು ರೂಪಿಸಿದಳು ಎಂಬ ಆರೋಪ ಹೊರಿಸಿ ಯುವ ಹೋರಾಟಗಾರ್ತಿಯೊಬ್ಬಳನ್ನು ಬಂಧಿಸಿ ವಿಶ್ವದ ಮುಂದೆ ನಮ್ಮ ಸಣ್ಣತನವನ್ನು ತೋರಿಸಿದ್ದೇವೆ.

ದಿಶಾ ಮತ್ತು ಗ್ರೆಟಾ ಒಟ್ಟಾಗಿ “ಭವಿಷ್ಯಕ್ಕಾಗಿ ಶುಕ್ರವಾರ” ಎಂಬ ಹೆಸರಿನಲ್ಲಿ “ಶಾಲಾ ಹವಾಮಾನ ಮುಷ್ಕರ ಆಂದೋಲನವನ್ನು” ಸಂಘಟಿಸುತ್ತಿದ್ದರು. 2019ರಲ್ಲಿ ಒಂದು ದಶಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಒಳಗೊಂಡ ಹಲವು ಪ್ರತಿಭಟನೆಗಳು ವಿಶ್ವದೆಲ್ಲೆಡೆ ನಡೆದವು. ಜಗತ್ತಿನಾದ್ಯಂತ ವಿದ್ಯಾರ್ಥಿಗಳನ್ನು ಸಂಘಟಿಸಿದ್ದ ಯುವ ಹೋರಾಟಗಾರ್ತಿ ದಿಶಾ ನಮ್ಮವಳು, ನಮ್ಮ ಕನ್ನಡಿಗಳು ಎಂಬುದು ನಮ್ಮ ಹೆಮ್ಮೆ. ಈಗ ನಾವು ದಿಶಾ ಬಿಡುಗಡೆಗೆ ಕನ್ನಡಿಗರಾಗಿ ಹೋರಾಟ ನಡೆಸಬೇಕಿದೆ. ಇಲ್ಲದೇ ಇದ್ದಲ್ಲಿ ಕನ್ನಡಿಗರು ವಿಶ್ವದ ಮಕ್ಕಳ ಎದುರು ತಲೆತಗ್ಗಿಸಿ ನಿಲ್ಲಬೇಕಾಗುತ್ತದೆ.

ಹರೀಶ್ ಕುಮಾರ್ ಬಿ
(ಹೋರಾಟಗಾರರು ಮತ್ತು ಕರ್ನಾಟಕ ರಣಧೀರ ಪಡೆ ಸಂಘಟನೆಯ ಮುಖಂಡರು. ನೆಲ, ಭಾಷೆ ಮತ್ತು ಒಕ್ಕೂಟ ವ್ಯವಸ್ಥೆಯ ಉಳಿವಿಗಾಗಿ ಹಲವು ಹೋರಾಟಗಳನ್ನು ರೂಪಿಸಿ ಮುನ್ನಡೆಸುತ್ತಿದ್ದಾರೆ)


ಇದನ್ನೂ ಓದಿ: ದಿಶಾ ಅವರಂತೆ ಎಲ್ಲರೂ ಸುಳಿಯಲ್ಲಿದ್ದಾರೆ! – ಲಿಯೋ ಸಾಲ್ಡಾನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...