Homeಮುಖಪುಟದಿಶಾಳ ವಾಟ್ಸಾಪ್ ಚಾಟ್ಸ್‌, ತನಿಖಾ ಮಾಹಿತಿ ಸೋರಿಕೆ: ನ್ಯೂಸ್‌ ಚಾನೆಲ್‌ಗಳಿಗೆ ನೋಟಿಸ್!

ದಿಶಾಳ ವಾಟ್ಸಾಪ್ ಚಾಟ್ಸ್‌, ತನಿಖಾ ಮಾಹಿತಿ ಸೋರಿಕೆ: ನ್ಯೂಸ್‌ ಚಾನೆಲ್‌ಗಳಿಗೆ ನೋಟಿಸ್!

- Advertisement -
- Advertisement -

ಖಾಸಗಿ ಟಿವಿ ಚಾನೆಲ್‌ಗಳು ತನ್ನ ವಾಟ್ಸಾಪ್ ಸಂಭಾಷಣೆಯ ವಿಷಯಗಳನ್ನು ಪ್ರಕಟಿಸುವುದನ್ನು ನಿಷೇಧಿಸಬೇಕೆಂದು ಕೋರಿದ್ದ ಪರಿಸರ ಕಾರ್ಯಕರ್ತೆ ದಿಶಾರವರ ಮನವಿಯ ವಿಚಾರಣೆಯನ್ನು ಇಂದು ನಡೆಸಿದ ದೆಹಲಿ ಹೈಕೋರ್ಟ್ ಹಲವಾರು ಚಾನೆಲ್‌ಗಳಿಗೆ ನೋಟಿಸ್ ಜಾರಿ ಮಾಡಿದ್ದು, ನಾಳೆ ವಿಚಾರಣೆ ಮುಂದುವರೆಯಲಿದೆ.

ಬೆಂಗಳೂರು ಪರಿಸರ ಕಾರ್ಯಕರ್ತೆ ದಿಶಾ ರವಿ ಅವರು ತಮ್ಮ ಖಾಸಗಿ ಚಾಟ್‌ಗಳ ವಿಷಯಗಳು ಸೇರಿದಂತೆ ತನಿಖಾ ಸಾಮಗ್ರಿಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡದಂತೆ ಪೊಲೀಸರಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ರೈತರ ಪ್ರತಿಭಟನೆಯ ಮಧ್ಯೆ “ಟೂಲ್‌ಕಿಟ್ ಪ್ರಕರಣ”ಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಅವರು, ಖಾಸಗಿ ಟಿವಿ ಚಾನೆಲ್‌ಗಳು ತನ್ನ ವಾಟ್ಸಾಪ್ ಸಂಭಾಷಣೆಯ ವಿಷಯಗಳನ್ನು ಪ್ರಕಟಿಸುವುದನ್ನು ನಿಷೇಧಿಸಬೇಕೆಂದು ಕೋರಿದ್ದಾರೆ.

ಟೆಲಿವಿಷನ್ ಚಾನೆಲ್‌ಗಳಾದ ನ್ಯೂಸ್ 18, ಇಂಡಿಯಾ ಟುಡೆ ಮತ್ತು ಟೈಮ್ಸ್ ನೌ ಚಾನೆಲ್‌ಗಳು ಮೂರನೇ ವ್ಯಕ್ತಿಯೊಂದಿಗೆ ತನ್ನ ಖಾಸಗಿ ಚಾಟ್‌ಗಳ ವಿಷಯವನ್ನು ಪ್ರಕಟಿಸಿದ್ದಕ್ಕಾಗಿ ಕೇಬಲ್ ಟಿವಿ ನೆಟ್‌ವರ್ಕ್ ನಿಯಮಗಳನ್ನು ಉಲ್ಲಂಘಿಸಿವೆ ಎಂದು ದಿಶಾ ಆರೋಪಿಸಿದ್ದಾರೆ.

ಇದನ್ನೂ ಓದಿ: ನಿರ್ಲಕ್ಷ್ಯಕ್ಕೆ ಒಳಗಾಗಿದ್ದೇವೆ ಎಂದು ಪ್ರತ್ಯೇಕ ರಾಜ್ಯ ಕೇಳುವುದು ಸರಿಯಲ್ಲ: ಉಪ ಮುಖ್ಯಮಂತ್ರಿ ಸವದಿ

ನ್ಯಾಯಯುತ ವಿಚಾರಣೆಯ ಹಕ್ಕುಗಳು ಮತ್ತು ತನ್ನ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸುವ ರೀತಿಯಲ್ಲಿ ವರದಿ ಮಾಡಿದ ಮೇಲಿನ ಮೂರು ಚಾನೆಲ್‌ಗಳು ಮತ್ತು ಅಂತಹ ಇತರ ಖಾಸಗಿ ಚಾನೆಲ್‌ಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ನಿರ್ದೇಶನ ನೀಡಬೇಕು ಎಂದು ದಿಶಾ ನ್ಯಾಯಾಲಯವನ್ನು ಕೋರಿದ್ದಾರೆ.

ವಿಚಾರಣೆಯ ಮುಕ್ತಾಯದವರೆಗೂ ತನ್ನ ಯಾವುದೇ ಖಾಸಗಿ ವಾಟ್ಸಾಪ್ ಸಂದೇಶಗಳು ಅಥವಾ ಯಾವುದೇ ಖಾಸಗಿ ಸಂಭಾಷಣೆಗಳನ್ನು ಪ್ರಸಾರ ಮಾಡುವುದನ್ನು ತಡೆಯುವಂತೆ ನಿರ್ದೇಶನ ನೀಡಲು ಅವರು ಕೋರಿದ್ದಾರೆ.

“ತನಿಖಾ ಸಾಮಗ್ರಿಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡುವುದು ಕಾನೂನುಬಾಹಿರವಾಗಿದೆ, ಅದು ಗೌಪ್ಯತೆ ಮತ್ತು ಘನತೆಯ ಹಕ್ಕನ್ನು ಉಲ್ಲಂಘಿಸುತ್ತದೆ ಮತ್ತು ನ್ಯಾಯಯುತ ವಿಚಾರಣೆಯ ಹಕ್ಕನ್ನು ಗಮನಾರ್ಹವಾಗಿ ಪೂರ್ವಾಗ್ರಹಿಸುತ್ತದೆ. ದೆಹಲಿ ಪೊಲೀಸರ ಕ್ರಮಗಳು ಹೀಗೆ ಸಂವಿಧಾನದ 21 ನೇ ವಿಧಿಯನ್ನು ಉಲ್ಲಂಘಿಸುತ್ತವೆ ಎಂದು ಅವರು ಹೇಳಿದ್ದಾರೆ.

“ಕೆ.ಎಸ್.ಪುಟ್ಟಸ್ವಾಮಿ ವರ್ಸಸ್ ಯೂನಿಯನ್ ಆಫ್ ಇಂಡಿಯಾ” ಪ್ರಕರಣದಲ್ಲಿ ಗೌರವಾನ್ವಿತ ಸುಪ್ರೀಂ ಕೋರ್ಟ್‌ನ ಒಂಬತ್ತು ನ್ಯಾಯಾಧೀಶರ ಪೀಠವು, ಫೋನ್‌ನಲ್ಲಿನ ಸಂಭಾಷಣೆಗಳು ನಿಕಟ ಮತ್ತು ಗೌಪ್ಯ ಸ್ವರೂಪದ್ದಾಗಿವೆ ಎಂದು ಗುರುತಿಸಿತ್ತು ಮತ್ತು ಆರ್ಟಿಕಲ್ 21 ಸೂಚಿಸುವಂತೆ, ವ್ಯಕ್ತಿಯ ಗೌಪ್ಯತೆಯನ್ನು ಮೂಲಭೂತ ಹಕ್ಕಿನಡಿಯಲ್ಲಿ ರಕ್ಷಿಸಬೇಕು ಎಂದು ಆದೇಶಿಸಿತ್ತು.

ಇದನ್ನೂ ಓದಿ: ಭರವಸೆಯೇ ಬದುಕು ಎನ್ನುವುದನ್ನು ಮರೆಯದಿರೋಣ: ಅಭಿಮಾನಿಯ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿ

ಅದೇ ರೀತಿ, ಗೌರವಾನ್ವಿತ ಸುಪ್ರೀಂ ಕೋರ್ಟ್ “ಸುಬ್ರಮಣ್ಯಂ ಸ್ವಾಮಿ ವರ್ಸಸ್ ಯೂನಿಯನ್ ಆಫ್ ಇಂಡಿಯಾ” ಪ್ರಕರಣದಲ್ಲಿ, 21ನೆ ಆರ್ಟಿಕಲ್‌ನ ಮಹತ್ವವನ್ನು ಎತ್ತಿ ಹಿಡಿದಿತ್ತು ಎಂದು ದಿಶಾ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ದಿಶಾ ಪರವಾಗಿ ಹಾಜರಾದ ಹಿರಿಯ ವಕೀಲ ಅಖಿಲ್ ಸಿಬಲ್, ಬಂಧನದ ಒಂದು ದಿನದ ನಂತರ, ಟಿವಿ ಚಾನೆಲ್‌ಗಳು ಆಪಾದಿತ ಚಾಟ್‌ಗಳ ಕುರಿತು ವರದಿ ಮಾಡುತ್ತಿವೆ. “ನಾನು ಚಾನೆಲ್‌ಗಳೊಂದಿಗೆ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ ಎಂದು ದಿಶಾ ಹೇಳಿದ್ದಾರೆ” ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ದೆಹಲಿ ಪೊಲೀಸ್ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ದಿಶಾ ಅವರ ಮನವಿಯು ಮಾಧ್ಯಮಗಳ ಗಮನ ಸೆಳೆಯುವ ಉದ್ದೇಶ ಹೊಂದಿದೆ. ಪೊಲೀಸರ ಕಡೆಯಿಂದ ಯಾವುದೇ ಸೋರಿಕೆ ಸಂಭವಿಸಿಲ್ಲ ಎಂದು ಅಫಿಡವಿಟ್ ಸಲ್ಲಿಸುವುದಾಗಿ ಹೇಳಿದ್ದಾರೆ.

ಟೆಲಿವಿಷನ್ ಚಾನೆಲ್‌ಗಳಿಗೆ ನೋಟಿಸ್ ಜಾರಿಗೊಳಿಸಿರುವ ನ್ಯಾಯಾಲಯ, ನಾಳೆ ಈ ವಿಷಯವನ್ನು ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.
ದಿಶಾ ಅವರನ್ನು ಟೂಲ್‌ಕಿಟ್ ಪ್ರಕರಣದಲ್ಲಿ ಭಾನುವಾರ ಅವರ ಬೆಂಗಳೂರು ಮನೆಯಿಂದ ಬಂಧಿಸಲಾಗಿದ್ದು, ಅಂದಿನಿಂದ ದೆಹಲಿ ಪೊಲೀಸರ ವಶದಲ್ಲಿದ್ದಾರೆ.


ಇದನ್ನೂ ಓದಿ: ‘ಫಾಸ್ಟ್ಯಾಗ್’ ಕೇಂದ್ರ ಸರ್ಕಾರದ ಯೋಜಿತ ಹಗಲು ದರೋಡೆ- ಆಮ್ ಆದ್ಮಿ ಪಕ್ಷ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...