Homeಮುಖಪುಟತನ್ನ ಮೇಲಿನ ಎಫ್‌ಐಆರ್ ಕಾಪಿ ಪಡೆಯಲು ದಿಶಾಗೆ ಅನುಮತಿ: ಒಪ್ಪದ ದೆಹಲಿ ಪೊಲೀಸರು!

ತನ್ನ ಮೇಲಿನ ಎಫ್‌ಐಆರ್ ಕಾಪಿ ಪಡೆಯಲು ದಿಶಾಗೆ ಅನುಮತಿ: ಒಪ್ಪದ ದೆಹಲಿ ಪೊಲೀಸರು!

ಆಕೆ ಪ್ರತಿದಿನ ತನ್ನ ವಕೀಲರೊಂದಿಗೆ 30 ನಿಮಿಷ ಮತ್ತು ಕುಟುಂಬದವರೊಂದಿಗೆ 15 ನಿಮಿಷಗಳ ಕಾಲ ಮಾತನಾಡಬಹುದು ಎಂದು ಹೇಳಿದೆ. ಜೊತೆಗೆ ಆಕೆಗೆ ಬೆಚ್ಚನೆಯ ಉಡುಪುಗಳು ಮತ್ತು ಪುಸ್ತಕಗಳನ್ನೂ ಒದಗಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಲಕ್ಷಾಂತರ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಜಾಗತಿಕ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಹಂಚಿಕೊಂಡ ಟೂಲ್‌ಕಿಟ್ ಪ್ರಕರಣದಲ್ಲಿ ಬೆಂಗಳೂರು ಮೂಲದ ದಿಶಾ ರವಿಯವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಈಗ ದಿಶಾ ಅವರನ್ನು ದೆಹಲಿ ಕೋರ್ಟ್ 5 ದಿನಗಳ ಪೊಲೀಸ್ ಬಂಧನಕ್ಕೆ ಕಳುಹಿಸಿದೆ. ಇದರ ನಡುವೆಯೇ ದಿಶಾಳನ್ನು ಬೆಂಬಲಿಸಿ ಜಗತ್ತಿನಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಸರ್ಕಾರದ ನಡೆಯನ್ನು ಸಾವಿರಾರು ಜನ ಖಂಡಿಸಿದ್ದಾರೆ. ಜೊತೆಗೆ ಆಕೆಯನ್ನು ಬಿಡುಗಡೆ ಮಾಡುವಂತೆ ವಿವಿದೆಡೆ ಪ್ರತಿಭಟನೆಗಳು ನಡೆಯುತ್ತಿವೆ.

ಈ ಪ್ರಕರಣದಲ್ಲಿ ಪ್ರಮುಖವಾದ ವಿಷಯವೆಂದರೆ, ತನ್ನ ಪ್ರಕರಣದ ಕುರಿತು ನ್ಯಾಯಾಲಯದಲ್ಲಿ ತಾನೇ ವಾದ ಮಾಡುವುದಾಗಿ ದಿಶಾ ಹೇಳಿದ್ದಾರೆ. ಇದು ಬಹುತೇಕರಲ್ಲಿ ಅಚ್ಚರಿಯನ್ನುಂಟುಮಾಡಿತ್ತು. ಈಗ ಇದಕ್ಕೆ ದೆಹಲಿಯ ನ್ಯಾಯಾಲಯ ಅನುಮತಿ ನೀಡಿದ್ದು, ದಿಶಾಳ ಮೇಲಿನ ಆರೋಪದ ಎಫ್‌ಐಆರ್ ಕಾಪಿ ಮತ್ತು ರಿಮಾಂಡ್ ಅರ್ಜಿಯನ್ನು ದಿಶಾ ಪಡೆದುಕೊಳ್ಳಬಹುದು ಎಂದು ಹೇಳಿದೆ. ಆದರೆ ಇದನ್ನು ದೆಹಲಿ ಪೊಲೀಸರು ವಿರೋಧಿಸಿದ್ದಾರೆ!

ಇದನ್ನೂ ಓದಿ: ರೈತ ಹೋರಾಟ- ದ.ಕ ಜಿಲ್ಲೆಯ ರೈತರು ಸೊಲ್ಲೆತ್ತಲಿಲ್ಲವೇಕೆ?: ಮಿಸ್ರಿಯಾ ಪಜೀರ್

ಇನ್ನು ಆಕೆ ಪ್ರತಿದಿನ ತನ್ನ ವಕೀಲರೊಂದಿಗೆ 30 ನಿಮಿಷ ಮತ್ತು ಕುಟುಂಬದವರೊಂದಿಗೆ 15 ನಿಮಿಷಗಳ ಕಾಲ ಮಾತನಾಡಬಹುದು ಎಂದು ಹೇಳಿದೆ. ಜೊತೆಗೆ ಆಕೆಗೆ ಬೆಚ್ಚನೆಯ ಉಡುಪುಗಳು ಮತ್ತು ಪುಸ್ತಕಗಳನ್ನೂ ಒದಗಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ.

ಇದನ್ನೂ ಓದಿ: ಶಾಸಕರ ರಾಜೀನಾಮೆ: ಬಹುಮತ ಕಳೆದುಕೊಂಡ ಪುದುಚೇರಿ ಕಾಂಗ್ರೆಸ್ ಸರ್ಕಾರ

ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ ಗ್ರೇಟಾ ಥನ್‌ಬರ್ಗ್ ಟೂಲ್‌ಕಿಟ್ ಒಂದನ್ನು ಹಂಚಿಕೊಂಡಿದ್ದರು. ಇದರಲ್ಲಿ ಭಯೋತ್ಪಾದಕರ ಕೈವಾಡವಿದೆ ಮತ್ತು ಖಲೀಸ್ತಾನಿಗಳ ಹಸ್ತಕ್ಷೇಪವಿದೆ ಎಂದು ದೆಹಲಿ ಪೊಲೀಸರು ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಫೆಬ್ರವರಿ 4 ರಂದು ಎಫ್‌ಐಆರ್ ಕೂಡ ದಾಖಲಾಗಿತ್ತು.

ಈ ಹಿನ್ನೆಲೆಯಲ್ಲಿ ಶನಿವಾರ (ಫೆಬ್ರವರಿ 13) ದೇಶದ್ರೋಹ ಆರೋಪದ ಮೇಲೆ ಬಂಧನವಾಗಿರುವ ಬೆಂಗಳೂರು ಮೂಲದ ಪರಿಸರ ಹೋರಾಟಗಾರ್ತಿ ದಿಶಾ ರವಿಯವರ ಮೇಲೆ ದೆಹಲಿ ಪೊಲೀಸರು ನಿಗಾ ಇಟ್ಟಿದ್ದರು ಮತ್ತು ಬಂಧನಕ್ಕೆ ಸಂಪೂರ್ಣ ಸಿದ್ಧರಾಗಿದ್ದರು ಎಂದು ಹೇಳಲಾಗುತ್ತಿದೆ. ಆದರೆ ದಿಶಾ ಅವರನ್ನು ದೆಹಲಿ ಪೊಲೀಸರು ಬಂಧಿಸಿ ಆಕೆಯನ್ನು ವಿಮಾನ ಹತ್ತಿಸುವ ತನಕವೂ ಬೆಂಗಳೂರಿನ ಸ್ಥಳಿಯ ಪೊಲೀಸರಿಗಾಗಲೀ, ರಾಜ್ಯ ಸರ್ಕಾರಕ್ಕಾಗಲೀ ಯಾವುದೇ ಮಾಹಿತಿಯನ್ನು ನೀಡಿಲ್ಲ ಎಂಬುದು ಈ ಬಹು ಚರ್ಚಿತ ವಿಷಯವಾಗಿದೆ. ಇದರ ವಿರುದ್ಧ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.

ರಾಜ್ಯಕ್ಕೆ ಮತ್ತು ಸ್ಥಳೀಯ ಪೊಲೀಸರಿಗೆ ಯಾವುದೇ ಮಾಹಿತಿ ನೀಡದೇ ವ್ಯಕ್ತಿಯೊಬ್ಬರನ್ನು ಬಂಧಿಸುವಂತೆ ಕ್ರಮ ತೆಗೆದುಕೊಂಡಿರುವ ದೆಹಲಿ ಪೊಲೀಸರು ಮತ್ತು ಕೇಂದ್ರ ಸರ್ಕಾರದ ವಿರುದ್ಧ ಹಲವರು ಟೀಕೆ ಮಾಡುತ್ತಿದ್ದಾರೆ. ಮತ್ತೊಂದು ಕಡೆ ಈ ಪ್ರಕರಣದಲ್ಲಿ ರಾಜ್ಯಸರ್ಕಾರ ಇನ್ನೂ ಈ ವಿಚಾರಕ್ಕೆ ಪ್ರತಿಕ್ರಿಯಿಸದೇ ಇರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.


ಇದನ್ನೂ ಓದಿ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ: ಸರ್ಕಾರದ ವಿರುದ್ದ ಎಳ್ಳು ನೀರು ಬಿಡುವ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....