Homeಮುಖಪುಟದಿಶಾ ಬಂಧನ: ದೆಹಲಿ ಪೊಲೀಸರಿಗೆ ದೆಹಲಿ ಮಹಿಳಾ ಆಯೋಗದ ನೋಟಿಸ್

ದಿಶಾ ಬಂಧನ: ದೆಹಲಿ ಪೊಲೀಸರಿಗೆ ದೆಹಲಿ ಮಹಿಳಾ ಆಯೋಗದ ನೋಟಿಸ್

ಸದ್ಯ ಶಾಂತನು ಅವರಿಗೆ ಟ್ರಾನ್ಸಿಟ್ ಜಾಮೀನು ದೊರೆತಿದೆ. ನಿಕಿತಾ ಅವರ ಜಾಮೀನು ಅರ್ಜಿಯ ವಿಚಾರಣೆ ಬುಧವಾರ ನಡೆಯಲಿದೆ.

- Advertisement -
- Advertisement -

‘ಟೂಲ್‌ಕಿಟ್’ ಪ್ರಕರಣದಲ್ಲಿ 21 ವರ್ಷದ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರನ್ನು ಬಂಧಿಸಿರುವ ಕುರಿತು ದೆಹಲಿ ಮಹಿಳಾ ಆಯೋಗ ದೆಹಲಿ ಪೊಲೀಸರಿಗೆ ನೋಟಿಸ್ ಕಳುಹಿಸಿದೆ ಮತ್ತು ಆಕೆಯ ಆಯ್ಕೆಯ ವಕೀಲರನ್ನು ಏಕೆ ಒದಗಿಸಲಿಲ್ಲ ಎಂಬ ವಿಷಯಗಳ ಬಗ್ಗೆ ವರದಿ ಕೋರಿದೆ.

ಮಾಧ್ಯಮ ವರದಿಗಳನ್ನು ಅರಿತುಕೊಂಡು, ಮಂಗಳವಾರ ದೆಹಲಿ ಮಹಿಳಾ ಆಯೋಗ ಹೊರಡಿಸಿದ ಹೇಳಿಕೆಯಲ್ಲಿ, ದಿಶಾರನ್ನು ದೆಹಲಿಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಹೇಳಲಾಗಿದೆ.

ಮಾಧ್ಯಮ ವರದಿಗಳು ಮತ್ತು ಆಕ್ಟಿವಿಸ್ಟರ ವಿರೋಧವನ್ನು ಉಲ್ಲೇಖಿಸಿರುವ ದೆಹಲಿ ಮಹಿಳಾ ಆಯೋಗ (ಡಿಸಿಡಬ್ಲ್ಯು) ದಿಶಾ ರವಿಯನ್ನು ಪೊಲೀಸರು ಬಂಧಿಸಿ ಬೆಂಗಳೂರಿನಿಂದ ದೆಹಲಿಗೆ ಕರೆದೊಯ್ದರು ಮತ್ತು ಆಕೆ ಇರುವ ಸ್ಥಳವನ್ನು ಆಕೆಯ ಪೋಷಕರಿಗೆ ಸಹ ತಿಳಿಸಿರಲಿಲ್ಲ ಎಂದು ಹೇಳಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ದೆಹಲಿಗೆ ಕರೆತರುವ ಮೊದಲು ಪೊಲೀಸರು ಟ್ರಾನ್ಸಿಟ್ ರಿಮಾಂಡ್‌ಗಾಗಿ ಬೆಂಗಳೂರಿನ ನ್ಯಾಯಾಲಯಕ್ಕೆ ಹಾಜರುಪಡಿಸಿಲ್ಲ ಎಂದು ಅದು ಆರೋಪಿಸಿದೆ.

ಈ ವಿಷಯದಲ್ಲಿ ನೋಂದಾಯಿತ ಎಫ್‌ಐಆರ್ ನಕಲನ್ನು ಒದಗಿಸುವಂತೆ ಡಿಸಿಡಬ್ಲ್ಯು ದೆಹಲಿ ಪೊಲೀಸರನ್ನು ಕೇಳಿದೆ, ಟ್ರಾನ್ಸಿಟ್ ರಿಮಾಂಡ್‌ಗಾಗಿ ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸದಿರುವ ಕಾರಣಗಳು, ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ತನ್ನ ಆಯ್ಕೆಯ ವಕೀಲರನ್ನು ಒದಗಿಸದೇ ಇರುವುದಕ್ಕೆ ಕಾರಣಗಳು, ಇಲ್ಲಿವರೆಗೆ ತೆಗೆದುಕೊಂಡ ಕ್ರಮಗಳ ವಿವರವಾದ ವರದಿ ಸಲ್ಲಿಸಬೇಕು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ. ಶುಕ್ರವಾರದ ವೇಳೆಗೆ ಮಾಹಿತಿ ನೀಡುವಂತೆ ಪೊಲೀಸರಿಗೆ ಆಯೋಗ ಸೂಚಿಸಿದೆ.

ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನವನ್ನು ಬೆಂಬಲಿಸುವ ಪ್ರತಿಭಟನಾ ಟೂಲ್‌ಕಿಟ್ ರಚಿಸಿ ಹಂಚಿಕೊಂಡ ಆರೋಪದ ಮೇಲೆ ದಿಶಾರನ್ನು ದೆಹಲಿ ಪೊಲೀಸರು ಶನಿವಾರ ಬೆಂಗಳೂರಿನಲ್ಲಿ ಬಂಧಿಸಿದ್ದರು.

ದಿಶಾ, ಮುಂಬೈ ವಕೀಲೆ ನಿಕಿತಾ ಜಾಕೋಬ್ ಮತ್ತು ಪುಣೆ ಎಂಜಿನಿಯರ್ ಶಾಂತನು ಮುಲುಕ್ ಅವರು ಟೂಲ್ಕಿಟ್ ರಚಿಸಿ ಭಾರತದ ಚಿತ್ರಣವನ್ನು ಕೆಡಿಸಲು ಇತರರೊಂದಿಗೆ ಹಂಚಿಕೊಂಡಿದ್ದಾರೆ ಎಂದು ದೆಹಲಿ ಪೊಲೀಸರು ಸೋಮವಾರ ಹೇಳಿದ್ದರಲ್ಲದೇ ನಿಕಿತಾ ಮತ್ತು ಶಾಂತನು ಬಂಧನಕ್ಕೆ ಜಾಮೀನುರಹಿತ ವಾರೆಂಟ್ ಹೊರಡಿಸಿದ್ದರು. ಸದ್ಯ ಶಾಂತನು ಅವರಿಗೆ ಟ್ರಾನ್ಸಿಟ್ ಜಾಮೀನು ದೊರೆತಿದೆ. ನಿಕಿತಾ ಅವರ ಅರ್ಜಿಯ ವಿಚಾರಣೆ ಬುಧವಾರ ನಡೆಯಲಿದೆ.


ಇದನ್ನೂ ಓದಿ: ದಿಶಾ ರವಿ ಬಂಧನ ಖಂಡಿಸಿದ ‘ಭಾರತದ ಗ್ರೇಟಾ ಥನ್‌ಬರ್ಗ್’ ರಿಧಿಮಾ ಪಾಂಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...