Homeಮುಖಪುಟಉತ್ತರ ಪ್ರದೇಶದಲ್ಲಿ ಕಾರ್ಮಿಕರ ಮೇಲೆ ’ಸೋಂಕುನಿವಾರಕ’ ಸಿಂಪಡಿಸುತ್ತಿರುವ ಅಘಾತಕಾರಿ ವಿಡಿಯೊ ಬಹಿರಂಗ

ಉತ್ತರ ಪ್ರದೇಶದಲ್ಲಿ ಕಾರ್ಮಿಕರ ಮೇಲೆ ’ಸೋಂಕುನಿವಾರಕ’ ಸಿಂಪಡಿಸುತ್ತಿರುವ ಅಘಾತಕಾರಿ ವಿಡಿಯೊ ಬಹಿರಂಗ

- Advertisement -
- Advertisement -

ಉತ್ತರ ಪ್ರದೇಶಕ್ಕೆ ಹಿಂತಿರುಗಿರುವ ವಲಸಿಗ ಕಾರ್ಮಿಕರ ಮೇಲೆ “ಸೋಂಕುನಿವಾರಕ” ಸಿಂಪಡಿಸುತ್ತಿರುವ ಆಘಾತಕಾರಿ ವೀಡಿಯೋವೊಂದು ಹೊರಬಿದ್ದಿದೆ.

ಈ ವೀಡಿಯೊವನ್ನು ಬರೇಲಿ ಜಿಲ್ಲೆಯಲ್ಲಿ ಚಿತ್ರೀಕರಿಸಲಾಗಿದೆ ಎನ್ನಲಾಗಿದೆ. ಲಕ್ನೋದಿಂದ ಸುಮಾರು 270 ಕಿ.ಮೀ. ದೂರದಿಂದ ವಲಸೆ  ಹೊರಟವರ ತಂಡಕ್ಕೆ ವಿಶೇಷ ಬಸ್‌ಗಳನ್ನು ವ್ಯವಸ್ಥೆಗೊಳಿಸಿದ ನಂತರ ವಾರಾಂತ್ಯದಲ್ಲಿ ಯುಪಿಗೆ ಮರಳಿದ್ದಾರೆ. ಸೋಂಕುನಿವಾರಕವನ್ನು ಹಾಕುತ್ತಿರುವ ವಿಡಿಯೋದಲ್ಲಿ ಕೆಲವು ಪೊಲೀಸರು ಇದ್ದಾರೆ. ವಿಡಿಯೊ ಕ್ಲಿಪ್‌ನಲ್ಲಿ ಒಬ್ಬ ಮನುಷ್ಯ “ನಿಮ್ಮ ಕಣ್ಣುಗಳನ್ನು ಹಾಗೂ ಮಕ್ಕಳ ಕಣ್ಣುಗಳನ್ನು ಸಹ ಮುಚ್ಚಿ” ಎಂದು ಹೇಳುವುದನ್ನು ಕೇಳಬಹುದು.

ವಿಡಿಯೊ ಕ್ಲಿಪ್ ಜಿಲ್ಲಾಡಳಿತದ ಟೀಕೆಗೆ ಕಾರಣವಾದ ನಂತರ, ಅಧಿಕಾರಿಯೊಬ್ಬರು “ವಲಸಿಗರಿಗೆ ಕ್ಲೋರಿನ್ ಮತ್ತು ನೀರಿನ ಮಿಶ್ರಣವನ್ನು ಸಿಂಪಡಿಸಲಾಗಿತ್ತು … ಯಾವುದೇ ರಾಸಾಯನಿಕ ದ್ರಾವಣವನ್ನು ಬಳಸಲಾಗಿಲ್ಲ. ನಾವು ಅವರ ಕಣ್ಣುಗಳನ್ನು ಮುಚ್ಚಿಡಲು ಕೇಳಿದೆವು” ಎಂದು ಹೇಳಿದ್ದಾರಲ್ಲದೆ, “ಇದರಿಂದಾಗಿ ನಾವು ಅಮಾನವೀಯರೆಂದು ಅರ್ಥವಲ್ಲ … ಎಲ್ಲರನ್ನೂ ಸ್ವಚ್ಛಗೊಳಿಸುವುದು ಮುಖ್ಯವಾಗಿತ್ತು ಮತ್ತು ಹೆಚ್ಚಿನ ಸಂಖ್ಯೆಯ ಜನರು ಹಿಂತಿರುಗಿದ್ದರಿಂದ ಜನರ ಸಂಖ್ಯೆ ಭಾರಿ ವಿಪರೀತವಾಗಿದೆ. ಆದ್ದರಿಂದ ನಮಗೆ ಉತ್ತಮವೆನಿಸಿದ್ದನ್ನು ನಾವು ಮಾಡಿದ್ದೇವೆ” ಎಂದು ಹೇಳಿದ್ದಾರೆ.

ಕ್ಲಿಪ್ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಬರೇಲಿ ಜಿಲ್ಲಾಧಿಕಾರಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. “ಮುಖ್ಯಮಂತ್ರಿಗಳ ಕಚೇರಿಯ ಮೇಲ್ವಿಚಾರಣೆಯಲ್ಲಿ, ಪೀಡಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳೀಯ ಸಂಸ್ಥೆ ಮತ್ತು ಅಗ್ನಿಶಾಮಕ ದಳದ ತಂಡವನ್ನು ಬಸ್ಸುಗಳನ್ನು ಸ್ವಚ್ಛಗೊಳಿಸಲು ಕೇಳಲಾಯಿತು … ಆದರೆ ಅವರು ಹೆಚ್ಚಿನ ಜನವಿದ್ದ ಕಾರಣ ಇದನ್ನು ಮಾಡಿದರು. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ” ಎಂದು -ಬರೆದಿದ್ದಾರೆ.

ಬರೇಲಿಯ ಮುಖ್ಯ ಅಗ್ನಿಶಾಮಕ ಅಧಿಕಾರಿ ಚಂದ್ರ ಮೋಹನ್ ಶರ್ಮಾ “ಸೋಂಕುನಿವಾರಕಗಳಲ್ಲಿ ರಾಸಾಯನಿಕಗಳಿವೆ. ಇದನ್ನು ಮನುಷ್ಯರ ಮೇಲೆ ಬಳಸಬಾರದು. ಕಣ್ಣುಗಳ ಸಂಪರ್ಕಕ್ಕೆ ಬರಬಾರದು. ಈ ವಿಡಿಯೋವನ್ನು ತನಿಖೆ ಮಾಡಲಾಗುತ್ತಿದೆ. ಹಿರಿಯರಿಂದ ವರದಿಯನ್ನು ಕೋರಲಾಗಿದೆ” ಎಂದು ಸುದ್ದಿಗಾರರಿಗೆ ಹೇಳಿದ್ದಾರೆ.

ವಿಡಿಯೊ ಕ್ಲಿಪ್ ಬಗ್ಗೆ ಪ್ರತಿಪಕ್ಷ ನಾಯಕರು ವಾಗ್ದಾಳಿ ನಡೆಸಿದ್ದು, ಈ ಕ್ರಮವನ್ನು “ಅಮಾನವೀಯ” ಎಂದು ಕರೆದಿದ್ದಾರೆ. “ನಾನು ಯುಪಿ ಸರ್ಕಾರಕ್ಕೆ ಮನವಿ ಮಾಡುತ್ತೇನೆ … ಈ ಬಿಕ್ಕಟ್ಟಿನ ವಿರುದ್ಧ ನಾವೆಲ್ಲರೂ ಒಟ್ಟಾಗಿ ಹೋರಾಡುತ್ತಿದ್ದೇವೆ ಎಂದು ಯುಪಿ ಸರ್ಕಾರ ಹೇಳುತ್ತಿದೆ. ದಯವಿಟ್ಟು ಇಂತಹ ಅಮಾನವೀಯ ಕೃತ್ಯಗಳಲ್ಲಿ ತೊಡಗಬೇಡಿ. ಕಾರ್ಮಿಕರು ಈಗಾಗಲೇ ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದಾರೆ. ಅವರ ಮೇಲೆ ರಾಸಾಯನಿಕಗಳನ್ನು ಸಿಂಪಡಿಸಬೇಡಿ. ಇದು ಅವರನ್ನು ರಕ್ಷಿಸುವುದಿಲ್ಲ … ಬದಲಿಗೆ ಇದು ಅವರ ಆರೋಗ್ಯಕ್ಕೆ ಹಾನಿ ಮಾಡುತ್ತದೆ “ಎಂದು ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದಾರೆ.

ಸರಣಿ ಟ್ವೀಟ್‌ಗಳಲ್ಲಿ, ಯುಪಿ ಮಾಜಿ ಮುಖ್ಯಮಂತ್ರಿ ಮತ್ತು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ “ಈ ಕಠಿಣ ರಾಷ್ಟ್ರವ್ಯಾಪಿ ಲಾಕ್‌ಡೌನ್ ಸಮಯದಲ್ಲಿ, ದೇಶಾದ್ಯಂತ ಅನ್ಯಾಯದ ಬಗ್ಗೆ ಹಲವಾರು ಚಿತ್ರಗಳು ಹೊರಬಂದಿವೆ … ಆದರೆ ಬರೇಲಿಯಲ್ಲಿ ವಲಸೆ ಬಂದವರ ಮೇಲೆ ಸೋಂಕುನಿವಾರಕಗಳನ್ನು ಸಿಂಪಡಿಸುವುದು ಸಂಪೂರ್ಣ ಕ್ರೌರ್ಯಕ್ಕೆ ಒಂದು ಉದಾಹರಣೆಯಾಗಿದೆ, ಅನ್ಯಾಯ. ಸರ್ಕಾರ ಕೂಡಲೇ ಗಮನ ಹರಿಸಬೇಕು” ಎಂದು ಹರಿಹಾಯ್ದಿದ್ದಾರೆ.

ಕೊರೊನ ವೈರಸ್ ವಿರುದ್ಧ ಹೋರಾಡಲು ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ 21 ದಿನಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್ ಘೋಷಿಸಿದ ನಂತರ ದೇಶದ ವಿವಿಧ ಭಾಗಗಳಲ್ಲಿ ಲಕ್ಷಾಂತರ ವಲಸಿಗರು ಸಿಕ್ಕಿಹಾಕಿಕೊಂಡಿದ್ದಾರೆ. ಅಲ್ಲದೆ ದೇಶದಲ್ಲಿ 1,000 ಕ್ಕೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆ, ಕನಿಷ್ಠ 29 ಮಂದಿ ಸಾವನ್ನಪ್ಪಿದ್ದಾರೆ.

ಹಲವರು ವಲಸಿಗ ಕಾರ್ಮಿಕರು ಕಾಲ್ನಡಿಗೆಯಲ್ಲಿ ನೂರಾರು ಕಿಲೋಮೀಟರ್ ಪ್ರಯಾಣ ಮಾಡುತ್ತಿದ್ದಾರೆ.  ನಿನ್ನೆ ದೆಹಲಿಯಿಂದ 200 ಕಿ.ಮೀ ನಡೆದು 38 ವರ್ಷದ ಯುವಕ ಯುಪಿ ಹೆದ್ದಾರಿಯಲ್ಲಿ ಶನಿವಾರ ಮೃತಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...