Homeಮುಖಪುಟಮತ್ತೆ ಮುನ್ನೆಲೆಗೆ ಬಂದ ದಿಶಾ ಸಾಲಿಯಾನ್ ಪ್ರಕರಣ: ಆದಿತ್ಯ ಠಾಕ್ರೆ ವಿರುದ್ಧ ತನಿಖೆಗೆ ಆಗ್ರಹ

ಮತ್ತೆ ಮುನ್ನೆಲೆಗೆ ಬಂದ ದಿಶಾ ಸಾಲಿಯಾನ್ ಪ್ರಕರಣ: ಆದಿತ್ಯ ಠಾಕ್ರೆ ವಿರುದ್ಧ ತನಿಖೆಗೆ ಆಗ್ರಹ

- Advertisement -
- Advertisement -

ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನೆ (ಯುಬಿಟಿ) ಶಾಸಕ ಆದಿತ್ಯ ಠಾಕ್ರೆ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿ, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಕೆಯ ತಂದೆ ಸತೀಶ್ ಸಾಲಿಯಾನ್ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಇದರಿಂದ ದಿಶಾ ಸಾಲಿಯಾನ್ ಸಾವನ್ನಪ್ಪಿ ಸುಮಾರು 5 ವರ್ಷಗಳ ಬಳಿಕ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಮಹಾರಾಷ್ಟ್ರದಲ್ಲಿ ರಾಜಕೀಯ ಕಾಳಕಗಕ್ಕೆ ಕಾರಣವಾಗಿದೆ.

ಮಹಾರಾಷ್ಟ್ರದ ಆಡಳಿತಾರೂಢ ಮಹಾಯುತಿಯ ಸದಸ್ಯರು ಗುರುವಾರ ವಿಧಾನಮಂಡಲದ ಉಭಯ ಸದನಗಳಲ್ಲಿ ದಿಶಾ ಸಾಲಿಯಾನ್ ಸಾವಿನ ವಿಚಾರವನ್ನು ಪ್ರಸ್ತಾಪಿಸಿದರು. ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ವಾಗ್ವಾದ ನಡೆಯಿತು.

ಮಹಾಯುತಿ ಶಾಸಕರು ಘೋಷಣೆಗಳನ್ನು ಕೂಗುತ್ತಾ ಸದನದ ಬಾವಿಗಿಳಿದು ದಿಶಾ ಸಾವಿನ ತನಿಖೆಗೆ ಒತ್ತಾಯಿಸಿದರು. ಗೃಹ ಖಾತೆ ಸಚಿವ ಯೋಗೇಶ್ ಕದಮ್ ಅವರು, ಪ್ರಕರಣದ ಎಸ್‌ಐಟಿ ತನಿಖೆ ಇನ್ನೂ ಮುಂದುವರೆದಿದೆ ಮತ್ತು ದಿಶಾ ಸಾಲಿಯಾನ್ ಅವರ ತಂದೆ ರಾಜ್ಯ ಸರ್ಕಾರವನ್ನು ತಮ್ಮ ಅರ್ಜಿಯಲ್ಲಿ ಕಕ್ಷಿದಾರರನ್ನಾಗಿ ಮಾಡಿದ್ದಾರೆ ಎಂದು ತಿಳಿಸಿದರು.

“ನಾವು ನ್ಯಾಯಾಲಯದ ಆದೇಶದಂತೆ ಕಾರ್ಯನಿರ್ವಹಿಸುತ್ತೇವೆ. ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರನ್ನು ಬಿಡುವುದಿಲ್ಲ” ಎಂದರು.

ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ, ಜೂನ್ 8,2020 ರಂದು ಮುಂಬೈ ಉಪನಗರದ ಮಲಾಡ್‌ನಲ್ಲಿರುವ ಬಹುಮಹಡಿ ಕಟ್ಟಡದ 14 ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದರು. ಪೊಲೀಸರು ಇದು ಆಕಸ್ಮಿಕ ಸಾವು ಎಂದು ವರದಿ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಶಿವಸೇನೆ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ, “ಸಿಐಡಿ ತನಿಖೆಯಲ್ಲಿ ಆದಿತ್ಯ ಠಾಕ್ರೆಗೂ ಪ್ರಕರಣಕ್ಕೂ ಯಾವುದೇ ಸಂಬಂಧ ಕಂಡುಬಂದಿಲ್ಲ. ಆದರೂ, ಬಿಜೆಪಿ ನಮ್ಮ ಕುಟುಂಬ ಸದಸ್ಯರನ್ನು ಗುರಿಯಾಗಿಸಿಕೊಂಡು ಮಾನಹಾನಿ ಮಾಡುತ್ತಿದೆ. ಆದಿತ್ಯ ಯಾವುದೇ ತಪ್ಪು ಮಾಡಿಲ್ಲ. ಹೀಗಿರುವಾಗ, ಅವರು ಏಕೆ ಭಯಪಡಬೇಕು? ನಾವು ಯಾವುದೇ ತನಿಖೆಗೆ ಮುಕ್ತರಾಗಿದ್ದೇವೆ” ಎಂದಿದ್ದಾರೆ.

“ನಾಗ್ಪುರ ಹಿಂಸಾಚಾರದಲ್ಲಿ ಬಿಜೆಪಿ ನಾಯಕರ ಬೆರಳುಗಳು ಸುಟ್ಟುಹೋಗಿವೆ. ಆದ್ದರಿಂದ ದಿಶಾ ಸಾಲಿಯಾನ್ ವಿಷಯವನ್ನು ಉದ್ದೇಶಪೂರ್ವಕವಾಗಿ ಕೆಣಕಲಾಗಿದೆ” ಎಂದು ಹೇಳಿದ್ದಾರೆ.

“ಈ ಪ್ರಕರಣವು ಪ್ರಸ್ತುತ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಆದ್ದರಿಂದ, ನಾನು ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ಆದಿತ್ಯ ಠಾಕ್ರೆ ತಿಳಿಸಿದ್ದಾರೆ.

“ಜೂನ್ 8, 2020ರಂದು ದಿಶಾ ತಮ್ಮ ಮನೆಯಲ್ಲಿ ಪಾರ್ಟಿ ಆಯೋಜಿಸಿದ್ದರು. ಅದರಲ್ಲಿ ಆದಿತ್ಯ ಠಾಕ್ರೆ, ನಟರಾದ ಸೂರಜ್ ಪಾಂಚೋಲಿ ಮತ್ತು ಡಿನೋ ಮೋರಿಯಾ ಸೇರಿದಂತೆ ಇತರರು ಭಾಗವಹಿಸಿದ್ದರು. ಪ್ರತ್ಯಕ್ಷದರ್ಶಿಗಳ ಪ್ರಕಾರ, ದಿಶಾ ಮೇಲೆ ‘ಸಾಮೂಹಿಕ ಅತ್ಯಾಚಾರ’ ಎಸಗಲಾಗಿದೆ. ಆಕೆಯನ್ನು ಬಂಧಿಸಿಟ್ಟು ಕ್ರೂರ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ” ಎಂದು ದಿಶಾ ತಂದೆ ಸತೀಶ್ ಸಾಲಿಯಾನ್ ಬಾಂಬೆ ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಆರೋಪಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಒಡಿಶಾ| ಇನ್ನೂರು ರೂಪಾಯಿಗೆ ಮೊಮ್ಮಗನನ್ನು ಮಾರಾಟ ಮಾಡಿದ ವೃದ್ಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...