Homeಮುಖಪುಟದಿಶಾ ರವಿ ಕೇಸ್: ಟೂಲ್‌ಕಿಟ್ ಎಂದರೇನು..? ಪೊಲೀಸರಿಗೆ ಹೈಕೋರ್ಟ್ ಪ್ರಶ್ನೆ

ದಿಶಾ ರವಿ ಕೇಸ್: ಟೂಲ್‌ಕಿಟ್ ಎಂದರೇನು..? ಪೊಲೀಸರಿಗೆ ಹೈಕೋರ್ಟ್ ಪ್ರಶ್ನೆ

ದಿಶಾ ರವಿ ವಿರುದ್ಧದ ಆರೋಪಗಳು ಯಾವುವು? ಆಕೆಯ ವಿರುದ್ಧದ ಸಾಕ್ಷ್ಯಗಳು ಯಾವುವು?" ಎಂಬ ಪ್ರಶ್ನೆಗಳನ್ನು ನ್ಯಾಯಾಲಯ ಕೇಳಿದೆ

- Advertisement -
- Advertisement -

ಟೂಲ್‌ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಪರಿಸರ ಹೋರಾಟಗಾರ್ತಿ ದಿಶಾರವಿ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ನಡೆಸುತ್ತಿದೆ. ಈ ವೇಳೆ ದಿಶಾ ರವಿ ಮನವಿಯನ್ನು ಆಲಿಸಿದ ನ್ಯಾಯಾಲಯ, “ಟೂಲ್‌ಕಿಟ್ ಎಂದರೇನು?” ಎಂದು ದೆಹಲಿ ಪೊಲೀಸರನ್ನು ಪ್ರಶ್ನಿಸಿದೆ.

ಟೂಲ್‌ಕಿಟ್ ಆರೋಪದಲ್ಲಿ ಬಂಧಿಸಲಾಗಿರುವ ದಿಶಾ ರವಿಗೆ ಜಾಮೀನು ನೀಡುವುದನ್ನು ತಡೆಯುತ್ತಿರುವ ಕಾನೂನು ಯಾವುದು ಎಂದು ನ್ಯಾಯಾಧೀಶರು ಕೇಳಿದ್ದಾರೆ. ಜೊತೆಗೆ “ಪ್ರಾಸಿಕ್ಯೂಷನ್ ಕಥೆ ಏನು? ದಿಶಾ ರವಿ ವಿರುದ್ಧದ ಆರೋಪಗಳು ಯಾವುವು? ಆಕೆಯ ವಿರುದ್ಧದ ಸಾಕ್ಷ್ಯಗಳು ಯಾವುವು?” ಎಂಬ ಮೂರು ಪ್ರಶ್ನೆಗಳನ್ನು ನ್ಯಾಯಾಲಯ ಪೊಲೀಸರನ್ನು ಪ್ರಶ್ನಿಸಿದೆ.

ಇದಕ್ಕೆ ಉತ್ತರಿಸಿರುವ ದೆಹಲಿ ಪೊಲೀಸರು, ಕೆನಡಾ ಮೂಲದ ಪಿಜೆಎಫ್ ಸಂಘಟನೆ ಖಲಿಸ್ತಾನ್ ರಾಜ್ಯವನ್ನು ರಚಿಸುವುದನ್ನು ಸಮರ್ಥಿಸುತ್ತದೆ. “ಪ್ರತ್ಯೇಕತಾವಾದಿ ಸಂಘಟನೆಯ” ಟ್ವೀಟ್‌ಗಳು ಅವರ ಕಾರ್ಯಸೂಚಿಯಿಂದ ಸ್ಪಷ್ಟವಾಗಿವೆ ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಪೊಲೀಸರ ಟೂಲ್‌ಕಿಟ್‌ನಲ್ಲಿ 124(A), 153(A), 120(B), UAPA! – ಟೂಲ್‌ಕಿಟ್ ಕೊಟ್ಟವರಾರು?

“ಖಲಿಸ್ತಾನಿಗಳು ರೈತರ ಪ್ರತಿಭಟನೆಯ ಲಾಭವನ್ನು ಪಡೆಯಲು ಬಯಸಿದ್ದರು. ಅವರಿಗೆ ಭಾರತೀಯ ಮುಖ ಬೇಕಿತ್ತು. ಅವರು ದಿಶಾ ರವಿ ಸೇರಿದಂತೆ ಕೆಲವೇ ಜನರೊಂದಿಗೆ ಸಂಪರ್ಕ ಹೊಂದಿದ್ದರು. ಒಂದು ವ್ಯವಸ್ಥೆಯನ್ನು ರೂಪಿಸಲಾಯಿತು. ಈ ಟೂಲ್ಕಿಟ್ ತಯಾರಿಸುವ ಸಂಪೂರ್ಣ ಉದ್ದೇಶ ಪಿತೂರಿಯಾಗಿದೆ” ಎಂದು ಪೊಲೀಸರು ವಾದಿಸಿದ್ದಾರೆ.

“ನಿರಂತರವಾಗಿ ದಿಶಾ ರವಿ ತನಿಖೆಗೆ ಸಹಕರಿಸಲು ನಿರಾಕರಿಸುತ್ತಿದ್ದಾರೆ. ಆಕೆಯ ಎಲೆಕ್ಟ್ರಾನಿಕ್ ಸಾಧನಗಳನ್ನು ಎಫ್‌ಎಸ್‌ಎಲ್ ತಜ್ಞರಿಗೆ ಕಳುಹಿಸಲಾಗಿದೆ. ಪ್ರಾಥಮಿಕ ಸಂಶೋಧನೆಗಳ ಪ್ರಕಾರ ಕೆಲವು ವಿಷಯಗಳನ್ನು ಅಳಿಸಲಾಗಿದೆ ಎಂದು ತೋರಿಸುತ್ತದೆ. ಅದು ಸಾಕ್ಷ್ಯಗಳ ನಾಶ. ತನಿಖೆ ಇನ್ನೂ ಪ್ರಾಥಮಿಕ ಹಂತದಲ್ಲಿದೆ” ಎಂದು ಪ್ರಾಸಿಕ್ಯೂಷನ್ ವಾದಿಸಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು “ದೆಹಲಿ ಪೊಲೀಸರ ವಾದವನ್ನು ಒಪ್ಪದೆ, ನನ್ನ ಆತ್ಮಸಾಕ್ಷಿಗೆ ಒಪ್ಪಿಗೆಯಾಗದ ಹೊರತು ಮುಂದುವರಿಯಲು ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.

ದೆಹಲಿಯಲ್ಲಿ ಜನವರಿ 26 ರ ಗಣರಾಜ್ಯೋತ್ಸವದಂದು ನಡೆದ ಅಹಿತಕರ ಘಟನೆಯಲ್ಲಿ ಪೊಲೀಸರ ತನಿಖೆಯ ಒಂದು ಅಂಗವಾದ ಟೂಲ್‌ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 13 ರಂದು ದಿಶಾ ರವಿಯನ್ನು ಬೆಂಗಳೂರಿನಿಂದ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ: ‘ಹೊಸ ಧರ್ಮಗಳ ಉದಯ’ ಪಾಠ ಮಾಡಬೇಡಿ: ಶಾಲೆಗಳಿಗೆ ಆದೇಶ ನೀಡಿದ ಶಿಕ್ಷಣ ಇಲಾಖೆ!

ಆ ದಿನದ ಘಟನೆಗಳಲ್ಲಿ ವಿದೇಶಿ ಪ್ರತ್ಯೇಕತಾವಾದಿ ಶಕ್ತಿಗಳು ಭಾಗಿಯಾಗಿವೆ ಎಂದು ಅಧಿಕಾರಿಗಳು ಆರೋಪಿಸಿದ್ದು, ಈ ಸಂಬಂಧ ದಿಶಾ ರವಿ ಜೊತೆಗೆ ನಿಕಿತಾ ಜಾಕೋಬ್ ಮತ್ತು ಶಾಂತನು ಮುಲುಕ್ ಎಂಬ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದರು. ಇವರಿಬ್ಬರಿಗೂ ಜಾಮೀನು ನೀಡಲಾಗಿದೆ.

ಈ ಮೂವರು ಭಾರತದ ವಿರುದ್ಧ ಅಂತರರಾಷ್ಟ್ರೀಯ ಅಭಿಯಾನವನ್ನು ಆಯೋಜಿಸಲು ಟೂಲ್‌ಕಿಟ್ ರಚಿಸಿದ್ದಾರೆ ಎಂಬ ಆರೋಪವಿದೆ. ದೆಹಲಿ ಪೊಲೀಸರ ಕೋರಿಕೆಯ ಮೇರೆಗೆ ದೆಹಲಿ ನ್ಯಾಯಾಲಯವು ದಿಶಾ ರವಿ ಅವರನ್ನು ಮೂರು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಫೆಬ್ರವರಿ 22 ರಂದು ಅವರನ್ನು ಮತ್ತೆ ವಿಚಾರಣೆಗೆ ಒಳಪಡಿಸಲು ಬಯಸಿದ್ದರಿಂದ ಮೂರು ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿಡಬೇಕೆಂದು ಪೊಲೀಸರು ನ್ಯಾಯಾಧೀಶರನ್ನು ಕೋರಿದ್ದರಿಂದ ನ್ಯಾಯಾಲಯವು ಈ ಆದೇಶ ನೀಡಿದೆ.


ಇದನ್ನೂ ಓದಿ: ಟೂಲ್ಕಿಟ್ ಪ್ರಕರಣ – ದಿಶಾ ರವಿಗೆ ಮೂರು ದಿನಗಳ ನ್ಯಾಯಾಂಗ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...