Homeಮುಖಪುಟದಿಶಾ ಬಂಧನ: ದೆಹಲಿ ಪೊಲೀಸರಿಗೆ ದೆಹಲಿ ಮಹಿಳಾ ಆಯೋಗದ ನೋಟಿಸ್

ದಿಶಾ ಬಂಧನ: ದೆಹಲಿ ಪೊಲೀಸರಿಗೆ ದೆಹಲಿ ಮಹಿಳಾ ಆಯೋಗದ ನೋಟಿಸ್

ಸದ್ಯ ಶಾಂತನು ಅವರಿಗೆ ಟ್ರಾನ್ಸಿಟ್ ಜಾಮೀನು ದೊರೆತಿದೆ. ನಿಕಿತಾ ಅವರ ಜಾಮೀನು ಅರ್ಜಿಯ ವಿಚಾರಣೆ ಬುಧವಾರ ನಡೆಯಲಿದೆ.

- Advertisement -
- Advertisement -

‘ಟೂಲ್‌ಕಿಟ್’ ಪ್ರಕರಣದಲ್ಲಿ 21 ವರ್ಷದ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರನ್ನು ಬಂಧಿಸಿರುವ ಕುರಿತು ದೆಹಲಿ ಮಹಿಳಾ ಆಯೋಗ ದೆಹಲಿ ಪೊಲೀಸರಿಗೆ ನೋಟಿಸ್ ಕಳುಹಿಸಿದೆ ಮತ್ತು ಆಕೆಯ ಆಯ್ಕೆಯ ವಕೀಲರನ್ನು ಏಕೆ ಒದಗಿಸಲಿಲ್ಲ ಎಂಬ ವಿಷಯಗಳ ಬಗ್ಗೆ ವರದಿ ಕೋರಿದೆ.

ಮಾಧ್ಯಮ ವರದಿಗಳನ್ನು ಅರಿತುಕೊಂಡು, ಮಂಗಳವಾರ ದೆಹಲಿ ಮಹಿಳಾ ಆಯೋಗ ಹೊರಡಿಸಿದ ಹೇಳಿಕೆಯಲ್ಲಿ, ದಿಶಾರನ್ನು ದೆಹಲಿಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಹೇಳಲಾಗಿದೆ.

ಮಾಧ್ಯಮ ವರದಿಗಳು ಮತ್ತು ಆಕ್ಟಿವಿಸ್ಟರ ವಿರೋಧವನ್ನು ಉಲ್ಲೇಖಿಸಿರುವ ದೆಹಲಿ ಮಹಿಳಾ ಆಯೋಗ (ಡಿಸಿಡಬ್ಲ್ಯು) ದಿಶಾ ರವಿಯನ್ನು ಪೊಲೀಸರು ಬಂಧಿಸಿ ಬೆಂಗಳೂರಿನಿಂದ ದೆಹಲಿಗೆ ಕರೆದೊಯ್ದರು ಮತ್ತು ಆಕೆ ಇರುವ ಸ್ಥಳವನ್ನು ಆಕೆಯ ಪೋಷಕರಿಗೆ ಸಹ ತಿಳಿಸಿರಲಿಲ್ಲ ಎಂದು ಹೇಳಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ದೆಹಲಿಗೆ ಕರೆತರುವ ಮೊದಲು ಪೊಲೀಸರು ಟ್ರಾನ್ಸಿಟ್ ರಿಮಾಂಡ್‌ಗಾಗಿ ಬೆಂಗಳೂರಿನ ನ್ಯಾಯಾಲಯಕ್ಕೆ ಹಾಜರುಪಡಿಸಿಲ್ಲ ಎಂದು ಅದು ಆರೋಪಿಸಿದೆ.

ಈ ವಿಷಯದಲ್ಲಿ ನೋಂದಾಯಿತ ಎಫ್‌ಐಆರ್ ನಕಲನ್ನು ಒದಗಿಸುವಂತೆ ಡಿಸಿಡಬ್ಲ್ಯು ದೆಹಲಿ ಪೊಲೀಸರನ್ನು ಕೇಳಿದೆ, ಟ್ರಾನ್ಸಿಟ್ ರಿಮಾಂಡ್‌ಗಾಗಿ ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸದಿರುವ ಕಾರಣಗಳು, ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ತನ್ನ ಆಯ್ಕೆಯ ವಕೀಲರನ್ನು ಒದಗಿಸದೇ ಇರುವುದಕ್ಕೆ ಕಾರಣಗಳು, ಇಲ್ಲಿವರೆಗೆ ತೆಗೆದುಕೊಂಡ ಕ್ರಮಗಳ ವಿವರವಾದ ವರದಿ ಸಲ್ಲಿಸಬೇಕು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ. ಶುಕ್ರವಾರದ ವೇಳೆಗೆ ಮಾಹಿತಿ ನೀಡುವಂತೆ ಪೊಲೀಸರಿಗೆ ಆಯೋಗ ಸೂಚಿಸಿದೆ.

ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನವನ್ನು ಬೆಂಬಲಿಸುವ ಪ್ರತಿಭಟನಾ ಟೂಲ್‌ಕಿಟ್ ರಚಿಸಿ ಹಂಚಿಕೊಂಡ ಆರೋಪದ ಮೇಲೆ ದಿಶಾರನ್ನು ದೆಹಲಿ ಪೊಲೀಸರು ಶನಿವಾರ ಬೆಂಗಳೂರಿನಲ್ಲಿ ಬಂಧಿಸಿದ್ದರು.

ದಿಶಾ, ಮುಂಬೈ ವಕೀಲೆ ನಿಕಿತಾ ಜಾಕೋಬ್ ಮತ್ತು ಪುಣೆ ಎಂಜಿನಿಯರ್ ಶಾಂತನು ಮುಲುಕ್ ಅವರು ಟೂಲ್ಕಿಟ್ ರಚಿಸಿ ಭಾರತದ ಚಿತ್ರಣವನ್ನು ಕೆಡಿಸಲು ಇತರರೊಂದಿಗೆ ಹಂಚಿಕೊಂಡಿದ್ದಾರೆ ಎಂದು ದೆಹಲಿ ಪೊಲೀಸರು ಸೋಮವಾರ ಹೇಳಿದ್ದರಲ್ಲದೇ ನಿಕಿತಾ ಮತ್ತು ಶಾಂತನು ಬಂಧನಕ್ಕೆ ಜಾಮೀನುರಹಿತ ವಾರೆಂಟ್ ಹೊರಡಿಸಿದ್ದರು. ಸದ್ಯ ಶಾಂತನು ಅವರಿಗೆ ಟ್ರಾನ್ಸಿಟ್ ಜಾಮೀನು ದೊರೆತಿದೆ. ನಿಕಿತಾ ಅವರ ಅರ್ಜಿಯ ವಿಚಾರಣೆ ಬುಧವಾರ ನಡೆಯಲಿದೆ.


ಇದನ್ನೂ ಓದಿ: ದಿಶಾ ರವಿ ಬಂಧನ ಖಂಡಿಸಿದ ‘ಭಾರತದ ಗ್ರೇಟಾ ಥನ್‌ಬರ್ಗ್’ ರಿಧಿಮಾ ಪಾಂಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....