Homeಕರ್ನಾಟಕದಿಶಾ ಬಂಧನ ಕನ್ನಡಿಗರಿಗೆ ಮಾಡಿರುವ ಅಪಮಾನ! ಜಗತ್ತಿನ ಮಕ್ಕಳೆದುರು ತಲೆತಗ್ಗಿಸಿದ ಭಾರತ!

ದಿಶಾ ಬಂಧನ ಕನ್ನಡಿಗರಿಗೆ ಮಾಡಿರುವ ಅಪಮಾನ! ಜಗತ್ತಿನ ಮಕ್ಕಳೆದುರು ತಲೆತಗ್ಗಿಸಿದ ಭಾರತ!

- Advertisement -
- Advertisement -

ಟೂಲ್ ಕಿಟ್ ಕೇಸ್‌ನಲ್ಲಿ ದಿಶಾ ರವಿ ಎಂಬ 21 ವರ್ಷ ವಯಸ್ಸಿನ ಹೋರಾಟಗಾರ್ತಿಯನ್ನು ದೆಹಲಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿರೋದು ಪ್ರಜಾಪ್ರಭುತ್ವದ ಕಗ್ಗೊಲೆ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಗೆ ಮಾಡಿರುವ ಅವಮಾನವಾಗಿದೆ.

 

ದೆಹಲಿ ಪೊಲೀಸರು ನೇರವಾಗಿ ಬೆಂಗಳೂರಿಗೆ “ದಾಳಿ” ಮಾಡಿ ಕನ್ನಡಿಗ ಹೋರಾಟಗಾರ್ತಿಯನ್ನು ಬಂಧಿಸಿದ್ದು ಕನ್ನಡಿಗರಿಗೆ ಮಾಡಿದ ಅಪಮಾನ. ಬೆಂಗಳೂರು ನಗರ ಪೊಲೀಸರಿಗೆ ಮಾಹಿತಿಯನ್ನೇ ನೀಡದೆ ದಿಶಾ ಮನೆಗೆ ದಾಳಿ ಮಾಡಿ, ಗಂಟೆಗಟ್ಟಲೆ ವಿಚಾರಣೆ ನಡೆಸಿ ಬಂಧಿಸಿರೋದು ಒಕ್ಕೂಟ ವ್ಯವಸ್ಥೆಗೆ ಅವಮಾನವಲ್ಲದೆ ಮತ್ತೇನು?
ಪ್ರತೀ ರಾಜ್ಯಗಳು ತನ್ನದೇ ಆದ ಸ್ವತಂತ್ರ ಪೊಲೀಸ್ ಬಲವನ್ನು ಹೊಂದಿದೆ. ರಾಜ್ಯದ ಆಗುಹೋಗುಗಳ ಮೇಲೆ ಕೇಂದ್ರ ಸರ್ಕಾರದ ಅಧೀನದಲ್ಲಿರುವ ಪೊಲೀಸರು ಹಸ್ತಕ್ಷೇಪ ಮಾಡುವಂತಿಲ್ಲ. ದೆಹಲಿ ಪೊಲೀಸರು ಮಾತ್ರ ಕೇಂದ್ರ ಗೃಹ ಇಲಾಖೆಯ ಅಧೀನದಲ್ಲಿ ಬರುತ್ತದೆ. ಕೇಂದ್ರ ಗೃಹ ಇಲಾಖೆಯ ಅಧೀನದಲ್ಲಿರುವ ಪೊಲೀಸರು ಎಂಬ ಕಾರಣಕ್ಕೆ ಬೇಕುಬೇಕಾದ ರಾಜ್ಯಗಳಲ್ಲಿ ಅವರು ದಾಳಿ ನಡೆಸುವಂತಿಲ್ಲ. ಇಂತಹ ಉದ್ಧಟತನಗಳು ದಕ್ಷಿಣ ಭಾರತದ ರಾಜ್ಯಗಳ ಮೇಲೆ ಕೇಂದ್ರ ನಡೆಸುವ ದಬ್ಬಾಳಿಕೆಯನ್ನು ಸೂಚಿಸುತ್ತದೆ.

ಜಾಗತಿಕ ತಾಪಮಾನದ ವಿಚಾರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೋರಾಟ ನಡೆಸುತ್ತಿರುವ ದಿಶಾ ರವಿ ಕನ್ನಡಿಗರ ಹೆಮ್ಮೆ. ಸ್ವೀಡನ್‌ನ ಗ್ರೆಟಾ ಥನ್‌ಬರ್ಗ್ ಮತ್ತು ಬೆಂಗಳೂರಿನ ದಿಶಾ ರವಿ ಹೋರಾಟದ ಸಹಪಯಣಿಗರು. ಆದರೆ ಗ್ರೆಟಾ ಥನ್‌ಬರ್ಗ್ ಅವರನ್ನು ಅಲ್ಲಿನ ಸರ್ಕಾರ ನಡೆಸಿಕೊಂಡ ರೀತಿಗೂ, ದಿಶಾ ರವಿಯವರನ್ನು ಇಲ್ಲಿನ ನಮ್ಮ ಸರ್ಕಾರ ನಡೆಸಿಕೊಂಡ ರೀತಿಯನ್ನೂ ನಾವು ಆತ್ಮವಿಮಶೆ ಮಾಡಿಕೊಳ್ಳಬೇಕಿದೆ. ದಿಶಾ ಮತ್ತು ಗ್ರೆಟಾ ಹೆಚ್ಚು ಕಡಿಮೆ ಒಂದೇ ವಯಸ್ಸಿನವರು. ಒಂದೇ ಗುರಿ, ಉದ್ದೇಶ ಹೊಂದಿರುವವರು. ಗ್ರೆಟಾ ಅಲ್ಲಿನ ಸರ್ಕಾರದ ಆತಿಥ್ಯದಲ್ಲಿದ್ದರೆ, ನಮ್ಮ ದಿಶಾ ಪೊಲೀಸ್ ಆತಿಥ್ಯದಲ್ಲಿದ್ದಾರೆ.

ಗ್ರೆಟಾ ಥನ್‌ಬರ್ಗ್ ತನ್ನ ನೇರ ಮಾತಿನ ವಿಧಾನಕ್ಕೆ ಹೆಸರುವಾಸಿಯಾಗಿದ್ದಾಳೆ. ಸಾಮಾಜಿಕ ಜಾಲತಾಣಗಳಲ್ಲಿ, ಸಾರ್ವಜನಿಕವಾಗಿ ಸಭೆಗಳಲ್ಲಿ ಹವಾಮಾನ ಬಿಕ್ಕಟ್ಟು ಕುರಿತು ಅವಳು ವಿವರಿಸಿ, ಪರಿಹಾರ ಕ್ರಮಗಳನ್ನು ಸರ್ಕಾರದ ಮುಂದಿಟ್ಟು ಒತ್ತಾಯಿಸುತ್ತಾಳೆ. ಸರ್ಕಾರ ಕ್ರಮ ಕೈಗೊಳ್ಳದೇ ಹೋದಾಗ ಪ್ರತಿಭಟಿಸಿದ್ದಾಳೆ. ಶಾಲೆಯಲ್ಲೆ ಗ್ರೆಟಾ ಮುಷ್ಕರ ಹೂಡಿದ್ದೂ ಇದೆ, ಸಂಸತ್ತಿಗೆ ಮುತ್ತಿಗೆ ಹಾಕಿದ್ದೂ ಇದೆ. ನಮ್ಮ ದಿಶಾ ಕೂಡ ತಮ್ಮ ಚೌಕಟ್ಟಿನಲ್ಲಿ ಕೆಲಸ ಮಾಡಿದ್ದಾರೆ. ಆದರೆ ಗ್ರೆಟಾ ಥನ್‌ಬರ್ಗ್‌ಗೆ ಸ್ವೀಡನ್‌ನಲ್ಲಿ ಗೋಲ್ಡೆನ್ ಕಮೆರಾ ಪ್ರಶಸ್ತಿ (2019); ಫ್ರಿಟ್ ಆರ್ಡ್ ಪ್ರಶಸ್ತಿ (2019); ರಾಚೆಲ್ ಕಾರ್ಸನ್ ಪ್ರಶಸ್ತಿ (2019); ಆತ್ಮಸಾಕ್ಷಿಯ ರಾಯಭಾರಿ ಪ್ರಶಸ್ತಿ (2019); ರಾಯಲ್ ಸ್ಕಾಟಿಷ್ ಜಿಯಾಗ್ರಫಿಕಲ್ ಸೊಸೈಟಿಯ ಫೆಲೋ (FRSGS -Fellow of the Royal Scottish Geographical Society); ಗೆಡ್ಡೆಸ್ ಎನ್ವಿರಾನ್ಮೆಂಟ್ ಮೆಡಲ್ (2019); ಜೀವನೋಪಾಯ ಹಕ್ಕು ಪ್ರಶಸ್ತಿ (2019); ಅಂತರರಾಷ್ಟ್ರೀಯ ಮಕ್ಕಳ ಶಾಂತಿ ಪ್ರಶಸ್ತಿ (2019); ವರ್ಷದ ವ್ಯಕ್ತಿ (2019) ಹೀಗೆ ಹಲವು ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ. ಆದರೆ ನಾವು ಅದೇ ಆಂದೋಲನದ ಕನ್ನಡಿಗ ಹೋರಾಟಗಾರ್ತಿಯನ್ನು ನಡೆಸಿಕೊಂಡ ರೀತಿ ಯಾವ ಬಗೆಯದು? ಇಡೀ ವಿಶ್ವ ನಮ್ಮತ್ತ ನೋಡುತ್ತಿದೆ.

2019 ರ ’ಟೈಮ್ ನಿಯತಕಾಲಿಕೆ’ಯು ಗ್ರೆಟಾ ಥನ್‌ಬರ್ಗ್‌ಅನ್ನು 100 ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರು ಎಂದು ಹೆಸರಿಸಿದೆ. ಆದರೆ ಗ್ರೆಟಾ ಥನ್‌ಬರ್ಗ್‌ಗೆ ಯಾವ ರೀತಿಯಲ್ಲೂ ಕಮ್ಮಿ ಇಲ್ಲದ ಜಾಗತಿಕ ತಾಪಮಾನ ವಿಚಾರದ ಹೋರಾಟಗಾರ್ತಿ ದಿಶಾಳನ್ನು ಇಲ್ಲಿನ ಮಾಧ್ಯಮಗಳು ಭಯೋತ್ಪಾದಕಿಯೆಂದೂ, ದೇಶದ್ರೋಹಿಯೆಂದೂ ಚಿತ್ರಿಸುತ್ತಿದೆ. ರಾಷ್ಟ್ರೀಯ ಮಾಧ್ಯಮಗಳು ಮಣ್ಣು ತಿನ್ನಲಿ. ಕನಿಷ್ಟ ಕನ್ನಡ ಮಾಧ್ಯಮಗಳಾದರೂ ದಿಶಾ ನಮ್ಮ ಸಾಕ್ಷಿ ಪ್ರಜ್ಞೆ ಎಂಬುದನ್ನು ಮನಗಾಣಬೇಕಿತ್ತು. ಪ್ರಶಸ್ತಿ ಘೋಷಣೆ ಬಿಡಿ, ಕನಿಷ್ಟ ಮೌನವಾಗಿದ್ದರೂ ಸಾಕಿತ್ತು. ದಿಶಾಳನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಕನ್ನಡಿಗರ ಧ್ವನಿ ಎಂದು ಹೆಮ್ಮೆಪಟ್ಟುಕೊಳ್ಳುವ ಕನ್ನಡ ಮಾಧ್ಯಮವನ್ನು ನಿರೀಕ್ಷಿಸುವುದು ಮೂರ್ಖತನವಾಗುತ್ತದೆ.
ದಿಶಾಳ ಸಹವರ್ತಿ ಗ್ರೆಟಾ ಥನ್‌ಬರ್ಗ್ ಅವರನ್ನು 2019ರ ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಯಿತು. ನಾವು ದಿಶಾಳಿಗೆ ದೇಶದ್ರೋಹಿ ಪಟ್ಟ ಕಟ್ಟಿ ದೇಶದಲ್ಲಿ ಅಶಾಂತಿ ಸೃಷ್ಟಿಸುವ ಪಿತೂರಿ ಎಂದು ಸೆಕ್ಷನ್ ಜಡಿದು ಜೈಲಿಗಟ್ಟಿದ್ದೇವೆ.

ಭಾರತ ವಿಶ್ವಗುರು ಆಗುತ್ತದೆ ಎಂದು ಬಲಪಂಥೀಯರು ಭಾಷಣ ಮಾಡಿದ್ದನ್ನು ಕೇಳಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಭಾರತವೇ ವಿಶ್ವಗುರುವಾಗಿತ್ತು. ಹಲವು ಭಾಷೆ, ಹಲವು ಚಿಂತನೆ, ಹಲವು ಬಣ್ಣಗಳಿಗೆ ಈ ಹಿಂದೆ ಭಾರತದಲ್ಲಿ ಮುಕ್ತ ಸ್ವಾತಂತ್ರ್ಯ ಇತ್ತು. ಹಾಗಾಗಿಯೇ ವಿಶ್ವದ ಅತ್ಯುನ್ನತ ಪ್ರಜಾಸತ್ತಾತ್ಮಕ ದೇಶಗಳ ಸಾಲಿನಲ್ಲಿ ನಾವೂ ನಿಲ್ಲುತ್ತಿದ್ದೆವು. ಈಗ ಇಡೀ ವಿಶ್ವದಲ್ಲಿ ದಿಶಾಳ ವಿಚಾರ ಚರ್ಚೆಯಾಗುತ್ತಿದೆ. ಸರ್ಕಾರದ ವಿರುದ್ಧದ ಸಾಮಾಜಿಕ ಜಾಲತಾಣದ ಹೋರಾಟವನ್ನು ರೂಪಿಸಿದಳು ಎಂಬ ಆರೋಪ ಹೊರಿಸಿ ಯುವ ಹೋರಾಟಗಾರ್ತಿಯೊಬ್ಬಳನ್ನು ಬಂಧಿಸಿ ವಿಶ್ವದ ಮುಂದೆ ನಮ್ಮ ಸಣ್ಣತನವನ್ನು ತೋರಿಸಿದ್ದೇವೆ.

ದಿಶಾ ಮತ್ತು ಗ್ರೆಟಾ ಒಟ್ಟಾಗಿ “ಭವಿಷ್ಯಕ್ಕಾಗಿ ಶುಕ್ರವಾರ” ಎಂಬ ಹೆಸರಿನಲ್ಲಿ “ಶಾಲಾ ಹವಾಮಾನ ಮುಷ್ಕರ ಆಂದೋಲನವನ್ನು” ಸಂಘಟಿಸುತ್ತಿದ್ದರು. 2019ರಲ್ಲಿ ಒಂದು ದಶಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಒಳಗೊಂಡ ಹಲವು ಪ್ರತಿಭಟನೆಗಳು ವಿಶ್ವದೆಲ್ಲೆಡೆ ನಡೆದವು. ಜಗತ್ತಿನಾದ್ಯಂತ ವಿದ್ಯಾರ್ಥಿಗಳನ್ನು ಸಂಘಟಿಸಿದ್ದ ಯುವ ಹೋರಾಟಗಾರ್ತಿ ದಿಶಾ ನಮ್ಮವಳು, ನಮ್ಮ ಕನ್ನಡಿಗಳು ಎಂಬುದು ನಮ್ಮ ಹೆಮ್ಮೆ. ಈಗ ನಾವು ದಿಶಾ ಬಿಡುಗಡೆಗೆ ಕನ್ನಡಿಗರಾಗಿ ಹೋರಾಟ ನಡೆಸಬೇಕಿದೆ. ಇಲ್ಲದೇ ಇದ್ದಲ್ಲಿ ಕನ್ನಡಿಗರು ವಿಶ್ವದ ಮಕ್ಕಳ ಎದುರು ತಲೆತಗ್ಗಿಸಿ ನಿಲ್ಲಬೇಕಾಗುತ್ತದೆ.

ಹರೀಶ್ ಕುಮಾರ್ ಬಿ
(ಹೋರಾಟಗಾರರು ಮತ್ತು ಕರ್ನಾಟಕ ರಣಧೀರ ಪಡೆ ಸಂಘಟನೆಯ ಮುಖಂಡರು. ನೆಲ, ಭಾಷೆ ಮತ್ತು ಒಕ್ಕೂಟ ವ್ಯವಸ್ಥೆಯ ಉಳಿವಿಗಾಗಿ ಹಲವು ಹೋರಾಟಗಳನ್ನು ರೂಪಿಸಿ ಮುನ್ನಡೆಸುತ್ತಿದ್ದಾರೆ)


ಇದನ್ನೂ ಓದಿ: ದಿಶಾ ಅವರಂತೆ ಎಲ್ಲರೂ ಸುಳಿಯಲ್ಲಿದ್ದಾರೆ! – ಲಿಯೋ ಸಾಲ್ಡಾನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...