Homeಮುಖಪುಟದಿಶಾಳ ವಾಟ್ಸಾಪ್ ಚಾಟ್ಸ್‌, ತನಿಖಾ ಮಾಹಿತಿ ಸೋರಿಕೆ: ನ್ಯೂಸ್‌ ಚಾನೆಲ್‌ಗಳಿಗೆ ನೋಟಿಸ್!

ದಿಶಾಳ ವಾಟ್ಸಾಪ್ ಚಾಟ್ಸ್‌, ತನಿಖಾ ಮಾಹಿತಿ ಸೋರಿಕೆ: ನ್ಯೂಸ್‌ ಚಾನೆಲ್‌ಗಳಿಗೆ ನೋಟಿಸ್!

- Advertisement -
- Advertisement -

ಖಾಸಗಿ ಟಿವಿ ಚಾನೆಲ್‌ಗಳು ತನ್ನ ವಾಟ್ಸಾಪ್ ಸಂಭಾಷಣೆಯ ವಿಷಯಗಳನ್ನು ಪ್ರಕಟಿಸುವುದನ್ನು ನಿಷೇಧಿಸಬೇಕೆಂದು ಕೋರಿದ್ದ ಪರಿಸರ ಕಾರ್ಯಕರ್ತೆ ದಿಶಾರವರ ಮನವಿಯ ವಿಚಾರಣೆಯನ್ನು ಇಂದು ನಡೆಸಿದ ದೆಹಲಿ ಹೈಕೋರ್ಟ್ ಹಲವಾರು ಚಾನೆಲ್‌ಗಳಿಗೆ ನೋಟಿಸ್ ಜಾರಿ ಮಾಡಿದ್ದು, ನಾಳೆ ವಿಚಾರಣೆ ಮುಂದುವರೆಯಲಿದೆ.

ಬೆಂಗಳೂರು ಪರಿಸರ ಕಾರ್ಯಕರ್ತೆ ದಿಶಾ ರವಿ ಅವರು ತಮ್ಮ ಖಾಸಗಿ ಚಾಟ್‌ಗಳ ವಿಷಯಗಳು ಸೇರಿದಂತೆ ತನಿಖಾ ಸಾಮಗ್ರಿಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡದಂತೆ ಪೊಲೀಸರಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ರೈತರ ಪ್ರತಿಭಟನೆಯ ಮಧ್ಯೆ “ಟೂಲ್‌ಕಿಟ್ ಪ್ರಕರಣ”ಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಅವರು, ಖಾಸಗಿ ಟಿವಿ ಚಾನೆಲ್‌ಗಳು ತನ್ನ ವಾಟ್ಸಾಪ್ ಸಂಭಾಷಣೆಯ ವಿಷಯಗಳನ್ನು ಪ್ರಕಟಿಸುವುದನ್ನು ನಿಷೇಧಿಸಬೇಕೆಂದು ಕೋರಿದ್ದಾರೆ.

ಟೆಲಿವಿಷನ್ ಚಾನೆಲ್‌ಗಳಾದ ನ್ಯೂಸ್ 18, ಇಂಡಿಯಾ ಟುಡೆ ಮತ್ತು ಟೈಮ್ಸ್ ನೌ ಚಾನೆಲ್‌ಗಳು ಮೂರನೇ ವ್ಯಕ್ತಿಯೊಂದಿಗೆ ತನ್ನ ಖಾಸಗಿ ಚಾಟ್‌ಗಳ ವಿಷಯವನ್ನು ಪ್ರಕಟಿಸಿದ್ದಕ್ಕಾಗಿ ಕೇಬಲ್ ಟಿವಿ ನೆಟ್‌ವರ್ಕ್ ನಿಯಮಗಳನ್ನು ಉಲ್ಲಂಘಿಸಿವೆ ಎಂದು ದಿಶಾ ಆರೋಪಿಸಿದ್ದಾರೆ.

ಇದನ್ನೂ ಓದಿ: ನಿರ್ಲಕ್ಷ್ಯಕ್ಕೆ ಒಳಗಾಗಿದ್ದೇವೆ ಎಂದು ಪ್ರತ್ಯೇಕ ರಾಜ್ಯ ಕೇಳುವುದು ಸರಿಯಲ್ಲ: ಉಪ ಮುಖ್ಯಮಂತ್ರಿ ಸವದಿ

ನ್ಯಾಯಯುತ ವಿಚಾರಣೆಯ ಹಕ್ಕುಗಳು ಮತ್ತು ತನ್ನ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸುವ ರೀತಿಯಲ್ಲಿ ವರದಿ ಮಾಡಿದ ಮೇಲಿನ ಮೂರು ಚಾನೆಲ್‌ಗಳು ಮತ್ತು ಅಂತಹ ಇತರ ಖಾಸಗಿ ಚಾನೆಲ್‌ಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ನಿರ್ದೇಶನ ನೀಡಬೇಕು ಎಂದು ದಿಶಾ ನ್ಯಾಯಾಲಯವನ್ನು ಕೋರಿದ್ದಾರೆ.

ವಿಚಾರಣೆಯ ಮುಕ್ತಾಯದವರೆಗೂ ತನ್ನ ಯಾವುದೇ ಖಾಸಗಿ ವಾಟ್ಸಾಪ್ ಸಂದೇಶಗಳು ಅಥವಾ ಯಾವುದೇ ಖಾಸಗಿ ಸಂಭಾಷಣೆಗಳನ್ನು ಪ್ರಸಾರ ಮಾಡುವುದನ್ನು ತಡೆಯುವಂತೆ ನಿರ್ದೇಶನ ನೀಡಲು ಅವರು ಕೋರಿದ್ದಾರೆ.

“ತನಿಖಾ ಸಾಮಗ್ರಿಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡುವುದು ಕಾನೂನುಬಾಹಿರವಾಗಿದೆ, ಅದು ಗೌಪ್ಯತೆ ಮತ್ತು ಘನತೆಯ ಹಕ್ಕನ್ನು ಉಲ್ಲಂಘಿಸುತ್ತದೆ ಮತ್ತು ನ್ಯಾಯಯುತ ವಿಚಾರಣೆಯ ಹಕ್ಕನ್ನು ಗಮನಾರ್ಹವಾಗಿ ಪೂರ್ವಾಗ್ರಹಿಸುತ್ತದೆ. ದೆಹಲಿ ಪೊಲೀಸರ ಕ್ರಮಗಳು ಹೀಗೆ ಸಂವಿಧಾನದ 21 ನೇ ವಿಧಿಯನ್ನು ಉಲ್ಲಂಘಿಸುತ್ತವೆ ಎಂದು ಅವರು ಹೇಳಿದ್ದಾರೆ.

“ಕೆ.ಎಸ್.ಪುಟ್ಟಸ್ವಾಮಿ ವರ್ಸಸ್ ಯೂನಿಯನ್ ಆಫ್ ಇಂಡಿಯಾ” ಪ್ರಕರಣದಲ್ಲಿ ಗೌರವಾನ್ವಿತ ಸುಪ್ರೀಂ ಕೋರ್ಟ್‌ನ ಒಂಬತ್ತು ನ್ಯಾಯಾಧೀಶರ ಪೀಠವು, ಫೋನ್‌ನಲ್ಲಿನ ಸಂಭಾಷಣೆಗಳು ನಿಕಟ ಮತ್ತು ಗೌಪ್ಯ ಸ್ವರೂಪದ್ದಾಗಿವೆ ಎಂದು ಗುರುತಿಸಿತ್ತು ಮತ್ತು ಆರ್ಟಿಕಲ್ 21 ಸೂಚಿಸುವಂತೆ, ವ್ಯಕ್ತಿಯ ಗೌಪ್ಯತೆಯನ್ನು ಮೂಲಭೂತ ಹಕ್ಕಿನಡಿಯಲ್ಲಿ ರಕ್ಷಿಸಬೇಕು ಎಂದು ಆದೇಶಿಸಿತ್ತು.

ಇದನ್ನೂ ಓದಿ: ಭರವಸೆಯೇ ಬದುಕು ಎನ್ನುವುದನ್ನು ಮರೆಯದಿರೋಣ: ಅಭಿಮಾನಿಯ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿ

ಅದೇ ರೀತಿ, ಗೌರವಾನ್ವಿತ ಸುಪ್ರೀಂ ಕೋರ್ಟ್ “ಸುಬ್ರಮಣ್ಯಂ ಸ್ವಾಮಿ ವರ್ಸಸ್ ಯೂನಿಯನ್ ಆಫ್ ಇಂಡಿಯಾ” ಪ್ರಕರಣದಲ್ಲಿ, 21ನೆ ಆರ್ಟಿಕಲ್‌ನ ಮಹತ್ವವನ್ನು ಎತ್ತಿ ಹಿಡಿದಿತ್ತು ಎಂದು ದಿಶಾ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ದಿಶಾ ಪರವಾಗಿ ಹಾಜರಾದ ಹಿರಿಯ ವಕೀಲ ಅಖಿಲ್ ಸಿಬಲ್, ಬಂಧನದ ಒಂದು ದಿನದ ನಂತರ, ಟಿವಿ ಚಾನೆಲ್‌ಗಳು ಆಪಾದಿತ ಚಾಟ್‌ಗಳ ಕುರಿತು ವರದಿ ಮಾಡುತ್ತಿವೆ. “ನಾನು ಚಾನೆಲ್‌ಗಳೊಂದಿಗೆ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ ಎಂದು ದಿಶಾ ಹೇಳಿದ್ದಾರೆ” ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ದೆಹಲಿ ಪೊಲೀಸ್ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ದಿಶಾ ಅವರ ಮನವಿಯು ಮಾಧ್ಯಮಗಳ ಗಮನ ಸೆಳೆಯುವ ಉದ್ದೇಶ ಹೊಂದಿದೆ. ಪೊಲೀಸರ ಕಡೆಯಿಂದ ಯಾವುದೇ ಸೋರಿಕೆ ಸಂಭವಿಸಿಲ್ಲ ಎಂದು ಅಫಿಡವಿಟ್ ಸಲ್ಲಿಸುವುದಾಗಿ ಹೇಳಿದ್ದಾರೆ.

ಟೆಲಿವಿಷನ್ ಚಾನೆಲ್‌ಗಳಿಗೆ ನೋಟಿಸ್ ಜಾರಿಗೊಳಿಸಿರುವ ನ್ಯಾಯಾಲಯ, ನಾಳೆ ಈ ವಿಷಯವನ್ನು ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.
ದಿಶಾ ಅವರನ್ನು ಟೂಲ್‌ಕಿಟ್ ಪ್ರಕರಣದಲ್ಲಿ ಭಾನುವಾರ ಅವರ ಬೆಂಗಳೂರು ಮನೆಯಿಂದ ಬಂಧಿಸಲಾಗಿದ್ದು, ಅಂದಿನಿಂದ ದೆಹಲಿ ಪೊಲೀಸರ ವಶದಲ್ಲಿದ್ದಾರೆ.


ಇದನ್ನೂ ಓದಿ: ‘ಫಾಸ್ಟ್ಯಾಗ್’ ಕೇಂದ್ರ ಸರ್ಕಾರದ ಯೋಜಿತ ಹಗಲು ದರೋಡೆ- ಆಮ್ ಆದ್ಮಿ ಪಕ್ಷ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...