Homeಮುಖಪುಟದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

- Advertisement -
- Advertisement -

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್ 2020ರಲ್ಲಿ ಮುಂಬೈನ ಉಪನಗರ ಮಲಾಡ್‌ನ ಬಹುಮಹಡಿ ಕಟ್ಟಡದ 14 ನೇ ಮಹಡಿಯಿಂದ ಬಿದ್ದು ದಿಶಾ ಸಾಲಿಯಾನ್ ಅವರು ನಿಗೂಢವಾಗಿ ಮೃತಪಟ್ಟಿದ್ದರು.

ದಿಶಾ ಸಾಲಿಯಾನ್ ಅವರ ತಂದೆ ಸತೀಶ್ ಸಾಲಿಯಾನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಾರಂಗ್ ಕೋತ್ವಾಲ್ ಮತ್ತು ನ್ಯಾಯಮೂರ್ತಿ ರಂಜಿತ್‌ಸಿನ್ಹಾ ಭೋಂಸ್ಲೆ ಅವರಿದ್ದ ವಿಭಾಗೀಯ ಪೀಠ, ಈ ಪ್ರಕರಣದ ತನಿಖೆಯನ್ನು ಕೈಗೊಳ್ಳಲು ಒಬ್ಬ ಹಿರಿಯ ಮತ್ತು ಅನುಭವಿ ಅಧಿಕಾರಿಯನ್ನು ನೇಮಿಸುವಂತೆ ಸಿಬಿಐಗೆ ಆದೇಶಿಸಿದೆ.

ಆದಾಗ್ಯೂ, ತನಿಖಾಧಿಕಾರಿಗೆ ಯಾವುದೇ ವ್ಯಕ್ತಿಯ ವಿರುದ್ಧ ಬಲವಾದ ಅಥವಾ ಅಗತ್ಯ ಸಾಕ್ಷ್ಯಾಧಾರಗಳು ಸಿಗುವವರೆಗೆ, ಯಾರನ್ನೂ ಆರೋಪಿ ಎಂದು ಪರಿಗಣಿಸಬಾರದು ಎಂದು ಹೈಕೋರ್ಟ್ ಇದೇ ವೇಳೆ ಎಚ್ಚರಿಕೆ ನೀಡಿದೆ.

ಪ್ರಕರಣದಲ್ಲಿ ಕಾಗ್ನಿಸಬಲ್ ಅಫೆನ್ಸ್ ಕಂಡುಬಂದಲ್ಲಿ, ತನಿಖಾಧಿಕಾರಿಯು ಆದಷ್ಟು ಬೇಗ ದೋಷಾರೋಪಣೆ ಪಟ್ಟಿಯನ್ನು (ಚಾರ್ಜ್‌ಶೀಟ್) ಸಲ್ಲಿಸಬೇಕು ಎಂದು ನ್ಯಾಯಾಧೀಶರು ಆದೇಶಿಸಿದ್ದಾರೆ. ಒಂದು ವೇಳೆ ಯಾವುದೇ ಕಾಗ್ನಿಸಬಲ್ ಅಫೆನ್ಸ್ ಸಾಬೀತಾಗದಿದ್ದರೆ, ಸಂಬಂಧಪಟ್ಟ ಸಕ್ಷಮ ನ್ಯಾಯಾಲಯದ ಮುಂದೆ ಸೂಕ್ತ ಕ್ಲೋಸರ್ ವರದಿಯನ್ನು (ಪ್ರಕರಣ ಮುಕ್ತಾಯದ ವರದಿ) ಸಲ್ಲಿಸುವಂತೆ ಸೂಚಿಸಿದ್ದಾರೆ. ಅಲ್ಲದೆ, ಇಂತಹ ಸಂದರ್ಭದಲ್ಲಿ ನ್ಯಾಯಾಲಯದ ಮುಂದೆ ಆಕ್ಷೇಪಣಾ ಅರ್ಜಿ ಸಲ್ಲಿಸಲು ದಿಶಾ ಅವರ ತಂದೆಗೆ ಮುಕ್ತ ಸ್ವಾತಂತ್ರ್ಯವನ್ನು ನೀಡಿದ್ದಾರೆ.

ತಮ್ಮ ಮಗಳ ಹಠಾತ್ ಸಾವು ಕೇವಲ ಆತ್ಮಹತ್ಯೆಯಲ್ಲ, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ಪ್ರತಿಪಾದಿಸಿದ್ದ ತಂದೆ ಸತೀಶ್ ಸಾಲಿಯಾನ್ ಅವರು, ಈ ಘಟನೆಗೆ ಸಂಬಂಧಿಸಿದಂತೆ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸುವಂತೆ ಕೋರಿ ಕಳೆದ ವರ್ಷವೇ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಆದಾಗ್ಯೂ, ದಿಶಾ ಸಾಲಿಯಾನ್ ಅವರು ಬಹುಮಹಡಿ ಕಟ್ಟಡದಿಂದ ಬಿದ್ದೇ ಮೃತಪಟ್ಟಿದ್ದಾರೆ ಎಂದು ಮುಂಬೈ ಪೊಲೀಸರು ತಮ್ಮ ವಾದವನ್ನು ಮುಂದುವರಿಸಿದ್ದರು.

ಸತೀಶ್ ಸಾಲಿಯಾನ್ ಪರ ಹಾಜರಾಗಿದ್ದ ವಕೀಲ ನಿಲೇಶ್ ಓಜಾ ಅವರು ವಾದ ಮಂಡಿಸಿ, ಮುಂಬೈ ಪೊಲೀಸರು ದಿಶಾ ಅವರ ಮರಣೋತ್ತರ ಪರೀಕ್ಷೆಯ (ಪೋಸ್ಟ್‌ಮಾರ್ಟಮ್) ವರದಿಯನ್ನು ಅವರ ತಂದೆಯೊಂದಿಗೆ ಹಂಚಿಕೊಂಡಿಲ್ಲ ಮತ್ತು ಅವರು ಹೈಕೋರ್ಟ್ ಮೆಟ್ಟಿಲೇರಿದ ಐದು ವರ್ಷಗಳ ನಂತರವಷ್ಟೇ ಅದನ್ನು ನೀಡಲಾಗಿದೆ ಎಂದು ಆರೋಪಿಸಿದ್ದರು. ಇದರೊಂದಿಗೆ, ತಂದೆ ನೀಡಿದ್ದ ದೂರಿನಲ್ಲಿದ್ದ ಶಿವಸೇನೆ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಮತ್ತು ಇತರರ ಹೆಸರುಗಳ ವಿರುದ್ಧ ಪೊಲೀಸರು ಇದುವರೆಗೆ ಏಕೆ ಯಾವುದೇ ಎಫ್‌ಐಆರ್ ದಾಖಲಿಸಿಲ್ಲ ಎಂಬ ಪ್ರಶ್ನೆಯನ್ನೂ ಅವರು ಇದೇ ವೇಳೆ ಎತ್ತಿದ್ದರು.

ಮತ್ತೊಂದೆಡೆ, ಮಹಾರಾಷ್ಟ್ರ ಸರ್ಕಾರ ಮತ್ತು ಮುಂಬೈ ಪೊಲೀಸರು ದಿಶಾ ಸಾಲಿಯಾನ್ ಸಾವು ಪ್ರಕರಣದಲ್ಲಿ ಯಾರನ್ನೂ ಆರೋಪಿಗಳನ್ನಾಗಿ ಮಾಡಲು ಯಾವುದೇ ಪುರಾವೆಗಳು ಸಿಕ್ಕಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಮುಖ್ಯ ಸರ್ಕಾರಿ ಅಭಿಯೋಜಕ (ಚೀಫ್ ಪಬ್ಲಿಕ್ ಪ್ರಾಸಿಕ್ಯೂಟರ್) ಶಿಶಿರ್ ಹಿರೇ ಅವರು ವಾದ ಮಂಡಿಸಿ, ದಿಶಾ ಸಾಲಿಯಾನ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಥವಾ ಸದರಿ ಕಟ್ಟಡದಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದಾರೆ ಎಂಬುದನ್ನು ಲಭ್ಯವಿರುವ ಸಾಕ್ಷ್ಯಗಳು ಸೂಚಿಸುತ್ತವೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ದಿಶಾ ಅವರ ತಂದೆ ಸತೀಶ್ ಮತ್ತು ಅವರ ಪತ್ನಿ ಇಬ್ಬರೂ ಪೊಲೀಸರ ಮುಂದೆ ಒಂದಕ್ಕಿಂತ ಹೆಚ್ಚು ಬಾರಿ ತಮ್ಮ ಹೇಳಿಕೆಗಳನ್ನು ದಾಖಲಿಸಿದ್ದಾರೆ. ಆದರೂ ಆ ಸಮಯದಲ್ಲಿ ಅವರು ಯಾರ ಮೇಲೆಯೂ ಏಕೆ ಅನುಮಾನ ವ್ಯಕ್ತಪಡಿಸಿಲ್ಲ ಎಂದು ಸರ್ಕಾರಿ ಅಭಿಯೋಜಕ ಶಿಶಿರ್ ಹಿರೇ ಅವರು ಪ್ರಶ್ನಿಸಿದ್ದಾರೆ.

ಈಗ ಆಧಾರಗಳ ಮೇರೆಗೆ ತಂದೆ ಈಗ ತನ್ನ ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಆದ್ದರಿಂದ, ಲಲಿತಾ ಕುಮಾರಿ ತೀರ್ಪಿಗೆ (Lalita Kumari judgment) ಬದ್ಧವಾಗಿ ಪೊಲೀಸರು ಎಫ್‌ಐಆರ್ ದಾಖಲಿಸುವುದು ಕಡ್ಡಾಯವಾಗಿದೆ ಎಂದು ವಾದಿಸಿದ್ದಾರೆ.

ಆದರೆ ಆದಿತ್ಯ ಠಾಕ್ರೆ ಪರ ಹಾಜರಾಗಿದ್ದ ಹಿರಿಯ ವಕೀಲ ಸುದೀಪ್ ಪಾಸ್ಬೋಲಾ ಅವರು, ಈ ಅರ್ಜಿಯನ್ನು ತೀವ್ರವಾಗಿ ವಿರೋಧಿಸಿದ್ದು, ಪ್ರಸ್ತುತ ನಡೆಯುತ್ತಿರುವ ಈ ಎಲ್ಲಾ ಕಾನೂನು ಪ್ರಕ್ರಿಯೆಗಳು ಸಂಪೂರ್ಣವಾಗಿ ರಾಜಕೀಯ ಪ್ರೇರಿತವಾಗಿವೆ ಎಂದು ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದಾರೆ.

ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಧೀಶರು ಮೌಖಿಕವಾಗಿ ಪ್ರತಿಕ್ರಿಯಿಸಿ, ತಂದೆ ಮಾಡಿರುವ ಆರೋಪಗಳು ನಿಜವಿರಬಹುದು ಅಥವಾ ಸುಳ್ಳಾಗಿರಬಹುದು, ಆದರೆ ಪೊಲೀಸರು ಎಫ್‌ಐಆರ್ ದಾಖಲಿಸಿ ಆಕೆಯ ಸಾವಿನ ಕುರಿತು ಕುಟುಂಬಕ್ಕೆ ಅಂತಿಮ ಕ್ಲೋಸರ್ (ವರದಿ) ನೀಡಬೇಕಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ. ವಿಶೇಷವಾಗಿ ಪೊಲೀಸರು ಸುಮಾರು ಐದರಿಂದ ಆರು ವರ್ಷಗಳ ಕಾಲ ಎಡಿಆರ್ (ಅಸ್ವಾಭಾವಿಕ ಸಾವು ವರದಿ – ADR) ಅಡಿಯಲ್ಲಿ ತನಿಖೆಯನ್ನು ಮುಂದುವರಿಸಿದ್ದನ್ನು ಗಮನಿಸಿದರೆ, ಈ ಕ್ರಮ ಅನಿವಾರ್ಯವಾಗಿತ್ತು ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ಸರ್ಕಾರಿ ಅಭಿಯೋಜಕ ಶಿಶಿರ್ ಹಿರೇ ಅವರು ಸ್ಪಷ್ಟನೆ ನೀಡಿ, ಅಸ್ವಾಭಾವಿಕ ಸಾವು ವರದಿಯನ್ನು ಅಕ್ಟೋಬರ್ 2020ರಲ್ಲೇ ಮುಚ್ಚಲಾಗಿತ್ತು ಮತ್ತು ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಾಮಾಜಿಕ ಜಾಲತಾಣಗಳ ಆರೋಪಗಳ ಹಿನ್ನೆಲೆಯಲ್ಲಿ ಮರುತಪಾಸಣೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಈ ಹೆಚ್ಚಿನ ತನಿಖೆಯಲ್ಲೂ ಸಹ ಕೊಲೆ ಆರೋಪ ಹೊರಿಸಲು ಯಾವುದೇ ಬಲವಾದ ಪುರಾವೆಗಳು ಲಭ್ಯವಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...