Homeಮುಖಪುಟಉತ್ತರ ಪ್ರದೇಶದಲ್ಲಿ ಕಾರ್ಮಿಕರ ಮೇಲೆ ’ಸೋಂಕುನಿವಾರಕ’ ಸಿಂಪಡಿಸುತ್ತಿರುವ ಅಘಾತಕಾರಿ ವಿಡಿಯೊ ಬಹಿರಂಗ

ಉತ್ತರ ಪ್ರದೇಶದಲ್ಲಿ ಕಾರ್ಮಿಕರ ಮೇಲೆ ’ಸೋಂಕುನಿವಾರಕ’ ಸಿಂಪಡಿಸುತ್ತಿರುವ ಅಘಾತಕಾರಿ ವಿಡಿಯೊ ಬಹಿರಂಗ

- Advertisement -
- Advertisement -

ಉತ್ತರ ಪ್ರದೇಶಕ್ಕೆ ಹಿಂತಿರುಗಿರುವ ವಲಸಿಗ ಕಾರ್ಮಿಕರ ಮೇಲೆ “ಸೋಂಕುನಿವಾರಕ” ಸಿಂಪಡಿಸುತ್ತಿರುವ ಆಘಾತಕಾರಿ ವೀಡಿಯೋವೊಂದು ಹೊರಬಿದ್ದಿದೆ.

ಈ ವೀಡಿಯೊವನ್ನು ಬರೇಲಿ ಜಿಲ್ಲೆಯಲ್ಲಿ ಚಿತ್ರೀಕರಿಸಲಾಗಿದೆ ಎನ್ನಲಾಗಿದೆ. ಲಕ್ನೋದಿಂದ ಸುಮಾರು 270 ಕಿ.ಮೀ. ದೂರದಿಂದ ವಲಸೆ  ಹೊರಟವರ ತಂಡಕ್ಕೆ ವಿಶೇಷ ಬಸ್‌ಗಳನ್ನು ವ್ಯವಸ್ಥೆಗೊಳಿಸಿದ ನಂತರ ವಾರಾಂತ್ಯದಲ್ಲಿ ಯುಪಿಗೆ ಮರಳಿದ್ದಾರೆ. ಸೋಂಕುನಿವಾರಕವನ್ನು ಹಾಕುತ್ತಿರುವ ವಿಡಿಯೋದಲ್ಲಿ ಕೆಲವು ಪೊಲೀಸರು ಇದ್ದಾರೆ. ವಿಡಿಯೊ ಕ್ಲಿಪ್‌ನಲ್ಲಿ ಒಬ್ಬ ಮನುಷ್ಯ “ನಿಮ್ಮ ಕಣ್ಣುಗಳನ್ನು ಹಾಗೂ ಮಕ್ಕಳ ಕಣ್ಣುಗಳನ್ನು ಸಹ ಮುಚ್ಚಿ” ಎಂದು ಹೇಳುವುದನ್ನು ಕೇಳಬಹುದು.

ವಿಡಿಯೊ ಕ್ಲಿಪ್ ಜಿಲ್ಲಾಡಳಿತದ ಟೀಕೆಗೆ ಕಾರಣವಾದ ನಂತರ, ಅಧಿಕಾರಿಯೊಬ್ಬರು “ವಲಸಿಗರಿಗೆ ಕ್ಲೋರಿನ್ ಮತ್ತು ನೀರಿನ ಮಿಶ್ರಣವನ್ನು ಸಿಂಪಡಿಸಲಾಗಿತ್ತು … ಯಾವುದೇ ರಾಸಾಯನಿಕ ದ್ರಾವಣವನ್ನು ಬಳಸಲಾಗಿಲ್ಲ. ನಾವು ಅವರ ಕಣ್ಣುಗಳನ್ನು ಮುಚ್ಚಿಡಲು ಕೇಳಿದೆವು” ಎಂದು ಹೇಳಿದ್ದಾರಲ್ಲದೆ, “ಇದರಿಂದಾಗಿ ನಾವು ಅಮಾನವೀಯರೆಂದು ಅರ್ಥವಲ್ಲ … ಎಲ್ಲರನ್ನೂ ಸ್ವಚ್ಛಗೊಳಿಸುವುದು ಮುಖ್ಯವಾಗಿತ್ತು ಮತ್ತು ಹೆಚ್ಚಿನ ಸಂಖ್ಯೆಯ ಜನರು ಹಿಂತಿರುಗಿದ್ದರಿಂದ ಜನರ ಸಂಖ್ಯೆ ಭಾರಿ ವಿಪರೀತವಾಗಿದೆ. ಆದ್ದರಿಂದ ನಮಗೆ ಉತ್ತಮವೆನಿಸಿದ್ದನ್ನು ನಾವು ಮಾಡಿದ್ದೇವೆ” ಎಂದು ಹೇಳಿದ್ದಾರೆ.

ಕ್ಲಿಪ್ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಬರೇಲಿ ಜಿಲ್ಲಾಧಿಕಾರಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. “ಮುಖ್ಯಮಂತ್ರಿಗಳ ಕಚೇರಿಯ ಮೇಲ್ವಿಚಾರಣೆಯಲ್ಲಿ, ಪೀಡಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳೀಯ ಸಂಸ್ಥೆ ಮತ್ತು ಅಗ್ನಿಶಾಮಕ ದಳದ ತಂಡವನ್ನು ಬಸ್ಸುಗಳನ್ನು ಸ್ವಚ್ಛಗೊಳಿಸಲು ಕೇಳಲಾಯಿತು … ಆದರೆ ಅವರು ಹೆಚ್ಚಿನ ಜನವಿದ್ದ ಕಾರಣ ಇದನ್ನು ಮಾಡಿದರು. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ” ಎಂದು -ಬರೆದಿದ್ದಾರೆ.

ಬರೇಲಿಯ ಮುಖ್ಯ ಅಗ್ನಿಶಾಮಕ ಅಧಿಕಾರಿ ಚಂದ್ರ ಮೋಹನ್ ಶರ್ಮಾ “ಸೋಂಕುನಿವಾರಕಗಳಲ್ಲಿ ರಾಸಾಯನಿಕಗಳಿವೆ. ಇದನ್ನು ಮನುಷ್ಯರ ಮೇಲೆ ಬಳಸಬಾರದು. ಕಣ್ಣುಗಳ ಸಂಪರ್ಕಕ್ಕೆ ಬರಬಾರದು. ಈ ವಿಡಿಯೋವನ್ನು ತನಿಖೆ ಮಾಡಲಾಗುತ್ತಿದೆ. ಹಿರಿಯರಿಂದ ವರದಿಯನ್ನು ಕೋರಲಾಗಿದೆ” ಎಂದು ಸುದ್ದಿಗಾರರಿಗೆ ಹೇಳಿದ್ದಾರೆ.

ವಿಡಿಯೊ ಕ್ಲಿಪ್ ಬಗ್ಗೆ ಪ್ರತಿಪಕ್ಷ ನಾಯಕರು ವಾಗ್ದಾಳಿ ನಡೆಸಿದ್ದು, ಈ ಕ್ರಮವನ್ನು “ಅಮಾನವೀಯ” ಎಂದು ಕರೆದಿದ್ದಾರೆ. “ನಾನು ಯುಪಿ ಸರ್ಕಾರಕ್ಕೆ ಮನವಿ ಮಾಡುತ್ತೇನೆ … ಈ ಬಿಕ್ಕಟ್ಟಿನ ವಿರುದ್ಧ ನಾವೆಲ್ಲರೂ ಒಟ್ಟಾಗಿ ಹೋರಾಡುತ್ತಿದ್ದೇವೆ ಎಂದು ಯುಪಿ ಸರ್ಕಾರ ಹೇಳುತ್ತಿದೆ. ದಯವಿಟ್ಟು ಇಂತಹ ಅಮಾನವೀಯ ಕೃತ್ಯಗಳಲ್ಲಿ ತೊಡಗಬೇಡಿ. ಕಾರ್ಮಿಕರು ಈಗಾಗಲೇ ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದಾರೆ. ಅವರ ಮೇಲೆ ರಾಸಾಯನಿಕಗಳನ್ನು ಸಿಂಪಡಿಸಬೇಡಿ. ಇದು ಅವರನ್ನು ರಕ್ಷಿಸುವುದಿಲ್ಲ … ಬದಲಿಗೆ ಇದು ಅವರ ಆರೋಗ್ಯಕ್ಕೆ ಹಾನಿ ಮಾಡುತ್ತದೆ “ಎಂದು ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದಾರೆ.

ಸರಣಿ ಟ್ವೀಟ್‌ಗಳಲ್ಲಿ, ಯುಪಿ ಮಾಜಿ ಮುಖ್ಯಮಂತ್ರಿ ಮತ್ತು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ “ಈ ಕಠಿಣ ರಾಷ್ಟ್ರವ್ಯಾಪಿ ಲಾಕ್‌ಡೌನ್ ಸಮಯದಲ್ಲಿ, ದೇಶಾದ್ಯಂತ ಅನ್ಯಾಯದ ಬಗ್ಗೆ ಹಲವಾರು ಚಿತ್ರಗಳು ಹೊರಬಂದಿವೆ … ಆದರೆ ಬರೇಲಿಯಲ್ಲಿ ವಲಸೆ ಬಂದವರ ಮೇಲೆ ಸೋಂಕುನಿವಾರಕಗಳನ್ನು ಸಿಂಪಡಿಸುವುದು ಸಂಪೂರ್ಣ ಕ್ರೌರ್ಯಕ್ಕೆ ಒಂದು ಉದಾಹರಣೆಯಾಗಿದೆ, ಅನ್ಯಾಯ. ಸರ್ಕಾರ ಕೂಡಲೇ ಗಮನ ಹರಿಸಬೇಕು” ಎಂದು ಹರಿಹಾಯ್ದಿದ್ದಾರೆ.

ಕೊರೊನ ವೈರಸ್ ವಿರುದ್ಧ ಹೋರಾಡಲು ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ 21 ದಿನಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್ ಘೋಷಿಸಿದ ನಂತರ ದೇಶದ ವಿವಿಧ ಭಾಗಗಳಲ್ಲಿ ಲಕ್ಷಾಂತರ ವಲಸಿಗರು ಸಿಕ್ಕಿಹಾಕಿಕೊಂಡಿದ್ದಾರೆ. ಅಲ್ಲದೆ ದೇಶದಲ್ಲಿ 1,000 ಕ್ಕೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆ, ಕನಿಷ್ಠ 29 ಮಂದಿ ಸಾವನ್ನಪ್ಪಿದ್ದಾರೆ.

ಹಲವರು ವಲಸಿಗ ಕಾರ್ಮಿಕರು ಕಾಲ್ನಡಿಗೆಯಲ್ಲಿ ನೂರಾರು ಕಿಲೋಮೀಟರ್ ಪ್ರಯಾಣ ಮಾಡುತ್ತಿದ್ದಾರೆ.  ನಿನ್ನೆ ದೆಹಲಿಯಿಂದ 200 ಕಿ.ಮೀ ನಡೆದು 38 ವರ್ಷದ ಯುವಕ ಯುಪಿ ಹೆದ್ದಾರಿಯಲ್ಲಿ ಶನಿವಾರ ಮೃತಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...