Homeಮುಖಪುಟದಿಶಾ ರವಿ ಕೇಸ್: ಟೂಲ್‌ಕಿಟ್ ಎಂದರೇನು..? ಪೊಲೀಸರಿಗೆ ಹೈಕೋರ್ಟ್ ಪ್ರಶ್ನೆ

ದಿಶಾ ರವಿ ಕೇಸ್: ಟೂಲ್‌ಕಿಟ್ ಎಂದರೇನು..? ಪೊಲೀಸರಿಗೆ ಹೈಕೋರ್ಟ್ ಪ್ರಶ್ನೆ

ದಿಶಾ ರವಿ ವಿರುದ್ಧದ ಆರೋಪಗಳು ಯಾವುವು? ಆಕೆಯ ವಿರುದ್ಧದ ಸಾಕ್ಷ್ಯಗಳು ಯಾವುವು?" ಎಂಬ ಪ್ರಶ್ನೆಗಳನ್ನು ನ್ಯಾಯಾಲಯ ಕೇಳಿದೆ

- Advertisement -
- Advertisement -

ಟೂಲ್‌ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಪರಿಸರ ಹೋರಾಟಗಾರ್ತಿ ದಿಶಾರವಿ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ನಡೆಸುತ್ತಿದೆ. ಈ ವೇಳೆ ದಿಶಾ ರವಿ ಮನವಿಯನ್ನು ಆಲಿಸಿದ ನ್ಯಾಯಾಲಯ, “ಟೂಲ್‌ಕಿಟ್ ಎಂದರೇನು?” ಎಂದು ದೆಹಲಿ ಪೊಲೀಸರನ್ನು ಪ್ರಶ್ನಿಸಿದೆ.

ಟೂಲ್‌ಕಿಟ್ ಆರೋಪದಲ್ಲಿ ಬಂಧಿಸಲಾಗಿರುವ ದಿಶಾ ರವಿಗೆ ಜಾಮೀನು ನೀಡುವುದನ್ನು ತಡೆಯುತ್ತಿರುವ ಕಾನೂನು ಯಾವುದು ಎಂದು ನ್ಯಾಯಾಧೀಶರು ಕೇಳಿದ್ದಾರೆ. ಜೊತೆಗೆ “ಪ್ರಾಸಿಕ್ಯೂಷನ್ ಕಥೆ ಏನು? ದಿಶಾ ರವಿ ವಿರುದ್ಧದ ಆರೋಪಗಳು ಯಾವುವು? ಆಕೆಯ ವಿರುದ್ಧದ ಸಾಕ್ಷ್ಯಗಳು ಯಾವುವು?” ಎಂಬ ಮೂರು ಪ್ರಶ್ನೆಗಳನ್ನು ನ್ಯಾಯಾಲಯ ಪೊಲೀಸರನ್ನು ಪ್ರಶ್ನಿಸಿದೆ.

ಇದಕ್ಕೆ ಉತ್ತರಿಸಿರುವ ದೆಹಲಿ ಪೊಲೀಸರು, ಕೆನಡಾ ಮೂಲದ ಪಿಜೆಎಫ್ ಸಂಘಟನೆ ಖಲಿಸ್ತಾನ್ ರಾಜ್ಯವನ್ನು ರಚಿಸುವುದನ್ನು ಸಮರ್ಥಿಸುತ್ತದೆ. “ಪ್ರತ್ಯೇಕತಾವಾದಿ ಸಂಘಟನೆಯ” ಟ್ವೀಟ್‌ಗಳು ಅವರ ಕಾರ್ಯಸೂಚಿಯಿಂದ ಸ್ಪಷ್ಟವಾಗಿವೆ ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಪೊಲೀಸರ ಟೂಲ್‌ಕಿಟ್‌ನಲ್ಲಿ 124(A), 153(A), 120(B), UAPA! – ಟೂಲ್‌ಕಿಟ್ ಕೊಟ್ಟವರಾರು?

“ಖಲಿಸ್ತಾನಿಗಳು ರೈತರ ಪ್ರತಿಭಟನೆಯ ಲಾಭವನ್ನು ಪಡೆಯಲು ಬಯಸಿದ್ದರು. ಅವರಿಗೆ ಭಾರತೀಯ ಮುಖ ಬೇಕಿತ್ತು. ಅವರು ದಿಶಾ ರವಿ ಸೇರಿದಂತೆ ಕೆಲವೇ ಜನರೊಂದಿಗೆ ಸಂಪರ್ಕ ಹೊಂದಿದ್ದರು. ಒಂದು ವ್ಯವಸ್ಥೆಯನ್ನು ರೂಪಿಸಲಾಯಿತು. ಈ ಟೂಲ್ಕಿಟ್ ತಯಾರಿಸುವ ಸಂಪೂರ್ಣ ಉದ್ದೇಶ ಪಿತೂರಿಯಾಗಿದೆ” ಎಂದು ಪೊಲೀಸರು ವಾದಿಸಿದ್ದಾರೆ.

“ನಿರಂತರವಾಗಿ ದಿಶಾ ರವಿ ತನಿಖೆಗೆ ಸಹಕರಿಸಲು ನಿರಾಕರಿಸುತ್ತಿದ್ದಾರೆ. ಆಕೆಯ ಎಲೆಕ್ಟ್ರಾನಿಕ್ ಸಾಧನಗಳನ್ನು ಎಫ್‌ಎಸ್‌ಎಲ್ ತಜ್ಞರಿಗೆ ಕಳುಹಿಸಲಾಗಿದೆ. ಪ್ರಾಥಮಿಕ ಸಂಶೋಧನೆಗಳ ಪ್ರಕಾರ ಕೆಲವು ವಿಷಯಗಳನ್ನು ಅಳಿಸಲಾಗಿದೆ ಎಂದು ತೋರಿಸುತ್ತದೆ. ಅದು ಸಾಕ್ಷ್ಯಗಳ ನಾಶ. ತನಿಖೆ ಇನ್ನೂ ಪ್ರಾಥಮಿಕ ಹಂತದಲ್ಲಿದೆ” ಎಂದು ಪ್ರಾಸಿಕ್ಯೂಷನ್ ವಾದಿಸಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು “ದೆಹಲಿ ಪೊಲೀಸರ ವಾದವನ್ನು ಒಪ್ಪದೆ, ನನ್ನ ಆತ್ಮಸಾಕ್ಷಿಗೆ ಒಪ್ಪಿಗೆಯಾಗದ ಹೊರತು ಮುಂದುವರಿಯಲು ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.

ದೆಹಲಿಯಲ್ಲಿ ಜನವರಿ 26 ರ ಗಣರಾಜ್ಯೋತ್ಸವದಂದು ನಡೆದ ಅಹಿತಕರ ಘಟನೆಯಲ್ಲಿ ಪೊಲೀಸರ ತನಿಖೆಯ ಒಂದು ಅಂಗವಾದ ಟೂಲ್‌ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 13 ರಂದು ದಿಶಾ ರವಿಯನ್ನು ಬೆಂಗಳೂರಿನಿಂದ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ: ‘ಹೊಸ ಧರ್ಮಗಳ ಉದಯ’ ಪಾಠ ಮಾಡಬೇಡಿ: ಶಾಲೆಗಳಿಗೆ ಆದೇಶ ನೀಡಿದ ಶಿಕ್ಷಣ ಇಲಾಖೆ!

ಆ ದಿನದ ಘಟನೆಗಳಲ್ಲಿ ವಿದೇಶಿ ಪ್ರತ್ಯೇಕತಾವಾದಿ ಶಕ್ತಿಗಳು ಭಾಗಿಯಾಗಿವೆ ಎಂದು ಅಧಿಕಾರಿಗಳು ಆರೋಪಿಸಿದ್ದು, ಈ ಸಂಬಂಧ ದಿಶಾ ರವಿ ಜೊತೆಗೆ ನಿಕಿತಾ ಜಾಕೋಬ್ ಮತ್ತು ಶಾಂತನು ಮುಲುಕ್ ಎಂಬ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದರು. ಇವರಿಬ್ಬರಿಗೂ ಜಾಮೀನು ನೀಡಲಾಗಿದೆ.

ಈ ಮೂವರು ಭಾರತದ ವಿರುದ್ಧ ಅಂತರರಾಷ್ಟ್ರೀಯ ಅಭಿಯಾನವನ್ನು ಆಯೋಜಿಸಲು ಟೂಲ್‌ಕಿಟ್ ರಚಿಸಿದ್ದಾರೆ ಎಂಬ ಆರೋಪವಿದೆ. ದೆಹಲಿ ಪೊಲೀಸರ ಕೋರಿಕೆಯ ಮೇರೆಗೆ ದೆಹಲಿ ನ್ಯಾಯಾಲಯವು ದಿಶಾ ರವಿ ಅವರನ್ನು ಮೂರು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಫೆಬ್ರವರಿ 22 ರಂದು ಅವರನ್ನು ಮತ್ತೆ ವಿಚಾರಣೆಗೆ ಒಳಪಡಿಸಲು ಬಯಸಿದ್ದರಿಂದ ಮೂರು ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿಡಬೇಕೆಂದು ಪೊಲೀಸರು ನ್ಯಾಯಾಧೀಶರನ್ನು ಕೋರಿದ್ದರಿಂದ ನ್ಯಾಯಾಲಯವು ಈ ಆದೇಶ ನೀಡಿದೆ.


ಇದನ್ನೂ ಓದಿ: ಟೂಲ್ಕಿಟ್ ಪ್ರಕರಣ – ದಿಶಾ ರವಿಗೆ ಮೂರು ದಿನಗಳ ನ್ಯಾಯಾಂಗ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...