Homeಮುಖಪುಟ'ದಿಶಾಳ ತಂದೆ-ತಾಯಿ ನರೇಂದ್ರ ಮೋದಿಯವರ ಬೆಂಬಲಿಗರು...' - ಪತ್ರಕರ್ತ ಮೊಹಮ್ಮದ್ ಜುಬೈರ್

‘ದಿಶಾಳ ತಂದೆ-ತಾಯಿ ನರೇಂದ್ರ ಮೋದಿಯವರ ಬೆಂಬಲಿಗರು…’ – ಪತ್ರಕರ್ತ ಮೊಹಮ್ಮದ್ ಜುಬೈರ್

- Advertisement -
- Advertisement -

ಗ್ರೇಟಾ ಥನ್‌ಬರ್ಗ್ ರೈತ ಹೋರಾಟದ ಕುರಿತು ಹಂಚಿಕೊಂಡಿರುವ ಟೂಲ್‌ಕಿಟ್ ಪ್ರಕರಣದಲ್ಲಿ ಪರಿಸರ ಹೋರಾಟಗಾರ್ತಿ ದಿಶಾ ರವಿಯವರನ್ನು ದೆಹಲಿ ಪೊಲೀಸರು ಬಂಧಿಸಿದ್ದು, 5 ದಿನ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಇದನ್ನು ಖಂಡಿಸಿ ದೇಶದಾದ್ಯಂತ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಕೆಲವು ಬಿಜೆಪಿ ಬೆಂಬಲಿಗರೂ ಸಹ ದಿಶಾ ರವಿಯ ವಿರುದ್ಧ ತೀಕ್ಷ್ಣವಾದ ಟ್ವೀಟ್‌ಗಳನ್ನು ಮಾಡುತ್ತಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಆಲ್ಟ್‌ ನ್ಯೂಸ್‌ನ ಪ್ರಮುಖರಾದ ಮೊಹಮ್ಮದ್ ಜುಬೈರ್, “ದಿಶಾಳ ತಂದೆ-ತಾಯಿ ನರೇಂದ್ರ ಮೋದಿಯ ಬೆಂಬಲಿಗರು. ಯೋಚಿಸಿ, ಹಲವು ಬಿಜೆಪಿಯ ಸಚಿವರುಗಳು ಮತ್ತು ಬಿಜೆಪಿಯ ಬೆಂಬಲಿಗರು ದಿಶಾಳನ್ನು ಕೊಲ್ಲಬೇಕು ಎಂದು ಟ್ವೀಟ್ ಮಾಡುತ್ತಿರುವುದನ್ನು ನೋಡಿದಾಗ ದಿಶಾಳ ಪೋಷಕರ ಮನಸ್ಸಿನಲ್ಲಿ ಏನು ನಡೆಯುತ್ತಿರಬಹುದು?” ಎಂದು ಬಿಜೆಪಿಯ ಸಚಿವರೊಬ್ಬರು ಮಾಡಿರುವ ಟ್ವೀಟ್‌ಅನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ರೈತರ ಮೊಮ್ಮಗಳನ್ನು ಬಂಧಿಸಿದರೆ ಹೋರಾಟ ದುರ್ಬಲಗೊಳ್ಳುವುದಿಲ್ಲ: ದಿಶಾ ರವಿಗೆ ಜಾಗತಿಕ ಬೆಂಬಲ

ಬಿಜೆಪಿ ಸಚಿವರು ತಮ್ಮ ಟ್ವೀಟ್ ನಲ್ಲಿ, “ದೇಶ ವಿರೋಧಿ ಬೀಜವನ್ನು ನಾಶಮಾಡಬೇಕು. ಅದು ದಿಶಾ ರವಿಯಾಗಲಿ ಅಥವಾ ಬೇರೆಯವರಾಗಲಿ” ಎಂದು ಬರೆದುಕೊಂಡಿದ್ದಾರೆ.

ಬೆಂಗಳೂರು ಸೆಂಟ್ರಲ್‌ನ ಸಂಸದರಾದ ಪಿ ಸಿ ಮೋಹನ್ ಟ್ವೀಟ್ ಮಾಡಿ, “ಬುರಾನ್ ವಾನಿಗೆ 21 ವರ್ಷ, ಅಜ್ಮಲ್ ಕಸಬ್‌ಗೆ 21 ವರ್ಷ. ವಯಸ್ಸು ಕೇವಲ ಸಂಖ್ಯೆಯಷ್ಟೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಕಾನೂನು ತನ್ನ ಕ್ರಮ ತೆಗೆದುಕೊಳ್ಳುತ್ತದೆ. ಅಪರಾಧ ಅಪರಾಧವೆ” ಎಂದು ದಿಶಾಳನ್ನು ಅಜ್ಮಲ್ ಕಸಬ್‌ಗೆ ಹೋಲಿಸಿ ಟ್ವೀಟ್ ಮಾಡಿದ್ದಾರೆ.

ಹೀಗೆ ದಿಶಾ ರವಿಯನ್ನು ಗುರಿಯಾಗಿಸಿಕೊಂಡು ಬಿಜೆಪಿ ಬೆಂಬಲಿಗರು ಮತ್ತು ಕೆಲವು ಸಚಿವರು ಸೇರಿದಂತೆ ಕೆಲವರು ಟೀಕೆ ಮಾಡುತ್ತಿದ್ದಾರೆ. ಆದರೆ ಇದನ್ನು ವಿಭಿನ್ನ ದೃಷ್ಟಿಕೋನದಿಂದ ಆಲೋಚಿಸಿರುವ ಜುಬೈರ್ ಎತ್ತಿರುವ ಪ್ರಶ್ನೆ ಬಹುಮುಖ್ಯವಾದದ್ದು.

ಆದರೆ ಇನ್ನೂ ನೂರಾರು ಜನರು ದಿಶಾ ರವಿಯವರಿಗೆ ಬೆಂಬಲ ಸೂಚಿಸಿದ್ದಾರೆ. ರೈತ ಹೋರಾಟವನ್ನು ದುರ್ಬಲಗೊಳಿಸುವ ಸಲುವಾಗಿ ಕೇಂದ್ರದ ಬಿಜೆಪಿ ಸರ್ಕಾರ ಇಂತಹ ನೀಚ ಕೆಲಸಗಳನ್ನು ಮಾಡುತ್ತಿದೆ ಎಂದು ಹಲವರು ಆರೋಪಿಸಿದ್ದಾರೆ.

ದಿಶಾ ರವಿ ಅವರು ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. ಫ್ರೈಡೇಸ್ ಫಾರ್ ಫ್ಯೂಚರ್ ಇಂಡಿಯಾದ ಸಂಸ್ಥಾಪಕರಲ್ಲಿ ಒಬ್ಬರಾದ ದಿಶಾ ರವಿ ಅವರು ವಿವಾದಿತ ಟೂಲ್‌ಕಿಟ್ ಅನ್ನು ಸಂಪಾದಿಸಿ ಹಂಚಿಕೊಂಡಿದ್ದಾರೆ ಎಂದು ದೆಹಲಿ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ: ನನ್ನನ್ನು ಹೆದರಿಸೋಕೆ ನೋಟಿಸ್ ನೀಡಿದ್ದಾರೆ, ಫೆ. 21ರೊಳಗೆ ಹಿಂಪಡೆಯುತ್ತಾರಂತೆ: ಯತ್ನಾಳ್

ಜನವರಿ 26 ರ ಗಣರಾಜ್ಯೋತ್ಸವದಂದು ರೈತರ ಟ್ರಾಕ್ಟರ್ ರ್‍ಯಾಲಿಯ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಯಲ್ಲಿ ಈ ಟೂಲ್‌ಕಿಟ್‌ನ ಪಾತ್ರವಿದೆ ಎಂದು ಪೊಲೀಸರು ಆಪಾದಿಸಿದ್ದಾರೆ. ವಿಶೇಷ ಸಿಪಿ (ಅಪರಾಧ ಶಾಖೆ) ಪ್ರವೀರ್ ರಂಜನ್, ಪ್ರಾಥಮಿಕ ವಿಚಾರಣೆಯಲ್ಲಿ ವಿವಾದಿತ ಟೂಲ್‌ಕಿಟ್ ಅನ್ನು “ಖಲಿಸ್ತಾನಿ ಪರ ಸಂಸ್ಥೆ” ಪೊಯೆಟಿಕ್ ಜಸ್ಟೀಸ್ ಫೌಂಡೇಶನ್ ರಚಿಸಿದೆ ಎಂದು ಸೂಚಿಸಿದೆ ಎಂದು ಹೇಳಿದ್ದಾರೆ.

ಫ್ರೈಡೆ ಫಾರ್‌ ಫ್ಯೂಚರ್‌‌ ಎಂಬುವುದು ಅಂತಾರಾಷ್ಟ್ರೀಯ ಚಳವಳಿಯಾಗಿದ್ದು, ಇದರಲ್ಲಿ ವಿದ್ಯಾರ್ಥಿಗಳು ಶುಕ್ರವಾರದಂದು ತರಗತಿಯನ್ನು ಬಹಿಷ್ಕರಿಸಿ ಹವಾಮಾನ ಬದಲಾವಣೆಗಳ ವಿರುದ್ಧ ರಾಜಕಾರಣಿಗಳು ಮಾತನಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಾರೆ. ಗ್ರೇಟಾ ಥನ್ಬರ್ಗ್ ಸ್ವೀಡಿಷ್ ಸಂಸತ್ತಿನ ಹೊರಗೆ ಪ್ರತಿಭಟಿಸಿದ ನಂತರ ಇದು ವ್ಯಾಪಕ ಜನಪ್ರಿಯತೆಯನ್ನು ಗಳಿಸಿತು.

ಫೆಬ್ರವರಿ 4 ರಂದು ವಿವಾದಿತ ಟೂಲ್‌ಕಿಟ್‌ ತಯಾರಿಸಿದವರ ವಿರುದ್ದ ದೆಹಲಿ ಸೈಬರ್‌‌‌-ಕ್ರೈಮ್‌ ಸೆಲ್ ಪೊಲೀಸರು‌, ದೇಶದ್ರೋಹ, ಕ್ರಿಮಿನಲ್ ಪಿತೂರಿ ಮತ್ತು ದ್ವೇಷವನ್ನು ಉತ್ತೇಜಿಸುವ ಆರೋಪದ ಮೇಲೆ ಎಫ್ಐಆರ್ ದಾಖಲಿಸಿದ್ದರು.


ಇದನ್ನೂ ಓದಿ: ದೇಶ ಭಕ್ತರು ಯಾರು? ದೇಶ ದ್ರೋಹಿಗಳು ಯಾರು? – ನಟ ಚೇತನ್ ಹೇಳುತ್ತಾರೆ ಕೇಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...