Homeಮುಖಪುಟತನ್ನ ಮೇಲಿನ ಎಫ್‌ಐಆರ್ ಕಾಪಿ ಪಡೆಯಲು ದಿಶಾಗೆ ಅನುಮತಿ: ಒಪ್ಪದ ದೆಹಲಿ ಪೊಲೀಸರು!

ತನ್ನ ಮೇಲಿನ ಎಫ್‌ಐಆರ್ ಕಾಪಿ ಪಡೆಯಲು ದಿಶಾಗೆ ಅನುಮತಿ: ಒಪ್ಪದ ದೆಹಲಿ ಪೊಲೀಸರು!

ಆಕೆ ಪ್ರತಿದಿನ ತನ್ನ ವಕೀಲರೊಂದಿಗೆ 30 ನಿಮಿಷ ಮತ್ತು ಕುಟುಂಬದವರೊಂದಿಗೆ 15 ನಿಮಿಷಗಳ ಕಾಲ ಮಾತನಾಡಬಹುದು ಎಂದು ಹೇಳಿದೆ. ಜೊತೆಗೆ ಆಕೆಗೆ ಬೆಚ್ಚನೆಯ ಉಡುಪುಗಳು ಮತ್ತು ಪುಸ್ತಕಗಳನ್ನೂ ಒದಗಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಲಕ್ಷಾಂತರ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಜಾಗತಿಕ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಹಂಚಿಕೊಂಡ ಟೂಲ್‌ಕಿಟ್ ಪ್ರಕರಣದಲ್ಲಿ ಬೆಂಗಳೂರು ಮೂಲದ ದಿಶಾ ರವಿಯವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಈಗ ದಿಶಾ ಅವರನ್ನು ದೆಹಲಿ ಕೋರ್ಟ್ 5 ದಿನಗಳ ಪೊಲೀಸ್ ಬಂಧನಕ್ಕೆ ಕಳುಹಿಸಿದೆ. ಇದರ ನಡುವೆಯೇ ದಿಶಾಳನ್ನು ಬೆಂಬಲಿಸಿ ಜಗತ್ತಿನಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಸರ್ಕಾರದ ನಡೆಯನ್ನು ಸಾವಿರಾರು ಜನ ಖಂಡಿಸಿದ್ದಾರೆ. ಜೊತೆಗೆ ಆಕೆಯನ್ನು ಬಿಡುಗಡೆ ಮಾಡುವಂತೆ ವಿವಿದೆಡೆ ಪ್ರತಿಭಟನೆಗಳು ನಡೆಯುತ್ತಿವೆ.

ಈ ಪ್ರಕರಣದಲ್ಲಿ ಪ್ರಮುಖವಾದ ವಿಷಯವೆಂದರೆ, ತನ್ನ ಪ್ರಕರಣದ ಕುರಿತು ನ್ಯಾಯಾಲಯದಲ್ಲಿ ತಾನೇ ವಾದ ಮಾಡುವುದಾಗಿ ದಿಶಾ ಹೇಳಿದ್ದಾರೆ. ಇದು ಬಹುತೇಕರಲ್ಲಿ ಅಚ್ಚರಿಯನ್ನುಂಟುಮಾಡಿತ್ತು. ಈಗ ಇದಕ್ಕೆ ದೆಹಲಿಯ ನ್ಯಾಯಾಲಯ ಅನುಮತಿ ನೀಡಿದ್ದು, ದಿಶಾಳ ಮೇಲಿನ ಆರೋಪದ ಎಫ್‌ಐಆರ್ ಕಾಪಿ ಮತ್ತು ರಿಮಾಂಡ್ ಅರ್ಜಿಯನ್ನು ದಿಶಾ ಪಡೆದುಕೊಳ್ಳಬಹುದು ಎಂದು ಹೇಳಿದೆ. ಆದರೆ ಇದನ್ನು ದೆಹಲಿ ಪೊಲೀಸರು ವಿರೋಧಿಸಿದ್ದಾರೆ!

ಇದನ್ನೂ ಓದಿ: ರೈತ ಹೋರಾಟ- ದ.ಕ ಜಿಲ್ಲೆಯ ರೈತರು ಸೊಲ್ಲೆತ್ತಲಿಲ್ಲವೇಕೆ?: ಮಿಸ್ರಿಯಾ ಪಜೀರ್

ಇನ್ನು ಆಕೆ ಪ್ರತಿದಿನ ತನ್ನ ವಕೀಲರೊಂದಿಗೆ 30 ನಿಮಿಷ ಮತ್ತು ಕುಟುಂಬದವರೊಂದಿಗೆ 15 ನಿಮಿಷಗಳ ಕಾಲ ಮಾತನಾಡಬಹುದು ಎಂದು ಹೇಳಿದೆ. ಜೊತೆಗೆ ಆಕೆಗೆ ಬೆಚ್ಚನೆಯ ಉಡುಪುಗಳು ಮತ್ತು ಪುಸ್ತಕಗಳನ್ನೂ ಒದಗಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ.

ಇದನ್ನೂ ಓದಿ: ಶಾಸಕರ ರಾಜೀನಾಮೆ: ಬಹುಮತ ಕಳೆದುಕೊಂಡ ಪುದುಚೇರಿ ಕಾಂಗ್ರೆಸ್ ಸರ್ಕಾರ

ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ ಗ್ರೇಟಾ ಥನ್‌ಬರ್ಗ್ ಟೂಲ್‌ಕಿಟ್ ಒಂದನ್ನು ಹಂಚಿಕೊಂಡಿದ್ದರು. ಇದರಲ್ಲಿ ಭಯೋತ್ಪಾದಕರ ಕೈವಾಡವಿದೆ ಮತ್ತು ಖಲೀಸ್ತಾನಿಗಳ ಹಸ್ತಕ್ಷೇಪವಿದೆ ಎಂದು ದೆಹಲಿ ಪೊಲೀಸರು ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಫೆಬ್ರವರಿ 4 ರಂದು ಎಫ್‌ಐಆರ್ ಕೂಡ ದಾಖಲಾಗಿತ್ತು.

ಈ ಹಿನ್ನೆಲೆಯಲ್ಲಿ ಶನಿವಾರ (ಫೆಬ್ರವರಿ 13) ದೇಶದ್ರೋಹ ಆರೋಪದ ಮೇಲೆ ಬಂಧನವಾಗಿರುವ ಬೆಂಗಳೂರು ಮೂಲದ ಪರಿಸರ ಹೋರಾಟಗಾರ್ತಿ ದಿಶಾ ರವಿಯವರ ಮೇಲೆ ದೆಹಲಿ ಪೊಲೀಸರು ನಿಗಾ ಇಟ್ಟಿದ್ದರು ಮತ್ತು ಬಂಧನಕ್ಕೆ ಸಂಪೂರ್ಣ ಸಿದ್ಧರಾಗಿದ್ದರು ಎಂದು ಹೇಳಲಾಗುತ್ತಿದೆ. ಆದರೆ ದಿಶಾ ಅವರನ್ನು ದೆಹಲಿ ಪೊಲೀಸರು ಬಂಧಿಸಿ ಆಕೆಯನ್ನು ವಿಮಾನ ಹತ್ತಿಸುವ ತನಕವೂ ಬೆಂಗಳೂರಿನ ಸ್ಥಳಿಯ ಪೊಲೀಸರಿಗಾಗಲೀ, ರಾಜ್ಯ ಸರ್ಕಾರಕ್ಕಾಗಲೀ ಯಾವುದೇ ಮಾಹಿತಿಯನ್ನು ನೀಡಿಲ್ಲ ಎಂಬುದು ಈ ಬಹು ಚರ್ಚಿತ ವಿಷಯವಾಗಿದೆ. ಇದರ ವಿರುದ್ಧ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.

ರಾಜ್ಯಕ್ಕೆ ಮತ್ತು ಸ್ಥಳೀಯ ಪೊಲೀಸರಿಗೆ ಯಾವುದೇ ಮಾಹಿತಿ ನೀಡದೇ ವ್ಯಕ್ತಿಯೊಬ್ಬರನ್ನು ಬಂಧಿಸುವಂತೆ ಕ್ರಮ ತೆಗೆದುಕೊಂಡಿರುವ ದೆಹಲಿ ಪೊಲೀಸರು ಮತ್ತು ಕೇಂದ್ರ ಸರ್ಕಾರದ ವಿರುದ್ಧ ಹಲವರು ಟೀಕೆ ಮಾಡುತ್ತಿದ್ದಾರೆ. ಮತ್ತೊಂದು ಕಡೆ ಈ ಪ್ರಕರಣದಲ್ಲಿ ರಾಜ್ಯಸರ್ಕಾರ ಇನ್ನೂ ಈ ವಿಚಾರಕ್ಕೆ ಪ್ರತಿಕ್ರಿಯಿಸದೇ ಇರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.


ಇದನ್ನೂ ಓದಿ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ: ಸರ್ಕಾರದ ವಿರುದ್ದ ಎಳ್ಳು ನೀರು ಬಿಡುವ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...