Homeಮುಖಪುಟಉತ್ತರ ಪ್ರದೇಶದಲ್ಲಿ ಕಾರ್ಮಿಕರ ಮೇಲೆ ’ಸೋಂಕುನಿವಾರಕ’ ಸಿಂಪಡಿಸುತ್ತಿರುವ ಅಘಾತಕಾರಿ ವಿಡಿಯೊ ಬಹಿರಂಗ

ಉತ್ತರ ಪ್ರದೇಶದಲ್ಲಿ ಕಾರ್ಮಿಕರ ಮೇಲೆ ’ಸೋಂಕುನಿವಾರಕ’ ಸಿಂಪಡಿಸುತ್ತಿರುವ ಅಘಾತಕಾರಿ ವಿಡಿಯೊ ಬಹಿರಂಗ

- Advertisement -
- Advertisement -

ಉತ್ತರ ಪ್ರದೇಶಕ್ಕೆ ಹಿಂತಿರುಗಿರುವ ವಲಸಿಗ ಕಾರ್ಮಿಕರ ಮೇಲೆ “ಸೋಂಕುನಿವಾರಕ” ಸಿಂಪಡಿಸುತ್ತಿರುವ ಆಘಾತಕಾರಿ ವೀಡಿಯೋವೊಂದು ಹೊರಬಿದ್ದಿದೆ.

ಈ ವೀಡಿಯೊವನ್ನು ಬರೇಲಿ ಜಿಲ್ಲೆಯಲ್ಲಿ ಚಿತ್ರೀಕರಿಸಲಾಗಿದೆ ಎನ್ನಲಾಗಿದೆ. ಲಕ್ನೋದಿಂದ ಸುಮಾರು 270 ಕಿ.ಮೀ. ದೂರದಿಂದ ವಲಸೆ  ಹೊರಟವರ ತಂಡಕ್ಕೆ ವಿಶೇಷ ಬಸ್‌ಗಳನ್ನು ವ್ಯವಸ್ಥೆಗೊಳಿಸಿದ ನಂತರ ವಾರಾಂತ್ಯದಲ್ಲಿ ಯುಪಿಗೆ ಮರಳಿದ್ದಾರೆ. ಸೋಂಕುನಿವಾರಕವನ್ನು ಹಾಕುತ್ತಿರುವ ವಿಡಿಯೋದಲ್ಲಿ ಕೆಲವು ಪೊಲೀಸರು ಇದ್ದಾರೆ. ವಿಡಿಯೊ ಕ್ಲಿಪ್‌ನಲ್ಲಿ ಒಬ್ಬ ಮನುಷ್ಯ “ನಿಮ್ಮ ಕಣ್ಣುಗಳನ್ನು ಹಾಗೂ ಮಕ್ಕಳ ಕಣ್ಣುಗಳನ್ನು ಸಹ ಮುಚ್ಚಿ” ಎಂದು ಹೇಳುವುದನ್ನು ಕೇಳಬಹುದು.

ವಿಡಿಯೊ ಕ್ಲಿಪ್ ಜಿಲ್ಲಾಡಳಿತದ ಟೀಕೆಗೆ ಕಾರಣವಾದ ನಂತರ, ಅಧಿಕಾರಿಯೊಬ್ಬರು “ವಲಸಿಗರಿಗೆ ಕ್ಲೋರಿನ್ ಮತ್ತು ನೀರಿನ ಮಿಶ್ರಣವನ್ನು ಸಿಂಪಡಿಸಲಾಗಿತ್ತು … ಯಾವುದೇ ರಾಸಾಯನಿಕ ದ್ರಾವಣವನ್ನು ಬಳಸಲಾಗಿಲ್ಲ. ನಾವು ಅವರ ಕಣ್ಣುಗಳನ್ನು ಮುಚ್ಚಿಡಲು ಕೇಳಿದೆವು” ಎಂದು ಹೇಳಿದ್ದಾರಲ್ಲದೆ, “ಇದರಿಂದಾಗಿ ನಾವು ಅಮಾನವೀಯರೆಂದು ಅರ್ಥವಲ್ಲ … ಎಲ್ಲರನ್ನೂ ಸ್ವಚ್ಛಗೊಳಿಸುವುದು ಮುಖ್ಯವಾಗಿತ್ತು ಮತ್ತು ಹೆಚ್ಚಿನ ಸಂಖ್ಯೆಯ ಜನರು ಹಿಂತಿರುಗಿದ್ದರಿಂದ ಜನರ ಸಂಖ್ಯೆ ಭಾರಿ ವಿಪರೀತವಾಗಿದೆ. ಆದ್ದರಿಂದ ನಮಗೆ ಉತ್ತಮವೆನಿಸಿದ್ದನ್ನು ನಾವು ಮಾಡಿದ್ದೇವೆ” ಎಂದು ಹೇಳಿದ್ದಾರೆ.

ಕ್ಲಿಪ್ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಬರೇಲಿ ಜಿಲ್ಲಾಧಿಕಾರಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. “ಮುಖ್ಯಮಂತ್ರಿಗಳ ಕಚೇರಿಯ ಮೇಲ್ವಿಚಾರಣೆಯಲ್ಲಿ, ಪೀಡಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳೀಯ ಸಂಸ್ಥೆ ಮತ್ತು ಅಗ್ನಿಶಾಮಕ ದಳದ ತಂಡವನ್ನು ಬಸ್ಸುಗಳನ್ನು ಸ್ವಚ್ಛಗೊಳಿಸಲು ಕೇಳಲಾಯಿತು … ಆದರೆ ಅವರು ಹೆಚ್ಚಿನ ಜನವಿದ್ದ ಕಾರಣ ಇದನ್ನು ಮಾಡಿದರು. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ” ಎಂದು -ಬರೆದಿದ್ದಾರೆ.

ಬರೇಲಿಯ ಮುಖ್ಯ ಅಗ್ನಿಶಾಮಕ ಅಧಿಕಾರಿ ಚಂದ್ರ ಮೋಹನ್ ಶರ್ಮಾ “ಸೋಂಕುನಿವಾರಕಗಳಲ್ಲಿ ರಾಸಾಯನಿಕಗಳಿವೆ. ಇದನ್ನು ಮನುಷ್ಯರ ಮೇಲೆ ಬಳಸಬಾರದು. ಕಣ್ಣುಗಳ ಸಂಪರ್ಕಕ್ಕೆ ಬರಬಾರದು. ಈ ವಿಡಿಯೋವನ್ನು ತನಿಖೆ ಮಾಡಲಾಗುತ್ತಿದೆ. ಹಿರಿಯರಿಂದ ವರದಿಯನ್ನು ಕೋರಲಾಗಿದೆ” ಎಂದು ಸುದ್ದಿಗಾರರಿಗೆ ಹೇಳಿದ್ದಾರೆ.

ವಿಡಿಯೊ ಕ್ಲಿಪ್ ಬಗ್ಗೆ ಪ್ರತಿಪಕ್ಷ ನಾಯಕರು ವಾಗ್ದಾಳಿ ನಡೆಸಿದ್ದು, ಈ ಕ್ರಮವನ್ನು “ಅಮಾನವೀಯ” ಎಂದು ಕರೆದಿದ್ದಾರೆ. “ನಾನು ಯುಪಿ ಸರ್ಕಾರಕ್ಕೆ ಮನವಿ ಮಾಡುತ್ತೇನೆ … ಈ ಬಿಕ್ಕಟ್ಟಿನ ವಿರುದ್ಧ ನಾವೆಲ್ಲರೂ ಒಟ್ಟಾಗಿ ಹೋರಾಡುತ್ತಿದ್ದೇವೆ ಎಂದು ಯುಪಿ ಸರ್ಕಾರ ಹೇಳುತ್ತಿದೆ. ದಯವಿಟ್ಟು ಇಂತಹ ಅಮಾನವೀಯ ಕೃತ್ಯಗಳಲ್ಲಿ ತೊಡಗಬೇಡಿ. ಕಾರ್ಮಿಕರು ಈಗಾಗಲೇ ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದಾರೆ. ಅವರ ಮೇಲೆ ರಾಸಾಯನಿಕಗಳನ್ನು ಸಿಂಪಡಿಸಬೇಡಿ. ಇದು ಅವರನ್ನು ರಕ್ಷಿಸುವುದಿಲ್ಲ … ಬದಲಿಗೆ ಇದು ಅವರ ಆರೋಗ್ಯಕ್ಕೆ ಹಾನಿ ಮಾಡುತ್ತದೆ “ಎಂದು ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದಾರೆ.

ಸರಣಿ ಟ್ವೀಟ್‌ಗಳಲ್ಲಿ, ಯುಪಿ ಮಾಜಿ ಮುಖ್ಯಮಂತ್ರಿ ಮತ್ತು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ “ಈ ಕಠಿಣ ರಾಷ್ಟ್ರವ್ಯಾಪಿ ಲಾಕ್‌ಡೌನ್ ಸಮಯದಲ್ಲಿ, ದೇಶಾದ್ಯಂತ ಅನ್ಯಾಯದ ಬಗ್ಗೆ ಹಲವಾರು ಚಿತ್ರಗಳು ಹೊರಬಂದಿವೆ … ಆದರೆ ಬರೇಲಿಯಲ್ಲಿ ವಲಸೆ ಬಂದವರ ಮೇಲೆ ಸೋಂಕುನಿವಾರಕಗಳನ್ನು ಸಿಂಪಡಿಸುವುದು ಸಂಪೂರ್ಣ ಕ್ರೌರ್ಯಕ್ಕೆ ಒಂದು ಉದಾಹರಣೆಯಾಗಿದೆ, ಅನ್ಯಾಯ. ಸರ್ಕಾರ ಕೂಡಲೇ ಗಮನ ಹರಿಸಬೇಕು” ಎಂದು ಹರಿಹಾಯ್ದಿದ್ದಾರೆ.

ಕೊರೊನ ವೈರಸ್ ವಿರುದ್ಧ ಹೋರಾಡಲು ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ 21 ದಿನಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್ ಘೋಷಿಸಿದ ನಂತರ ದೇಶದ ವಿವಿಧ ಭಾಗಗಳಲ್ಲಿ ಲಕ್ಷಾಂತರ ವಲಸಿಗರು ಸಿಕ್ಕಿಹಾಕಿಕೊಂಡಿದ್ದಾರೆ. ಅಲ್ಲದೆ ದೇಶದಲ್ಲಿ 1,000 ಕ್ಕೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆ, ಕನಿಷ್ಠ 29 ಮಂದಿ ಸಾವನ್ನಪ್ಪಿದ್ದಾರೆ.

ಹಲವರು ವಲಸಿಗ ಕಾರ್ಮಿಕರು ಕಾಲ್ನಡಿಗೆಯಲ್ಲಿ ನೂರಾರು ಕಿಲೋಮೀಟರ್ ಪ್ರಯಾಣ ಮಾಡುತ್ತಿದ್ದಾರೆ.  ನಿನ್ನೆ ದೆಹಲಿಯಿಂದ 200 ಕಿ.ಮೀ ನಡೆದು 38 ವರ್ಷದ ಯುವಕ ಯುಪಿ ಹೆದ್ದಾರಿಯಲ್ಲಿ ಶನಿವಾರ ಮೃತಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...