Homeಮುಖಪುಟದಿಶಾಳ ವಾಟ್ಸಾಪ್ ಚಾಟ್ಸ್‌, ತನಿಖಾ ಮಾಹಿತಿ ಸೋರಿಕೆ: ನ್ಯೂಸ್‌ ಚಾನೆಲ್‌ಗಳಿಗೆ ನೋಟಿಸ್!

ದಿಶಾಳ ವಾಟ್ಸಾಪ್ ಚಾಟ್ಸ್‌, ತನಿಖಾ ಮಾಹಿತಿ ಸೋರಿಕೆ: ನ್ಯೂಸ್‌ ಚಾನೆಲ್‌ಗಳಿಗೆ ನೋಟಿಸ್!

- Advertisement -
- Advertisement -

ಖಾಸಗಿ ಟಿವಿ ಚಾನೆಲ್‌ಗಳು ತನ್ನ ವಾಟ್ಸಾಪ್ ಸಂಭಾಷಣೆಯ ವಿಷಯಗಳನ್ನು ಪ್ರಕಟಿಸುವುದನ್ನು ನಿಷೇಧಿಸಬೇಕೆಂದು ಕೋರಿದ್ದ ಪರಿಸರ ಕಾರ್ಯಕರ್ತೆ ದಿಶಾರವರ ಮನವಿಯ ವಿಚಾರಣೆಯನ್ನು ಇಂದು ನಡೆಸಿದ ದೆಹಲಿ ಹೈಕೋರ್ಟ್ ಹಲವಾರು ಚಾನೆಲ್‌ಗಳಿಗೆ ನೋಟಿಸ್ ಜಾರಿ ಮಾಡಿದ್ದು, ನಾಳೆ ವಿಚಾರಣೆ ಮುಂದುವರೆಯಲಿದೆ.

ಬೆಂಗಳೂರು ಪರಿಸರ ಕಾರ್ಯಕರ್ತೆ ದಿಶಾ ರವಿ ಅವರು ತಮ್ಮ ಖಾಸಗಿ ಚಾಟ್‌ಗಳ ವಿಷಯಗಳು ಸೇರಿದಂತೆ ತನಿಖಾ ಸಾಮಗ್ರಿಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡದಂತೆ ಪೊಲೀಸರಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ರೈತರ ಪ್ರತಿಭಟನೆಯ ಮಧ್ಯೆ “ಟೂಲ್‌ಕಿಟ್ ಪ್ರಕರಣ”ಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಅವರು, ಖಾಸಗಿ ಟಿವಿ ಚಾನೆಲ್‌ಗಳು ತನ್ನ ವಾಟ್ಸಾಪ್ ಸಂಭಾಷಣೆಯ ವಿಷಯಗಳನ್ನು ಪ್ರಕಟಿಸುವುದನ್ನು ನಿಷೇಧಿಸಬೇಕೆಂದು ಕೋರಿದ್ದಾರೆ.

ಟೆಲಿವಿಷನ್ ಚಾನೆಲ್‌ಗಳಾದ ನ್ಯೂಸ್ 18, ಇಂಡಿಯಾ ಟುಡೆ ಮತ್ತು ಟೈಮ್ಸ್ ನೌ ಚಾನೆಲ್‌ಗಳು ಮೂರನೇ ವ್ಯಕ್ತಿಯೊಂದಿಗೆ ತನ್ನ ಖಾಸಗಿ ಚಾಟ್‌ಗಳ ವಿಷಯವನ್ನು ಪ್ರಕಟಿಸಿದ್ದಕ್ಕಾಗಿ ಕೇಬಲ್ ಟಿವಿ ನೆಟ್‌ವರ್ಕ್ ನಿಯಮಗಳನ್ನು ಉಲ್ಲಂಘಿಸಿವೆ ಎಂದು ದಿಶಾ ಆರೋಪಿಸಿದ್ದಾರೆ.

ಇದನ್ನೂ ಓದಿ: ನಿರ್ಲಕ್ಷ್ಯಕ್ಕೆ ಒಳಗಾಗಿದ್ದೇವೆ ಎಂದು ಪ್ರತ್ಯೇಕ ರಾಜ್ಯ ಕೇಳುವುದು ಸರಿಯಲ್ಲ: ಉಪ ಮುಖ್ಯಮಂತ್ರಿ ಸವದಿ

ನ್ಯಾಯಯುತ ವಿಚಾರಣೆಯ ಹಕ್ಕುಗಳು ಮತ್ತು ತನ್ನ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸುವ ರೀತಿಯಲ್ಲಿ ವರದಿ ಮಾಡಿದ ಮೇಲಿನ ಮೂರು ಚಾನೆಲ್‌ಗಳು ಮತ್ತು ಅಂತಹ ಇತರ ಖಾಸಗಿ ಚಾನೆಲ್‌ಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ನಿರ್ದೇಶನ ನೀಡಬೇಕು ಎಂದು ದಿಶಾ ನ್ಯಾಯಾಲಯವನ್ನು ಕೋರಿದ್ದಾರೆ.

ವಿಚಾರಣೆಯ ಮುಕ್ತಾಯದವರೆಗೂ ತನ್ನ ಯಾವುದೇ ಖಾಸಗಿ ವಾಟ್ಸಾಪ್ ಸಂದೇಶಗಳು ಅಥವಾ ಯಾವುದೇ ಖಾಸಗಿ ಸಂಭಾಷಣೆಗಳನ್ನು ಪ್ರಸಾರ ಮಾಡುವುದನ್ನು ತಡೆಯುವಂತೆ ನಿರ್ದೇಶನ ನೀಡಲು ಅವರು ಕೋರಿದ್ದಾರೆ.

“ತನಿಖಾ ಸಾಮಗ್ರಿಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡುವುದು ಕಾನೂನುಬಾಹಿರವಾಗಿದೆ, ಅದು ಗೌಪ್ಯತೆ ಮತ್ತು ಘನತೆಯ ಹಕ್ಕನ್ನು ಉಲ್ಲಂಘಿಸುತ್ತದೆ ಮತ್ತು ನ್ಯಾಯಯುತ ವಿಚಾರಣೆಯ ಹಕ್ಕನ್ನು ಗಮನಾರ್ಹವಾಗಿ ಪೂರ್ವಾಗ್ರಹಿಸುತ್ತದೆ. ದೆಹಲಿ ಪೊಲೀಸರ ಕ್ರಮಗಳು ಹೀಗೆ ಸಂವಿಧಾನದ 21 ನೇ ವಿಧಿಯನ್ನು ಉಲ್ಲಂಘಿಸುತ್ತವೆ ಎಂದು ಅವರು ಹೇಳಿದ್ದಾರೆ.

“ಕೆ.ಎಸ್.ಪುಟ್ಟಸ್ವಾಮಿ ವರ್ಸಸ್ ಯೂನಿಯನ್ ಆಫ್ ಇಂಡಿಯಾ” ಪ್ರಕರಣದಲ್ಲಿ ಗೌರವಾನ್ವಿತ ಸುಪ್ರೀಂ ಕೋರ್ಟ್‌ನ ಒಂಬತ್ತು ನ್ಯಾಯಾಧೀಶರ ಪೀಠವು, ಫೋನ್‌ನಲ್ಲಿನ ಸಂಭಾಷಣೆಗಳು ನಿಕಟ ಮತ್ತು ಗೌಪ್ಯ ಸ್ವರೂಪದ್ದಾಗಿವೆ ಎಂದು ಗುರುತಿಸಿತ್ತು ಮತ್ತು ಆರ್ಟಿಕಲ್ 21 ಸೂಚಿಸುವಂತೆ, ವ್ಯಕ್ತಿಯ ಗೌಪ್ಯತೆಯನ್ನು ಮೂಲಭೂತ ಹಕ್ಕಿನಡಿಯಲ್ಲಿ ರಕ್ಷಿಸಬೇಕು ಎಂದು ಆದೇಶಿಸಿತ್ತು.

ಇದನ್ನೂ ಓದಿ: ಭರವಸೆಯೇ ಬದುಕು ಎನ್ನುವುದನ್ನು ಮರೆಯದಿರೋಣ: ಅಭಿಮಾನಿಯ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿ

ಅದೇ ರೀತಿ, ಗೌರವಾನ್ವಿತ ಸುಪ್ರೀಂ ಕೋರ್ಟ್ “ಸುಬ್ರಮಣ್ಯಂ ಸ್ವಾಮಿ ವರ್ಸಸ್ ಯೂನಿಯನ್ ಆಫ್ ಇಂಡಿಯಾ” ಪ್ರಕರಣದಲ್ಲಿ, 21ನೆ ಆರ್ಟಿಕಲ್‌ನ ಮಹತ್ವವನ್ನು ಎತ್ತಿ ಹಿಡಿದಿತ್ತು ಎಂದು ದಿಶಾ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ದಿಶಾ ಪರವಾಗಿ ಹಾಜರಾದ ಹಿರಿಯ ವಕೀಲ ಅಖಿಲ್ ಸಿಬಲ್, ಬಂಧನದ ಒಂದು ದಿನದ ನಂತರ, ಟಿವಿ ಚಾನೆಲ್‌ಗಳು ಆಪಾದಿತ ಚಾಟ್‌ಗಳ ಕುರಿತು ವರದಿ ಮಾಡುತ್ತಿವೆ. “ನಾನು ಚಾನೆಲ್‌ಗಳೊಂದಿಗೆ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ ಎಂದು ದಿಶಾ ಹೇಳಿದ್ದಾರೆ” ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ದೆಹಲಿ ಪೊಲೀಸ್ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ದಿಶಾ ಅವರ ಮನವಿಯು ಮಾಧ್ಯಮಗಳ ಗಮನ ಸೆಳೆಯುವ ಉದ್ದೇಶ ಹೊಂದಿದೆ. ಪೊಲೀಸರ ಕಡೆಯಿಂದ ಯಾವುದೇ ಸೋರಿಕೆ ಸಂಭವಿಸಿಲ್ಲ ಎಂದು ಅಫಿಡವಿಟ್ ಸಲ್ಲಿಸುವುದಾಗಿ ಹೇಳಿದ್ದಾರೆ.

ಟೆಲಿವಿಷನ್ ಚಾನೆಲ್‌ಗಳಿಗೆ ನೋಟಿಸ್ ಜಾರಿಗೊಳಿಸಿರುವ ನ್ಯಾಯಾಲಯ, ನಾಳೆ ಈ ವಿಷಯವನ್ನು ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.
ದಿಶಾ ಅವರನ್ನು ಟೂಲ್‌ಕಿಟ್ ಪ್ರಕರಣದಲ್ಲಿ ಭಾನುವಾರ ಅವರ ಬೆಂಗಳೂರು ಮನೆಯಿಂದ ಬಂಧಿಸಲಾಗಿದ್ದು, ಅಂದಿನಿಂದ ದೆಹಲಿ ಪೊಲೀಸರ ವಶದಲ್ಲಿದ್ದಾರೆ.


ಇದನ್ನೂ ಓದಿ: ‘ಫಾಸ್ಟ್ಯಾಗ್’ ಕೇಂದ್ರ ಸರ್ಕಾರದ ಯೋಜಿತ ಹಗಲು ದರೋಡೆ- ಆಮ್ ಆದ್ಮಿ ಪಕ್ಷ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...