Homeಮುಖಪುಟದಿಶಾ ಬಂಧನ: ದೆಹಲಿ ಪೊಲೀಸರಿಗೆ ದೆಹಲಿ ಮಹಿಳಾ ಆಯೋಗದ ನೋಟಿಸ್

ದಿಶಾ ಬಂಧನ: ದೆಹಲಿ ಪೊಲೀಸರಿಗೆ ದೆಹಲಿ ಮಹಿಳಾ ಆಯೋಗದ ನೋಟಿಸ್

ಸದ್ಯ ಶಾಂತನು ಅವರಿಗೆ ಟ್ರಾನ್ಸಿಟ್ ಜಾಮೀನು ದೊರೆತಿದೆ. ನಿಕಿತಾ ಅವರ ಜಾಮೀನು ಅರ್ಜಿಯ ವಿಚಾರಣೆ ಬುಧವಾರ ನಡೆಯಲಿದೆ.

- Advertisement -
- Advertisement -

‘ಟೂಲ್‌ಕಿಟ್’ ಪ್ರಕರಣದಲ್ಲಿ 21 ವರ್ಷದ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರನ್ನು ಬಂಧಿಸಿರುವ ಕುರಿತು ದೆಹಲಿ ಮಹಿಳಾ ಆಯೋಗ ದೆಹಲಿ ಪೊಲೀಸರಿಗೆ ನೋಟಿಸ್ ಕಳುಹಿಸಿದೆ ಮತ್ತು ಆಕೆಯ ಆಯ್ಕೆಯ ವಕೀಲರನ್ನು ಏಕೆ ಒದಗಿಸಲಿಲ್ಲ ಎಂಬ ವಿಷಯಗಳ ಬಗ್ಗೆ ವರದಿ ಕೋರಿದೆ.

ಮಾಧ್ಯಮ ವರದಿಗಳನ್ನು ಅರಿತುಕೊಂಡು, ಮಂಗಳವಾರ ದೆಹಲಿ ಮಹಿಳಾ ಆಯೋಗ ಹೊರಡಿಸಿದ ಹೇಳಿಕೆಯಲ್ಲಿ, ದಿಶಾರನ್ನು ದೆಹಲಿಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಹೇಳಲಾಗಿದೆ.

ಮಾಧ್ಯಮ ವರದಿಗಳು ಮತ್ತು ಆಕ್ಟಿವಿಸ್ಟರ ವಿರೋಧವನ್ನು ಉಲ್ಲೇಖಿಸಿರುವ ದೆಹಲಿ ಮಹಿಳಾ ಆಯೋಗ (ಡಿಸಿಡಬ್ಲ್ಯು) ದಿಶಾ ರವಿಯನ್ನು ಪೊಲೀಸರು ಬಂಧಿಸಿ ಬೆಂಗಳೂರಿನಿಂದ ದೆಹಲಿಗೆ ಕರೆದೊಯ್ದರು ಮತ್ತು ಆಕೆ ಇರುವ ಸ್ಥಳವನ್ನು ಆಕೆಯ ಪೋಷಕರಿಗೆ ಸಹ ತಿಳಿಸಿರಲಿಲ್ಲ ಎಂದು ಹೇಳಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ದೆಹಲಿಗೆ ಕರೆತರುವ ಮೊದಲು ಪೊಲೀಸರು ಟ್ರಾನ್ಸಿಟ್ ರಿಮಾಂಡ್‌ಗಾಗಿ ಬೆಂಗಳೂರಿನ ನ್ಯಾಯಾಲಯಕ್ಕೆ ಹಾಜರುಪಡಿಸಿಲ್ಲ ಎಂದು ಅದು ಆರೋಪಿಸಿದೆ.

ಈ ವಿಷಯದಲ್ಲಿ ನೋಂದಾಯಿತ ಎಫ್‌ಐಆರ್ ನಕಲನ್ನು ಒದಗಿಸುವಂತೆ ಡಿಸಿಡಬ್ಲ್ಯು ದೆಹಲಿ ಪೊಲೀಸರನ್ನು ಕೇಳಿದೆ, ಟ್ರಾನ್ಸಿಟ್ ರಿಮಾಂಡ್‌ಗಾಗಿ ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸದಿರುವ ಕಾರಣಗಳು, ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ತನ್ನ ಆಯ್ಕೆಯ ವಕೀಲರನ್ನು ಒದಗಿಸದೇ ಇರುವುದಕ್ಕೆ ಕಾರಣಗಳು, ಇಲ್ಲಿವರೆಗೆ ತೆಗೆದುಕೊಂಡ ಕ್ರಮಗಳ ವಿವರವಾದ ವರದಿ ಸಲ್ಲಿಸಬೇಕು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ. ಶುಕ್ರವಾರದ ವೇಳೆಗೆ ಮಾಹಿತಿ ನೀಡುವಂತೆ ಪೊಲೀಸರಿಗೆ ಆಯೋಗ ಸೂಚಿಸಿದೆ.

ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನವನ್ನು ಬೆಂಬಲಿಸುವ ಪ್ರತಿಭಟನಾ ಟೂಲ್‌ಕಿಟ್ ರಚಿಸಿ ಹಂಚಿಕೊಂಡ ಆರೋಪದ ಮೇಲೆ ದಿಶಾರನ್ನು ದೆಹಲಿ ಪೊಲೀಸರು ಶನಿವಾರ ಬೆಂಗಳೂರಿನಲ್ಲಿ ಬಂಧಿಸಿದ್ದರು.

ದಿಶಾ, ಮುಂಬೈ ವಕೀಲೆ ನಿಕಿತಾ ಜಾಕೋಬ್ ಮತ್ತು ಪುಣೆ ಎಂಜಿನಿಯರ್ ಶಾಂತನು ಮುಲುಕ್ ಅವರು ಟೂಲ್ಕಿಟ್ ರಚಿಸಿ ಭಾರತದ ಚಿತ್ರಣವನ್ನು ಕೆಡಿಸಲು ಇತರರೊಂದಿಗೆ ಹಂಚಿಕೊಂಡಿದ್ದಾರೆ ಎಂದು ದೆಹಲಿ ಪೊಲೀಸರು ಸೋಮವಾರ ಹೇಳಿದ್ದರಲ್ಲದೇ ನಿಕಿತಾ ಮತ್ತು ಶಾಂತನು ಬಂಧನಕ್ಕೆ ಜಾಮೀನುರಹಿತ ವಾರೆಂಟ್ ಹೊರಡಿಸಿದ್ದರು. ಸದ್ಯ ಶಾಂತನು ಅವರಿಗೆ ಟ್ರಾನ್ಸಿಟ್ ಜಾಮೀನು ದೊರೆತಿದೆ. ನಿಕಿತಾ ಅವರ ಅರ್ಜಿಯ ವಿಚಾರಣೆ ಬುಧವಾರ ನಡೆಯಲಿದೆ.


ಇದನ್ನೂ ಓದಿ: ದಿಶಾ ರವಿ ಬಂಧನ ಖಂಡಿಸಿದ ‘ಭಾರತದ ಗ್ರೇಟಾ ಥನ್‌ಬರ್ಗ್’ ರಿಧಿಮಾ ಪಾಂಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...