Homeಮುಖಪುಟದಿಶಾ ರವಿ ಕೇಸ್: ಟೂಲ್‌ಕಿಟ್ ಎಂದರೇನು..? ಪೊಲೀಸರಿಗೆ ಹೈಕೋರ್ಟ್ ಪ್ರಶ್ನೆ

ದಿಶಾ ರವಿ ಕೇಸ್: ಟೂಲ್‌ಕಿಟ್ ಎಂದರೇನು..? ಪೊಲೀಸರಿಗೆ ಹೈಕೋರ್ಟ್ ಪ್ರಶ್ನೆ

ದಿಶಾ ರವಿ ವಿರುದ್ಧದ ಆರೋಪಗಳು ಯಾವುವು? ಆಕೆಯ ವಿರುದ್ಧದ ಸಾಕ್ಷ್ಯಗಳು ಯಾವುವು?" ಎಂಬ ಪ್ರಶ್ನೆಗಳನ್ನು ನ್ಯಾಯಾಲಯ ಕೇಳಿದೆ

- Advertisement -
- Advertisement -

ಟೂಲ್‌ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಪರಿಸರ ಹೋರಾಟಗಾರ್ತಿ ದಿಶಾರವಿ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ನಡೆಸುತ್ತಿದೆ. ಈ ವೇಳೆ ದಿಶಾ ರವಿ ಮನವಿಯನ್ನು ಆಲಿಸಿದ ನ್ಯಾಯಾಲಯ, “ಟೂಲ್‌ಕಿಟ್ ಎಂದರೇನು?” ಎಂದು ದೆಹಲಿ ಪೊಲೀಸರನ್ನು ಪ್ರಶ್ನಿಸಿದೆ.

ಟೂಲ್‌ಕಿಟ್ ಆರೋಪದಲ್ಲಿ ಬಂಧಿಸಲಾಗಿರುವ ದಿಶಾ ರವಿಗೆ ಜಾಮೀನು ನೀಡುವುದನ್ನು ತಡೆಯುತ್ತಿರುವ ಕಾನೂನು ಯಾವುದು ಎಂದು ನ್ಯಾಯಾಧೀಶರು ಕೇಳಿದ್ದಾರೆ. ಜೊತೆಗೆ “ಪ್ರಾಸಿಕ್ಯೂಷನ್ ಕಥೆ ಏನು? ದಿಶಾ ರವಿ ವಿರುದ್ಧದ ಆರೋಪಗಳು ಯಾವುವು? ಆಕೆಯ ವಿರುದ್ಧದ ಸಾಕ್ಷ್ಯಗಳು ಯಾವುವು?” ಎಂಬ ಮೂರು ಪ್ರಶ್ನೆಗಳನ್ನು ನ್ಯಾಯಾಲಯ ಪೊಲೀಸರನ್ನು ಪ್ರಶ್ನಿಸಿದೆ.

ಇದಕ್ಕೆ ಉತ್ತರಿಸಿರುವ ದೆಹಲಿ ಪೊಲೀಸರು, ಕೆನಡಾ ಮೂಲದ ಪಿಜೆಎಫ್ ಸಂಘಟನೆ ಖಲಿಸ್ತಾನ್ ರಾಜ್ಯವನ್ನು ರಚಿಸುವುದನ್ನು ಸಮರ್ಥಿಸುತ್ತದೆ. “ಪ್ರತ್ಯೇಕತಾವಾದಿ ಸಂಘಟನೆಯ” ಟ್ವೀಟ್‌ಗಳು ಅವರ ಕಾರ್ಯಸೂಚಿಯಿಂದ ಸ್ಪಷ್ಟವಾಗಿವೆ ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಪೊಲೀಸರ ಟೂಲ್‌ಕಿಟ್‌ನಲ್ಲಿ 124(A), 153(A), 120(B), UAPA! – ಟೂಲ್‌ಕಿಟ್ ಕೊಟ್ಟವರಾರು?

“ಖಲಿಸ್ತಾನಿಗಳು ರೈತರ ಪ್ರತಿಭಟನೆಯ ಲಾಭವನ್ನು ಪಡೆಯಲು ಬಯಸಿದ್ದರು. ಅವರಿಗೆ ಭಾರತೀಯ ಮುಖ ಬೇಕಿತ್ತು. ಅವರು ದಿಶಾ ರವಿ ಸೇರಿದಂತೆ ಕೆಲವೇ ಜನರೊಂದಿಗೆ ಸಂಪರ್ಕ ಹೊಂದಿದ್ದರು. ಒಂದು ವ್ಯವಸ್ಥೆಯನ್ನು ರೂಪಿಸಲಾಯಿತು. ಈ ಟೂಲ್ಕಿಟ್ ತಯಾರಿಸುವ ಸಂಪೂರ್ಣ ಉದ್ದೇಶ ಪಿತೂರಿಯಾಗಿದೆ” ಎಂದು ಪೊಲೀಸರು ವಾದಿಸಿದ್ದಾರೆ.

“ನಿರಂತರವಾಗಿ ದಿಶಾ ರವಿ ತನಿಖೆಗೆ ಸಹಕರಿಸಲು ನಿರಾಕರಿಸುತ್ತಿದ್ದಾರೆ. ಆಕೆಯ ಎಲೆಕ್ಟ್ರಾನಿಕ್ ಸಾಧನಗಳನ್ನು ಎಫ್‌ಎಸ್‌ಎಲ್ ತಜ್ಞರಿಗೆ ಕಳುಹಿಸಲಾಗಿದೆ. ಪ್ರಾಥಮಿಕ ಸಂಶೋಧನೆಗಳ ಪ್ರಕಾರ ಕೆಲವು ವಿಷಯಗಳನ್ನು ಅಳಿಸಲಾಗಿದೆ ಎಂದು ತೋರಿಸುತ್ತದೆ. ಅದು ಸಾಕ್ಷ್ಯಗಳ ನಾಶ. ತನಿಖೆ ಇನ್ನೂ ಪ್ರಾಥಮಿಕ ಹಂತದಲ್ಲಿದೆ” ಎಂದು ಪ್ರಾಸಿಕ್ಯೂಷನ್ ವಾದಿಸಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು “ದೆಹಲಿ ಪೊಲೀಸರ ವಾದವನ್ನು ಒಪ್ಪದೆ, ನನ್ನ ಆತ್ಮಸಾಕ್ಷಿಗೆ ಒಪ್ಪಿಗೆಯಾಗದ ಹೊರತು ಮುಂದುವರಿಯಲು ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.

ದೆಹಲಿಯಲ್ಲಿ ಜನವರಿ 26 ರ ಗಣರಾಜ್ಯೋತ್ಸವದಂದು ನಡೆದ ಅಹಿತಕರ ಘಟನೆಯಲ್ಲಿ ಪೊಲೀಸರ ತನಿಖೆಯ ಒಂದು ಅಂಗವಾದ ಟೂಲ್‌ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 13 ರಂದು ದಿಶಾ ರವಿಯನ್ನು ಬೆಂಗಳೂರಿನಿಂದ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ: ‘ಹೊಸ ಧರ್ಮಗಳ ಉದಯ’ ಪಾಠ ಮಾಡಬೇಡಿ: ಶಾಲೆಗಳಿಗೆ ಆದೇಶ ನೀಡಿದ ಶಿಕ್ಷಣ ಇಲಾಖೆ!

ಆ ದಿನದ ಘಟನೆಗಳಲ್ಲಿ ವಿದೇಶಿ ಪ್ರತ್ಯೇಕತಾವಾದಿ ಶಕ್ತಿಗಳು ಭಾಗಿಯಾಗಿವೆ ಎಂದು ಅಧಿಕಾರಿಗಳು ಆರೋಪಿಸಿದ್ದು, ಈ ಸಂಬಂಧ ದಿಶಾ ರವಿ ಜೊತೆಗೆ ನಿಕಿತಾ ಜಾಕೋಬ್ ಮತ್ತು ಶಾಂತನು ಮುಲುಕ್ ಎಂಬ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದರು. ಇವರಿಬ್ಬರಿಗೂ ಜಾಮೀನು ನೀಡಲಾಗಿದೆ.

ಈ ಮೂವರು ಭಾರತದ ವಿರುದ್ಧ ಅಂತರರಾಷ್ಟ್ರೀಯ ಅಭಿಯಾನವನ್ನು ಆಯೋಜಿಸಲು ಟೂಲ್‌ಕಿಟ್ ರಚಿಸಿದ್ದಾರೆ ಎಂಬ ಆರೋಪವಿದೆ. ದೆಹಲಿ ಪೊಲೀಸರ ಕೋರಿಕೆಯ ಮೇರೆಗೆ ದೆಹಲಿ ನ್ಯಾಯಾಲಯವು ದಿಶಾ ರವಿ ಅವರನ್ನು ಮೂರು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಫೆಬ್ರವರಿ 22 ರಂದು ಅವರನ್ನು ಮತ್ತೆ ವಿಚಾರಣೆಗೆ ಒಳಪಡಿಸಲು ಬಯಸಿದ್ದರಿಂದ ಮೂರು ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿಡಬೇಕೆಂದು ಪೊಲೀಸರು ನ್ಯಾಯಾಧೀಶರನ್ನು ಕೋರಿದ್ದರಿಂದ ನ್ಯಾಯಾಲಯವು ಈ ಆದೇಶ ನೀಡಿದೆ.


ಇದನ್ನೂ ಓದಿ: ಟೂಲ್ಕಿಟ್ ಪ್ರಕರಣ – ದಿಶಾ ರವಿಗೆ ಮೂರು ದಿನಗಳ ನ್ಯಾಯಾಂಗ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...