Homeಮುಖಪುಟದಿಶಾ ರವಿ ಪ್ರಕರಣ: ದೆಹಲಿ ಪೊಲೀಸರಿಗೆ, ಮಾಧ್ಯಮಗಳಿಗೆ ಹೈಕೋರ್ಟ್ ಎಚ್ಚರಿಕೆ

ದಿಶಾ ರವಿ ಪ್ರಕರಣ: ದೆಹಲಿ ಪೊಲೀಸರಿಗೆ, ಮಾಧ್ಯಮಗಳಿಗೆ ಹೈಕೋರ್ಟ್ ಎಚ್ಚರಿಕೆ

ಪ್ರಕರಣದ ತನಿಖೆಗೆ ಅಡ್ಡಿಯಾಗದಿರುವಂತೆ ಸರಿಯಾದ ಸಂಪಾದಕೀಯ ನಿಯಂತ್ರಣವನ್ನು ಸುದ್ದಿ ಮಾಧ್ಯಮ ಹೊಂದಿದೆಯೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಸುದ್ದಿ ಚಾನೆಲ್‌ಗಳಿಗೆ ಹೈಕೋರ್ಟ್ ತಿಳಿಸಿದೆ.

- Advertisement -
- Advertisement -

ಪರಿಸರ ಕಾರ್ಯಕರ್ತೆ ದಿಶಾ ರವಿ ಅವರ ವಾಟ್ಸಾಪ್ ಸಂಭಾಷಣೆಯ ವಿಷಯಗಳನ್ನು ಪ್ರಕಟಿಸುವುದನ್ನು ನಿಷೇಧಿಸಬೇಕೆಂದು ಕೋರಿದ್ದ ಅರ್ಜಿ ವಿಚಾರಣೆ ನಡೆಸುತ್ತಿರುವ ದೆಹಲಿ ಹೈಕೋರ್ಟ್ ಈ ಕುರಿತು ದೆಹಲಿ ಪೊಲೀಸರಿಗೆ, ಮಾಧ್ಯಮಗಳಿಗೆ ಎಚ್ಚರಿಕೆ ನೀಡಿದೆ.

ನಿನ್ನೆ (ಫೆ.18) ರಂದು ಖಾಸಗಿ ಸುದ್ದಿ ಚಾನೆಲ್‌ಗಳಾದ ನ್ಯೂಸ್ 18, ಇಂಡಿಯಾ ಟುಡೆ ಮತ್ತು ಟೈಮ್ಸ್ ನೌ ಚಾನೆಲ್‌ಗಳಿಗೆ  ನೋಟಿಸ್ ನೀಡಲಾಗಿತ್ತು. ಈ ಚಾನೆಲ್‌ಗಳು ಮೂರನೇ ವ್ಯಕ್ತಿಯೊಂದಿಗೆ ತನ್ನ ಖಾಸಗಿ ಚಾಟ್‌ಗಳ ವಿಷಯವನ್ನು ಪ್ರಕಟಿಸಿದ್ದಕ್ಕಾಗಿ ಕೇಬಲ್ ಟಿವಿ ನೆಟ್‌ವರ್ಕ್ ನಿಯಮಗಳನ್ನು ಉಲ್ಲಂಘಿಸಿವೆ ಎಂದು ದಿಶಾ ಆರೋಪಿಸಿದ್ದಾರೆ.

ಇಂದು ಕೂಡ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್, ವರದಿಗಾರರು ಕೇಳುವ ಯಾವುದೇ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂಬ ತಮ್ಮ ನಿಲುವಿಗೆ ಅಂಟಿಕೊಳ್ಳಬೇಕೆಂದು ದೆಹಲಿ ಪೊಲೀಸರಿಗೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ದಿಶಾಳ ವಾಟ್ಸಾಪ್ ಚಾಟ್ಸ್‌, ತನಿಖಾ ಮಾಹಿತಿ ಸೋರಿಕೆ: ನ್ಯೂಸ್‌ ಚಾನೆಲ್‌ಗಳಿಗೆ ನೋಟಿಸ್!

“ಪತ್ರಕರ್ತರಿಗೆ ತಮ್ಮ ಮೂಲವನ್ನು ಬಹಿರಂಗಪಡಿಸಲು ಹೇಳಲಾಗುವುದಿಲ್ಲ, ಅದರೂ ಸುದ್ದಿ ಅಧಿಕೃತವಾಗಿರಬೇಕು. ದೆಹಲಿ ಪೊಲೀಸರು ಕೂಡ ಯಾವುದೇ ಮಾಹಿತಿ ಸೋರಿಕೆ ಮಾಡಿಲ್ಲ ಎಂದು ಹೇಳುತ್ತಾರೆ. ಆದರೆ ಮಾಧ್ಯಮಗಳು ಇದಕ್ಕೆ ವಿರುದ್ಧವಾಗಿ ಹೇಳಿಕೊಳ್ಳುತ್ತಿವೆ” ಎಂದು ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ.

ಯಾವುದೇ ಮಾಹಿತಿಯನ್ನು ಪ್ರಸಾರ ಮಾಡುವಾಗ, ಪ್ರಕರಣದ ತನಿಖೆಗೆ ಅಡ್ಡಿಯಾಗದಿರುವಂತೆ ಸರಿಯಾದ ಸಂಪಾದಕೀಯ ನಿಯಂತ್ರಣವನ್ನು ಸುದ್ದಿ ಮಾಧ್ಯಮ ಹೊಂದಿದೆಯೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಸುದ್ದಿ ಚಾನೆಲ್‌ಗಳಿಗೆ ಹೈಕೋರ್ಟ್ ತಿಳಿಸಿದೆ.

ದಿಶಾ ಅವರನ್ನು ಟೂಲ್‌ಕಿಟ್ ಪ್ರಕರಣದಲ್ಲಿ ಭಾನುವಾರ (ಫೆ.14) ದಂದು ಅವರ ಬೆಂಗಳೂರು ಮನೆಯಿಂದ ಬಂಧಿಸಲಾಗಿದ್ದು, ಅಂದಿನಿಂದ ದೆಹಲಿ ಪೊಲೀಸರ ವಶದಲ್ಲಿದ್ದಾರೆ.


ಇದನ್ನೂ ಓದಿ: ಪಶ್ಚಿಮ ಬಂಗಾಳ: ’ಸಚಿವರ ಮೇಲಿನ ಬಾಂಬ್ ದಾಳಿ ಪಿತೂರಿಯ ಭಾಗ’ ಎಂದ ಮಮತಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...