Homeಮುಖಪುಟಉತ್ತರ ಪ್ರದೇಶದಲ್ಲಿ ಕಾರ್ಮಿಕರ ಮೇಲೆ ’ಸೋಂಕುನಿವಾರಕ’ ಸಿಂಪಡಿಸುತ್ತಿರುವ ಅಘಾತಕಾರಿ ವಿಡಿಯೊ ಬಹಿರಂಗ

ಉತ್ತರ ಪ್ರದೇಶದಲ್ಲಿ ಕಾರ್ಮಿಕರ ಮೇಲೆ ’ಸೋಂಕುನಿವಾರಕ’ ಸಿಂಪಡಿಸುತ್ತಿರುವ ಅಘಾತಕಾರಿ ವಿಡಿಯೊ ಬಹಿರಂಗ

- Advertisement -
- Advertisement -

ಉತ್ತರ ಪ್ರದೇಶಕ್ಕೆ ಹಿಂತಿರುಗಿರುವ ವಲಸಿಗ ಕಾರ್ಮಿಕರ ಮೇಲೆ “ಸೋಂಕುನಿವಾರಕ” ಸಿಂಪಡಿಸುತ್ತಿರುವ ಆಘಾತಕಾರಿ ವೀಡಿಯೋವೊಂದು ಹೊರಬಿದ್ದಿದೆ.

ಈ ವೀಡಿಯೊವನ್ನು ಬರೇಲಿ ಜಿಲ್ಲೆಯಲ್ಲಿ ಚಿತ್ರೀಕರಿಸಲಾಗಿದೆ ಎನ್ನಲಾಗಿದೆ. ಲಕ್ನೋದಿಂದ ಸುಮಾರು 270 ಕಿ.ಮೀ. ದೂರದಿಂದ ವಲಸೆ  ಹೊರಟವರ ತಂಡಕ್ಕೆ ವಿಶೇಷ ಬಸ್‌ಗಳನ್ನು ವ್ಯವಸ್ಥೆಗೊಳಿಸಿದ ನಂತರ ವಾರಾಂತ್ಯದಲ್ಲಿ ಯುಪಿಗೆ ಮರಳಿದ್ದಾರೆ. ಸೋಂಕುನಿವಾರಕವನ್ನು ಹಾಕುತ್ತಿರುವ ವಿಡಿಯೋದಲ್ಲಿ ಕೆಲವು ಪೊಲೀಸರು ಇದ್ದಾರೆ. ವಿಡಿಯೊ ಕ್ಲಿಪ್‌ನಲ್ಲಿ ಒಬ್ಬ ಮನುಷ್ಯ “ನಿಮ್ಮ ಕಣ್ಣುಗಳನ್ನು ಹಾಗೂ ಮಕ್ಕಳ ಕಣ್ಣುಗಳನ್ನು ಸಹ ಮುಚ್ಚಿ” ಎಂದು ಹೇಳುವುದನ್ನು ಕೇಳಬಹುದು.

ವಿಡಿಯೊ ಕ್ಲಿಪ್ ಜಿಲ್ಲಾಡಳಿತದ ಟೀಕೆಗೆ ಕಾರಣವಾದ ನಂತರ, ಅಧಿಕಾರಿಯೊಬ್ಬರು “ವಲಸಿಗರಿಗೆ ಕ್ಲೋರಿನ್ ಮತ್ತು ನೀರಿನ ಮಿಶ್ರಣವನ್ನು ಸಿಂಪಡಿಸಲಾಗಿತ್ತು … ಯಾವುದೇ ರಾಸಾಯನಿಕ ದ್ರಾವಣವನ್ನು ಬಳಸಲಾಗಿಲ್ಲ. ನಾವು ಅವರ ಕಣ್ಣುಗಳನ್ನು ಮುಚ್ಚಿಡಲು ಕೇಳಿದೆವು” ಎಂದು ಹೇಳಿದ್ದಾರಲ್ಲದೆ, “ಇದರಿಂದಾಗಿ ನಾವು ಅಮಾನವೀಯರೆಂದು ಅರ್ಥವಲ್ಲ … ಎಲ್ಲರನ್ನೂ ಸ್ವಚ್ಛಗೊಳಿಸುವುದು ಮುಖ್ಯವಾಗಿತ್ತು ಮತ್ತು ಹೆಚ್ಚಿನ ಸಂಖ್ಯೆಯ ಜನರು ಹಿಂತಿರುಗಿದ್ದರಿಂದ ಜನರ ಸಂಖ್ಯೆ ಭಾರಿ ವಿಪರೀತವಾಗಿದೆ. ಆದ್ದರಿಂದ ನಮಗೆ ಉತ್ತಮವೆನಿಸಿದ್ದನ್ನು ನಾವು ಮಾಡಿದ್ದೇವೆ” ಎಂದು ಹೇಳಿದ್ದಾರೆ.

ಕ್ಲಿಪ್ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಬರೇಲಿ ಜಿಲ್ಲಾಧಿಕಾರಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. “ಮುಖ್ಯಮಂತ್ರಿಗಳ ಕಚೇರಿಯ ಮೇಲ್ವಿಚಾರಣೆಯಲ್ಲಿ, ಪೀಡಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳೀಯ ಸಂಸ್ಥೆ ಮತ್ತು ಅಗ್ನಿಶಾಮಕ ದಳದ ತಂಡವನ್ನು ಬಸ್ಸುಗಳನ್ನು ಸ್ವಚ್ಛಗೊಳಿಸಲು ಕೇಳಲಾಯಿತು … ಆದರೆ ಅವರು ಹೆಚ್ಚಿನ ಜನವಿದ್ದ ಕಾರಣ ಇದನ್ನು ಮಾಡಿದರು. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ” ಎಂದು -ಬರೆದಿದ್ದಾರೆ.

ಬರೇಲಿಯ ಮುಖ್ಯ ಅಗ್ನಿಶಾಮಕ ಅಧಿಕಾರಿ ಚಂದ್ರ ಮೋಹನ್ ಶರ್ಮಾ “ಸೋಂಕುನಿವಾರಕಗಳಲ್ಲಿ ರಾಸಾಯನಿಕಗಳಿವೆ. ಇದನ್ನು ಮನುಷ್ಯರ ಮೇಲೆ ಬಳಸಬಾರದು. ಕಣ್ಣುಗಳ ಸಂಪರ್ಕಕ್ಕೆ ಬರಬಾರದು. ಈ ವಿಡಿಯೋವನ್ನು ತನಿಖೆ ಮಾಡಲಾಗುತ್ತಿದೆ. ಹಿರಿಯರಿಂದ ವರದಿಯನ್ನು ಕೋರಲಾಗಿದೆ” ಎಂದು ಸುದ್ದಿಗಾರರಿಗೆ ಹೇಳಿದ್ದಾರೆ.

ವಿಡಿಯೊ ಕ್ಲಿಪ್ ಬಗ್ಗೆ ಪ್ರತಿಪಕ್ಷ ನಾಯಕರು ವಾಗ್ದಾಳಿ ನಡೆಸಿದ್ದು, ಈ ಕ್ರಮವನ್ನು “ಅಮಾನವೀಯ” ಎಂದು ಕರೆದಿದ್ದಾರೆ. “ನಾನು ಯುಪಿ ಸರ್ಕಾರಕ್ಕೆ ಮನವಿ ಮಾಡುತ್ತೇನೆ … ಈ ಬಿಕ್ಕಟ್ಟಿನ ವಿರುದ್ಧ ನಾವೆಲ್ಲರೂ ಒಟ್ಟಾಗಿ ಹೋರಾಡುತ್ತಿದ್ದೇವೆ ಎಂದು ಯುಪಿ ಸರ್ಕಾರ ಹೇಳುತ್ತಿದೆ. ದಯವಿಟ್ಟು ಇಂತಹ ಅಮಾನವೀಯ ಕೃತ್ಯಗಳಲ್ಲಿ ತೊಡಗಬೇಡಿ. ಕಾರ್ಮಿಕರು ಈಗಾಗಲೇ ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದಾರೆ. ಅವರ ಮೇಲೆ ರಾಸಾಯನಿಕಗಳನ್ನು ಸಿಂಪಡಿಸಬೇಡಿ. ಇದು ಅವರನ್ನು ರಕ್ಷಿಸುವುದಿಲ್ಲ … ಬದಲಿಗೆ ಇದು ಅವರ ಆರೋಗ್ಯಕ್ಕೆ ಹಾನಿ ಮಾಡುತ್ತದೆ “ಎಂದು ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದಾರೆ.

ಸರಣಿ ಟ್ವೀಟ್‌ಗಳಲ್ಲಿ, ಯುಪಿ ಮಾಜಿ ಮುಖ್ಯಮಂತ್ರಿ ಮತ್ತು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ “ಈ ಕಠಿಣ ರಾಷ್ಟ್ರವ್ಯಾಪಿ ಲಾಕ್‌ಡೌನ್ ಸಮಯದಲ್ಲಿ, ದೇಶಾದ್ಯಂತ ಅನ್ಯಾಯದ ಬಗ್ಗೆ ಹಲವಾರು ಚಿತ್ರಗಳು ಹೊರಬಂದಿವೆ … ಆದರೆ ಬರೇಲಿಯಲ್ಲಿ ವಲಸೆ ಬಂದವರ ಮೇಲೆ ಸೋಂಕುನಿವಾರಕಗಳನ್ನು ಸಿಂಪಡಿಸುವುದು ಸಂಪೂರ್ಣ ಕ್ರೌರ್ಯಕ್ಕೆ ಒಂದು ಉದಾಹರಣೆಯಾಗಿದೆ, ಅನ್ಯಾಯ. ಸರ್ಕಾರ ಕೂಡಲೇ ಗಮನ ಹರಿಸಬೇಕು” ಎಂದು ಹರಿಹಾಯ್ದಿದ್ದಾರೆ.

ಕೊರೊನ ವೈರಸ್ ವಿರುದ್ಧ ಹೋರಾಡಲು ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ 21 ದಿನಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್ ಘೋಷಿಸಿದ ನಂತರ ದೇಶದ ವಿವಿಧ ಭಾಗಗಳಲ್ಲಿ ಲಕ್ಷಾಂತರ ವಲಸಿಗರು ಸಿಕ್ಕಿಹಾಕಿಕೊಂಡಿದ್ದಾರೆ. ಅಲ್ಲದೆ ದೇಶದಲ್ಲಿ 1,000 ಕ್ಕೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆ, ಕನಿಷ್ಠ 29 ಮಂದಿ ಸಾವನ್ನಪ್ಪಿದ್ದಾರೆ.

ಹಲವರು ವಲಸಿಗ ಕಾರ್ಮಿಕರು ಕಾಲ್ನಡಿಗೆಯಲ್ಲಿ ನೂರಾರು ಕಿಲೋಮೀಟರ್ ಪ್ರಯಾಣ ಮಾಡುತ್ತಿದ್ದಾರೆ.  ನಿನ್ನೆ ದೆಹಲಿಯಿಂದ 200 ಕಿ.ಮೀ ನಡೆದು 38 ವರ್ಷದ ಯುವಕ ಯುಪಿ ಹೆದ್ದಾರಿಯಲ್ಲಿ ಶನಿವಾರ ಮೃತಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...