Homeಮುಖಪುಟಉತ್ತರ ಪ್ರದೇಶದಲ್ಲಿ ಕಾರ್ಮಿಕರ ಮೇಲೆ ’ಸೋಂಕುನಿವಾರಕ’ ಸಿಂಪಡಿಸುತ್ತಿರುವ ಅಘಾತಕಾರಿ ವಿಡಿಯೊ ಬಹಿರಂಗ

ಉತ್ತರ ಪ್ರದೇಶದಲ್ಲಿ ಕಾರ್ಮಿಕರ ಮೇಲೆ ’ಸೋಂಕುನಿವಾರಕ’ ಸಿಂಪಡಿಸುತ್ತಿರುವ ಅಘಾತಕಾರಿ ವಿಡಿಯೊ ಬಹಿರಂಗ

- Advertisement -
- Advertisement -

ಉತ್ತರ ಪ್ರದೇಶಕ್ಕೆ ಹಿಂತಿರುಗಿರುವ ವಲಸಿಗ ಕಾರ್ಮಿಕರ ಮೇಲೆ “ಸೋಂಕುನಿವಾರಕ” ಸಿಂಪಡಿಸುತ್ತಿರುವ ಆಘಾತಕಾರಿ ವೀಡಿಯೋವೊಂದು ಹೊರಬಿದ್ದಿದೆ.

ಈ ವೀಡಿಯೊವನ್ನು ಬರೇಲಿ ಜಿಲ್ಲೆಯಲ್ಲಿ ಚಿತ್ರೀಕರಿಸಲಾಗಿದೆ ಎನ್ನಲಾಗಿದೆ. ಲಕ್ನೋದಿಂದ ಸುಮಾರು 270 ಕಿ.ಮೀ. ದೂರದಿಂದ ವಲಸೆ  ಹೊರಟವರ ತಂಡಕ್ಕೆ ವಿಶೇಷ ಬಸ್‌ಗಳನ್ನು ವ್ಯವಸ್ಥೆಗೊಳಿಸಿದ ನಂತರ ವಾರಾಂತ್ಯದಲ್ಲಿ ಯುಪಿಗೆ ಮರಳಿದ್ದಾರೆ. ಸೋಂಕುನಿವಾರಕವನ್ನು ಹಾಕುತ್ತಿರುವ ವಿಡಿಯೋದಲ್ಲಿ ಕೆಲವು ಪೊಲೀಸರು ಇದ್ದಾರೆ. ವಿಡಿಯೊ ಕ್ಲಿಪ್‌ನಲ್ಲಿ ಒಬ್ಬ ಮನುಷ್ಯ “ನಿಮ್ಮ ಕಣ್ಣುಗಳನ್ನು ಹಾಗೂ ಮಕ್ಕಳ ಕಣ್ಣುಗಳನ್ನು ಸಹ ಮುಚ್ಚಿ” ಎಂದು ಹೇಳುವುದನ್ನು ಕೇಳಬಹುದು.

ವಿಡಿಯೊ ಕ್ಲಿಪ್ ಜಿಲ್ಲಾಡಳಿತದ ಟೀಕೆಗೆ ಕಾರಣವಾದ ನಂತರ, ಅಧಿಕಾರಿಯೊಬ್ಬರು “ವಲಸಿಗರಿಗೆ ಕ್ಲೋರಿನ್ ಮತ್ತು ನೀರಿನ ಮಿಶ್ರಣವನ್ನು ಸಿಂಪಡಿಸಲಾಗಿತ್ತು … ಯಾವುದೇ ರಾಸಾಯನಿಕ ದ್ರಾವಣವನ್ನು ಬಳಸಲಾಗಿಲ್ಲ. ನಾವು ಅವರ ಕಣ್ಣುಗಳನ್ನು ಮುಚ್ಚಿಡಲು ಕೇಳಿದೆವು” ಎಂದು ಹೇಳಿದ್ದಾರಲ್ಲದೆ, “ಇದರಿಂದಾಗಿ ನಾವು ಅಮಾನವೀಯರೆಂದು ಅರ್ಥವಲ್ಲ … ಎಲ್ಲರನ್ನೂ ಸ್ವಚ್ಛಗೊಳಿಸುವುದು ಮುಖ್ಯವಾಗಿತ್ತು ಮತ್ತು ಹೆಚ್ಚಿನ ಸಂಖ್ಯೆಯ ಜನರು ಹಿಂತಿರುಗಿದ್ದರಿಂದ ಜನರ ಸಂಖ್ಯೆ ಭಾರಿ ವಿಪರೀತವಾಗಿದೆ. ಆದ್ದರಿಂದ ನಮಗೆ ಉತ್ತಮವೆನಿಸಿದ್ದನ್ನು ನಾವು ಮಾಡಿದ್ದೇವೆ” ಎಂದು ಹೇಳಿದ್ದಾರೆ.

ಕ್ಲಿಪ್ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಬರೇಲಿ ಜಿಲ್ಲಾಧಿಕಾರಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. “ಮುಖ್ಯಮಂತ್ರಿಗಳ ಕಚೇರಿಯ ಮೇಲ್ವಿಚಾರಣೆಯಲ್ಲಿ, ಪೀಡಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳೀಯ ಸಂಸ್ಥೆ ಮತ್ತು ಅಗ್ನಿಶಾಮಕ ದಳದ ತಂಡವನ್ನು ಬಸ್ಸುಗಳನ್ನು ಸ್ವಚ್ಛಗೊಳಿಸಲು ಕೇಳಲಾಯಿತು … ಆದರೆ ಅವರು ಹೆಚ್ಚಿನ ಜನವಿದ್ದ ಕಾರಣ ಇದನ್ನು ಮಾಡಿದರು. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ” ಎಂದು -ಬರೆದಿದ್ದಾರೆ.

ಬರೇಲಿಯ ಮುಖ್ಯ ಅಗ್ನಿಶಾಮಕ ಅಧಿಕಾರಿ ಚಂದ್ರ ಮೋಹನ್ ಶರ್ಮಾ “ಸೋಂಕುನಿವಾರಕಗಳಲ್ಲಿ ರಾಸಾಯನಿಕಗಳಿವೆ. ಇದನ್ನು ಮನುಷ್ಯರ ಮೇಲೆ ಬಳಸಬಾರದು. ಕಣ್ಣುಗಳ ಸಂಪರ್ಕಕ್ಕೆ ಬರಬಾರದು. ಈ ವಿಡಿಯೋವನ್ನು ತನಿಖೆ ಮಾಡಲಾಗುತ್ತಿದೆ. ಹಿರಿಯರಿಂದ ವರದಿಯನ್ನು ಕೋರಲಾಗಿದೆ” ಎಂದು ಸುದ್ದಿಗಾರರಿಗೆ ಹೇಳಿದ್ದಾರೆ.

ವಿಡಿಯೊ ಕ್ಲಿಪ್ ಬಗ್ಗೆ ಪ್ರತಿಪಕ್ಷ ನಾಯಕರು ವಾಗ್ದಾಳಿ ನಡೆಸಿದ್ದು, ಈ ಕ್ರಮವನ್ನು “ಅಮಾನವೀಯ” ಎಂದು ಕರೆದಿದ್ದಾರೆ. “ನಾನು ಯುಪಿ ಸರ್ಕಾರಕ್ಕೆ ಮನವಿ ಮಾಡುತ್ತೇನೆ … ಈ ಬಿಕ್ಕಟ್ಟಿನ ವಿರುದ್ಧ ನಾವೆಲ್ಲರೂ ಒಟ್ಟಾಗಿ ಹೋರಾಡುತ್ತಿದ್ದೇವೆ ಎಂದು ಯುಪಿ ಸರ್ಕಾರ ಹೇಳುತ್ತಿದೆ. ದಯವಿಟ್ಟು ಇಂತಹ ಅಮಾನವೀಯ ಕೃತ್ಯಗಳಲ್ಲಿ ತೊಡಗಬೇಡಿ. ಕಾರ್ಮಿಕರು ಈಗಾಗಲೇ ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದಾರೆ. ಅವರ ಮೇಲೆ ರಾಸಾಯನಿಕಗಳನ್ನು ಸಿಂಪಡಿಸಬೇಡಿ. ಇದು ಅವರನ್ನು ರಕ್ಷಿಸುವುದಿಲ್ಲ … ಬದಲಿಗೆ ಇದು ಅವರ ಆರೋಗ್ಯಕ್ಕೆ ಹಾನಿ ಮಾಡುತ್ತದೆ “ಎಂದು ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದಾರೆ.

ಸರಣಿ ಟ್ವೀಟ್‌ಗಳಲ್ಲಿ, ಯುಪಿ ಮಾಜಿ ಮುಖ್ಯಮಂತ್ರಿ ಮತ್ತು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ “ಈ ಕಠಿಣ ರಾಷ್ಟ್ರವ್ಯಾಪಿ ಲಾಕ್‌ಡೌನ್ ಸಮಯದಲ್ಲಿ, ದೇಶಾದ್ಯಂತ ಅನ್ಯಾಯದ ಬಗ್ಗೆ ಹಲವಾರು ಚಿತ್ರಗಳು ಹೊರಬಂದಿವೆ … ಆದರೆ ಬರೇಲಿಯಲ್ಲಿ ವಲಸೆ ಬಂದವರ ಮೇಲೆ ಸೋಂಕುನಿವಾರಕಗಳನ್ನು ಸಿಂಪಡಿಸುವುದು ಸಂಪೂರ್ಣ ಕ್ರೌರ್ಯಕ್ಕೆ ಒಂದು ಉದಾಹರಣೆಯಾಗಿದೆ, ಅನ್ಯಾಯ. ಸರ್ಕಾರ ಕೂಡಲೇ ಗಮನ ಹರಿಸಬೇಕು” ಎಂದು ಹರಿಹಾಯ್ದಿದ್ದಾರೆ.

ಕೊರೊನ ವೈರಸ್ ವಿರುದ್ಧ ಹೋರಾಡಲು ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ 21 ದಿನಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್ ಘೋಷಿಸಿದ ನಂತರ ದೇಶದ ವಿವಿಧ ಭಾಗಗಳಲ್ಲಿ ಲಕ್ಷಾಂತರ ವಲಸಿಗರು ಸಿಕ್ಕಿಹಾಕಿಕೊಂಡಿದ್ದಾರೆ. ಅಲ್ಲದೆ ದೇಶದಲ್ಲಿ 1,000 ಕ್ಕೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆ, ಕನಿಷ್ಠ 29 ಮಂದಿ ಸಾವನ್ನಪ್ಪಿದ್ದಾರೆ.

ಹಲವರು ವಲಸಿಗ ಕಾರ್ಮಿಕರು ಕಾಲ್ನಡಿಗೆಯಲ್ಲಿ ನೂರಾರು ಕಿಲೋಮೀಟರ್ ಪ್ರಯಾಣ ಮಾಡುತ್ತಿದ್ದಾರೆ.  ನಿನ್ನೆ ದೆಹಲಿಯಿಂದ 200 ಕಿ.ಮೀ ನಡೆದು 38 ವರ್ಷದ ಯುವಕ ಯುಪಿ ಹೆದ್ದಾರಿಯಲ್ಲಿ ಶನಿವಾರ ಮೃತಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...