ದೆಹಲಿ ಪೊಲೀಸರ ಕೋರಿಕೆಯ ಮೇರೆಗೆ ದೆಹಲಿ ನ್ಯಾಯಾಲಯವು ದಿಶಾ ರವಿ ಅವರನ್ನು ಮೂರು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದು, ಮುಂದಿನ ವಾರ ಅವರನ್ನು ಮತ್ತೆ ಪೊಲೀಸ್ ಕಸ್ಟಡಿಗೆ ನೀಡುವಂತೆ ಕೋರಲಿದೆ.
ಗ್ರೇಟಾ ಥನ್ಬರ್ಗ್ ಟೂಲ್ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 13 ರಂದು ಬೆಂಗಳೂರಿನ ತಮ್ಮ ಮನೆಯಿಂದ ಬಂಧಿಸಲ್ಪಟ್ಟಿದ್ದ ದಿಶಾ ರವಿ ಅವರನ್ನು ಐದು ದಿನಗಳ ಕಾಲ ಪೊಲೀಸರು ಪ್ರಶ್ನಿಸಿದ್ದು, ಶುಕ್ರವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.
ಇದನ್ನೂ ಓದಿ: ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ಇಬ್ಬರು ದಾದಿಯರ ವಿರುದ್ಧ ‘ನರಹತ್ಯೆ’ ಪ್ರಕರಣ ದಾಖಲು
ಫೆಬ್ರವರಿ 22 ರಂದು ಅವರನ್ನು ಮತ್ತೆ ವಿಚಾರಣೆಗೆ ಒಳಪಡಿಸಲು ಬಯಸಿದ್ದರಿಂದ ಮೂರು ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿಡಬೇಕೆಂದು ಪೊಲೀಸರು ನ್ಯಾಯಾಧೀಶರನ್ನು ಕೋರಿದ್ದರಿಂದ ನ್ಯಾಯಾಲಯವು ಈ ಆದೇಶ ನೀಡಿದೆ.
ದಿಶಾ ಅವರು ವಿಚಾರಣೆ ವೇಳೆ ಸಹಕರಿಸಲಿಲ್ಲ ಎಂದು ಪೊಲೀಸರ ಪರ ಹಾಜರಾದ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಇರ್ಫಾನ್ ಅಹ್ಮದ್ ನ್ಯಾಯಾಲಯಕ್ಕೆ ತಿಳಿಸಿದರು. ಪೊಲೀಸರು ಮತ್ತೆ ಅವರನ್ನು ಪ್ರಶ್ನಿಸಲು ಮತ್ತು ಈ ಪ್ರಕರಣದ ಇತರ ಸಹ ಆರೋಪಿಗಳೊಂದಿಗೆ ಮುಖಾಮುಖಿಯಾಗಿ ತರಲು ಬಯಸಿದ್ದಾರೆ ಎಂದು ಇರ್ಫಾನ್ ಹೇಳಿದ್ದಾರೆ.
ಫೆಬ್ರವರಿ 22 ರಂದು ವಿಚಾರಣೆ ನಡೆಸುವ ನಿರೀಕ್ಷೆಯಿದ್ದ ಸಹ-ಆರೋಪಿ ಶಾಂತನು ಮುಲುಕ್ಗೆ ಪೊಲೀಸರು ನೋಟಿಸ್ ನೀಡಿದ್ದಾರೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಹೇಳಿದ್ದಾರೆ.
ಇದನ್ನೂ ಓದಿ: ಹೆಚ್ಚು ವಿದ್ಯಾವಂತ ಜನರು ಭಯೋತ್ಪಾದನೆ ಮತ್ತು ಹಿಂಸಾಚಾರವನ್ನು ಹರಡುತ್ತಿದ್ದಾರೆ- ಪ್ರಧಾನಿ ಮೋದಿ