Homeಮುಖಪುಟ'ದಿಶಾಳ ತಂದೆ-ತಾಯಿ ನರೇಂದ್ರ ಮೋದಿಯವರ ಬೆಂಬಲಿಗರು...' - ಪತ್ರಕರ್ತ ಮೊಹಮ್ಮದ್ ಜುಬೈರ್

‘ದಿಶಾಳ ತಂದೆ-ತಾಯಿ ನರೇಂದ್ರ ಮೋದಿಯವರ ಬೆಂಬಲಿಗರು…’ – ಪತ್ರಕರ್ತ ಮೊಹಮ್ಮದ್ ಜುಬೈರ್

- Advertisement -
- Advertisement -

ಗ್ರೇಟಾ ಥನ್‌ಬರ್ಗ್ ರೈತ ಹೋರಾಟದ ಕುರಿತು ಹಂಚಿಕೊಂಡಿರುವ ಟೂಲ್‌ಕಿಟ್ ಪ್ರಕರಣದಲ್ಲಿ ಪರಿಸರ ಹೋರಾಟಗಾರ್ತಿ ದಿಶಾ ರವಿಯವರನ್ನು ದೆಹಲಿ ಪೊಲೀಸರು ಬಂಧಿಸಿದ್ದು, 5 ದಿನ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಇದನ್ನು ಖಂಡಿಸಿ ದೇಶದಾದ್ಯಂತ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಕೆಲವು ಬಿಜೆಪಿ ಬೆಂಬಲಿಗರೂ ಸಹ ದಿಶಾ ರವಿಯ ವಿರುದ್ಧ ತೀಕ್ಷ್ಣವಾದ ಟ್ವೀಟ್‌ಗಳನ್ನು ಮಾಡುತ್ತಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಆಲ್ಟ್‌ ನ್ಯೂಸ್‌ನ ಪ್ರಮುಖರಾದ ಮೊಹಮ್ಮದ್ ಜುಬೈರ್, “ದಿಶಾಳ ತಂದೆ-ತಾಯಿ ನರೇಂದ್ರ ಮೋದಿಯ ಬೆಂಬಲಿಗರು. ಯೋಚಿಸಿ, ಹಲವು ಬಿಜೆಪಿಯ ಸಚಿವರುಗಳು ಮತ್ತು ಬಿಜೆಪಿಯ ಬೆಂಬಲಿಗರು ದಿಶಾಳನ್ನು ಕೊಲ್ಲಬೇಕು ಎಂದು ಟ್ವೀಟ್ ಮಾಡುತ್ತಿರುವುದನ್ನು ನೋಡಿದಾಗ ದಿಶಾಳ ಪೋಷಕರ ಮನಸ್ಸಿನಲ್ಲಿ ಏನು ನಡೆಯುತ್ತಿರಬಹುದು?” ಎಂದು ಬಿಜೆಪಿಯ ಸಚಿವರೊಬ್ಬರು ಮಾಡಿರುವ ಟ್ವೀಟ್‌ಅನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ರೈತರ ಮೊಮ್ಮಗಳನ್ನು ಬಂಧಿಸಿದರೆ ಹೋರಾಟ ದುರ್ಬಲಗೊಳ್ಳುವುದಿಲ್ಲ: ದಿಶಾ ರವಿಗೆ ಜಾಗತಿಕ ಬೆಂಬಲ

ಬಿಜೆಪಿ ಸಚಿವರು ತಮ್ಮ ಟ್ವೀಟ್ ನಲ್ಲಿ, “ದೇಶ ವಿರೋಧಿ ಬೀಜವನ್ನು ನಾಶಮಾಡಬೇಕು. ಅದು ದಿಶಾ ರವಿಯಾಗಲಿ ಅಥವಾ ಬೇರೆಯವರಾಗಲಿ” ಎಂದು ಬರೆದುಕೊಂಡಿದ್ದಾರೆ.

ಬೆಂಗಳೂರು ಸೆಂಟ್ರಲ್‌ನ ಸಂಸದರಾದ ಪಿ ಸಿ ಮೋಹನ್ ಟ್ವೀಟ್ ಮಾಡಿ, “ಬುರಾನ್ ವಾನಿಗೆ 21 ವರ್ಷ, ಅಜ್ಮಲ್ ಕಸಬ್‌ಗೆ 21 ವರ್ಷ. ವಯಸ್ಸು ಕೇವಲ ಸಂಖ್ಯೆಯಷ್ಟೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಕಾನೂನು ತನ್ನ ಕ್ರಮ ತೆಗೆದುಕೊಳ್ಳುತ್ತದೆ. ಅಪರಾಧ ಅಪರಾಧವೆ” ಎಂದು ದಿಶಾಳನ್ನು ಅಜ್ಮಲ್ ಕಸಬ್‌ಗೆ ಹೋಲಿಸಿ ಟ್ವೀಟ್ ಮಾಡಿದ್ದಾರೆ.

ಹೀಗೆ ದಿಶಾ ರವಿಯನ್ನು ಗುರಿಯಾಗಿಸಿಕೊಂಡು ಬಿಜೆಪಿ ಬೆಂಬಲಿಗರು ಮತ್ತು ಕೆಲವು ಸಚಿವರು ಸೇರಿದಂತೆ ಕೆಲವರು ಟೀಕೆ ಮಾಡುತ್ತಿದ್ದಾರೆ. ಆದರೆ ಇದನ್ನು ವಿಭಿನ್ನ ದೃಷ್ಟಿಕೋನದಿಂದ ಆಲೋಚಿಸಿರುವ ಜುಬೈರ್ ಎತ್ತಿರುವ ಪ್ರಶ್ನೆ ಬಹುಮುಖ್ಯವಾದದ್ದು.

ಆದರೆ ಇನ್ನೂ ನೂರಾರು ಜನರು ದಿಶಾ ರವಿಯವರಿಗೆ ಬೆಂಬಲ ಸೂಚಿಸಿದ್ದಾರೆ. ರೈತ ಹೋರಾಟವನ್ನು ದುರ್ಬಲಗೊಳಿಸುವ ಸಲುವಾಗಿ ಕೇಂದ್ರದ ಬಿಜೆಪಿ ಸರ್ಕಾರ ಇಂತಹ ನೀಚ ಕೆಲಸಗಳನ್ನು ಮಾಡುತ್ತಿದೆ ಎಂದು ಹಲವರು ಆರೋಪಿಸಿದ್ದಾರೆ.

ದಿಶಾ ರವಿ ಅವರು ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. ಫ್ರೈಡೇಸ್ ಫಾರ್ ಫ್ಯೂಚರ್ ಇಂಡಿಯಾದ ಸಂಸ್ಥಾಪಕರಲ್ಲಿ ಒಬ್ಬರಾದ ದಿಶಾ ರವಿ ಅವರು ವಿವಾದಿತ ಟೂಲ್‌ಕಿಟ್ ಅನ್ನು ಸಂಪಾದಿಸಿ ಹಂಚಿಕೊಂಡಿದ್ದಾರೆ ಎಂದು ದೆಹಲಿ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ: ನನ್ನನ್ನು ಹೆದರಿಸೋಕೆ ನೋಟಿಸ್ ನೀಡಿದ್ದಾರೆ, ಫೆ. 21ರೊಳಗೆ ಹಿಂಪಡೆಯುತ್ತಾರಂತೆ: ಯತ್ನಾಳ್

ಜನವರಿ 26 ರ ಗಣರಾಜ್ಯೋತ್ಸವದಂದು ರೈತರ ಟ್ರಾಕ್ಟರ್ ರ್‍ಯಾಲಿಯ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಯಲ್ಲಿ ಈ ಟೂಲ್‌ಕಿಟ್‌ನ ಪಾತ್ರವಿದೆ ಎಂದು ಪೊಲೀಸರು ಆಪಾದಿಸಿದ್ದಾರೆ. ವಿಶೇಷ ಸಿಪಿ (ಅಪರಾಧ ಶಾಖೆ) ಪ್ರವೀರ್ ರಂಜನ್, ಪ್ರಾಥಮಿಕ ವಿಚಾರಣೆಯಲ್ಲಿ ವಿವಾದಿತ ಟೂಲ್‌ಕಿಟ್ ಅನ್ನು “ಖಲಿಸ್ತಾನಿ ಪರ ಸಂಸ್ಥೆ” ಪೊಯೆಟಿಕ್ ಜಸ್ಟೀಸ್ ಫೌಂಡೇಶನ್ ರಚಿಸಿದೆ ಎಂದು ಸೂಚಿಸಿದೆ ಎಂದು ಹೇಳಿದ್ದಾರೆ.

ಫ್ರೈಡೆ ಫಾರ್‌ ಫ್ಯೂಚರ್‌‌ ಎಂಬುವುದು ಅಂತಾರಾಷ್ಟ್ರೀಯ ಚಳವಳಿಯಾಗಿದ್ದು, ಇದರಲ್ಲಿ ವಿದ್ಯಾರ್ಥಿಗಳು ಶುಕ್ರವಾರದಂದು ತರಗತಿಯನ್ನು ಬಹಿಷ್ಕರಿಸಿ ಹವಾಮಾನ ಬದಲಾವಣೆಗಳ ವಿರುದ್ಧ ರಾಜಕಾರಣಿಗಳು ಮಾತನಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಾರೆ. ಗ್ರೇಟಾ ಥನ್ಬರ್ಗ್ ಸ್ವೀಡಿಷ್ ಸಂಸತ್ತಿನ ಹೊರಗೆ ಪ್ರತಿಭಟಿಸಿದ ನಂತರ ಇದು ವ್ಯಾಪಕ ಜನಪ್ರಿಯತೆಯನ್ನು ಗಳಿಸಿತು.

ಫೆಬ್ರವರಿ 4 ರಂದು ವಿವಾದಿತ ಟೂಲ್‌ಕಿಟ್‌ ತಯಾರಿಸಿದವರ ವಿರುದ್ದ ದೆಹಲಿ ಸೈಬರ್‌‌‌-ಕ್ರೈಮ್‌ ಸೆಲ್ ಪೊಲೀಸರು‌, ದೇಶದ್ರೋಹ, ಕ್ರಿಮಿನಲ್ ಪಿತೂರಿ ಮತ್ತು ದ್ವೇಷವನ್ನು ಉತ್ತೇಜಿಸುವ ಆರೋಪದ ಮೇಲೆ ಎಫ್ಐಆರ್ ದಾಖಲಿಸಿದ್ದರು.


ಇದನ್ನೂ ಓದಿ: ದೇಶ ಭಕ್ತರು ಯಾರು? ದೇಶ ದ್ರೋಹಿಗಳು ಯಾರು? – ನಟ ಚೇತನ್ ಹೇಳುತ್ತಾರೆ ಕೇಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...