Homeಕರೋನಾ ತಲ್ಲಣಜನರ ಮೇಲೆ ಸೋಂಕು ನಿವಾರಕ ಸಿಂಪಡಣೆ ಹಾನಿಕಾರಕ: ಕ್ರಮ ಕೈಗೊಳ್ಳುವಂತೆ ಸುಪ್ರೀಂ ಸೂಚನೆ

ಜನರ ಮೇಲೆ ಸೋಂಕು ನಿವಾರಕ ಸಿಂಪಡಣೆ ಹಾನಿಕಾರಕ: ಕ್ರಮ ಕೈಗೊಳ್ಳುವಂತೆ ಸುಪ್ರೀಂ ಸೂಚನೆ

ಔಷಧಿ ಸಿಂಪಡಣೆ ಮಾಡುವುದು ಮನುಷ್ಯನಿಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಹಾನಿಕಾರಕವಾಗಿದೆ ಎಂದು ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್ .ಸುಭಾಷ್ ರೆಡ್ಡಿ ಮತ್ತು ಎಂ.ಆರ್.ಶಾ ಅವರ ನ್ಯಾಯಪೀಠ ತಿಳಿಸಿದೆ.

- Advertisement -
- Advertisement -

ಮಾನವರ ಮೇಲೆ ಪೈಪುಗಳ ಮೂಲಕ, ವಾಕ್-ಇನ್ ಸುರಂಗಮಾರ್ಗಗಳ ಮೂಲಕ ಸೋಂಕು ನಿವಾರಕ ಸಿಂಪಡಿಸುವುದನ್ನು ಎಲ್ಲೂ ಶಿಫಾರಸು ಮಾಡಲಾಗಿಲ್ಲ. ಆದರೂ ಎಲ್ಲಾ ಕಡೆ ಅವುಗಳನ್ನು ಸ್ಥಾಪಿಸಿದ್ದರೂ ಸಹ ನೀವು ಏಕೆ ಕ್ರಮ ಕೈಗೊಂಡಿಲ್ಲ ಎಂದು ಸರ್ಕಾರವನ್ನು ಸುಪ್ರೀಂಕೋರ್ಟ್ ಪ್ರಶ್ನಿಸಿದೆ.

ಹೀಗೆ ಔಷಧಿ ಸಿಂಪಡಣೆ ಮಾಡುವುದು ಮನುಷ್ಯನಿಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಹಾನಿಕಾರಕವಾಗಿದೆ ಎಂದು ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್ .ಸುಭಾಷ್ ರೆಡ್ಡಿ ಮತ್ತು ಎಂ.ಆರ್.ಶಾ ಅವರ ನ್ಯಾಯಪೀಠ ತಿಳಿಸಿದೆ.

ಕೊರೊನಾ ಸಂಕಷ್ಟದ ಸಮಯದಲ್ಲಿ ತಮ್ಮ ಊರುಗಳಿಗೆ ತೆರಳುತ್ತಿದ್ದ ವಲಸೆ ಕಾರ್ಮಿಕರ ಮೇಲೆ ಸೋಂಕು ನಿವಾರಕ ಔಷಧಿಯನ್ನು ಸಿಂಪಡಿಸಲಾಗಿತ್ತು. ಅಲ್ಲದೇ ಈಗ ಎಲ್ಲಾ ಕಚೇರಿಗಳು, ಕೆಲಸದ ಸ್ಥಳಗಳು, ರಸ್ತೆಗಳಲ್ಲಿ ಜನರ ಮೇಲೆ ಔಷಧಿ ಸಿಂಪಡಿಸಲಾಗುತ್ತಿದೆ.

ಸೋಂಕು ನಿವಾರಕ ಸಿಂಪಡಣೆ ನಿಲ್ಲುಸುವಂತೆ ಶೀಘ್ರದಲ್ಲೇ ಅಗತ್ಯ ಆದೇಶಗಳನ್ನು ಹೊರಡಿಸಲಾಗುತ್ತದೆ ಎಂದು ಸಾಲಿಟರಿ ಜನರಲ್ ತುಷಾರ್ ಮೆಹ್ತಾ ನ್ಯಾಯಪೀಠಕ್ಕೆ ತಿಳಿಸಿದರು.

PC: Deccan Herald

ಸೋಂಕುನಿವಾರಕಕ್ಕಾಗಿ ರಾಸಾಯನಿಕ ಸೋಂಕುನಿವಾರಕಗಳನ್ನು ಸಿಂಪಡಿಸುವುದು ಸೇರಿ ಸೋಂಕುಗಳ ಸುರಂಗಗಳ ಬಳಕೆ, ಸ್ಥಾಪನೆ, ಉತ್ಪಾದನೆ, ಜಾಹೀರಾತುಗಳನ್ನು ನಿಷೇಧಿಸಲು ಕೋರಿರುವ ಅರ್ಜಿ ವಿಚಾರಣೆ ಸಂದರ್ಭದಲ್ಲಿ ನ್ಯಾಯಪೀಠ ಈ ವಿಚಾರಗಳನ್ನು ಪ್ರಸ್ತಾಪಿಸಿದೆ.

ಇದನ್ನೂ ಓದಿ: ಯಾವುದೇ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿಲ್ಲ, ವೈದ್ಯನಾಗಿಯೇ ಉಳಿಯುವೆ: ಡಾ.ಕಫೀಲ್ ಖಾನ್

ನ್ಯಾಯಾಲಯದ ನೋಟಿಸ್‌ಗೆ ಪ್ರತಿಕ್ರಿಯಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಅಫಿಡವಿಟ್‌ನಲ್ಲಿ, ವಾಕ್-ಇನ್ ಸುರಂಗಗಳ ಮೂಲಕ ಜನರು ಅಂತಹ ರಾಸಾಯನಿಕಗಳಿಗೆ ಒಡ್ಡಿಕೊಳ್ಳುತ್ತಾರೆ ಎಂಬ ವರದಿಗಳನ್ನು ಬಂದ ನಂತರ ಸಲಹಾ ಸಮಿತಿ ಜೊತೆಗೆ ಏಪ್ರಿಲ್ 8 ರಂದು ಸಭೆ ನಡೆಸಲಾಗಿದೆ. ಜೊತೆಗೆ ಮಾನವರ ಮೇಲೆ ಸೋಂಕು ನಿವಾರಕಗಳನ್ನು ಸಿಂಪಡಿಸುವುದನ್ನು ಯಾವುದೇ ಸಂದರ್ಭದಲ್ಲೂ ಶಿಫಾರಸು ಮಾಡುವುದಿಲ್ಲ ಮತ್ತು ಇದು ದೈಹಿಕವಾಗಿ ಮತ್ತು ಮಾನಸಿಕವಾಗಿ ಹಾನಿಕಾರಕವಾಗಿದೆ ಎಂದು ಸಮಿತಿ ಹೇಳಿದೆ.

ರಾಸಾಯನಿಕಗಳು ಮಾನವನ ಚರ್ಮಕ್ಕೆ ಹಾನಿಕಾರಕ ಮತ್ತು ಉಸಿರಾಟದ ತೊಂದರೆಗೆ ಕಾರಣವಾಗುತ್ತದೆ. ಅಷ್ಟೇ ಅಲ್ಲದೆ ಯಾವುದೇ  ರಾಸಾಯನಿಕ ಸೋಂಕು ನಿವಾರಕವನ್ನು ಬಾಹ್ಯವಾಗಿ ಸಿಂಪಡಿಸುವುದರಿಂದ ಮೊದಲೇ ವ್ಯಕ್ತಿಯ ದೇಹಕ ಪ್ರವೇಶಿಸಿದ ವೈರಸ್ ಅನ್ನು ಕೊಲ್ಲುವುದಿಲ್ಲ ಎಂದು ಸಮಿತಿ ಏಪ್ರಿಲ್ 18 ರಂದು ನೀಡಿದ ವರದಿಯನ್ನು ನ್ಯಾಯಾಲಯದಲ್ಲಿ ಸಚಿವಾಲಯ ಪ್ರಸ್ತುತಪಡಿಸಿತು.

ಆದರೂ ಎಲ್ಲೆಡೆ ಸೋಂಕು ನಿವಾರಕಗಳನ್ನು ಅಳವಡಿಸಲಾಗುತ್ತಿದೆ. ಸರ್ಕಾರ ಏಕೆ ಕ್ರಮ ಕೈಗೊಂಡಿಲ್ಲ ಎಂದು ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ.


ಇದನ್ನೂ ಓದಿ: ‘ಜೈ ಶ್ರೀರಾಮ್ ಹೇಳುವಂತೆ ಒತ್ತಾಯಿಸಿ ಹತ್ಯೆ: ಯುಪಿಯಲ್ಲಿ ಮತ್ತೊಂದು ಲಿಂಚಿಂಗ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...