Homeಮುಖಪುಟದಿಶಾ ಬಂಧನ: ದೆಹಲಿ ಪೊಲೀಸರಿಗೆ ದೆಹಲಿ ಮಹಿಳಾ ಆಯೋಗದ ನೋಟಿಸ್

ದಿಶಾ ಬಂಧನ: ದೆಹಲಿ ಪೊಲೀಸರಿಗೆ ದೆಹಲಿ ಮಹಿಳಾ ಆಯೋಗದ ನೋಟಿಸ್

ಸದ್ಯ ಶಾಂತನು ಅವರಿಗೆ ಟ್ರಾನ್ಸಿಟ್ ಜಾಮೀನು ದೊರೆತಿದೆ. ನಿಕಿತಾ ಅವರ ಜಾಮೀನು ಅರ್ಜಿಯ ವಿಚಾರಣೆ ಬುಧವಾರ ನಡೆಯಲಿದೆ.

- Advertisement -
- Advertisement -

‘ಟೂಲ್‌ಕಿಟ್’ ಪ್ರಕರಣದಲ್ಲಿ 21 ವರ್ಷದ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರನ್ನು ಬಂಧಿಸಿರುವ ಕುರಿತು ದೆಹಲಿ ಮಹಿಳಾ ಆಯೋಗ ದೆಹಲಿ ಪೊಲೀಸರಿಗೆ ನೋಟಿಸ್ ಕಳುಹಿಸಿದೆ ಮತ್ತು ಆಕೆಯ ಆಯ್ಕೆಯ ವಕೀಲರನ್ನು ಏಕೆ ಒದಗಿಸಲಿಲ್ಲ ಎಂಬ ವಿಷಯಗಳ ಬಗ್ಗೆ ವರದಿ ಕೋರಿದೆ.

ಮಾಧ್ಯಮ ವರದಿಗಳನ್ನು ಅರಿತುಕೊಂಡು, ಮಂಗಳವಾರ ದೆಹಲಿ ಮಹಿಳಾ ಆಯೋಗ ಹೊರಡಿಸಿದ ಹೇಳಿಕೆಯಲ್ಲಿ, ದಿಶಾರನ್ನು ದೆಹಲಿಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಹೇಳಲಾಗಿದೆ.

ಮಾಧ್ಯಮ ವರದಿಗಳು ಮತ್ತು ಆಕ್ಟಿವಿಸ್ಟರ ವಿರೋಧವನ್ನು ಉಲ್ಲೇಖಿಸಿರುವ ದೆಹಲಿ ಮಹಿಳಾ ಆಯೋಗ (ಡಿಸಿಡಬ್ಲ್ಯು) ದಿಶಾ ರವಿಯನ್ನು ಪೊಲೀಸರು ಬಂಧಿಸಿ ಬೆಂಗಳೂರಿನಿಂದ ದೆಹಲಿಗೆ ಕರೆದೊಯ್ದರು ಮತ್ತು ಆಕೆ ಇರುವ ಸ್ಥಳವನ್ನು ಆಕೆಯ ಪೋಷಕರಿಗೆ ಸಹ ತಿಳಿಸಿರಲಿಲ್ಲ ಎಂದು ಹೇಳಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ದೆಹಲಿಗೆ ಕರೆತರುವ ಮೊದಲು ಪೊಲೀಸರು ಟ್ರಾನ್ಸಿಟ್ ರಿಮಾಂಡ್‌ಗಾಗಿ ಬೆಂಗಳೂರಿನ ನ್ಯಾಯಾಲಯಕ್ಕೆ ಹಾಜರುಪಡಿಸಿಲ್ಲ ಎಂದು ಅದು ಆರೋಪಿಸಿದೆ.

ಈ ವಿಷಯದಲ್ಲಿ ನೋಂದಾಯಿತ ಎಫ್‌ಐಆರ್ ನಕಲನ್ನು ಒದಗಿಸುವಂತೆ ಡಿಸಿಡಬ್ಲ್ಯು ದೆಹಲಿ ಪೊಲೀಸರನ್ನು ಕೇಳಿದೆ, ಟ್ರಾನ್ಸಿಟ್ ರಿಮಾಂಡ್‌ಗಾಗಿ ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸದಿರುವ ಕಾರಣಗಳು, ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ತನ್ನ ಆಯ್ಕೆಯ ವಕೀಲರನ್ನು ಒದಗಿಸದೇ ಇರುವುದಕ್ಕೆ ಕಾರಣಗಳು, ಇಲ್ಲಿವರೆಗೆ ತೆಗೆದುಕೊಂಡ ಕ್ರಮಗಳ ವಿವರವಾದ ವರದಿ ಸಲ್ಲಿಸಬೇಕು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ. ಶುಕ್ರವಾರದ ವೇಳೆಗೆ ಮಾಹಿತಿ ನೀಡುವಂತೆ ಪೊಲೀಸರಿಗೆ ಆಯೋಗ ಸೂಚಿಸಿದೆ.

ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನವನ್ನು ಬೆಂಬಲಿಸುವ ಪ್ರತಿಭಟನಾ ಟೂಲ್‌ಕಿಟ್ ರಚಿಸಿ ಹಂಚಿಕೊಂಡ ಆರೋಪದ ಮೇಲೆ ದಿಶಾರನ್ನು ದೆಹಲಿ ಪೊಲೀಸರು ಶನಿವಾರ ಬೆಂಗಳೂರಿನಲ್ಲಿ ಬಂಧಿಸಿದ್ದರು.

ದಿಶಾ, ಮುಂಬೈ ವಕೀಲೆ ನಿಕಿತಾ ಜಾಕೋಬ್ ಮತ್ತು ಪುಣೆ ಎಂಜಿನಿಯರ್ ಶಾಂತನು ಮುಲುಕ್ ಅವರು ಟೂಲ್ಕಿಟ್ ರಚಿಸಿ ಭಾರತದ ಚಿತ್ರಣವನ್ನು ಕೆಡಿಸಲು ಇತರರೊಂದಿಗೆ ಹಂಚಿಕೊಂಡಿದ್ದಾರೆ ಎಂದು ದೆಹಲಿ ಪೊಲೀಸರು ಸೋಮವಾರ ಹೇಳಿದ್ದರಲ್ಲದೇ ನಿಕಿತಾ ಮತ್ತು ಶಾಂತನು ಬಂಧನಕ್ಕೆ ಜಾಮೀನುರಹಿತ ವಾರೆಂಟ್ ಹೊರಡಿಸಿದ್ದರು. ಸದ್ಯ ಶಾಂತನು ಅವರಿಗೆ ಟ್ರಾನ್ಸಿಟ್ ಜಾಮೀನು ದೊರೆತಿದೆ. ನಿಕಿತಾ ಅವರ ಅರ್ಜಿಯ ವಿಚಾರಣೆ ಬುಧವಾರ ನಡೆಯಲಿದೆ.


ಇದನ್ನೂ ಓದಿ: ದಿಶಾ ರವಿ ಬಂಧನ ಖಂಡಿಸಿದ ‘ಭಾರತದ ಗ್ರೇಟಾ ಥನ್‌ಬರ್ಗ್’ ರಿಧಿಮಾ ಪಾಂಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...