Homeಕರ್ನಾಟಕಮರ್ಯಾದೆಗೇಡು ಹತ್ಯೆ: ಅನ್ಯ ಜಾತಿ ಯುವಕನನ್ನು ಪ್ರೀತಿಸಿದ ಮಗಳ ಕತ್ತು ಕೊಯ್ದು ಬರ್ಬರ ಹತ್ಯೆಗೈದ ತಂದೆ

ಮರ್ಯಾದೆಗೇಡು ಹತ್ಯೆ: ಅನ್ಯ ಜಾತಿ ಯುವಕನನ್ನು ಪ್ರೀತಿಸಿದ ಮಗಳ ಕತ್ತು ಕೊಯ್ದು ಬರ್ಬರ ಹತ್ಯೆಗೈದ ತಂದೆ

- Advertisement -
- Advertisement -

ಮಗಳು ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ್ದಾಳೆ ಎನ್ನುವ ಕಾರಣಕ್ಕೆ ತಂದೆಯೇ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಮರ್ಯಾದೆಗೇಡು ಕೃತ್ಯ ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ನಡೆದಿದೆ.

ಬಿದಲೂರು ಗ್ರಾಮದ ಕವನ (20) ಮೃತ ಯುವತಿ ಎಂದು ಗುರುತಿಸಲಾಗಿದೆ. ತಂದೆ ಮಂಜುನಾಥ್ ಎಂಬುವರು ಮಗಳನ್ನ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾರೆ.

ರಾತ್ರಿ ಮಲಗಿದ್ದ ವೇಳೆ‌ ಮಗಳ‌ ಕತ್ತು ಕೊಯ್ದು, ಕಟ್ಟಿಗೆಯಿಂದ ತಲೆಗೆ ಹೊಡೆದು ಭೀಕರವಾಗಿ ಮಗಳ ಕೊಲೆ ಮಾಡಿದ್ದಾರೆ. ಮಗಳು ಅನ್ಯ ಜಾತಿ ಯುವಕನನ್ನ ಪ್ರೀತಿ ಮಾಡುತ್ತಿದ್ದಾಳೆ ಎನ್ನುವ ಕಾರಣಕ್ಕೆ ಈ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ.

ಮಗಳನ್ನು ಕೊಲೆ ಮಾಡಿದ ನಂತರ ಪೊಲೀಸ್ ಠಾಣೆಗೆ ಬಂದ ತಂದೆ ಮಂಜುನಾಥ್ ಶರಣಾಗಿದ್ದಾನೆ. ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ.

ಮಂಜುನಾಥ್ ಅವರ ಇಬ್ಬರು ಪುತ್ರಿಯರು ಪ್ರೀತಿಯಲ್ಲಿ ಬಿದ್ದಿದ್ದರು. ಕಳೆದ ಮಂಗಳವಾರವಷ್ಟೇ ಇವರ ಕಿರಿಯ ಮಗಳ ಪ್ರೀತಿಯ ವಿಷಯ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಠಾಣೆಯಲ್ಲಿ ಪ್ರೀತಿಸಿದವನ ಜೊತೆ ಹೋಗೋದಾಗಿ ಕಿರಿ ಮಗಳು ಹೇಳಿದ್ದಳು. ಹೀಗಾಗಿ ಪೊಲೀಸರು ಮಂಜುನಾಥ್​ ಅವರ ಕಿರಿ ಮಗಳನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಿ ಕೊಟ್ಟಿದ್ದರು.

ಇದೀಗ ಹಿರಿ‌ಯ ಮಗಳು ಸಹ ಪ್ರೀತಿ ಮಾಡುತ್ತಿರುವ ವಿಚಾರ ತಂದೆಗೆ ತಿಳಿದಿದೆ. ಹೀಗಾಗಿ ಇಬ್ಬರ ನಡುವೆ ನಿನ್ನೆ ರಾತ್ರಿ ಜಗಳವಾಗಿದೆ. ಆ ಬಳಿಕ ರಾತ್ರಿ ಹೊತ್ತು ಮಲಗಿದ್ದ ಮಗಳನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಇನ್ನು ಮಂಜುನಾಥ್​ ಚಿಕನ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಆರೋಪಿ ತಂದೆ ಕೋಳಿ ಕೊಯ್ಯುವ ಚಾಕುವಿನಿಂದಲೇ ಮಗಳ ಕತ್ತು ಕೊಯ್ದು ಭೀಕರ ಕೊಲೆ ಮಾಡಿದ್ದಾನೆ ಎಂಬುದಾಗಿ ತಿಳಿದು ಬಂದಿದೆ.

ಈ ಘಟನೆ ಕುರಿತು ವಿಶ್ವನಾಥಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಪೊಲೀಸರು ಮೃತದೇಹವನ್ನು ಮಂಜುನಾಥ್​ ಸಂಬಂಧಿಕರಿಗೆ ಹಸ್ತಾಂತರಿಸಲಿದ್ದಾರೆ. ಸದ್ಯ ಪೊಲೀಸ್​ ಠಾಣೆಗೆ ಹೋಗಿ ಶರಣಾಗಿರುವ ಆರೋಪಿ ಮಂಜನಾಥ್​ ವಿಚಾರಣೆಯನ್ನು ಪೊಲೀಸರು ಕೈಗೊಂಡಿದ್ದಾರೆ. ಈ ಬಗ್ಗೆ ಪೊಲೀಸರು ಇನ್ನು ಅಧಿಕೃತವಾಗಿ ಹೇಳಿಕೆ ನೀಡಿಲ್ಲ.

ಇದನ್ನೂ ಓದಿ: ಕೋಲಾರದಲ್ಲಿ ಮತ್ತೊಂದು ಮರ್ಯಾದೆಗೇಡು ಹತ್ಯೆ: ಪರಿಶಿಷ್ಟ ಯುವಕನ ಪ್ರೀತಿಸಿದ ಮಗಳನ್ನು ಕೊಂದ ತಂದೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...