Homeಮುಖಪುಟದಿಶಾ ರವಿ ಕೇಸ್: ಟೂಲ್‌ಕಿಟ್ ಎಂದರೇನು..? ಪೊಲೀಸರಿಗೆ ಹೈಕೋರ್ಟ್ ಪ್ರಶ್ನೆ

ದಿಶಾ ರವಿ ಕೇಸ್: ಟೂಲ್‌ಕಿಟ್ ಎಂದರೇನು..? ಪೊಲೀಸರಿಗೆ ಹೈಕೋರ್ಟ್ ಪ್ರಶ್ನೆ

ದಿಶಾ ರವಿ ವಿರುದ್ಧದ ಆರೋಪಗಳು ಯಾವುವು? ಆಕೆಯ ವಿರುದ್ಧದ ಸಾಕ್ಷ್ಯಗಳು ಯಾವುವು?" ಎಂಬ ಪ್ರಶ್ನೆಗಳನ್ನು ನ್ಯಾಯಾಲಯ ಕೇಳಿದೆ

- Advertisement -
- Advertisement -

ಟೂಲ್‌ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಪರಿಸರ ಹೋರಾಟಗಾರ್ತಿ ದಿಶಾರವಿ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ನಡೆಸುತ್ತಿದೆ. ಈ ವೇಳೆ ದಿಶಾ ರವಿ ಮನವಿಯನ್ನು ಆಲಿಸಿದ ನ್ಯಾಯಾಲಯ, “ಟೂಲ್‌ಕಿಟ್ ಎಂದರೇನು?” ಎಂದು ದೆಹಲಿ ಪೊಲೀಸರನ್ನು ಪ್ರಶ್ನಿಸಿದೆ.

ಟೂಲ್‌ಕಿಟ್ ಆರೋಪದಲ್ಲಿ ಬಂಧಿಸಲಾಗಿರುವ ದಿಶಾ ರವಿಗೆ ಜಾಮೀನು ನೀಡುವುದನ್ನು ತಡೆಯುತ್ತಿರುವ ಕಾನೂನು ಯಾವುದು ಎಂದು ನ್ಯಾಯಾಧೀಶರು ಕೇಳಿದ್ದಾರೆ. ಜೊತೆಗೆ “ಪ್ರಾಸಿಕ್ಯೂಷನ್ ಕಥೆ ಏನು? ದಿಶಾ ರವಿ ವಿರುದ್ಧದ ಆರೋಪಗಳು ಯಾವುವು? ಆಕೆಯ ವಿರುದ್ಧದ ಸಾಕ್ಷ್ಯಗಳು ಯಾವುವು?” ಎಂಬ ಮೂರು ಪ್ರಶ್ನೆಗಳನ್ನು ನ್ಯಾಯಾಲಯ ಪೊಲೀಸರನ್ನು ಪ್ರಶ್ನಿಸಿದೆ.

ಇದಕ್ಕೆ ಉತ್ತರಿಸಿರುವ ದೆಹಲಿ ಪೊಲೀಸರು, ಕೆನಡಾ ಮೂಲದ ಪಿಜೆಎಫ್ ಸಂಘಟನೆ ಖಲಿಸ್ತಾನ್ ರಾಜ್ಯವನ್ನು ರಚಿಸುವುದನ್ನು ಸಮರ್ಥಿಸುತ್ತದೆ. “ಪ್ರತ್ಯೇಕತಾವಾದಿ ಸಂಘಟನೆಯ” ಟ್ವೀಟ್‌ಗಳು ಅವರ ಕಾರ್ಯಸೂಚಿಯಿಂದ ಸ್ಪಷ್ಟವಾಗಿವೆ ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಪೊಲೀಸರ ಟೂಲ್‌ಕಿಟ್‌ನಲ್ಲಿ 124(A), 153(A), 120(B), UAPA! – ಟೂಲ್‌ಕಿಟ್ ಕೊಟ್ಟವರಾರು?

“ಖಲಿಸ್ತಾನಿಗಳು ರೈತರ ಪ್ರತಿಭಟನೆಯ ಲಾಭವನ್ನು ಪಡೆಯಲು ಬಯಸಿದ್ದರು. ಅವರಿಗೆ ಭಾರತೀಯ ಮುಖ ಬೇಕಿತ್ತು. ಅವರು ದಿಶಾ ರವಿ ಸೇರಿದಂತೆ ಕೆಲವೇ ಜನರೊಂದಿಗೆ ಸಂಪರ್ಕ ಹೊಂದಿದ್ದರು. ಒಂದು ವ್ಯವಸ್ಥೆಯನ್ನು ರೂಪಿಸಲಾಯಿತು. ಈ ಟೂಲ್ಕಿಟ್ ತಯಾರಿಸುವ ಸಂಪೂರ್ಣ ಉದ್ದೇಶ ಪಿತೂರಿಯಾಗಿದೆ” ಎಂದು ಪೊಲೀಸರು ವಾದಿಸಿದ್ದಾರೆ.

“ನಿರಂತರವಾಗಿ ದಿಶಾ ರವಿ ತನಿಖೆಗೆ ಸಹಕರಿಸಲು ನಿರಾಕರಿಸುತ್ತಿದ್ದಾರೆ. ಆಕೆಯ ಎಲೆಕ್ಟ್ರಾನಿಕ್ ಸಾಧನಗಳನ್ನು ಎಫ್‌ಎಸ್‌ಎಲ್ ತಜ್ಞರಿಗೆ ಕಳುಹಿಸಲಾಗಿದೆ. ಪ್ರಾಥಮಿಕ ಸಂಶೋಧನೆಗಳ ಪ್ರಕಾರ ಕೆಲವು ವಿಷಯಗಳನ್ನು ಅಳಿಸಲಾಗಿದೆ ಎಂದು ತೋರಿಸುತ್ತದೆ. ಅದು ಸಾಕ್ಷ್ಯಗಳ ನಾಶ. ತನಿಖೆ ಇನ್ನೂ ಪ್ರಾಥಮಿಕ ಹಂತದಲ್ಲಿದೆ” ಎಂದು ಪ್ರಾಸಿಕ್ಯೂಷನ್ ವಾದಿಸಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು “ದೆಹಲಿ ಪೊಲೀಸರ ವಾದವನ್ನು ಒಪ್ಪದೆ, ನನ್ನ ಆತ್ಮಸಾಕ್ಷಿಗೆ ಒಪ್ಪಿಗೆಯಾಗದ ಹೊರತು ಮುಂದುವರಿಯಲು ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.

ದೆಹಲಿಯಲ್ಲಿ ಜನವರಿ 26 ರ ಗಣರಾಜ್ಯೋತ್ಸವದಂದು ನಡೆದ ಅಹಿತಕರ ಘಟನೆಯಲ್ಲಿ ಪೊಲೀಸರ ತನಿಖೆಯ ಒಂದು ಅಂಗವಾದ ಟೂಲ್‌ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 13 ರಂದು ದಿಶಾ ರವಿಯನ್ನು ಬೆಂಗಳೂರಿನಿಂದ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ: ‘ಹೊಸ ಧರ್ಮಗಳ ಉದಯ’ ಪಾಠ ಮಾಡಬೇಡಿ: ಶಾಲೆಗಳಿಗೆ ಆದೇಶ ನೀಡಿದ ಶಿಕ್ಷಣ ಇಲಾಖೆ!

ಆ ದಿನದ ಘಟನೆಗಳಲ್ಲಿ ವಿದೇಶಿ ಪ್ರತ್ಯೇಕತಾವಾದಿ ಶಕ್ತಿಗಳು ಭಾಗಿಯಾಗಿವೆ ಎಂದು ಅಧಿಕಾರಿಗಳು ಆರೋಪಿಸಿದ್ದು, ಈ ಸಂಬಂಧ ದಿಶಾ ರವಿ ಜೊತೆಗೆ ನಿಕಿತಾ ಜಾಕೋಬ್ ಮತ್ತು ಶಾಂತನು ಮುಲುಕ್ ಎಂಬ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದರು. ಇವರಿಬ್ಬರಿಗೂ ಜಾಮೀನು ನೀಡಲಾಗಿದೆ.

ಈ ಮೂವರು ಭಾರತದ ವಿರುದ್ಧ ಅಂತರರಾಷ್ಟ್ರೀಯ ಅಭಿಯಾನವನ್ನು ಆಯೋಜಿಸಲು ಟೂಲ್‌ಕಿಟ್ ರಚಿಸಿದ್ದಾರೆ ಎಂಬ ಆರೋಪವಿದೆ. ದೆಹಲಿ ಪೊಲೀಸರ ಕೋರಿಕೆಯ ಮೇರೆಗೆ ದೆಹಲಿ ನ್ಯಾಯಾಲಯವು ದಿಶಾ ರವಿ ಅವರನ್ನು ಮೂರು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಫೆಬ್ರವರಿ 22 ರಂದು ಅವರನ್ನು ಮತ್ತೆ ವಿಚಾರಣೆಗೆ ಒಳಪಡಿಸಲು ಬಯಸಿದ್ದರಿಂದ ಮೂರು ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿಡಬೇಕೆಂದು ಪೊಲೀಸರು ನ್ಯಾಯಾಧೀಶರನ್ನು ಕೋರಿದ್ದರಿಂದ ನ್ಯಾಯಾಲಯವು ಈ ಆದೇಶ ನೀಡಿದೆ.


ಇದನ್ನೂ ಓದಿ: ಟೂಲ್ಕಿಟ್ ಪ್ರಕರಣ – ದಿಶಾ ರವಿಗೆ ಮೂರು ದಿನಗಳ ನ್ಯಾಯಾಂಗ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...